Homeಕರ್ನಾಟಕಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

ಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

- Advertisement -
- Advertisement -

“ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದನ್ನು ವಿರೋಧಿಸಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದು, ಕೇಂದ್ರವು ತನ್ನ ನಿಲುವು ಬದಲಿಸಿಕೊಳ್ಳಬೇಕು” ಎಂದು ಲಿಂಗತ್ವ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಒತ್ತಾಯಿಸಿದ್ದಾರೆ.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಎಷ್ಟು ಮಂದಿ ಸಂಸದರು ಲಿಂಗ, ಲಿಂಗತ್ವ ಸಂಬಂಧಿತ ವಿಚಾರಗಳನ್ನು ಮಾತನಾಡುವಷ್ಟು ಎಜುಕೇಟ್ ಆಗಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ನಾಲ್ವರು ಸಲಿಂಗ ದಂಪತಿಗಳು ತಮ್ಮ ವಿವಾಹದ ಮಾನ್ಯತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

ಇತಿಹಾಸದುದ್ದಕ್ಕೂ ಭಿನ್ನಲಿಂಗೀಯ ವಿವಾಹಗಳು ನಡೆದುಬಂದಿವೆ. ಅದು ಪ್ರಭುತ್ವದ ಅಸ್ತಿತ್ವ ಮುಂದುವರಿಕೆಗೆ ಅಡಿಪಾಯವಾಗಿದೆ. ಹಾಗಾಗಿ ಭಿನ್ನಲಿಂಗೀಯ ವಿವಾಹಕ್ಕೆ ನಾವು ಆಸಕ್ತಿ ಹೊಂದಿದ್ದೇವೆಯೇ ಹೊರತು ಸಲಿಂಗ ವಿವಾಹಕ್ಕಲ್ಲ ಎಂದು ಅಫಿಡವಿಟ್‌ನಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.

ವಿವಾಹದ ಹಕ್ಕಿಗಾಗಿ ಒತ್ತಾಯಿಸಿ ಪತ್ರ

ಸಮಾನ ವಿವಾಹ ಹಕ್ಕಿಗಾಗಿ ಒತ್ತಾಯಿಸಿ ಸೆಕ್ಸ್ ವರ್ಕರ್ಸ್ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಒಕ್ಕೂಟ (ಸಿಎಸ್‌ಎಂಆರ್) ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮನವಿ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ಗೆ ಪತ್ರವನ್ನು ಬರೆಯಲಾಗಿದೆ.

ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ, ಜೀವ ಸಂಸ್ಥೆಯ ಉಮಾ ಉಮೇಶ್‌, ನಮ್ಮ ಪ್ರೈಡ್‌ನ ಅಯಾನ್ ಸೈಯದ್, ಟ್ರಾನ್ಸ್‌ಜೆಂಡರ್ ಹಕ್ಕುಗಳ ಹೋರಾಟಗಾರರಾದ ಕ್ರಿಸ್ಟಿ ರಾಜ್, ರಿಯಾನಾ, ರಕ್ಷಿತಾ ಮತ್ತು ಪಿಯುಸಿಎಲ್ ಕರ್ನಾಟಕ ಅಧ್ಯಕ್ಷ ಅರವಿಂದ್ ನಾರಾಯಣ್ ಪತ್ರವನ್ನು ಬಿಡುಗಡೆ ಮಾಡಿದ್ದಾರೆ.

“ಸಮಾನತೆಯ ಹಕ್ಕು, ಘನತೆಯ ಹಕ್ಕು ಮತ್ತು ಅಭಿವ್ಯಕ್ತಿಯ ಹಕ್ಕುಗಳು ಸಂವಿಧಾನದಲ್ಲಿ ಅಡಕವಾಗಿವೆ. ಎಲ್‌ಜಿಬಿಟಿಕ್ಯೂ ಸಮುದಾಯದವರು ತಮ್ಮ ಇಷ್ಟದ ವ್ಯಕ್ತಿಯನ್ನು ಮದುವೆಯಾಗುವುದನ್ನು ಈ ಹಕ್ಕುಗಳನ್ನು ಅನುಮೋದಿಸುತ್ತವೆ” ಎಂದು ತಿಳಿಸಲಾಗಿದೆ.

ಸಲಿಂಗ ವಿವಾಹವನ್ನು ವಿರೋಧಿಸಿರುವ ಕೇಂದ್ರದ ಅಫಿಡವಿಟ್‌ನಲ್ಲಿನ ಹಲವಾರು ನ್ಯೂನತೆಗಳನ್ನು ಈ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. “ತನ್ನ LGBTQI ನಾಗರಿಕರಿಗೆ ನೀಡಬೇಕಾದ ಸಮಾನತೆಯ ಹಕ್ಕನ್ನು ಭದ್ರಪಡಿಸುವ ತನ್ನ ಸಾಂವಿಧಾನಿಕ ಬದ್ಧತೆಯನ್ನು ಒಕ್ಕೂಟ ಸರ್ಕಾರ ತೋರುತ್ತಿಲ್ಲ. ತಾರತಮ್ಯದ ವಿವಾಹ ಕಾನೂನುಗಳನ್ನು ಶಾಶ್ವತಗೊಳಿಸಲು ಮುಂದಾಗಿದೆ” ಎಂದು ಆರೋಪಿಸಲಾಗಿದೆ.

“ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಮದುವೆಯಾಗುವ ಎಲ್ಲಾ ವ್ಯಕ್ತಿಗಳ ಹಕ್ಕನ್ನು ಗುರುತಿಸುವ ಈ ಬೇಡಿಕೆಯು ನ್ಯಾಯಯುತವಾಗಿದೆ ಎಂದು ನಾವು ಭಾವಿಸುತ್ತೇವೆ. ಭಾರತೀಯ ಸಂವಿಧಾನದ ಆಶಯವೂ ಇದಾಗಿದೆ” ಎಂದು ಸ್ಪಷ್ಟಪಡಿಸಲಾಗಿದೆ.

ಎಲ್ಲಾ ವ್ಯಕ್ತಿಗಳು ಮದುವೆಯಾಗುವ ಹಕ್ಕನ್ನು ಹೊಂದಿದ್ದಾರೆ. ಈ  ಬೇಡಿಕೆಯು ಸುಪ್ರೀಂ ಕೋರ್ಟ್ ವ್ಯಾಖ್ಯಾನಿಸಿದಂತೆ ಭಾರತೀಯ ಸಂವಿಧಾನಿಕ ತತ್ವಗಳನ್ನು ಒಳಗೊಂಡಿದೆ ಎಂದಿರುವ ಲಿಂಗತ್ವ ಅಲ್ಪಸಂಖ್ಯಾತ ಹೋರಾಟಗಾರರು ಮಹತ್ವದ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ.

ದುರದೃಷ್ಟವಶಾತ್ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಒಕ್ಕೂಟವು ಸಲ್ಲಿಸಿದ ಅಫಿಡವಿಟ್‌ನಲ್ಲಿ ಸಂವಿಧಾನಿಕ ಹಕ್ಕುಗಳು ಇಲ್ಲವಾಗಿವೆ. ಭಾರತ ಒಕ್ಕೂಟವು ತನ್ನ LGBTQI ನಾಗರಿಕರಿಗೆ ಸಮಾನತೆಯ ಹಕ್ಕನ್ನು ಭದ್ರಪಡಿಸುವ ತನ್ನ ಸಾಂವಿಧಾನಿಕ ಬದ್ಧತೆಯನ್ನು ನಿರ್ಲಕ್ಷಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...