Homeಕರ್ನಾಟಕದಶಪಥವಲ್ಲ, ಇದು ಆರು ಪಥ: ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು?: ಯೋಜನಾ...

ದಶಪಥವಲ್ಲ, ಇದು ಆರು ಪಥ: ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು?: ಯೋಜನಾ ನಿರ್ದೇಶಕರ ಹೇಳಿಕೆ

ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ಆಗದೇ ಶ್ರೀಧರ್‌ರವರು ಸುದ್ದಿಗೋಷ್ಠಿಯನ್ನು ಅರ್ಧಕ್ಕೆ ನಿಲ್ಲಿಸಿ ಹೊರನಡೆದಿದ್ದಾರೆ.

- Advertisement -
- Advertisement -

ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು? ಹೀಗಾಗಿಯೇ ನಾವು ಸರ್ವೀಸ್ ರಸ್ತೆ ಪೂರ್ಣ ಮಾಡಿಲ್ಲ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಿ.ಟಿ ಶ್ರೀಧರ್ ತಿಳಿಸಿದ್ದಾರೆ.

ರಾಮನಗರದಲ್ಲಿಂದು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, “ನಾನು ಯಾವತ್ತು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯನ್ನು ದಶಪಥ ರಸ್ತೆ ಎಂದು ಹೇಳಿಲ್ಲ. ನೀವು ಮಾಧ್ಯಮಗಳು ಹಾಗೆ ಬರೆದರೆ ನಾನೇನು ಮಾಡಲಿ? ಕೇಂದ್ರ ಸರ್ಕಾರದ ಕ್ಯಾಬಿನೆಟ್‌ನಲ್ಲಿ ಆರು ಪಥ ಎಂದೇ ಅನುಮೋದನೆಗೊಂಡಿದೆ” ಎಂದಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿಯವರು ಸೇರಿದಂತೆ ಎಲ್ಲಾ ಬಿಜೆಪಿಗರು ಇದು ದಶಪಥ ರಸ್ತೆ ಎಂತಲೇ ಪ್ರಚಾರ ಮಾಡಿದ್ದರು. ಆದರೆ ಅಲ್ಲಿರುವ ಕೇವಲ ಆರು ಪಥದ ರಸ್ತೆ. ಇನ್ನ ಸರ್ವೀಸ್ ರಸ್ತೆ ಸಹ ಪೂರ್ಣ ಇಲ್ಲ ಎಂಬ ಉತ್ತರವನ್ನು ಇದೀಗ ಯೋಜನಾ ನಿರ್ದೇಶಕರೆ ನೀಡಿದ್ದಾರೆ.

ರೈಲ್ವೆ ಟ್ಯ್ರಾಕ್ ಬಳಿ ಏಕೆ ಸರ್ವೀಸ್ ರಸ್ತೆ ಕಂಟಿನ್ಯೂಟಿ ಕೊಟ್ಟಿಲ್ಲ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, “ದೊಡ್ಡ ಸೇತುವೆಗಳು ಮತ್ತು ರೈಲ್ವೆ ಟ್ರ್ಯಾಕ್‌ಗಳಿಗೆ ಕಂಟಿನ್ಯೂಟಿ ಕೊಡಬಾರದೆಂದು ಕಾನೂನಿನಲ್ಲಿದೆ. ಹಾಗೆ ಕೊಟ್ಟಲ್ಲಿ ಎಲ್ಲರೂ ಸರ್ವೀಸ್ ರಸ್ತೆಯಲ್ಲಿ ಹೋದರೆ ಇಲ್ಲಿ ಟೋಲ್ ಕಟ್ಟುವವರು ಯಾರು? ಇಲ್ಲಿ ಸರ್ಕಾರಿ ಹಣದಲ್ಲಿ ಕಟ್ಟಿದ್ದೇವೆ. ಕೆಲವೆಡೆ ಖಾಸಗೀ ಸರ್ಕಾರಿ ಸಹಭಾಗಿತ್ವದಲ್ಲಿ ರಸ್ತೆ ಕಟ್ಟಿದಾಗ ಲಾಭ ಬರುವುದನ್ನು ನಾವು ನೋಡಬೇಕಲ್ಲವೆ?” ಎಂದರು.

ಈ ಹೊಸ ರಸ್ತೆಯಲ್ಲಿ ಅಪಘಾತಗಳಾಗುತ್ತಿವೆ. ಹಿಂದೆ ಮಳೆ ನೀರು ತುಂಬಿಕೊಂಡಿತ್ತು. ಕಳ್ಳತನ ನಡೆದಾಗ ಸಹಾಯ ಕೇಳಿದರೂ ಹೆದ್ದಾರಿ ಪ್ರಾಧಿಕಾರ ನೆರವಿಗೆ ಬಂದಿಲ್ಲ ಎಂಬ ಪ್ರಶ್ನೆಗೆ “180 ಮಿ.ಮೀ ಮಳೆಯಾದರೆ ನಾನು ಹೊಣೆಯೇ? ಇನ್ನು ಪ್ರತಿಯೊಬ್ಬ ಪ್ರಯಾಣಿಕರಿಗೂ ಅವನದೇ ಆದ ಜವಾಬ್ದಾರಿ ಇರಬೇಕು. ಅವರವರ ಜವಾಬ್ದಾರಿ ಅರಿತುಕೊಂಡು ಹೋಗಬೇಕೆ ಹೊರತು ಯಾರೂ ಸಹಾಯಕ್ಕೆ ಬರುವುದಿಲ್ಲ” ಎಂದರು.

ಕಳಪೆ ಕಾಮಗಾರಿಯ ಬಗ್ಗೆ ಉತ್ತರಿಸಿದ ಅವರು, ಉತ್ತರ ಪ್ರದೇಶದ, ಓರಿಸ್ಸಾದ ಅಧಿಕಾರಿಗಳು ಬಂದು ಪರೀಕ್ಷಿಸಿ ಉತ್ತಮವಾಗಿದೆ ಎಂದು ಪ್ರಮಾಣ ಪತ್ರ ನೀಡಿದ್ದಾರೆ. ನೀವು ಒಂದು ಮನೆ ಕಟ್ಟುತ್ತೀರಿ ಎಂದಿಟ್ಟುಕೊಳ್ಳಿ. ಅದು ಶೇ.ನೂರರಷ್ಟು ಕ್ವಾಲಿಟಿ ಇರುತ್ತದೆಯೇ? ಒಂದೇ ದಿನಕ್ಕೆ ಸರಿ ಹೋಗುತ್ತದೆಯೇ ಎಂಬ ಹಾರಿಕೆಯ ಉತ್ತರ ನೀಡಿದರು.

ಯಾಕಿಷ್ಟು ಬೇಜವಾಬ್ದಾರಿ ಉತ್ತರ ನೀಡುತ್ತೀರಿ ಎಂಬ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ಆಗದೇ ಅವರು ಸುದ್ದಿಗೋಷ್ಠಿಯಿಂದಲೇ ಹೊರನಡೆದರು.

ಇದನ್ನೂ ಓದಿ; 2017ರ ಗೂಗಲ್ ಫೋಟೊ ತೋರಿಸಿ ರಸ್ತೆ ಕಿತ್ತುಬಂದಿಲ್ಲವೆಂದು ಸುಳ್ಳು ಹೇಳಿಕೆ: ಸಿಕ್ಕಿಬಿದ್ದ ಸಂಸದ ಪ್ರತಾಪ್ ಸಿಂಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...