Homeಕರ್ನಾಟಕಬಿಜೆಪಿ ವಿರುದ್ಧ ಬಿಆರ್‌ಎಸ್ ಪೋಸ್ಟರ್ ವಾರ್; 'ಎಂಎಲ್‌ಎಗಳ ಬೇಟೆಗಾರ' ಸಂತೋಷ್‌ ವಾಂಟೆಡ್ ಪೋಸ್ಟರ್ ವೈರಲ್

ಬಿಜೆಪಿ ವಿರುದ್ಧ ಬಿಆರ್‌ಎಸ್ ಪೋಸ್ಟರ್ ವಾರ್; ‘ಎಂಎಲ್‌ಎಗಳ ಬೇಟೆಗಾರ’ ಸಂತೋಷ್‌ ವಾಂಟೆಡ್ ಪೋಸ್ಟರ್ ವೈರಲ್

- Advertisement -
- Advertisement -

ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಮತ್ತು ಎಂಎಲ್‌ಸಿ ಕೆ ಕವಿತಾ ಅವರ ಇಡಿ ವಿಚಾರಣೆಗೆ ಗುರುವಾರ ಹಾಜರಾಗಲಿದ್ದಾರೆ. ಈ ಬೆನ್ನಲ್ಲೇ ತೆಲಂಗಾಣದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯು (ಬಿಆರ್‌ಎಸ್)  ಬಿಜೆಪಿ ವಿರುದ್ಧ ಪೋಸ್ಟರ್ ವಾರ್ ಆರಂಭಿಸಿದೆ.

ಹೈದರಾಬಾದ್‌ನ ಎರಡು ಸ್ಥಳಗಳಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಫೋಟೋದ ಮೇಲೆ ‘ವಾಂಟೆಡ್’ ಎಂದು ಬರೆದಿರುವ ಪೋಸ್ಟರ್‌ಗಳನ್ನು ಹಾಕಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಆ ಪೋಸ್ಟರ್‌ನಲ್ಲಿ ”ಸಂತೋಷ್‌ಗೆ ‘ಎಂಎಲ್‌ಎಗಳ ಬೇಟೆಗಾರ’ ಎಂದು ಹೇಳಲಾಗಿದೆ. ಸಂತೋಷ್ ಅವರನ್ನು ಹುಡುಕಿಕೊಟ್ಟರೆ ಬಹುಮಾನವಾಗಿ ‘ಮೋದಿಯವರ ₹ 15,00,000 ಭರವಸೆಯ ಮಂಜೂರಾತಿ’ಯ ಹಣವನ್ನು ನೀಡಲಾಗುತ್ತದೆ” ಎಂದು ಪೋಸ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಗೇಲಿ ಮಾಡಲಾಗಿದೆ.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕವಿತಾ ಅವರನ್ನು ED ವಿಚಾರಣೆಗೆ ಕರೆದ ಬಳಿಕ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯ ಆರೋಪದ ಮೇಲೆ ಕೇಂದ್ರವನ್ನು ಟೀಕಿಸಲು ಬಿಆರ್‌ಎಸ್ ಜೊತೆಗೆ ಆಮ್ ಆದ್ಮಿ ಪಾರ್ಟಿ (ಎಎಪಿ) ಕೂಡ ಪೋಸ್ಟರ್ ವಾರ್‌ನಲ್ಲಿ ಭಾಗವಹಿಸಿತ್ತು.

ಮೋದಿ ಪ್ರಜಾಪ್ರಭುತ್ವದ ಧ್ವಂಸಕ, ಬೂಟಾಟಿಕೆಯ ಪಿತಾಮಹ ಪೋಸ್ಟರ್:

ಇತ್ತೀಚೆಗೆ ನಗರದಲ್ಲಿ ಬಿಆರ್‌ಎಸ್‌ ಕಾರ್ಯಕರ್ತರು ಪೋಸ್ಟರ್‌ ಅಂಟಿಸಿ ಪ್ರತಿಭಟನೆ ಮಾಡಿದ್ದರು. ಇಲ್ಲಿನ ಗೋಡೆಗಳ ಮೇಲೆ ‘ನರೇಂದ್ರ ಮೋದಿ ಪ್ರಜಾಪ್ರಭುತ್ವದ ಧ್ವಂಸಕ, ಬೂಟಾಟಿಕೆಯ ಪಿತಾಮಹ’ ಎಂಬ ಪೋಸ್ಟರ್‌ ಅಂಟಿಸಿ ವಿರೋಧಿಸಿದರು. ಇದರೊಂದಿಗೆ ಮೋದಿ ಸರ್ಕಾರ ಅವರ ವಿರೋಧಿಗಳ ವಿರುದ್ಧ ಇಂತಹ ಕೇಂದ್ರದ ತನಿಖಾ ಸಂಸ್ಥೆಗಳನ್ನು ಶಸ್ತ್ರವಾಗಿ ಬಳಸುತ್ತಿದೆ ಎಂದು ಪೋಸ್ಟರ್ ಮೂಲಕ ಆರೋಪ ಮಾಡಿದ್ದರು.

ಡಿಟರ್ಜೆಂಟ್ ಪೌಡರ್ ಬ್ರಾಂಡ್ ನಿರ್ಮಾ ಜೊತೆ ಬಿಜೆಪಿ ಹೋಲಿಕೆ ಪೋಸ್ಟರ್:

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ರೈಸಿಂಗ್ ಡೇಗೆ ಹಾಜರಾಗಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೈದರಾಬಾದ್‌ಗೆ ಭೇಟಿ ನೀಡುವ ಮೊದಲು, ಬಿಆರ್‌ಎಸ್ ಅವರನ್ನು ವ್ಯಂಗ್ಯದೊಂದಿಗೆ ಸ್ವಾಗತಿಸಿತು. ಬೇರೆ ಬೇರೆ ಪಕ್ಷಗಳಿಂದ ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿ ನಾಯಕರನ್ನು ಒಳಗೊಂಡ ಪೋಸ್ಟರ್ ಅನ್ನು ಹಾಕಲಾಗಿತ್ತು. ಅದರ ಜೊತೆಗೆ ಅವರು ವಿವಿಧ ಹಗರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಬಿಜೆಪಿಯನ್ನು ಡಿಟರ್ಜೆಂಟ್ ಪೌಡರ್ ಬ್ರಾಂಡ್ ನಿರ್ಮಾ ಜೊತೆ ಹೋಲಿಸಿ ಬಿಆರ್‌ಎಸ್ ಪೋಸ್ಟರ್ ಹಾಕಿತ್ತು. ಇದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿತ್ತು.

ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ತೆರಳಿದ್ದಾರೆ ಎಂದು ಹೇಳಲಾದ ‘ರೇಡ್ ಡಿಟರ್ಜೆಂಟ್’ಗಳನ್ನು ಉಲ್ಲೇಖಿಸುವ ಪೋಸ್ಟರ್‌ಗಳನ್ನು ಹೈದರಾಬಾದ್‌ನಾದ್ಯಂತ ಹಾಕಲಾಗಿತ್ತು. ಡಿಟರ್ಜೆಂಟ್ ಬಳಸಿದ ನಂತರ ನಾಯಕರ ಕೊಳಕು ಬಿಳಿ ಟಿ-ಶರ್ಟ್‌ಗಳಿಗೆ ಕೇಸರಿ ಬಣ್ಣ ಹಾಕಲಾಗಿದೆ ಎಂದು ಪೋಸ್ಟರ್ ತೋರಿಸಿತ್ತು. ಇದು ಭ್ರಷ್ಟಾಚಾರ ಆರೋಪ ಹೊತ್ತಿರುವ ನಾಯಕರು ಬಿಜೆಪಿಗೆ ಸೇರಿದ ಕೆಲವೇ ದಿನಗಳಲ್ಲಿ ಆರೋಪ ಮುಕ್ತರಾಗಿ ಶುಭ್ರವಾಗುತ್ತಾರೆ ಎನ್ನುವುದನ್ನು ತೋರಿಸುತ್ತದೆ.

ಇದನ್ನೂ ಓದಿ: ರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಬಿಜೆಪಿ ನಾಯಕರಿಗೆ ಖರ್ಗೆ ಖಡಕ್ ಉತ್ತರ

ಬೊಮ್ಮಾಯಿಗೆ 40% ಸಿಎಂ ಎಂದು ಸ್ವಾಗತದ ಪೋಸ್ಟರ್:

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು 40% ಸಿಎಂ ಎಂದು ಬಿಆರ್‌ಎಸ್ ಪಕ್ಷ ವ್ಯಂಗ್ಯವಾಡಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳಿದ್ದರು.

ಈ ಸಂದರ್ಭದಲ್ಲಿ ”40% ಸಿಎಂಗೆ ಸ್ವಾಗತ” ಎಂದು ದೊಡ್ಡ ಅಕ್ಷರಗಳಲ್ಲಿ ಬರೆದ ಬ್ಯಾನರ್ ಅನ್ನು ನಿಲ್ಲಿಸಲಾಗಿತ್ತು. ಇದು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಗುರಿಯಾಗಿಸಿ ಮಾಡಿರುವ ಟೀಕೆ ಎನ್ನುವುದು ಸ್ಪಷ್ಟವಾಗಿದೆ. ಇದರ ವಿಡಿಯೋ ಮತ್ತು ಫೋಟೋ ವೈರಲ್ ಆಗಿತ್ತು.

ಈ ಹಿಂದೆ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕವಿತಾ ಅವರನ್ನು ಇಡಿ ವಿಚಾರಣೆ ನಡೆಸಿತ್ತು. ಯಾವುದೇ ಎಫ್‌ಐಆರ್‌ನಲ್ಲಿ ತನ್ನ ಹೆಸರು ಇಲ್ಲ. ಆದರೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಕೆಲವು ವ್ಯಕ್ತಿಗಳ ಕೆಲವು ಹೇಳಿಕೆಗಳ ಆಧಾರದ ಮೇಲೆ ಅವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ಅವರು ಹೇಳಿದ್ದರು. ನಂತರ ಅವರು ಇಡಿ ನೀಡಿದ ಸಮನ್ಸ್ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು, ನಂತರ ಅದನ್ನು ತಿರಸ್ಕರಿಸಲಾಯಿತು.

ತಮ್ಮ ನಿವಾಸದಲ್ಲಿಯೇ ಇಡಿ ಅಧಿಕಾರಿಗಳು ವಿಚಾರಣೆ ನಡೆಸಬೇಕು, ಈ ಸಂದಭಧದಲ್ಲಿ ಇತರ ಆರೋಪಿಗಳೊಂದಿಗೆ ತನ್ನ ವಿಚಾರಣೆಯ ವೀಡಿಯೊಗ್ರಫಿಗೆ ಅವಕಾಶ ನೀಡಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಕವಿತಾ ಅವರು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...