Homeಕರ್ನಾಟಕಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಷ್ಟ್ರೀಯ ದಶಪಥ ಹೆದ್ದಾರಿಯ ಟಾರ್ ಕಿತ್ತು ಬಂದಿದೆ. ಮತ್ತೊಂದೆಡೆ ಹಲವು ಸಂಘಟನೆಗಳು ಟೋಲ್ ಸಂಗ್ರಹ ವಿಚಾರಕ್ಕೆ ಪ್ರತಿಭಟನೆಗಳನ್ನು ನಡೆಸಿದ್ದಾರೆ.

ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆದಿದೆ. ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ.

ಈ ಕಾಮಗಾರಿಯಲ್ಲೂ ಬಿಜೆಪಿ ಸಂಸದ ಕಮಿಷನ್ ತಿಂದ ಆರೋಪ

ಮಂಗಳವಾರ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು, ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ. ಕಮಿಷನ್ ತಿಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಮಗಾರಿಯಲ್ಲಿ ದೊಡ್ಡ ಅಕ್ರಮವಾಗಿದ್ದು, ಹೆದ್ದಾರಿಗೆ ಸರಬರಾಜು ಆಗಿರುವ ಸಾಮಗ್ರಿಗಳು ಪ್ರತಾಪ್ ಸಿಂಹ ಬೆಂಬಲಿಗರಿಗೆ ಸೇರಿದ್ದಾಗಿವೆ. ಆ ರೀತಿಯಲ್ಲಿ ಕೋಟ್ಯಾಂತರ ರೂ ಕಮಿಷನ್ ಹೊಡೆದಿದ್ದಾರೆ. ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ ಎಂದು ಪ್ರಶ್ನಿಸಿದರು.

ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಯ ದಿನವೇ ಅಪಘಾತವೊಂದು ಸಂಭವಿಸಿತ್ತು. ಭಾನುವಾರ ಹೆದ್ದಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸುಮಾರು 50 ಮೀಟರ್‌ ದೂರ ನಡೆಯುವ ಮೂಲಕ ಅಧಿಕೃತವಾಗಿ ದಶಪಥ ರಸ್ತೆಯನ್ನು ಉದ್ಘಾಟಿಸಿದರು.

ಉದ್ಘಾಟನೆಯ ಬಳಿಕ ಮಧ್ಯಾಹ್ನ 2:30ರ ಸುಮಾರಿಗೆ ಮದ್ದೂರು ಶಿಂಷಾ ನದಿ ಸೇತುವೆ ಬಳಿ ಕಾರು ಅಪಘಾತ ಸಂಭವಿಸಿತ್ತು. ಬೆಂಗಳೂರಿನಿಂದ ಮೈಸೂರಿನ ಕಡೆಗೆ ಸಂಚರಿಸುತ್ತಿದ್ದ ಕಾರು, ಶಿಂಷಾ ನದಿ ಸೇತುವೆಯ ಬಳಿ ತಡೆಗೋಡೆಗೆ ಡಿಕ್ಕಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ಕಾರು ಪಲ್ಟಿಯಾಗಿತ್ತು. ಈ ರಸ್ತೆಯು ಅವೈಜ್ಣಾನಿಕವಾಗಿದೆ ಎಂದು ಹಲವರು ಈ ಹಿಂದಿನಿಂದಲೂ ಆರೋಪಿಸುತ್ತಿದ್ದರು.

ಇದನ್ನೂ ಓದಿ: ಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

ಟೋಲ್ ಸಂಗ್ರಹಕ್ಕೆ ವಿರೋಧ

ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರವು ವಾಹನ ಸವಾರರಿಂದ ಮಂಗಳವಾರ (ಮಾರ್ಚ್ 14)ದಂದು ಟೋಲ್ ಸಂಗ್ರಹಕ್ಕೆ ಮುಂದಾಗಿದೆ. ಸುಮಾರು 55 ಕಿ.ಮೀ, ಹೆದ್ದಾರಿಗೆ ಬೆಳಗ್ಗೆ 8 ಗಂಟೆಯಿಂದಲೇ ಟೋಲ್ ಸಂಗ್ರಹಿಸಲು ಮುಂದಾಗಿದ್ದರು. ಆದರೆ ವಾಹನ ಸವಾರರು ಹಾಗೂ ಹಲವು ಸಂಘಟನೆಯವರು ವಿರೋಧ ವ್ಯಕ್ತಪಡಿಸಿದರು.

ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಹತ್ತಿರ ಟೋಲ್ ಸಂಗ್ರಹ ಮಾಡಲು ನಿರ್ಧರಿಸಿದ್ದರು. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಕಣಿಮಿಣಿಕೆ ಟೋಲ್ ಪ್ಲಾಜಾ ಬಳಿ ಪ್ರತಿಭಟನೆ ನಡೆಸಿದ್ದರು, ಅವರನ್ನೆಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟೋಲ್ ದರ ಹೀಗಿದೆ:

  • ಕಾರು, ಜೀಪು, ವ್ಯಾನ್​ಗಳಿಗೆ ಏಕಮುಖ ಸಂಚಾರಕ್ಕೆ 135 ರೂ., ಎರಡೂ ಕಡೆಗೆ 205 ರೂ.
  • ಲಘು ವಾಣಿಜ್ಯ ವಾಹನಗಳು, ಲಘು ಸರಕು ವಾಹನ, ಮಿನಿ ಬಸ್​ಗಳಿಗೆ ಏಕಮುಖ ಸಂಚಾರಕ್ಕೆ 220 ರೂ., ಅದೇ ದಿನ ಮರುಸಂಚಾರಕ್ಕೆ 330 ರೂಪಾಯಿ.
  • ಬಸ್/ಟ್ರಕ್​ಗಳಿಗೆ ಏಕಮುಖ ಸಂಚಾರಕ್ಕೆ 460 ರೂ, ಎರಡೂ ಕಡೆಗೆ 690 ರೂ.

ಟೋಲ್ ಶುಲ್ಕ ಸಂಗ್ರಹ ಮಾಡಲು ಮುಂದಾಗುತ್ತಿದ್ದಂತೆಯೇ ಹಲವು ಸಂಘಟನೆಗಳ ಮುಖಂಡರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ದಕ್ಷಿಣದ ಕಣಿಮಿಣಿಕೆ ಮತ್ತು ರಾಮನಗರ ಬಳಿಯ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಹಲವು ಸಂಘಟನೆಗಳು ಮತ್ತು ಕಾಂಗ್ರೆಸ್‌ ನಾಯಕರು ಸರ್ಕಾರ ಜನರಿಂದ ಹೆಚ್ಚಿನ ದರ ವಿಧಿಸಿ ಸುಲಿಗೆ ಮಾಡುತ್ತಿದೆ ಎಂದು ಪ್ರತಿಭಟನೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಮಂಗಳವಾರ ಬೆಳಗ್ಗೆ ಹಲವು ಸಂಘಟನೆಗಳು ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿವೆ. ಧರಣಿಗೆ ಕರೆ ಹಿನ್ನೆಲೆ ವಾಹನ ಸವಾರರಿಗೆ ಪ್ರತಿಭಟನೆಯ ಬಿಸಿ ಮುಟ್ಟಿದೆ ಎನ್ನಲಾಗಿದೆ. ಇದರಿಂದ ಸಂಚಾರ ದಟ್ಟಣೆಯೂ ಕೂಡ ಆಗಿದೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ. ಹಲವು ವಾಹನ ಸವಾರರು ಈ ಟೋಲ್ ಸಂಗ್ರದ ವಿಚಾರವಾಗಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪ್ರತಿಭಟನೆಯ ಕಾವು ಜೋರಾಗುತ್ತಿದ್ದಂತೆ ಟೋಲ್ ಪ್ಲಾಜಾಗಳಲ್ಲಿ ಸೂಕ್ತ ಪೊಲೀಸ್‌ ಭದ್ರತೆ ಒದಗಿಸಲು ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ರಾಮನಗರ ಡಿಸಿ, ಎಸ್‌ಪಿಗೆ ಮನವಿ ಮಾಡಿದ್ದಾರೆ. ಅದರಂತೆಯೇ ಟೋಲ್‌ ಬಳಿ 3 ಕೆಎಸ್​ಆರ್​ಪಿ ತುಕಡಿ, ಸ್ಥಳೀಯ ಪೊಲೀಸರ ನಿಯೋಜನೆ ಮಾಡಿದ್ದಾರೆ. ಭದ್ರತೆಗಾಗಿ 200‌ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಗಿದೆ. ಎಸ್‌ಪಿ ಕಾರ್ತಿಕ್ ರೆಡ್ಡಿ‌ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...