Homeಮುಖಪುಟರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಬಿಜೆಪಿ ನಾಯಕರಿಗೆ ಖರ್ಗೆ ಖಡಕ್...

ರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಬಿಜೆಪಿ ನಾಯಕರಿಗೆ ಖರ್ಗೆ ಖಡಕ್ ಉತ್ತರ

- Advertisement -
- Advertisement -

ಸಂಸದ ರಾಹುಲ್ ಗಾಂಧಿ ಅವರು ಯಾವುದೇ ಕಾರಣಕ್ಕೂ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಬಿಜೆಪಿ ನಾಯಕರಿಗೆ ಖಡಕ್ ಉತ್ತರ ನೀಡಿದ್ದಾರೆ.

ಕಳೆದ ವಾರ ಲಂಡನ್‌ನಲ್ಲಿ ಪಕ್ಷದ ಸಂಸದ ರಾಹುಲ್ ಗಾಂಧಿಯವರು ಹೇಳಿದ ಮಾತುಗಳಿಗೆ  ಸಂಬಂಧಿಸಿದಂತೆ, ಹಿರಿಯ ಕ್ಯಾಬಿನೆಟ್ ಮಂತ್ರಿಗಳು ಸೇರಿದಂತೆ ಬಿಜೆಪಿ ಮುಖಂಡರು, ಸಂಸತ್ತನಲ್ಲಿ ಅವರನ್ನು ಗುರಿಯಾಗಿಸಿ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದಾರೆ. ಅದಕ್ಕೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಖರ್ಗೆ ಅವರು ತಿರುಗೇಟು ನೀಡಿದ್ದಾರೆ.

ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ಅವರು, ”ದೇಶದ ಪ್ರಜಾಪ್ರಭುತ್ವದ ಮೂಲಭೂತ ರಚನೆಯ ಮೇಲೆ ಭಾರತ ಸರ್ಕಾರ ದಾಳಿ ಮಾಡುತ್ತಿದೆ” ಎಂದು ಹೇಳಿದ್ದರು.

”ಭಾರತ ಮೌನವಾಗಿರಬೇಕೆಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಬಯಸುತ್ತದೆ. ಭಾರತದಲ್ಲಿ ಎಲ್ಲೆಡೆ ಬಾಯಿ ಮುಚ್ಚಿಸಲಾಗುತ್ತಿದೆ. ಬಿಬಿಸಿ ಸಾಕ್ಷ್ಯಾಚಿತ್ರವೇ ಇದಕ್ಕೆ ಉದಾಹರಣೆ. ಪತ್ರಕರ್ತರನ್ನು (ಭಾರತದಲ್ಲಿ) ಬೆದರಿಸಲಾಗುತ್ತದೆ, ಅವರ ಮೇಲೆ ದಾಳಿ ಮಾಡಲಾಗುತ್ತದೆ. ಸರ್ಕಾರ ಹೇಳಿದಂತೆ ಕೇಳುವ ಪತ್ರಕರ್ತರಿಗೆ ಬಹುಮಾನ ನೀಡಲಾಗುತ್ತದೆ” ಎಂದು ಕೇಂದ್ರ ಬಿಜೆಪಿಯ ವಿರುದ್ಧ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಆಸ್ಕರ್ ವಿಜೇತ ನಾಟು ನಾಟು ಸಾಂಗ್, ದಿ ಎಲಿಫೆಂಟ್ ವಿಸ್ಪರರ್ಸ್ ಚಿತ್ರ ನಿದೇರ್ಶಿಸಿದ್ದು ಮೋದಿ ಎನ್ನಬೇಡಿ: ಖರ್ಗೆ ವ್ಯಂಗ್ಯ

ಫ್ಯಾಸಿಸ್ಟ್ ಆರ್‌ಎಸ್‌ಎಸ್‌ನ ಭಾಗವಾಗಿರುವ ಬಿಜೆಪಿ, ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ಧಾರೆ. ಲಂಡನ್ ಮೂಲದ ಚಿಂತಕರ ಚಾಥಮ್ ಹೌಸ್‌ನಲ್ಲಿ ನಡೆದ ಸಂವಾದದಲ್ಲಿ ನಡೆದ ಸಂವಾದದಲ್ಲಿ ಈ ಹೇಳಿಕೆ ನೀಡಿದ್ದರು.

”ಭಾರತದ ಸಂಸ್ಥೆಗಳನ್ನು ಸಂಪೂರ್ಣವಾಗಿ ಹಿಡಿತಕ್ಕೆ ತಗೆದುಕೊಂಡಿರುವ ಆರ್‌ಎಸ್‌ಎಸ್, ದೇಶದ ಪ್ರಜಾಸತ್ತಾತ್ಮಕ ಸ್ವರೂಪವನ್ನೇ ಬದಲಾಯಿಸಿದೆ” ಎಂದು ರಾಹುಲ್ ಹೇಳಿದ್ದಾರೆ.

ನೋಟು ಅಮಾನ್ಯೀಕರಣ, ಕಿಸಾನ್ ಮಸೂದೆ, ಜಿಎಸ್‌ಟಿ ಹೇರಿಕೆ ಮತ್ತು ಚೀನಾದ ಆಕ್ರಮಣದ ಕುರಿತಾದ ಚರ್ಚೆಗಳನ್ನು ನಡೆಸಲು ಪ್ರತಿಪಕ್ಷಗಳಿಗೆ ಯಾವುದೇ ಅವಕಾಶ ಇಲ್ಲದಂತಾಗಿದೆ ಎಂದು ಅವರು ಆರೋಪಿಸಿದ್ದರು.

ರಾಹುಲ್ ಗಾಂಧಿ ಅವರ ಈ ಹೇಳಿಕೆಗಳು ಸಂಸತ್ತಿನಲ್ಲಿ ಕೋಲಾಹಲಕ್ಕೆ ಕಾರಣವಾಗಿವೆ, ಎರಡೂ ಮನೆಗಳು ಸೋಮವಾರದಿಂದ ಪ್ರಾರಂಭವಾದ ಬಜೆಟ್ ಅಧಿವೇಶನದ ಎರಡನೇ ಹಂತದ ಮೊದಲ ಎರಡು ದಿನಗಳು ಗದ್ದಲ ಗಲಾಟೆ ನಡೆದಿದೆ. ಬುಧವಾರ ಕೂಡ ಬಿಜೆಪಿ ಸಂಸದರಿಂದ ಕ್ಷಮೆಯಾಚಿಸುವ ಬೇಡಿಕೆಯ ಮಧ್ಯೆ ಲೋಕಸಭಾ ಮತ್ತು ರಾಜ್ಯಸಭೆಯನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ರಾಹುಲ್ ಗಾಂಧಿಯವರು ವಿದೇಶಿ ನೆಲದಲ್ಲಿ ಭಾರತವನ್ನು ದೂಷಿಸುತ್ತಿದ್ದಾರೆಂದು ಬಿಜೆಪಿ ನಾಯಕರು ಮತ್ತು ಹಲವಾರು ಹಿರಿಯ ಮಂತ್ರಿಗಳು ಆರೋಪಿಸಿದರೆ, ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಂತರಿಕ ರಾಜಕೀಯದ ಬಗ್ಗೆ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.

ಬುಧವಾರ, ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ”ಮೋದಿ ಅವರು ವಿದೇಶದಲ್ಲಿ ತಮ್ಮ ಅಭಿಪ್ರಾಯಗಳೊಂದಿಗೆ ದೇಶದ ನಾಗರಿಕರನ್ನು ಅವಮಾನಿಸಿದ್ದಾರೆ” ಎಂದು ಹೇಳಿದರು.

“ಮೋದಿ ಜಿ ಐದು-ಆರು ದೇಶಗಳಿಗೆ ಹೋದಾಗ … ಭಾರತದಲ್ಲಿ ಜನಿಸುವುದು ಪಾಪ” ಎಂದಿರುವುದಾಗಿ ಖರ್ಗೆ ಹೇಳಿದರು.

ಹಿರಿಯ ಪತ್ರಕರ್ತೆ ಪಲ್ಲವಿ ಘೋಷ್ ಅವರು, ಈ ಹಿಂದೆ ನರೇಂದ್ರ ಮೋದಿ ಅವರು ವಿದೇಶದಲ್ಲಿ ಮಾತನಾಡಿದ ಕೆಲವು ಭಾ‍ಷಣದ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

”ಇಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ, ಅಭಿವ್ಯಕ್ತಿ ಮತ್ತು ವಾಕ್ ಸ್ವಾತಂತ್ರ್ಯವನ್ನು ದುರ್ಬಲಗೊಳಿಸಲಾಗುತ್ತಿದೆ, ಟಿವಿ ಚಾನೆಲ್‌ಗಳು ಒತ್ತಡಕ್ಕೊಳಗಾಗುತ್ತಿವೆ ಮತ್ತು ಸತ್ಯವನ್ನು ಮಾತನಾಡುವ ಜನರು ಜೈಲಿನಲ್ಲಿದ್ದಾರೆ. ಹಾಗಾಗಿ ಇದನ್ನು ಪ್ರಜಾಪ್ರಭುತ್ವ ಕೊನೆಗೊಳಿಸುವ ಪ್ರಕ್ರಿಯೆ ಅನ್ನದೇ ಮತ್ತೇನನ್ನಬೇಕು? ಎಂದು ಖರ್ಗೆ ಖಾರವಾಗಿಯೇ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...