Homeಮುಖಪುಟಎರಡು ಆಸ್ಕರ್ ಕಥೆಗಳು!

ಎರಡು ಆಸ್ಕರ್ ಕಥೆಗಳು!

- Advertisement -
- Advertisement -

ಫೆಬ್ರವರಿ 13ರಂದು ಭಾರತೀಯ ಮಾಧ್ಯಮಗಳು, ಭಾರತ ಮೂಲದ ಎರಡು ಸಿನಿಮಾಗಳು ಎರಡು ವಿಭಾಗಗಳಲ್ಲಿ ಪಡೆದ ಆಸ್ಕರ್ ಪ್ರಶಸ್ತಿಯ ಸಲುವಾಗಿ ಇನ್ನಿಲ್ಲದಂತೆ ಸಂಭ್ರಮಾಚರಣೆಯಲ್ಲಿದ್ದವು. ಅಮೆರಿಕ ಮೂಲದ ಈ ಪ್ರಶಸ್ತಿ ಅಷ್ಟು ಜನಪ್ರಿಯತೆ ಪಡೆದುಕೊಂಡಿರುವುದು ನಿಜವೇ! ಹಾಲಿವುಡ್‌ನ ಸಾಧಾರಣ ಸಿನಿಮಾವನ್ನು ಜತ್ತಿನಾದ್ಯಂತ ’ಶ್ರೇಷ್ಠ’ ಎಂಬಂತೆ ಬಿಂಬಿಸುವ ಅಮೆರಿಕದ ಪ್ರಚಾರ ಯಂತ್ರಾಂಗ ಆಸ್ಕರ್ ಪ್ರಶಸ್ತಿಗಳನ್ನೂ ಜಾಗತಿಕವಾಗಿ ಜನಪ್ರಿಯಗೊಳಿಸಿದೆ. ಜೊತೆಗೆ, ಹಲವು ಅತ್ಯುತ್ತಮ ಸಿನಿಮಾಗಳಿಗೂ ಪ್ರಶಸ್ತಿ ನೀಡಿ ಒಂದು ಮಟ್ಟದ ’ಹೆಸರು’ ಉಳಿಸಿಕೊಂಡಿರುವ ’ಆಸ್ಕರ್’ ಅಮೆರಿಕದ ಶ್ರೇಷ್ಠತೆಯನ್ನು ಪ್ರಚಾರ ಮಾಡುವ ಸಿನಿಮಾಗಳಿಗೂ (ಉದಾಹರಣೆಗೆ ಯುದ್ಧೋನ್ಮಾದದ) ಪ್ರಶಸ್ತಿ ನೀಡಿ ಟೀಕೆಗೂ ಗುರಿಯಾಗಿದೆ. ಆದರೂ, ಅತ್ಯುತ್ತಮ ವಿದೇಶಿ ಚಿತ್ರ ವಿಭಾಗಕ್ಕೆ ಹಲವು ದೇಶಗಳು ಒಂದು ಸಿನಿಮಾವನ್ನು ನಾಮಾಂಕಿತ ಮಾಡುವ ಪರಿಪಾಠವನ್ನು ಉಳಿಸಿಕೊಂಡಿವೆ. ಆಲ್ಟರ್‌ನೇಟಿವ್ ಎನ್ನಬಹುದಾದ (ಕಥೆ, ನಿರೂಪಣೆ ಮುಂತಾದವುಗಳಲ್ಲಿ), ಕೇವಲ ಜನಪ್ರಿಯತೆಯನ್ನೇ ಮಾನದಂಡವನ್ನಾಗಿಟ್ಟುಕೊಳ್ಳದ, ಸಿನಿಮಾದ ವಿವಿಧ ವಿಭಾಗಗಳಲ್ಲಿ ಗಂಭೀರತೆಯನ್ನು ತೊಡಗಿಸಿಕೊಂಡ, ಸಮಕಾಲೀನ ಸಂದರ್ಭವನ್ನು ವಿಮರ್ಶಾತ್ಮಕವಾಗಿ ಚಿತ್ರಿಸುವ ಸಿನಿಮಾಗಳು ಈ ವಿಭಾಗದಲ್ಲಿ ಹೆಚ್ಚು ಪ್ರಶಸ್ತಿ ಪಡೆಯುವುದರಿಂದ, ಭಾರತದಲ್ಲಿ ಕೂಡ ’ಕಲಾತ್ಮಕ’ ಚಿತ್ರಗಳು ಎಂದು ಪರಿಗಣಿಸಲಾಗುವ ಚಿತ್ರಗಳನ್ನು ಈ ವಿಭಾಗಕ್ಕೆ ಕಳುಹಿಸುವುದು ವಾಡಿಕೆ. ಅದರಂತೆಯೇ ಈ ಬಾರಿ ’ಚ್ಚೆಲ್ಲೋ ಶೋ’ ಎಂಬ ಗುಜರಾತಿ ಭಾಷೆಯ ಸಿನಿಮಾವನ್ನು ಆಸ್ಕರ್‌ನ ’ವಿದೇಶಿ ಅತ್ಯುತ್ತಮ ಸಿನಿಮಾ’ ವಿಭಾಗದ ಸ್ಪರ್ಧೆಗೆ ಕಳುಹಿಸಲಾಗಿತ್ತು.

ಆದರೆ ಇದರ ಕೆಲವು ದಿನಗಳ ನಂತರ ಶುರುವಾಯಿತು ನೋಡಿ; ತೀವ್ರ ಪ್ರತಿಗಾಮಿ ಸಿನಿಮಾವಾದ ’ದ ಕಾಶ್ಮೀರ್ ಫೈಲ್ಸ್’, ಅತಿ ಸಾಧಾರಣ ಮತ್ತು ಸನಾತನ ನಂಬಿಕೆಗಳನ್ನು ಪ್ರತಿಪಾದಿಸುವ ’ಆರ್‌ಆರ್‌ಆರ್’ ಸಿನಿಮಾಗಳನ್ನು ಆಸ್ಕರ್‌ಗೆ ಕಳುಹಿಸಬೇಕಿತ್ತೆಂಬ ಗುಲ್ಲನ್ನು ಎಬ್ಬಿಸಲಾಯಿತು. ನಂತರ ಈ ಚಿತ್ರಗಳನ್ನು ಅದರ ನಿರ್ಮಾಪಕರೇ ಖಾಸಗಿಯಾಗಿ ಅರ್ಜಿ ತುಂಬಿ ಆಸ್ಕರ್ ಪ್ರಶಸ್ತಿಗಳಿಗೆ ಕಳುಹಿಸಿದರು. ’ಆರ್‌ಆರ್‌ಆರ್’ ಅಂತೂ ಅಮೆರಿಕದಲ್ಲಿ ಸಿನಿಮಾ ಪ್ರಮೋಟರ್ ಸಂಸ್ಥೆಯೊಂದನ್ನು ತೊಡಗಿಸಿಕೊಂಡು ಬಹುಶಃ ಹಿಂದೆಂದೂ ಕಾಣದಷ್ಟು ಹಣ ವಿನಿಯೋಗಿಸಿ ಪ್ರಚಾರದಲ್ಲಿ ತೊಡಗಿಸಿಕೊಂಡಿತು. ಹಲವು ವಿಭಾಗಗಳಲ್ಲಿ ಈ ಸಿನಿಮಾ ನಾಮನಿರ್ದೇಶನಗೊಂಡರೂ, ’ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಮಾತ್ರ ’ಆರ್‌ಆರ್‌ಆರ್‌’ ’ನಾಟುನಾಟು’ ಹಾಡು ಕೊನೆ ಹಂತದವರೆಗೂ ಉಳಿದುಕೊಂಡಿತ್ತು ಮತ್ತು ಅದರಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅಮೆರಿಕದಲ್ಲಿ ಈ ಪ್ರಚಾರಕ್ಕಾಗಿ ಮಾಡಿದ ಖರ್ಚಿನಲ್ಲಿ ಬಹುಶಃ ಸುಮಾರು ಹತ್ತು ಅತ್ಯುತ್ತಮ ಸಿನಿಮಾಗಳನ್ನು ತೆಗೆಯಬಹುದಿತ್ತು ಎಂಬ ನಗೆ ಚಟಾಕಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ತೇಲಿಹೋದವು. ಒಟ್ಟಿನಲ್ಲಿ ಈಗ ಆರ್‌ಎಸ್‌ಎಸ್ ಬಗೆಗೆ ಸಿನಿಮಾ ಮಾಡುವುದಕ್ಕೆ ಸನ್ನದ್ಧರಾಗುತ್ತಿರುವ ’ಆರ್‌ಆರ್‌ಆರ್’ ಸಿನಿಮಾದ ನಿರ್ದೇಶಕ ರಾಜಮೌಳಿ ಈ ಪ್ರಶಸ್ತಿಯನ್ನು ಮತ್ತಷ್ಟು ಪ್ರದರ್ಶನ ಮಾಡಿಕೊಳ್ಳುವುದಂತೂ ನಿಜ. ಈ ಸಿನಿಮಾಗೆ ಸಂಗೀತ ನೀಡಿದ ಕೀರವಾಣಿಯವರು ಹಿಂದೆ ಬಸವಣ್ಣನ ವಚನಗಳಿಗೆ ಸಂಗೀತ ನೀಡಿ ಹಾಡಿದ ಆಲ್ಬಂ ಕೂಡ ಈ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡಿದ್ದು ವಿಶೇಷ.

ಇನ್ನು ಅಷ್ಟು ಅಬ್ಬರವಿಲ್ಲದೆ ಭಾರತದಲ್ಲಿ ತಯಾರಾದ ಕಿರು ಸಾಕ್ಷ್ಯಚಿತ್ರವೊಂದು ಆಸ್ಕರ್ ಪ್ರಶಸ್ತಿ ಪಡೆದು ದೇಶದ ಸಿನಿಮಾ ರಸಿಕರ ಗಮನ ಸೆಳೆಯಿತು. ’ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್ ಫಿಲ್ಮ್’ ವಿಭಾಗದಲ್ಲಿ ಪ್ರಶಸ್ತಿ ಪಡೆದ ’ದ ಎಲಿಫೆಂಟ್ ವಿಸ್ಪರರ್ಸ್’ನ ನಿರ್ದೇಶಕಿ ಕಾರ್ತಿಕಿ ಗೋನ್ಸೇವ್ಸ್. ತಮಿಳುನಾಡಿದ ಮಧುಮಲೈ ಹುಲಿ ಸಂರಕ್ಷಣಾ ಅಭಯಾರಣ್ಯದ ತೆಪ್ಪಕಾಡು ಎಂಬ ಬೆಟ್ಟಗಾಡು ಪ್ರದೇಶದಲ್ಲಿ ಹಿಂಡಿನಿಂದ ತಪ್ಪಿಸಿಕೊಂಡ ಆನೆ ಮರಿಗಳನ್ನು ರಕ್ಷಿಸಿ ಸಾಕುವ ಬೊಮ್ಮನ್ ಮತ್ತು ಬೆಳ್ಳಿ ಅಮ್ಮ ಅವರ ಮತ್ತು ಅವರು ಸಾಕುವ ಎರಡು ಆನೆಗಳ ಒಡನಾಟದ ಭಾವನಾತ್ಮಕ ಕಥೆ ಇದು. ತಮಿಳಿನಲ್ಲಿ ಈ ಸಾಕ್ಷ್ಯಚಿತ್ರ ನಿರೂಪಿತವಾಗಿದ್ದರೂ, ನಡುನಡುವೆ ಬೊಮ್ಮನ್ ಮತ್ತು ಬೆಳ್ಳಿ ಅಮ್ಮ ಮಾತನಾಡುವ ಆ ಭಾಗದ ಕನ್ನಡ ಮಿಶ್ರಿತ ಭಾಷೆ ವಿಶೇಷವೆನಿಸುತ್ತದೆ. ಮರಿಯಾನೆಗಳನ್ನು ತಮ್ಮ ಸ್ವಂತ ಮಕ್ಕಳಂತೆ ಸಾಕಿ ಕಾಪಾಡುವ ಈ ಭಾವನಾತ್ಮಕ ಕಥೆ ’ಫೀಲ್ ಗುಡ್’ ಸಿನಿಮಾವೆನ್ನಬಹುದು. ಸಾಮಾನ್ಯವಾಗಿ ಇಂತಹ ಫೀಲ್ ಗುಡ್ ಸಿನಿಮಾಗಳನ್ನು ಹೆಚ್ಚು ಆಸ್ಕರ್ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದ್ದಿದೆ. ರಘು ಮತ್ತು ಅಮ್ಮು ಎಂಬ ಎರಡು ಆನೆಗಳ ಜೊತೆಗಿನ ಒಡನಾಟದ ದೃಶ್ಯಗಳು ಆ ಬೆಟ್ಟಗಾಡಿನ ಪರಿಸರದಲ್ಲಿ ಮನಮೋಹಕವಾಗಿ ಚಿತ್ರಿಸಲ್ಪಟ್ಟಿವೆ. ಕಾಡು ಪರಿಸರದ ಜೊತೆಗೆ ಮನುಷ್ಯ ಹೊಂದಿರಬೇಕಾದ ಸಂಬಂಧದ ಬಗ್ಗೆ ಈ ಸಿನಿಮಾ ಪರೋಕ್ಷವಾಗಿ ನುಡಿಯುತ್ತದೆ. ಆದರೆ, ಮನುಷ್ಯನ ಅಭಿವೃದ್ಧಿ ಕಲ್ಪನೆಗಳಿಂದ ಪರಿಸರದಲ್ಲಿ ಆಗುತ್ತಿರುವ ಅನಾಹುತಗಳ ಬಗ್ಗೆ, ಅದರಿಂದ ಹುಟ್ಟುತ್ತಿರುವ ಕಾಡುಪ್ರಾಣಿಗಳ ಜೊತೆಗಿನ ಸಂಘರ್ಷದ ಬಗ್ಗೆ ಇನ್ನೂ ಪರಿಣಾಮಕಾರಿಯಾಗಿ ಮಾತನಾಡುವ ಅವಕಾಶವನ್ನು ಸಿನಿಮಾ ಕೈಚೆಲ್ಲಿದೆ. ಆದರೂ, ಕೋಟ್ಯಾನುಗಟ್ಟಲೆ ಪ್ರಚಾರಕ್ಕಾಗಿ ಸುರಿದ ’ಆರ್‌ಆರ್‌ಆರ್’ ಸಿನಿಮಾಗಿಂತಲೂ ಹತ್ತಾರು ಪಟ್ಟು ಉತ್ತಮ ಸಿನಿಮಾ ಇದು ಎನ್ನಲಡ್ಡಿಯಿಲ್ಲ. ಮಕ್ಕಳ ಜೊತೆಗೆ ಕೂತು ’ದ ಎಲಿಫೆಂಟ್ ವಿಸ್ಪರರ್ಸ್’ ನೋಡುವುದು ಒಂದು ಒಳ್ಳೆಯ ಅನುಭವವಾದೀತು. ನೆಟ್‌ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಇದು ವೀಕ್ಷಣೆಗೆ ಲಭ್ಯವಿದೆ.


ಇದನ್ನೂ ಓದಿ: ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...