Homeಮುಖಪುಟ2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

- Advertisement -
- Advertisement -

ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಹರಸಾಹಸ ಪಡುತ್ತಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರವರು 2017ರಲ್ಲಿ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆಯ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆಯುತ್ತಿದ್ದು, ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ. ಈ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ರಸ್ತೆ ಕಿತ್ತು ಬಂದಿಲ್ಲ ಎಂದು ವಾದ ಮಾಡಿದ್ದ ಪ್ರತಾಪ್ ಸಿಂಹರವರು, “ಮಾಧ್ಯಮಗಳೇ, ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆಯನ್ನು ಅನ್ನು ಸರಿಪಡಿಸಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದರು. ಅದರೊಟ್ಟಿಗೆ ರಸ್ತೆ ಕಿತ್ತುಬಂದಿರುವುದರ ಕುರಿತ ಪ್ರಜಾವಾಣಿ ಪತ್ರಿಕೆ ವರದಿಯ ಫೋಟೊ ಮತ್ತು ಬೆಂಗಳೂರು ಮೈಸೂರು ಹೆದ್ದಾರಿಯ Expansion joint ಎಂದು ಮತ್ತೊಂದು ಫೋಟೊವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಆ ಮೂಲಕ ರಸ್ತೆ ಕಿತ್ತು ಬಂದಿರುವ ಆರೋಪವನ್ನು ನಿರಾಕರಿಸಿದ್ದರು.

ಆದರೆ ಸಂಸದ ಪ್ರತಾಪ್ ಸಿಂಹರವರು ಬೇರೆ ಫೋಟೊ ತೋರಿಸಿ, ರಸ್ತೆ ಸರಿಯಾಗಿತ್ತು ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಹಲವು ಪ್ರಜ್ಞಾವಂತರು ಮತ್ತು ಕಾಂಗ್ರೆಸ್ ಪಕ್ಷ ಆರೋಪಿಸಿತ್ತು. ಈ ಕುರಿತು ಒಂದಷ್ಟು ಸಂಶೋಧನೆ ನಡೆಸಿದಾಗ ಪ್ರತಾಪ್ ಸಿಂಹರವರು ಹಂಚಿಕೊಂಡಿರುವ ಫೋಟೊ ಅಕ್ಟೋಬರ್ 05, 2017ರಲ್ಲಿಯೇ C for Civil ಎಂಬ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡಿರುವುದು ಕಂಡುಬಂದಿದೆ. ಅದರ ಸ್ಕ್ರೀನ್ ಶಾಟ್ ಅನ್ನು ಈ ಕೆಳಗೆ ನೋಡಬಹುದು.

 

ಪ್ರತಾಪ್ ಸಿಂಹರವರು ಹಂಚಿಕೊಂಡಿರುವ ಹಳೆಯ ಫೋಟೊದಲ್ಲಿನ ರಸ್ತೆ ಬದಿಯ ಡಿವೈಡರ್‌ಗೆ ಹಳದಿ – ಕಪ್ಪು ಬಣ್ಣ ಬಳಿಯಲಾಗಿದೆ. ಆದರೆ ಸದ್ಯ ಕಿತ್ತು ಹೋಗಿರುವ ಬೆಂಗಳೂರು ಮೈಸೂರು ರಸ್ತೆ ಬದಿಯ ಡಿವೈಡರ್‌ಗೆ ಬಿಳಿ ಮತ್ತು ಕಪ್ಪು ಬಣ್ಣ ಬಳಿಯಲಾಗಿದೆ. ಅಂದರೆ ಸಂಸದರು ತಮ್ಮ ಹುಳುಕು ಮುಚ್ಚಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ ಹಲವು ಪ್ರಜ್ಞಾವಂತರು ಆರೋಪಿಸಿದ್ದಾರೆ.

ಪ್ರತಾಪೂ ಏನು ಮಾಡಿದಾನೆ …. ಗೂಗಲ್ ಗೆ ಹೋಗಿ ಜಾಯಿಂಟ್ ಅಂತ ಏನೋ ಸರ್ಚ ಮಾಡಿದಾನೆ… ಈ ಪೋಟೋ ಸಿಕ್ಕಿದೆ…. ಈ ಪೋಟೋ ಎತ್ತಿಕೊಂಡು ಮೈಸೂರು ಬೆಂಗಳೂರು ರೋಡ್ ರಿಪೇರಿ ಇಸ್ಟೆ ಅಂತ ಬಳಾಂಗ್ ಶುರು ಮಾಡಿದ್ದಾನೆ ಪ್ರೆಂಡ್ಸ… ಎಂದು ಸಾಮಾಜಿಕ ಕಾರ್ಯಕರ್ತರಾದ ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಪ್ರತಾಪ್ ಸಿಂಹಣ್ಣ ಬಳಸಿರೋ ಫೋಟೋ ಸುಮಾರು ಐದು ವರ್ಷಗಳ ಹಿಂದಿನದ್ದು, C for Civil ಅನ್ನೋ ಒಂದು ವೆಬ್ಸೈಟ್ನಲ್ಲಿ ಬಂದ ಫೋಟೋವನ್ನ ಕದ್ದು ರಸ್ತೆ ಸರಿಮಾಡಿಸಲಾಗುತ್ತಿದೆ ಎಂದು ಪುಂಗುತ್ತಿದ್ದಾನೆ.
ನ್ಯೂಸ್ ಲಿಂಕ್ ಸಹ ಕಾಮೆಂಟ್ ಬಾಕ್ಸಿನಲ್ಲಿದೆ. ಡೇಟ್ ಸಮೇತ ನೋಡಿಕೊಂಡು ಬರಬ‌ಹುದು ಎಂದು ಜ್ಞಾನಿ ತಾವರೆಕೆರೆಯವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.
ಇನ್ನು ಪ್ರತಾಪ್ ಸಿಂಹರವರು ಬೆಳಿಗ್ಗೆ 10.13 ಗಂಟೆ ಸಮಯದಲ್ಲಿ ಮಾಡಿದ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಧ್ಯಾಹ್ನ 1.35 ಕ್ಕೆ ರಿಪ್ಲೈ ಮಾಡಿರುವ ಅವರು, ಅದು ರೆಪ್ರೆಸೆಂಟ್ ಪಿಕ್ ಆಗಿದ್ದು, Expansion joint ಕೆಲಸ ಹೇಗೆ ನಡೆಯುತ್ತೆ ಅಂತ ತೋರಿಸಲು ಆ ಚಿತ್ರ ಬಳಸಿದ್ದೇವೆ ಎಂದು ನುಣುಚಿಕೊಳ್ಳಲು ಯತ್ನಿಸಿದ್ದಾರೆ.
https://twitter.com/mepratap/status/1635915157518909441?t=zIFxqmnaxCH4KddexvMtEg&s=19

ಎಷ್ಟು ಸುಲಭವಾಗಿ ಸಂಸದರು ಸುಳ್ಳು ಹೇಳ್ತಿದ್ದಾರೆ.
ಮೊದಲ ಫೋಟೋದಲ್ಲಿ ರಸ್ತೆಯ ಬದಿಯಲ್ಲಿ ಹಳದಿ, ಕಪ್ಪು ಬಣ್ಣವೇ ಇಲ್ಲ.
ಎರಡನೆಯ ಫೋಟೋದಲ್ಲಿ ಹಳದಿ, ಕಪ್ಪು ಬಣ್ಣ ಇದೆ.
ಎಷ್ಟು ಚನ್ನಾಗಿ ಒಂದಕ್ಕೊಂದು ಸಂಬಂಧವೇ ಇಲ್ಲದ ಬೇರೆ ಬೇರೆ ಫೋಟೋಗಳನ್ನ ತೋರಿಸಿ ಜನರನ್ನ ಮಂಗ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರಾದ ಶರತ್ ಚಂದ್ರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕರ್ನಾಟಕ ಕಾಂಗ್ರೆಸ್ ಸಹ ಕಿಡಿಕಾರಿದೆ. “ಮಾನ್ಯ ಸಂಸದರೇ, ಯಾರ ಕಿವ ಮೇಲೆ ಹೂವ ಇಡ್ತೀದಿರಿ? ಒಂದರಲ್ಲಿ ಹಳದಿ ಪಟ್ಟಿ, ಮತ್ತೊಂದರಲ್ಲಿ ಬಿಳಿ ಪಟ್ಟಿ, ಜನರ ದಿಕ್ಕು ತಪ್ಪಿಸುವುದಕ್ಕೂ ಮಿತಿ ಬೇಡವೇ? ಅಂದಹಾಗೆ
◆ನ್ಯೂನ್ಯತೆಗಳಿರುವ ರಸ್ತೆಯನ್ನು ತುರತುರಿಯಲ್ಲಿ ಉದ್ಘಾಟಿಸಿದ್ದೇಕೆ?
◆ಇಂತಹ ಹಲವು ನ್ಯೂನ್ಯತೆಗಳಿಗೆ 80 ಅಪಘಾತಗಳಾದವೇ?
◆ನ್ಯೂನ್ಯತೆಯ ರಸ್ತೆಗೆ ಜನ ಟೋಲ್ ನೀಡಬೇಕೆ?” ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ.

ಒಟ್ಟಿನಲ್ಲಿ ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಬಿಜೆಪಿ ಸರ್ಕಾರ ಮತ್ತು ಸಂಸದ ಪ್ರತಾಪ್ ಸಿಂಹರವರು ಹಲವಾರು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಪ್ರತಾಪ್ ಸಿಂಹರವರಂತೂ ವಾರಕ್ಕೊಮ್ಮೆಯಾದರೂ ಫೇಸ್‌ಬುಕ್ ಲೈವ್ ಬಂದು ಕಾಮಗಾರಿ ಕುರಿತು ಮಾತನಾಡುತ್ತಿದ್ದರು. ಆದರೆ ಕಳಪೆ ಮತ್ತು ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಲಾಗಿದೆ, ಕಮಿಷನ್ ಹೊಡೆಯಲಾಗಿದೆ, ಅಧಿಕ ಟೋಲ್ ಮೂಲಕ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪಗಳು ಪ್ರತಿನಿತ್ಯ ಕೇಳಿ ಬರುತ್ತಿವೆ. ಈಗಾಗಲೇ 80ಕ್ಕೆ ಹೆಚ್ಚು ಅಪಘಾತಗಳು ಸಂಭವಿಸಿದ್ದು ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಕ್ರೆಡಿಟ್ ಸಹ ಬಿಜೆಪಿಯವರಿಗೆ ಸಲ್ಲಬೇಕೆಲ್ಲವೆ ಎಂಬ ಆಕ್ರೋಶ ಸಹ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...