Homeದಲಿತ್ ಫೈಲ್ಸ್ತಮಿಳುನಾಡು ದಲಿತ ಹೋರಾಟಗಾರ್ತಿಗೆ ಆನ್‌ಲೈನ್‌ನಲ್ಲಿ ಕಿರುಕುಳ; ಡಿಎಂಕೆ, ಬಿಜೆಪಿ ಬೆಂಬಲಿಗರಿಂದ ದುಷ್ಕೃತ್ಯ

ತಮಿಳುನಾಡು ದಲಿತ ಹೋರಾಟಗಾರ್ತಿಗೆ ಆನ್‌ಲೈನ್‌ನಲ್ಲಿ ಕಿರುಕುಳ; ಡಿಎಂಕೆ, ಬಿಜೆಪಿ ಬೆಂಬಲಿಗರಿಂದ ದುಷ್ಕೃತ್ಯ

- Advertisement -
- Advertisement -

ಚೆನ್ನೈ ಮೂಲದ ಲೇಖಕಿ ಮತ್ತು ದಲಿತ ಹೋರಾಟಗಾರ್ತಿ ಶಾಲಿನ್ ಮರಿಯಾ ಲಾರೆನ್ಸ್‌ ಅವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ನೀಡಲಾಗುತ್ತಿರುವ ಕಿರುಕುಳವನ್ನು ನೆಟ್‌ವರ್ಕ್ ಆಫ್ ವುಮೆನ್ ಇನ್ ಮೀಡಿಯಾ ಇಂಡಿಯಾ (ಎನ್‌ಡಬ್ಲ್ಯುಎಂಐ) ಸಂಸ್ಥೆ ಖಂಡಿಸಿದೆ.

“ಡಿಎಂಕೆ ಮತ್ತು ಬಿಜೆಪಿ ಎರಡನ್ನೂ ಬೆಂಬಲಿಸುವ ಹ್ಯಾಂಡಲ್‌ಗಳಿಂದ ಈ ಕಿರುಕುಳ ನೀಡಲಾಗುತ್ತಿದೆ” ಎಂದು ಎನ್‌ಡಬ್ಲ್ಯುಎಂಐ ಹೇಳಿದೆ.

ಜಾತಿ-ಸಂಬಂಧಿತ ದೌರ್ಜನ್ಯಗಳ ಬಗ್ಗೆ ಟ್ವಿಟರ್‌ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಶಾಲಿನ್ ಅವರು 2018ರಿಂದಲೂ ಮಾಡುತ್ತಿದ್ದಾರೆ. ಆಡಳಿತರೂಢ ಡಿಎಂಕೆ ಮತ್ತು ಬಲಪಂಥೀಯ ಗುಂಪುಗಳೆರಡೂ ಶಾಲಿನ್‌ ಅವರ ಮೇಲೆ ದಾಳಿ ನಡೆಸುತ್ತಿವೆ.

“ಆತ್ಮಾವಲೋಕನದಲ್ಲಿ ತೊಡಗಿಸಿಕೊಳ್ಳುವ ಬದಲು, ಅಂಕಿ-ಅಂಶಗಳನ್ನು ಅವಲೋಕಿಸುವ ಬದಲು ಸಂಘಟಿತ ದಾಳಿಗಳನ್ನು ಕೈಗೊಂಡಿದ್ದಾರೆ. ಜಾತಿವಾದಿ ನಿಂದನೆಗಳನ್ನು ಮಾಡುತ್ತಿದ್ದಾರೆ. ಬಾಡಿ ಶೇಮಿಂಗ್ ನಡೆಯುತ್ತಿದೆ, ಶಾಲಿನ್‌ ಅವರ ಧರ್ಮದ ಆಧಾರದ ಮೇಲೆ ನಿಂದನೆಗಳನ್ನು ಮಾಡಿ ಕೆಟ್ಟ ಭಾಷೆಯನ್ನು ಬಳಸಲಾಗುತ್ತಿದೆ. ಈ ಗುಂಪುಗಳು ಶಾಲಿನ್ ಅವರ ಕುಟುಂಬ ಸದಸ್ಯರನ್ನೂ ಟಾರ್ಗೆಟ್ ಮಾಡಿವೆ” ಎಂದು ಎನ್‌ಡಬ್ಲ್ಯುಎಂಐ ವಿವರಿಸಿದೆ.

“ಭಾರತದ ಪ್ರತಿಯೊಂದು ರಾಜಕೀಯ ಪಕ್ಷವೂ ಮಹಿಳೆಯರ ಹಕ್ಕುಗಳು ಮತ್ತು ಸಮಾನತೆಯ ಕುರಿತು ಮಾತನಾಡುತ್ತವೆ. ಪ್ರತಿಯೊಂದು ರಾಜಕೀಯ ಪಕ್ಷವೂ ಲಿಂಗ ಆಧಾರಿತ ಹಿಂಸೆ ಮತ್ತು ಜಾತಿ ಆಧಾರಿತ ಹಿಂಸೆಯನ್ನು ಅಮೂರ್ತವಾಗಿ ಖಂಡಿಸುತ್ತವೆಯಷ್ಟೇ. ಆದರೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಮಹಿಳೆಯರ ಮೇಲೆ, ಅದರಲ್ಲೂ ಶೋಷಿತ ಸಮುದಾಯದ ಹೆಣ್ಣಿನ ಮೇಲೆ ಲಿಂಗ, ಜಾತಿ ಆಧಾರಿತ ದಾಳಿಯನ್ನು ನಡೆಸುವ ರಾಜಕೀಯ ಪಕ್ಷಗಳ ಅನುಯಾಯಿಗಳಿಗೆ ಯಾವುದೇ ಕಡಿವಾಣ ಬೀಳುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದೆ.

ತಮಿಳುನಾಡಿನ ಪ್ರಮುಖ ದಲಿತ ಹೋರಾಟಗಾರ್ತಿಯಾಗಿರುವ ಶಾಲಿನ್ ಅವರು ತಮಿಳುನಾಡಿನಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದರು. ಕಾಂಗ್ರೆಸ್ ಪಕ್ಷದೊಂದಿಗಿನ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಅವರು, ಇತ್ತೀಚೆಗೆ ಚೆನ್ನೈಗೆ ಭೇಟಿ ನೀಡಿದ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆಯವರನ್ನು ಭೇಟಿಯಾಗಿದ್ದರು.

ಇದನ್ನೂ ಓದಿರಿ: ದರ್ಶನ್ ಸೋಲಂಕಿ ಜಾತಿ ತಿಳಿಯಲು ರ್‍ಯಾಂಕ್‌ ಬಗ್ಗೆ ಕೇಳಿದ್ದ ರೂಮ್‌ಮೇಟ್‌; ಪೋನ್‌ ಕಾಲ್‌ ಬಿಚ್ಚಿಟ್ಟ ಸತ್ಯಗಳಿವು!

“ನನ್ನ ಹೋರಾಟದ ಕಾರಣಕ್ಕೆ ನನ್ನ ಮೇಲೆ ಆಕ್ರಮಣಗಳು ನಡೆಯುತ್ತಿವೆ. ಆದರೆ ಹಿಂದೆಂದೂ ನಡೆಯದಷ್ಟು ಸಂಘಟಿತ ದಾಳಿ ಇತ್ತೀಚೆಗೆ ಆಗಿದೆ” ಎಂದು ಶಾಲಿನ್ ಅವರು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

“ಬಿಜೆಪಿ-ಆರ್‌ಎಸ್‌ಎಸ್ ಸೈಬರ್ ಗುಂಪುಗಳಂತೆ ಡಿಎಂಕೆ ಕೂಡ ಸೈಬರ್‌ ಗುಂಪುಗಳನ್ನು ಹೊಂದಿದೆ. ವಾಟ್ಸ್‌ಅಪ್‌ ಗ್ರೂಪ್‌ ಮಾಡಿಕೊಂಡು, ಒಂದೇ ರೀತಿಯ ಸಂದೇಶಗಳನ್ನು ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಟ್ವೀಟ್ ಮಾಡಿ ದಾಳಿ ಮಾಡಲಾಗುತ್ತದೆ. ವ್ಯಕ್ತಿಯೊಬ್ಬರ ಮೇಲೆ ಟಾರ್ಗೆಟ್ ಮಾಡಲು ಗ್ರೂಪ್‌ಗಳಲ್ಲಿ ಚರ್ಚಿಸುತ್ತಾರೆ” ಎಂದಿದ್ದಾರೆ.

ದಲಿತ ನಿವಾಸಿಗಳಿಗೆ ನೀರು ಸರಬರಾಜು ಮಾಡುವ ತೊಟ್ಟಿಯಲ್ಲಿ ಮಾನವ ಮಲ ಪತ್ತೆಯಾದ ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸಬೇಕು, ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ ಹೋರಾಟಗಾರರಲ್ಲಿ ಶಾಲಿನ್ ಕೂಡ ಒಬ್ಬರಾಗಿದ್ದಾರೆ. ದಲಿತರ ಭೂ ಸಮಸ್ಯೆಗಳು, ತಮಿಳುನಾಡಿನ ಹಳ್ಳಿಗಳಲ್ಲಿ ಚುನಾಯಿತ ದಲಿತ ಪ್ರತಿನಿಧಿಗಳ ಎದುರಿಸುವ ತಾರತಮ್ಯಗಳು ಸೇರಿದಂತೆ ಮೊದಲ ವಿಷಯಗಳ ಕುರಿತು ಶಾಲಿನ್ ದನಿ ಎತ್ತುತ್ತಾ ಬಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...