Homeಮುಖಪುಟ2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

- Advertisement -
- Advertisement -

ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಹರಸಾಹಸ ಪಡುತ್ತಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರವರು 2017ರಲ್ಲಿ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆಯ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆಯುತ್ತಿದ್ದು, ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ. ಈ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ರಸ್ತೆ ಕಿತ್ತು ಬಂದಿಲ್ಲ ಎಂದು ವಾದ ಮಾಡಿದ್ದ ಪ್ರತಾಪ್ ಸಿಂಹರವರು, “ಮಾಧ್ಯಮಗಳೇ, ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆಯನ್ನು ಅನ್ನು ಸರಿಪಡಿಸಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದರು. ಅದರೊಟ್ಟಿಗೆ ರಸ್ತೆ ಕಿತ್ತುಬಂದಿರುವುದರ ಕುರಿತ ಪ್ರಜಾವಾಣಿ ಪತ್ರಿಕೆ ವರದಿಯ ಫೋಟೊ ಮತ್ತು ಬೆಂಗಳೂರು ಮೈಸೂರು ಹೆದ್ದಾರಿಯ Expansion joint ಎಂದು ಮತ್ತೊಂದು ಫೋಟೊವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಆ ಮೂಲಕ ರಸ್ತೆ ಕಿತ್ತು ಬಂದಿರುವ ಆರೋಪವನ್ನು ನಿರಾಕರಿಸಿದ್ದರು.

ಆದರೆ ಸಂಸದ ಪ್ರತಾಪ್ ಸಿಂಹರವರು ಬೇರೆ ಫೋಟೊ ತೋರಿಸಿ, ರಸ್ತೆ ಸರಿಯಾಗಿತ್ತು ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಹಲವು ಪ್ರಜ್ಞಾವಂತರು ಮತ್ತು ಕಾಂಗ್ರೆಸ್ ಪಕ್ಷ ಆರೋಪಿಸಿತ್ತು. ಈ ಕುರಿತು ಒಂದಷ್ಟು ಸಂಶೋಧನೆ ನಡೆಸಿದಾಗ ಪ್ರತಾಪ್ ಸಿಂಹರವರು ಹಂಚಿಕೊಂಡಿರುವ ಫೋಟೊ ಅಕ್ಟೋಬರ್ 05, 2017ರಲ್ಲಿಯೇ C for Civil ಎಂಬ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡಿರುವುದು ಕಂಡುಬಂದಿದೆ. ಅದರ ಸ್ಕ್ರೀನ್ ಶಾಟ್ ಅನ್ನು ಈ ಕೆಳಗೆ ನೋಡಬಹುದು.

 

ಪ್ರತಾಪ್ ಸಿಂಹರವರು ಹಂಚಿಕೊಂಡಿರುವ ಹಳೆಯ ಫೋಟೊದಲ್ಲಿನ ರಸ್ತೆ ಬದಿಯ ಡಿವೈಡರ್‌ಗೆ ಹಳದಿ – ಕಪ್ಪು ಬಣ್ಣ ಬಳಿಯಲಾಗಿದೆ. ಆದರೆ ಸದ್ಯ ಕಿತ್ತು ಹೋಗಿರುವ ಬೆಂಗಳೂರು ಮೈಸೂರು ರಸ್ತೆ ಬದಿಯ ಡಿವೈಡರ್‌ಗೆ ಬಿಳಿ ಮತ್ತು ಕಪ್ಪು ಬಣ್ಣ ಬಳಿಯಲಾಗಿದೆ. ಅಂದರೆ ಸಂಸದರು ತಮ್ಮ ಹುಳುಕು ಮುಚ್ಚಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ ಹಲವು ಪ್ರಜ್ಞಾವಂತರು ಆರೋಪಿಸಿದ್ದಾರೆ.

ಪ್ರತಾಪೂ ಏನು ಮಾಡಿದಾನೆ …. ಗೂಗಲ್ ಗೆ ಹೋಗಿ ಜಾಯಿಂಟ್ ಅಂತ ಏನೋ ಸರ್ಚ ಮಾಡಿದಾನೆ… ಈ ಪೋಟೋ ಸಿಕ್ಕಿದೆ…. ಈ ಪೋಟೋ ಎತ್ತಿಕೊಂಡು ಮೈಸೂರು ಬೆಂಗಳೂರು ರೋಡ್ ರಿಪೇರಿ ಇಸ್ಟೆ ಅಂತ ಬಳಾಂಗ್ ಶುರು ಮಾಡಿದ್ದಾನೆ ಪ್ರೆಂಡ್ಸ… ಎಂದು ಸಾಮಾಜಿಕ ಕಾರ್ಯಕರ್ತರಾದ ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಪ್ರತಾಪ್ ಸಿಂಹಣ್ಣ ಬಳಸಿರೋ ಫೋಟೋ ಸುಮಾರು ಐದು ವರ್ಷಗಳ ಹಿಂದಿನದ್ದು, C for Civil ಅನ್ನೋ ಒಂದು ವೆಬ್ಸೈಟ್ನಲ್ಲಿ ಬಂದ ಫೋಟೋವನ್ನ ಕದ್ದು ರಸ್ತೆ ಸರಿಮಾಡಿಸಲಾಗುತ್ತಿದೆ ಎಂದು ಪುಂಗುತ್ತಿದ್ದಾನೆ.
ನ್ಯೂಸ್ ಲಿಂಕ್ ಸಹ ಕಾಮೆಂಟ್ ಬಾಕ್ಸಿನಲ್ಲಿದೆ. ಡೇಟ್ ಸಮೇತ ನೋಡಿಕೊಂಡು ಬರಬ‌ಹುದು ಎಂದು ಜ್ಞಾನಿ ತಾವರೆಕೆರೆಯವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.
ಇನ್ನು ಪ್ರತಾಪ್ ಸಿಂಹರವರು ಬೆಳಿಗ್ಗೆ 10.13 ಗಂಟೆ ಸಮಯದಲ್ಲಿ ಮಾಡಿದ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಧ್ಯಾಹ್ನ 1.35 ಕ್ಕೆ ರಿಪ್ಲೈ ಮಾಡಿರುವ ಅವರು, ಅದು ರೆಪ್ರೆಸೆಂಟ್ ಪಿಕ್ ಆಗಿದ್ದು, Expansion joint ಕೆಲಸ ಹೇಗೆ ನಡೆಯುತ್ತೆ ಅಂತ ತೋರಿಸಲು ಆ ಚಿತ್ರ ಬಳಸಿದ್ದೇವೆ ಎಂದು ನುಣುಚಿಕೊಳ್ಳಲು ಯತ್ನಿಸಿದ್ದಾರೆ.
https://twitter.com/mepratap/status/1635915157518909441?t=zIFxqmnaxCH4KddexvMtEg&s=19

ಎಷ್ಟು ಸುಲಭವಾಗಿ ಸಂಸದರು ಸುಳ್ಳು ಹೇಳ್ತಿದ್ದಾರೆ.
ಮೊದಲ ಫೋಟೋದಲ್ಲಿ ರಸ್ತೆಯ ಬದಿಯಲ್ಲಿ ಹಳದಿ, ಕಪ್ಪು ಬಣ್ಣವೇ ಇಲ್ಲ.
ಎರಡನೆಯ ಫೋಟೋದಲ್ಲಿ ಹಳದಿ, ಕಪ್ಪು ಬಣ್ಣ ಇದೆ.
ಎಷ್ಟು ಚನ್ನಾಗಿ ಒಂದಕ್ಕೊಂದು ಸಂಬಂಧವೇ ಇಲ್ಲದ ಬೇರೆ ಬೇರೆ ಫೋಟೋಗಳನ್ನ ತೋರಿಸಿ ಜನರನ್ನ ಮಂಗ ಮಾಡ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರಾದ ಶರತ್ ಚಂದ್ರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕರ್ನಾಟಕ ಕಾಂಗ್ರೆಸ್ ಸಹ ಕಿಡಿಕಾರಿದೆ. “ಮಾನ್ಯ ಸಂಸದರೇ, ಯಾರ ಕಿವ ಮೇಲೆ ಹೂವ ಇಡ್ತೀದಿರಿ? ಒಂದರಲ್ಲಿ ಹಳದಿ ಪಟ್ಟಿ, ಮತ್ತೊಂದರಲ್ಲಿ ಬಿಳಿ ಪಟ್ಟಿ, ಜನರ ದಿಕ್ಕು ತಪ್ಪಿಸುವುದಕ್ಕೂ ಮಿತಿ ಬೇಡವೇ? ಅಂದಹಾಗೆ
◆ನ್ಯೂನ್ಯತೆಗಳಿರುವ ರಸ್ತೆಯನ್ನು ತುರತುರಿಯಲ್ಲಿ ಉದ್ಘಾಟಿಸಿದ್ದೇಕೆ?
◆ಇಂತಹ ಹಲವು ನ್ಯೂನ್ಯತೆಗಳಿಗೆ 80 ಅಪಘಾತಗಳಾದವೇ?
◆ನ್ಯೂನ್ಯತೆಯ ರಸ್ತೆಗೆ ಜನ ಟೋಲ್ ನೀಡಬೇಕೆ?” ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ.

ಒಟ್ಟಿನಲ್ಲಿ ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣದ ಕ್ರೆಡಿಟ್ ಪಡೆಯಲು ಬಿಜೆಪಿ ಸರ್ಕಾರ ಮತ್ತು ಸಂಸದ ಪ್ರತಾಪ್ ಸಿಂಹರವರು ಹಲವಾರು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಪ್ರತಾಪ್ ಸಿಂಹರವರಂತೂ ವಾರಕ್ಕೊಮ್ಮೆಯಾದರೂ ಫೇಸ್‌ಬುಕ್ ಲೈವ್ ಬಂದು ಕಾಮಗಾರಿ ಕುರಿತು ಮಾತನಾಡುತ್ತಿದ್ದರು. ಆದರೆ ಕಳಪೆ ಮತ್ತು ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಲಾಗಿದೆ, ಕಮಿಷನ್ ಹೊಡೆಯಲಾಗಿದೆ, ಅಧಿಕ ಟೋಲ್ ಮೂಲಕ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪಗಳು ಪ್ರತಿನಿತ್ಯ ಕೇಳಿ ಬರುತ್ತಿವೆ. ಈಗಾಗಲೇ 80ಕ್ಕೆ ಹೆಚ್ಚು ಅಪಘಾತಗಳು ಸಂಭವಿಸಿದ್ದು ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಕ್ರೆಡಿಟ್ ಸಹ ಬಿಜೆಪಿಯವರಿಗೆ ಸಲ್ಲಬೇಕೆಲ್ಲವೆ ಎಂಬ ಆಕ್ರೋಶ ಸಹ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...