Homeಮುಖಪುಟ2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

- Advertisement -
- Advertisement -

ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಹರಸಾಹಸ ಪಡುತ್ತಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರವರು 2017ರಲ್ಲಿ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆಯ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆಯುತ್ತಿದ್ದು, ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ. ಈ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ರಸ್ತೆ ಕಿತ್ತು ಬಂದಿಲ್ಲ ಎಂದು ವಾದ ಮಾಡಿದ್ದ ಪ್ರತಾಪ್ ಸಿಂಹರವರು, “ಮಾಧ್ಯಮಗಳೇ, ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆಯನ್ನು ಅನ್ನು ಸರಿಪಡಿಸಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದರು. ಅದರೊಟ್ಟಿಗೆ ರಸ್ತೆ ಕಿತ್ತುಬಂದಿರುವುದರ ಕುರಿತ ಪ್ರಜಾವಾಣಿ ಪತ್ರಿಕೆ ವರದಿಯ ಫೋಟೊ ಮತ್ತು ಬೆಂಗಳೂರು ಮೈಸೂರು ಹೆದ್ದಾರಿಯ Expansion joint ಎಂದು ಮತ್ತೊಂದು ಫೋಟೊವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಆ ಮೂಲಕ ರಸ್ತೆ ಕಿತ್ತು ಬಂದಿರುವ ಆರೋಪವನ್ನು ನಿರಾಕರಿಸಿದ್ದರು.

ಆದರೆ ಸಂಸದ ಪ್ರತಾಪ್ ಸಿಂಹರವರು ಬೇರೆ ಫೋಟೊ ತೋರಿಸಿ, ರಸ್ತೆ ಸರಿಯಾಗಿತ್ತು ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಹಲವು ಪ್ರಜ್ಞಾವಂತರು ಮತ್ತು ಕಾಂಗ್ರೆಸ್ ಪಕ್ಷ ಆರೋಪಿಸಿತ್ತು. ಈ ಕುರಿತು ಒಂದಷ್ಟು ಸಂಶೋಧನೆ ನಡೆಸಿದಾಗ ಪ್ರತಾಪ್ ಸಿಂಹರವರು ಹಂಚಿಕೊಂಡಿರುವ ಫೋಟೊ ಅಕ್ಟೋಬರ್ 05, 2017ರಲ್ಲಿಯೇ C for Civil ಎಂಬ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡಿರುವುದು ಕಂಡುಬಂದಿದೆ. ಅದರ ಸ್ಕ್ರೀನ್ ಶಾಟ್ ಅನ್ನು ಈ ಕೆಳಗೆ ನೋಡಬಹುದು.

 

ಪ್ರತಾಪ್ ಸಿಂಹರವರು ಹಂಚಿಕೊಂಡಿರುವ ಹಳೆಯ ಫೋಟೊದಲ್ಲಿನ ರಸ್ತೆ ಬದಿಯ ಡಿವೈಡರ್‌ಗೆ ಹಳದಿ – ಕಪ್ಪು ಬಣ್ಣ ಬಳಿಯಲಾಗಿದೆ. ಆದರೆ ಸದ್ಯ ಕಿತ್ತು ಹೋಗಿರುವ ಬೆಂಗಳೂರು ಮೈಸೂರು ರಸ್ತೆ ಬದಿಯ ಡಿವೈಡರ್‌ಗೆ ಬಿಳಿ ಮತ್ತು ಕಪ್ಪು ಬಣ್ಣ ಬಳಿಯಲಾಗಿದೆ. ಅಂದರೆ ಸಂಸದರು ತಮ್ಮ ಹುಳುಕು ಮುಚ್ಚಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ ಹಲವು ಪ್ರಜ್ಞಾವಂತರು ಆರೋಪಿಸಿದ್ದಾರೆ.

ಪ್ರತಾಪೂ ಏನು ಮಾಡಿದಾನೆ …. ಗೂಗಲ್ ಗೆ ಹೋಗಿ ಜಾಯಿಂಟ್ ಅಂತ ಏನೋ ಸರ್ಚ ಮಾಡಿದಾನೆ… ಈ ಪೋಟೋ ಸಿಕ್ಕಿದೆ…. ಈ ಪೋಟೋ ಎತ್ತಿಕೊಂಡು ಮೈಸೂರು ಬೆಂಗಳೂರು ರೋಡ್ ರಿಪೇರಿ ಇಸ್ಟೆ ಅಂತ ಬಳಾಂಗ್ ಶುರು ಮಾಡಿದ್ದಾನೆ ಪ್ರೆಂಡ್ಸ… ಎಂದು ಸಾಮಾಜಿಕ ಕಾರ್ಯಕರ್ತರಾದ ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಪ್ರತಾಪ್ ಸಿಂಹಣ್ಣ ಬಳಸಿರೋ ಫೋಟೋ ಸುಮಾರು ಐದು ವರ್ಷಗಳ ಹಿಂದಿನದ್ದು, C for Civil ಅನ್ನೋ ಒಂದು ವೆಬ್ಸೈಟ್ನಲ್ಲಿ ಬಂದ ಫೋಟೋವನ್ನ ಕದ್ದು ರಸ್ತೆ ಸರಿಮಾಡಿಸಲಾಗುತ್ತಿದೆ ಎಂದು ಪುಂಗುತ್ತಿದ್ದಾನೆ.
ನ್ಯೂಸ್ ಲಿಂಕ್ ಸಹ ಕಾಮೆಂಟ್ ಬಾಕ್ಸಿನಲ್ಲಿದೆ. ಡೇಟ್ ಸಮೇತ ನೋಡಿಕೊಂಡು ಬರಬ‌ಹುದು ಎಂದು ಜ್ಞಾನಿ ತಾವರೆಕೆರೆಯವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.
ಇನ್ನು ಪ್ರತಾಪ್ ಸಿಂಹರವರು ಬೆಳಿಗ್ಗೆ 10.13 ಗಂಟೆ ಸಮಯದಲ್ಲಿ ಮಾಡಿದ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಧ್ಯಾಹ್ನ 1.35 ಕ್ಕೆ ರಿಪ್ಲೈ ಮಾಡಿರುವ ಅವರು, ಅದು ರೆಪ್ರೆಸೆಂಟ್ ಪಿಕ್ ಆಗಿದ್ದು, Expansion joint ಕೆಲಸ ಹೇಗೆ ನಡೆಯುತ್ತೆ ಅಂತ ತೋರಿಸಲು ಆ ಚಿತ್ರ ಬಳಸಿದ್ದೇವೆ ಎಂದು ನುಣುಚಿಕೊಳ್ಳಲು ಯತ್ನಿಸಿದ್ದಾರೆ.
https://twitter.com/mepratap/status/1635915157518909441?t=zIFxqmnaxCH4KddexvMtEg&s=19

ಎಷ್ಟು ಸುಲಭವಾಗಿ ಸಂಸದರು ಸುಳ್ಳು ಹೇಳ್ತಿದ್ದಾರೆ.
ಮೊದಲ ಫೋಟೋದಲ್ಲಿ ರಸ್ತೆಯ ಬದಿಯಲ್ಲಿ ಹಳದಿ, ಕಪ್ಪು ಬಣ್ಣವೇ ಇಲ್ಲ.
ಎರಡನೆಯ ಫೋಟೋದಲ್ಲಿ ಹಳದಿ, ಕಪ್ಪು ಬಣ್ಣ ಇದೆ.
ಎಷ್ಟು ಚನ್ನಾಗಿ ಒಂದಕ್ಕೊಂದು ಸಂಬಂಧವೇ ಇಲ್ಲದ ಬೇರೆ ಬೇರೆ ಫೋಟೋಗಳನ್ನ ತೋರಿಸಿ ಜನರನ್ನ ಮಂಗ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರಾದ ಶರತ್ ಚಂದ್ರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕರ್ನಾಟಕ ಕಾಂಗ್ರೆಸ್ ಸಹ ಕಿಡಿಕಾರಿದೆ. “ಮಾನ್ಯ ಸಂಸದರೇ, ಯಾರ ಕಿವ ಮೇಲೆ ಹೂವ ಇಡ್ತೀದಿರಿ? ಒಂದರಲ್ಲಿ ಹಳದಿ ಪಟ್ಟಿ, ಮತ್ತೊಂದರಲ್ಲಿ ಬಿಳಿ ಪಟ್ಟಿ, ಜನರ ದಿಕ್ಕು ತಪ್ಪಿಸುವುದಕ್ಕೂ ಮಿತಿ ಬೇಡವೇ? ಅಂದಹಾಗೆ
◆ನ್ಯೂನ್ಯತೆಗಳಿರುವ ರಸ್ತೆಯನ್ನು ತುರತುರಿಯಲ್ಲಿ ಉದ್ಘಾಟಿಸಿದ್ದೇಕೆ?
◆ಇಂತಹ ಹಲವು ನ್ಯೂನ್ಯತೆಗಳಿಗೆ 80 ಅಪಘಾತಗಳಾದವೇ?
◆ನ್ಯೂನ್ಯತೆಯ ರಸ್ತೆಗೆ ಜನ ಟೋಲ್ ನೀಡಬೇಕೆ?” ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ.

ಒಟ್ಟಿನಲ್ಲಿ ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಬಿಜೆಪಿ ಸರ್ಕಾರ ಮತ್ತು ಸಂಸದ ಪ್ರತಾಪ್ ಸಿಂಹರವರು ಹಲವಾರು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಪ್ರತಾಪ್ ಸಿಂಹರವರಂತೂ ವಾರಕ್ಕೊಮ್ಮೆಯಾದರೂ ಫೇಸ್‌ಬುಕ್ ಲೈವ್ ಬಂದು ಕಾಮಗಾರಿ ಕುರಿತು ಮಾತನಾಡುತ್ತಿದ್ದರು. ಆದರೆ ಕಳಪೆ ಮತ್ತು ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಲಾಗಿದೆ, ಕಮಿಷನ್ ಹೊಡೆಯಲಾಗಿದೆ, ಅಧಿಕ ಟೋಲ್ ಮೂಲಕ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪಗಳು ಪ್ರತಿನಿತ್ಯ ಕೇಳಿ ಬರುತ್ತಿವೆ. ಈಗಾಗಲೇ 80ಕ್ಕೆ ಹೆಚ್ಚು ಅಪಘಾತಗಳು ಸಂಭವಿಸಿದ್ದು ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಕ್ರೆಡಿಟ್ ಸಹ ಬಿಜೆಪಿಯವರಿಗೆ ಸಲ್ಲಬೇಕೆಲ್ಲವೆ ಎಂಬ ಆಕ್ರೋಶ ಸಹ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...