Homeಅಂಕಣಗಳುಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

ಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

- Advertisement -
- Advertisement -

ಹಸಿರುಮಯವಾಗಿದ್ದ ಮಂಡ್ಯವನ್ನು ಕೇಸರಿಮಯವಾಗಿಸಲು ಪಣತೊಟ್ಟ ಬಿಜೆಪಿಗಳು ಪ್ರಧಾನಿಯವರ ರೋಡ್ ಶೋ ಏರ್ಪಡಿಸಿದ್ದ ಫಲವಾಗಿ ಮೋದಿ ಕೈ ಬೀಸಲು ಅಡ್ಡಿಯಾಗಿದ್ದ ಮರದ ರೆಂಬೆಕೊಂಬೆಗಳನ್ನೆಲ್ಲಾ ಕಡಿದು, ರಸ್ತೆಯ ಮಾರ್ಗವನ್ನು ಬದಲಿಸಿ ಅಂತೂ ಮಂಡ್ಯಕ್ಕೆ ಮೋದಿ ಕರೆತಂದು ಫೈಟರ್ ರವಿಯನ್ನ ಪರಿಚಯಿಸಿದವಲ್ಲಾ. ಮಂಡ್ಯ ಧೀಮಂತ ರಾಜಕಾರಣಿಗಳಿಗೆ ಹೆಸರಾದ ಜಿಲ್ಲೆ. ಅಲ್ಲಿನ ರಾಜಕಾರಣದ ಇತಿಹಾಸ ನೋಡಿದರೆ ಇಲ್ಲಿನ ಪ್ರಾಮಾಣಿಕ ಮತದಾರರ ಮೆಚ್ಚಿನ ಜನ ನಾಯಕರ ಇತಿಹಾಸವೇ ಇದೆ. ಅವರ ಸಂತತಿಗಳು ಕೂಡ ಇನ್ನೂ ಇವೆ. ಅವರನ್ನೆಲ್ಲಾ ಬಿಟ್ಟು ಈ ಬಿಜೆಪಿಗಳು ಫೈಟರ್ ರವಿ ಎಂಬ ವ್ಯಕ್ತಿಯನ್ನು ಪರಿಚಯಿಸಿದಾಗ ಮೋದಿಯವರಿಗೆ ಅಮಿತ್‌ಶಾ ದರ್ಶನ ಮಾಡಿದಂತಾಗಿ ಕೈ ಮುಗಿದು ಮುಗುಳುನಕ್ಕಿದ್ದಾರಲ್ಲಾ. ಇದು ಭಾರತದ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆ. ಬೆಂಗಳೂರು ಠಾಣೆಗಳಲ್ಲಿ ಕೇಸುಗಳಿರುವ ವ್ಯಕ್ತಿಯೊಬ್ಬ ಜಾದೂ ಮಾಡಿದಂತೆ ಧನಕನಕ ಸಂಗ್ರಹಿಸಿಕೊಂಡು ಒಂದು ಓಟಿಗೆ ಇಂತಿಷ್ಟು ಸಾವಿರ ಕೊಡುತ್ತೇನೆಂದು ಘೋಷಣೆ ಮಾಡಿಕೊಂಡು ತಿರುಗುತ್ತಿರುವಾಗ, ಆತ ಬಿಜೆಪಿಗಳಿಗೆ ಗಣ್ಯನಾಗಿ ಕಂಡಿದ್ದೂ ಅಲ್ಲದೆ, ಆತ ಪ್ರಧಾನ ಮಂತ್ರಿ ಭೇಟಿಮಾಡಲೇಬೇಕಾದ ವ್ಯಕ್ತಿಯೆಂದು ಭಾವಿಸಿದ ಈ ಬಿಜೆಪಿಗಳು ಮುಟ್ಟಿರುವ ಪಾತಾಳ ಎದ್ದು ಬರಲಾರದಂತಹುದಂತಲ್ಲಾ, ಥೂತ್ತೇರಿ.

*****

ಮಂಡ್ಯದಲ್ಲಿ ಫೈಟರ್ ರವಿಯ ಜೊತೆಗೆ ಮತ್ತೊಬ್ಬ ಧೀಮಂತ ಮಹಿಳೆ ಸುಮಲತಾ ತಾನು ಈವರೆಗೆ ಹಸುವಿನಂತಿದ್ದೆ, ನನಗೆ ಆನೆ ಬಲ ಬರಬೇಕಾದರೆ ಬಿಜೆಪಿಗೆ ಸೇರಲೇಬೇಕೆಂದು ಹಠತೊಟ್ಟು ಮೋದಿ ಸಮ್ಮುಖದಲ್ಲೇ ಬಿಜೆಪಿಗಿ ನುಗ್ಗಿದ್ದಾರಲ್ಲಾ. ಸುಮಲತಾ ಚುನಾವಣೆಗೆ ನಿಂತಾಗ ನಾಗಮಂಗಲದ ಮಾಜಿ ಶಾಸಕ ಮತ್ತು ಮಂಡ್ಯದ ಮಾಜಿ ಸಂಸದ ಶಿವರಾಮೇಗೌಡ ತನ್ನದೇ ಶೈಲಿಯಲ್ಲಿ ಸುಮಲತಾರನ್ನು ಜರಿದಿದ್ದರು. ಆಗ ಇಡೀ ನಾಡಿನ ತುಂಬ ಪ್ರತಿಭಟನೆಗಳಾಗಿದ್ದವು. ಶಿವರಾಮೇಗೌಡರ ವಿರುದ್ಧ ಮಹಿಳೆಯರು ಪ್ರತಿಭಟಿಸಿದ್ದರು. ಆದರೆ ಈಗ ಸುಮಲತಾ ದಿಢೀರನೆ ಬಿಜೆಪಿಗೆ ಬೆಂಬಲ ಘೋಷಿಸಿ ಅಸಂಬದ್ಧವಾಗಿ ಮಾತನಾಡುವ ಶಿವರಾಮೇಗೌಡನ ಮಾತನ್ನೇ ಮರೆಸುವಂತೆ ಮುನ್ನುಗ್ಗುತ್ತಿದ್ದಾರಲ್ಲಾ. ಅಂದು ಜೆಡಿಎಸ್ ಲೀಡರುಗಳನ್ನು ಮೆಚ್ಚಿಸಲೋಸ್ಕರ ಅಸಂಬದ್ಧ ಮಾತನಾಡಿದ್ದ ಶಿವರಾಮೇಗೌಡ ಇಂದು ಜೆಡಿಎಸ್‌ನಿಂದಲೀ ಉಚ್ಛಾಟನೆಗೊಂಡು ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿರುವಾಗಲೇ, ಫೈಟರ್ ರವಿ ನಾಗಮಂಗಲಕ್ಕೆ ಕೋಟಿಗೂ ಹೆಚ್ಚು ಖರ್ಚು ಮಾಡಿ ಪ್ರಧಾನಿಯಿಂದಲೇ ಕೈ ಮುಗಿಸಿಕೊಂಡು ಭೇಷ್ ಎನ್ನಿಸಿಕೊಳ್ಳುವಾಗ, ಸುಮಲತಾ ಕೂಡ ಬಿಜೆಪಿ ಸೇರಿದ್ದು (ಬಾಹ್ಯ ಬೆಂಬಲವೆಂಬ ನಾಟಕದೊಂದಿದೆಗೆ) ಈಗ ಎಲ್ಲಿಗೆ ಹೋಗಲಿ ಎಂಬ ಸ್ಥಿತಿಯನ್ನು ಶಿವರಾಮೇಗೌಡ ಎದುರಿಸುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಈಗ ಬಿಜೆಪಿಗೆ ಬೆಂಬಲ ಘೋಷಿಸಿರುವ ಸುಮಲತಾ ಕಳೆದ ಬಾರಿ ಎದುರಿಸಿದ್ದ ಚುನಾವಣೆಯನ್ನು ಪ್ರಪಂಚದಲ್ಲೆಲ್ಲಾ ಹರಡಿರುವ ಅಂಬರೀಶ್ ಅಭಿಮಾನಿಗಳು ಕುತೂಹಲದಿಂದ ನೋಡಿದ್ದರು. ಅದೂಅಲ್ಲದೆ ದುಬೈನ ಬುರ್ಜು ಖಲೀಫದ ಕಟ್ಟಡದಲ್ಲಿ ಕುಳಿತ ಅದರ ಮಾಲೀಕರೂ ಕೂಡ ವೀಕ್ಷಿಸಿದ್ದರು. ಏಕೆಂದರೆ ಅವರೆಲ್ಲಾ ಅಂಬರೀಶ್ ಗೆಳೆಯರಾಗಿದ್ದರು. ಅದೂಅಲ್ಲದೆ ಕಾಶ್ಮೀರದ ಫಾರೂಕ್ ಅಬ್ದುಲ್ಲಾ ಕೂಡ ತನ್ನ ಗೆಳೆಯನ ಪತ್ನಿ ಗೆಲ್ಲಲೆಂದು ಪ್ರಾರ್ಥಿಸಿದ್ದರು. ಅಂತೂ ಸುಮಲತಾ ಗೆದ್ದರು. ಆ ಗೆಲುವಿನಲ್ಲೂ ಕೆಲವು ದಾಖಲೆಗಳಿದ್ದವು. ಅವರ ಬೆನ್ನಿಗೆ ರೈತಸಂಘ, ಕಾಂಗ್ರೆಸ್ಸು, ಕೆಲ ಬಿಜೆಪಿಗಳೂ ನಿಂತಿದ್ದವು. ಆದ್ದರಿಂದ ಒಂದು ಲಕ್ಷದ ಇಪ್ಪತೈದು ಸಾವಿರ ಲೀಡಿನಲ್ಲಿ ಗೆದ್ದಿದ್ದರು. ಇದನ್ನೆಲ್ಲ ದಾಟಿದ ಸುಮಲತಾ ಬಿಜೆಪಿಗೆ ನೆಗೆದದ್ದು ಈ ಶತಮಾನದ ದ್ರೋಹ ಎಂದು ಮಂಡ್ಯದ ಸ್ವಾಭಿಮಾನಿಗಳು ಹೇಳುತ್ತಿದ್ದಾರಲ್ಲಾ. ಇದೆಲ್ಲಕ್ಕಿಂತ ಮಂಡ್ಯದವರು ಬೆಚ್ಚಿರುವುದೇಕೆಂದರೆ ಅಂದು ಸೆರಗೊಡ್ಡಿ ಮತ ಕೇಳಿದ್ದ ಈಕೆಯ ನಟನೆ ನಮಗೆ ಗೊತ್ತೇ ಆಗಲಿಲ್ಲ ಎಂದ ರೋಷಗೊಂಡಿದ್ದಾರಂತಲ್ಲಾ, ಥೂತ್ತೇರಿ.

*****

ಪ್ರಧಾನಿ ಭೇಟಿಯಿಂದ ಮಂಡ್ಯ ಸುಸ್ತು ಹೊಡೆದು ಕುಳಿತಿದೆಯಲ್ಲಾ. ಏಕೆಂದರೆ ಇಡೀ ಸರಕಾರಿ ಯಂತ್ರಾಂಗವನ್ನೇ ಬಳಸಿಕೊಂಡು ಅದ್ದೂರಿಯಾಗಿ ಪ್ರಧಾನಿಯ ಪ್ರವಾಸವನ್ನು ಮಾಡಿ ಮುಗಿಸಿದ ಬಿಜೆಪಿಯ ಸಾಧನೆ ನೋಡಿದರೆ, ಪ್ರಧಾನಿಗಳು ಫೈಟರ್ ರವಿಗೆ ಕೈ ಮುಗಿದದ್ದು ಮತ್ತು ಸುಮಲತಾರನ್ನು ಪಾರ್ಟಿಗೆ ಸೇರಿಸಿಕೊಂಡಿದ್ದೇ ಬಹುದೊಡ್ಡ ಸಾಧನೆಯಾಗಿ ಕಾಣತೊಡಗಿದೆಯಲ್ಲಾ. ಒಂದೊಂದು ತಾಲೂಕಿನಿಂದ ತಲಾ ಎಪ್ಪತ್ತು ಬಸ್ಸು ಜನ ತುಂಬಿಕೊಂಡು ಬಂದವು. ಅದರಲ್ಲಿ 50 ಜನರಿದ್ದು ತಲಾ ಮುನ್ನೂರು ಬಟವಾಡೆಯಾಗಿ ಕೊಟ್ಟರಂತಲ್ಲಾ. ಹಣ ಮತ್ತು ಬಂದ ಜನರ ದಾಖಲೆ ಎಲ್ಲ ಸರಿಯಾಗಿರಬೇಕು ಎಂದು ಹಿಂದೆಂದು ಕಾಣದ ಶಿಸ್ತಿನಿಂದ ನಡೆದುಹೋದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನ ಚಲುವರಾಯಸ್ವಾಮಿ ನಡೆಸುವ ಸಭೆಗೆ ಮತ್ತು ಶಿವರಾಮೇಗೌಡ ಹಾಗೂ ಇನ್ನಿತರ ಸಭೆಗೂ ಹೋಗುತ್ತ ನಾವು ಕೂಲಿಗೆ ಹೋದರೆ ಐದುನೂರು ಕೊಡುತ್ತಾರೆ ಈ ಮುನ್ನೂರು ಸಾಲುವುದಿಲ್ಲ ಇನ್ನ ಮುಂದೆ ಐನೂರರ ಜೊತೆಗೆ ಒಂದು ಪ್ಯಾಕೆಟ್ ಬಿರಿಯಾನಿ ಮತ್ತು ಒಂದು ಕ್ವಾಟರ್ ಕೊಡುವುದಿದ್ದರೆ ಮನೆ ಹತ್ತಿರ ಬನ್ನಿ ಎನ್ನವಂತಾಗಿದ್ದಾರಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...