Homeಮುಖಪುಟಪ್ರತಾಪ್ ಸಿಂಹರವರೆ ಸುಳ್ಳು ಹೇಳುವುದನ್ನು ನಿಲ್ಲಿಸಿ: ದಶಪಥ ರಸ್ತೆ ಕಿತ್ತುಹೋದ ಬಗ್ಗೆ ಕಾಂಗ್ರೆಸ್, ಪ್ರಜ್ಞಾವಂತರ ಕಿಡಿ

ಪ್ರತಾಪ್ ಸಿಂಹರವರೆ ಸುಳ್ಳು ಹೇಳುವುದನ್ನು ನಿಲ್ಲಿಸಿ: ದಶಪಥ ರಸ್ತೆ ಕಿತ್ತುಹೋದ ಬಗ್ಗೆ ಕಾಂಗ್ರೆಸ್, ಪ್ರಜ್ಞಾವಂತರ ಕಿಡಿ

ಮಾಧ್ಯಮಗಳೇ, ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆಯನ್ನು ಅನ್ನು ಸರಿಪಡಿಸಲಾಗುತ್ತಿದೆ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದರು.

- Advertisement -
- Advertisement -

ಮಾಧ್ಯಮಗಳೇ, ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆಯನ್ನು ಅನ್ನು ಸರಿಪಡಿಸಲಾಗುತ್ತಿದೆ ಎಂಬ ಸಂಸದ ಪ್ರತಾಪ್ ಸಿಂಹರವರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ರಸ್ತೆ ಕಿತ್ತು ಬಂದಿರುವುದು ನಿಜವಾಗಿದ್ದರೂ ಸುಳ್ಳು ಹೇಳಿ ಜನರನ್ನು ಮಂಗ ಮಾಡಬೇಡಿ ಎಂಬ ಆಕ್ರೋಶ ವ್ಯಕ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆಯ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆಯುತ್ತಿದ್ದು, ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ.

ಈ ಕುರಿತು ಹಲವು ಮಾಧ್ಯಮಗಳು ಚಿತ್ರ ಸಮೇತ ವರದಿ ಪ್ರಕಟಿಸಿದ್ದವು. ಇದೇ ಜಾಗದಲ್ಲಿ ಹಿಂದೆ ಲಾರಿ ಪಲ್ಟಿಯಾಗಿತ್ತು ಮತ್ತು ಕೆಎಸ್‌ಆರ್‌ಟಿಸಿ ಬಸ್ ಸೇರಿದಂತೆ ಅನೇಕ ಅಪಘಾತಗಳು ಸಂಭವಿಸಿದ್ದವು ಎಂದು ವರದಿಯಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರವರ ರಸ್ತೆಯು ಹಿಂದೆ ಹೀಗಿತ್ತು ಎಂದು ಚಿತ್ರವೊಂದನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಆ ಮೂಲಕ ರಸ್ತೆ ಕಿತ್ತು ಬಂದಿರುವ ಆರೋಪವನ್ನು ನಿರಾಕರಿಸಿದ್ದರು.

ಆದರೆ ಸಂಸದ ಪ್ರತಾಪ್ ಸಿಂಹರವರು ಬೇರೆ ಫೋಟೊ ತೋರಿಸಿ, ರಸ್ತೆ ಸರಿಯಾಗಿತ್ತು ಎಂದು ಸುಳ್ಳು ಹೇಳುತ್ತಿದ್ದಾರೆ. ಅವರು ಹಂಚಿಕೊಂಡಿರುವ ಫೋಟೊದಲ್ಲಿನ ರಸ್ತೆ ಬದಿಯ ಡಿವೈಡರ್‌ಗೆ ಹಳದಿ – ಕಪ್ಪು ಬಣ್ಣ ಬಳಿಯಲಾಗಿದೆ. ಆದರೆ ಸದ್ಯ ಕಿತ್ತು ಹೋಗಿರುವ ರಸ್ತೆ ಬದಿಯ ಡಿವೈಡರ್‌ಗೆ ಬಿಳಿ ಮತ್ತು ಕಪ್ಪು ಬಣ್ಣ ಬಳಿಯಲಾಗಿದೆ. ಅಂದರೆ ಸಂಸದರು ತಮ್ಮ ಹುಳುಕು ಮುಚ್ಚಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಸೇರಿ ಹಲವು ಪ್ರಜ್ಞಾವಂತರು ಆರೋಪಿಸಿದ್ದಾರೆ.

ಎಷ್ಟು ಸುಲಭವಾಗಿ ಸಂಸದರು ಸುಳ್ಳು ಹೇಳ್ತಿದ್ದಾರೆ.
ಮೊದಲ ಫೋಟೋದಲ್ಲಿ ರಸ್ತೆಯ ಬದಿಯಲ್ಲಿ ಹಳದಿ, ಕಪ್ಪು ಬಣ್ಣವೇ ಇಲ್ಲ.
ಎರಡನೆಯ ಫೋಟೋದಲ್ಲಿ ಹಳದಿ, ಕಪ್ಪು ಬಣ್ಣ ಇದೆ.
ಎಷ್ಟು ಚನ್ನಾಗಿ ಒಂದಕ್ಕೊಂದು ಸಂಬಂಧವೇ ಇಲ್ಲದ ಬೇರೆ ಬೇರೆ ಫೋಟೋಗಳನ್ನ ತೋರಿಸಿ ಜನರನ್ನ ಮಂಗ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರಾದ ಶರತ್ ಚಂದ್ರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕರ್ನಾಟಕ ಕಾಂಗ್ರೆಸ್ ಸಹ ಕಿಡಿಕಾರಿದೆ. “ಮಾನ್ಯ ಸಂಸದರೇ, ಯಾರ ಕಿವ ಮೇಲೆ ಹೂವ ಇಡ್ತೀದಿರಿ? ಒಂದರಲ್ಲಿ ಹಳದಿ ಪಟ್ಟಿ, ಮತ್ತೊಂದರಲ್ಲಿ ಬಿಳಿ ಪಟ್ಟಿ, ಜನರ ದಿಕ್ಕು ತಪ್ಪಿಸುವುದಕ್ಕೂ ಮಿತಿ ಬೇಡವೇ? ಅಂದಹಾಗೆ
◆ನ್ಯೂನ್ಯತೆಗಳಿರುವ ರಸ್ತೆಯನ್ನು ತುರತುರಿಯಲ್ಲಿ ಉದ್ಘಾಟಿಸಿದ್ದೇಕೆ?
◆ಇಂತಹ ಹಲವು ನ್ಯೂನ್ಯತೆಗಳಿಗೆ 80 ಅಪಘಾತಗಳಾದವೇ?
◆ನ್ಯೂನ್ಯತೆಯ ರಸ್ತೆಗೆ ಜನ ಟೋಲ್ ನೀಡಬೇಕೆ?” ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ.

ಒಟ್ಟಿನಲ್ಲಿ ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಬಿಜೆಪಿ ಸರ್ಕಾರ ಮತ್ತು ಸಂಸದ ಪ್ರತಾಪ್ ಸಿಂಹರವರು ಹಲವಾರು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಪ್ರತಾಪ್ ಸಿಂಹರವರಂತೂ ವಾರಕ್ಕೊಮ್ಮೆಯಾದರೂ ಫೇಸ್‌ಬುಕ್ ಲೈವ್ ಬಂದು ಕಾಮಗಾರಿ ಕುರಿತು ಮಾತನಾಡುತ್ತಿದ್ದರು. ಆದರೆ ಕಳಪೆ ಮತ್ತು ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಲಾಗಿದೆ, ಕಮಿಷನ್ ಹೊಡೆಯಲಾಗಿದೆ, ಅಧಿಕ ಟೋಲ್ ಮೂಲಕ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪಗಳು ಪ್ರತಿನಿತ್ಯ ಕೇಳಿ ಬರುತ್ತಿವೆ. ಈಗಾಗಲೇ 80ಕ್ಕೆ ಹೆಚ್ಚು ಅಪಘಾತಗಳು ಸಂಭವಿಸಿದ್ದು ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಕ್ರೆಡಿಟ್ ಸಹ ಬಿಜೆಪಿಯವರಿಗೆ ಸಲ್ಲಬೇಕೆಲ್ಲವೆ ಎಂಬ ಆಕ್ರೋಶ ಸಹ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...