Homeಕರ್ನಾಟಕಬಿಜೆಪಿ ಎಂಎಲ್‌ಸಿ ಆರ್ ಶಂಕರ್ ಮನೆ ಮೇಲೆ ಐಟಿ ರೈಡ್: ಸರ್ಕಾರದ ವಿರುದ್ಧ ಬೆಂಬಲಿಗರ ಆಕ್ರೋಶ

ಬಿಜೆಪಿ ಎಂಎಲ್‌ಸಿ ಆರ್ ಶಂಕರ್ ಮನೆ ಮೇಲೆ ಐಟಿ ರೈಡ್: ಸರ್ಕಾರದ ವಿರುದ್ಧ ಬೆಂಬಲಿಗರ ಆಕ್ರೋಶ

- Advertisement -
- Advertisement -

ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ಮಂಗಳವಾರ ತಡರಾತ್ರಿ ದಾಳಿ ನಡೆಸಿದ್ದಾರೆ. ಈ ದಾಳಿ ವೇಳೆ ಸುಮಾರು 8 ಕೊಟಿ ರೂಪಾಯಿ ವೆಚ್ಚದ ವಸ್ತುಗಳು ಪತ್ತೆಯಾಗಿವೆ ಎಂದು ಅಂದಾಜಿಸಲಾಗಿದೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್ ಮನೆಗೆ ಮಂಗಳವಾರ ತಡರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ. ಸುಮಾರು ಏಳು ಗಂಟೆಗಳ ಕಾಲ ಶಂಕರ್‌ ಮನೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. 6000ಕ್ಕೂ ಹೆಚ್ಚು ಸೀರೆ, 9000 ಕ್ಕೂ ಹೆಚ್ಚು ಶಾಲಾ ಕಾಲೇಜು ಬ್ಯಾಗ್ ಗಳು ಸೇರಿದಂತೆ ತಟ್ಟೆಲೋಟಗಳನ್ನು ವಶಕ್ಕೆ ಪಡೆಯಲಾಗಿದೆ. ಸುಮಾರು 30-40 ಲಕ್ಷ ಬೆಲೆಬಾಳುವ ಗೃಹಪಯೋಗಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಎಲ್ಲಾ ವಸ್ತುಗಳನ್ನು ಅಧಿಕಾರಿಗಳು ಪೊಲೀಸರ‌ ವಶಕ್ಕೆ ನೀಡಿದ್ದಾರೆ.

ಐಟಿ ಅಧಿಕಾರಿಗಳು ಪರಿಶೀಲನೆ ವೇಳೆ ಈ ಎಲ್ಲ ವಸ್ತುಗಳ ಸರಕು ಸಾಗಣಿ ತೆರಿಗೆ (ಜಿಎಸ್‌ಟಿ) ಪಾವತಿಸಿರುವ ರಶೀದಿ ನೀಡುವಂತೆ ಆರ್‌.ಶಂಕರ್‌ ಅವರನ್ನು ಕೇಳಿದ್ದಾರೆ.

ಆರ್‌ ಶಂಕರ್ ಚುನಾವಣೆ ನಿಯಮ ಉಲ್ಲಂಘನೆ ಮಾಡಿದ್ದಾರೆಯೇ?

ಎಂಟು ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗುತ್ತಿದ್ದಂತೆ ಎಂಎಲ್‌ಸಿ ಶಂಕರ್‌ ಅವರು ಚುನಾವಣೆ ನಿಯಮ ಉಲ್ಲಂಘನೆ ಮಾಡಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದೆ. ಹಾಗಾಗಿ ಕಂದಾಯ ಇಲಾಖೆ ಅಧಿಕಾರಿಗಳು ಕೂಡಾ ಶಂಕರ್ ಮನೆ ಮೇಲೆ ದಾಳಿ ಮಾಡಿದ್ದಾರೆ. ”ಎಲ್ಲಾ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡೆಸಿ, ಒಪ್ಪಿಗೆ ಪಡೆದು ಎಫ್‌ಐಆರ್‌ ದಾಖಲಿಸಲಾಗುವುದು” ಎಂದು ಹಾವೇರಿ ಜಿಲ್ಲಾಧಿಕಾರಿ ರಘುನಂದನಮೂರ್ತಿ ತಿಳಿಸಿದ್ದಾರೆ.

ಬಿಜೆಪಿ ವಿರುದ್ಧ ಅಭಿಮಾನಿಗಳ ಆಕ್ರೋಶ

ಆರ್.ಶಂಕರ್ ನಿವಾಸದ ಮೇಲೆ ದಾಳಿಯ ವಿಷಯ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ”ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಆರ್‌. ಶಂಕರ್‌ ಅವರ ತ್ಯಾಗವೇ ಕಾರಣ ಅಂಥವರ ಮನೆ ಮೇಲೆ ದಾಳಿ ನಡೆಸುತ್ತಾರೆ ಎಂದರೆ ಮುಂಬರುವ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಕೆಲ ಬೆಂಬಲಿಗರು ಸರ್ಕಾರದ ವಿರುದ್ಧ ಕಿಡಿಕಾರಿದರು.

ಈ ಬಗ್ಗೆ ಮಾತನಾಡಿರುವ ಆರ್ ಶಂಕರ್ ಅವರು, ಇದು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ. ನಾನು ಬೇರೆ ಪಕ್ಷದಿಂದ ಅಥವಾ ಪಕ್ಷೇತರ ಅಭ್ಯರ್ಥಿಯಾಗಿಯೂ ಗೆಲ್ಲುವ ಸಾಮರ್ಥ್ಯ ಇದೆ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ. ಈ ಹಿಂದೆ ಬಿಜೆಪಿ ಸಭೆಯಲ್ಲಿ ಶಂಕರ್ ಅವರು ಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ನನಗೆ ಮಂತ್ರಿ ಸ್ಥಾನ ನೀಡುತ್ತೇನೆ ಎಂದು ಹೇಳಿ ನಂಬಿಸಿ ದ್ರೋಹ ಮಾಡಿದ್ದೀರಿ ಎಂದು ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ”ಆರ್.ಶಂಕರ್ ಮನೆ ಮೇಲಿನ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ. ತನಿಖಾ ಸಂಸ್ಥೆಗಳು ಎಷ್ಟು ಮುಕ್ತವಾಗಿವೆ ಅನ್ನೋದಕ್ಕೆ ಇದು ಸಾಕ್ಷಿ. ಯಾರೇ ತಪ್ಪು ಮಾಡಿದ್ರೂ ಸರ್ಕಾರ ಶಿಕ್ಷಿಸುವ ಕೆಲಸ ಮಾಡುತ್ತೆ. ಆರ್ .ಶಂಕರ್ ಕೇಸ್ ನಲ್ಲೂ ತನಿಖಾ ಸಂಸ್ಥೆ ಕ್ರಮ ಕೈಗೊಳ್ಳಲಿದೆ” ಎಂದು ಹೇಳಿದ್ದಾರೆ.

ಆರ್ ಶಂಕರ್ ಹಿನ್ನೆಲೆ

ಆರ್‌. ಶಂಕರ್ ಮೂಲತಃ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದಿಂದ 2018ರ ವಿಧಾನಸಭಾ ಚುನಾವಣೆಯಲ್ಲಿ ರಾಣೆಬೆನ್ನೂರು ಶಾಸಕರಾಗಿ ಆಯ್ಕೆಗೊಂಡರು. ರಾಣೆಬೆನ್ನೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸ್ಪೀಕರ್ ಕೆ ಬಿ ಕೋಳಿವಾಡ ಅವರನ್ನು ಸೋಲಿಸಿ ಕರ್ನಾಟಕ ಪ್ರಜಾ ಜನತಾ ಪಕ್ಷದಿಂದ ಏಕೈಕ ಶಾಸಕರಾಗಿ ಆಯ್ಕೆಯಾದರು.

2018ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ದರಾಗಿದ್ದ ವೇಳೆ ಶಂಕರ್ ಅವರು ಯಡಿಯೂರಪ್ಪನವರಿಗೆ ಬೆಂಬಲ ನೀಡಲು ನಿರ್ಧರಿಸಿದ್ದರು. ಆದರೆ ದಿಢೀರ್ ರಾಜಕೀಯ ಬದಲಾವಣೆ ನಂತರ ಅದೇ ದಿನ ಸಾಯಂಕಾಲ ಕೆಪಿಸಿಸಿ ಕಚೇರಿಗೆ ಹೋಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು.

ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿ ಬಳಿಕ ಕಾಂಗ್ರೆಸ್ ಜೊತೆಗೆ ತಮ್ಮ ಪಕ್ಷವನ್ನು ವಿಲೀನಗೊಳಿಸಿದರು. ಆದರೆ ನಂತರ ಅವರು ಆಪರೇಷನ್‌ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರ್ಪಡೆಗೊಂಡರು. ಆಗ ತಮ್ಮ ಶಾಸಕ ಸ್ಥಾನ ಕಳೆದುಕೊಂಡರು.

ಆ ಬಳಿಕ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಶಂಕರ್ ಅವರಿಗೆ ಟಿಕೆಟ್ ನೀಡಲಿಲ್ಲ. ಆದರೆ, ಯಡಿಯೂರಪ್ಪನವರು ಸಚಿವ ಸ್ಥಾನದ ಭರವಸೆ ನೀಡಿದ್ದರು. ಆನಂತರ ಅವರಿಗೆ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...