Homeಕರ್ನಾಟಕಬಿಜೆಪಿ ವಿರುದ್ಧ ಬಿಆರ್‌ಎಸ್ ಪೋಸ್ಟರ್ ವಾರ್; 'ಎಂಎಲ್‌ಎಗಳ ಬೇಟೆಗಾರ' ಸಂತೋಷ್‌ ವಾಂಟೆಡ್ ಪೋಸ್ಟರ್ ವೈರಲ್

ಬಿಜೆಪಿ ವಿರುದ್ಧ ಬಿಆರ್‌ಎಸ್ ಪೋಸ್ಟರ್ ವಾರ್; ‘ಎಂಎಲ್‌ಎಗಳ ಬೇಟೆಗಾರ’ ಸಂತೋಷ್‌ ವಾಂಟೆಡ್ ಪೋಸ್ಟರ್ ವೈರಲ್

- Advertisement -
- Advertisement -

ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಮತ್ತು ಎಂಎಲ್‌ಸಿ ಕೆ ಕವಿತಾ ಅವರ ಇಡಿ ವಿಚಾರಣೆಗೆ ಗುರುವಾರ ಹಾಜರಾಗಲಿದ್ದಾರೆ. ಈ ಬೆನ್ನಲ್ಲೇ ತೆಲಂಗಾಣದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯು (ಬಿಆರ್‌ಎಸ್)  ಬಿಜೆಪಿ ವಿರುದ್ಧ ಪೋಸ್ಟರ್ ವಾರ್ ಆರಂಭಿಸಿದೆ.

ಹೈದರಾಬಾದ್‌ನ ಎರಡು ಸ್ಥಳಗಳಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಫೋಟೋದ ಮೇಲೆ ‘ವಾಂಟೆಡ್’ ಎಂದು ಬರೆದಿರುವ ಪೋಸ್ಟರ್‌ಗಳನ್ನು ಹಾಕಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಆ ಪೋಸ್ಟರ್‌ನಲ್ಲಿ ”ಸಂತೋಷ್‌ಗೆ ‘ಎಂಎಲ್‌ಎಗಳ ಬೇಟೆಗಾರ’ ಎಂದು ಹೇಳಲಾಗಿದೆ. ಸಂತೋಷ್ ಅವರನ್ನು ಹುಡುಕಿಕೊಟ್ಟರೆ ಬಹುಮಾನವಾಗಿ ‘ಮೋದಿಯವರ ₹ 15,00,000 ಭರವಸೆಯ ಮಂಜೂರಾತಿ’ಯ ಹಣವನ್ನು ನೀಡಲಾಗುತ್ತದೆ” ಎಂದು ಪೋಸ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಗೇಲಿ ಮಾಡಲಾಗಿದೆ.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕವಿತಾ ಅವರನ್ನು ED ವಿಚಾರಣೆಗೆ ಕರೆದ ಬಳಿಕ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯ ಆರೋಪದ ಮೇಲೆ ಕೇಂದ್ರವನ್ನು ಟೀಕಿಸಲು ಬಿಆರ್‌ಎಸ್ ಜೊತೆಗೆ ಆಮ್ ಆದ್ಮಿ ಪಾರ್ಟಿ (ಎಎಪಿ) ಕೂಡ ಪೋಸ್ಟರ್ ವಾರ್‌ನಲ್ಲಿ ಭಾಗವಹಿಸಿತ್ತು.

ಮೋದಿ ಪ್ರಜಾಪ್ರಭುತ್ವದ ಧ್ವಂಸಕ, ಬೂಟಾಟಿಕೆಯ ಪಿತಾಮಹ ಪೋಸ್ಟರ್:

ಇತ್ತೀಚೆಗೆ ನಗರದಲ್ಲಿ ಬಿಆರ್‌ಎಸ್‌ ಕಾರ್ಯಕರ್ತರು ಪೋಸ್ಟರ್‌ ಅಂಟಿಸಿ ಪ್ರತಿಭಟನೆ ಮಾಡಿದ್ದರು. ಇಲ್ಲಿನ ಗೋಡೆಗಳ ಮೇಲೆ ‘ನರೇಂದ್ರ ಮೋದಿ ಪ್ರಜಾಪ್ರಭುತ್ವದ ಧ್ವಂಸಕ, ಬೂಟಾಟಿಕೆಯ ಪಿತಾಮಹ’ ಎಂಬ ಪೋಸ್ಟರ್‌ ಅಂಟಿಸಿ ವಿರೋಧಿಸಿದರು. ಇದರೊಂದಿಗೆ ಮೋದಿ ಸರ್ಕಾರ ಅವರ ವಿರೋಧಿಗಳ ವಿರುದ್ಧ ಇಂತಹ ಕೇಂದ್ರದ ತನಿಖಾ ಸಂಸ್ಥೆಗಳನ್ನು ಶಸ್ತ್ರವಾಗಿ ಬಳಸುತ್ತಿದೆ ಎಂದು ಪೋಸ್ಟರ್ ಮೂಲಕ ಆರೋಪ ಮಾಡಿದ್ದರು.

ಡಿಟರ್ಜೆಂಟ್ ಪೌಡರ್ ಬ್ರಾಂಡ್ ನಿರ್ಮಾ ಜೊತೆ ಬಿಜೆಪಿ ಹೋಲಿಕೆ ಪೋಸ್ಟರ್:

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ರೈಸಿಂಗ್ ಡೇಗೆ ಹಾಜರಾಗಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೈದರಾಬಾದ್‌ಗೆ ಭೇಟಿ ನೀಡುವ ಮೊದಲು, ಬಿಆರ್‌ಎಸ್ ಅವರನ್ನು ವ್ಯಂಗ್ಯದೊಂದಿಗೆ ಸ್ವಾಗತಿಸಿತು. ಬೇರೆ ಬೇರೆ ಪಕ್ಷಗಳಿಂದ ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿ ನಾಯಕರನ್ನು ಒಳಗೊಂಡ ಪೋಸ್ಟರ್ ಅನ್ನು ಹಾಕಲಾಗಿತ್ತು. ಅದರ ಜೊತೆಗೆ ಅವರು ವಿವಿಧ ಹಗರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಬಿಜೆಪಿಯನ್ನು ಡಿಟರ್ಜೆಂಟ್ ಪೌಡರ್ ಬ್ರಾಂಡ್ ನಿರ್ಮಾ ಜೊತೆ ಹೋಲಿಸಿ ಬಿಆರ್‌ಎಸ್ ಪೋಸ್ಟರ್ ಹಾಕಿತ್ತು. ಇದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿತ್ತು.

ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ತೆರಳಿದ್ದಾರೆ ಎಂದು ಹೇಳಲಾದ ‘ರೇಡ್ ಡಿಟರ್ಜೆಂಟ್’ಗಳನ್ನು ಉಲ್ಲೇಖಿಸುವ ಪೋಸ್ಟರ್‌ಗಳನ್ನು ಹೈದರಾಬಾದ್‌ನಾದ್ಯಂತ ಹಾಕಲಾಗಿತ್ತು. ಡಿಟರ್ಜೆಂಟ್ ಬಳಸಿದ ನಂತರ ನಾಯಕರ ಕೊಳಕು ಬಿಳಿ ಟಿ-ಶರ್ಟ್‌ಗಳಿಗೆ ಕೇಸರಿ ಬಣ್ಣ ಹಾಕಲಾಗಿದೆ ಎಂದು ಪೋಸ್ಟರ್ ತೋರಿಸಿತ್ತು. ಇದು ಭ್ರಷ್ಟಾಚಾರ ಆರೋಪ ಹೊತ್ತಿರುವ ನಾಯಕರು ಬಿಜೆಪಿಗೆ ಸೇರಿದ ಕೆಲವೇ ದಿನಗಳಲ್ಲಿ ಆರೋಪ ಮುಕ್ತರಾಗಿ ಶುಭ್ರವಾಗುತ್ತಾರೆ ಎನ್ನುವುದನ್ನು ತೋರಿಸುತ್ತದೆ.

ಇದನ್ನೂ ಓದಿ: ರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಬಿಜೆಪಿ ನಾಯಕರಿಗೆ ಖರ್ಗೆ ಖಡಕ್ ಉತ್ತರ

ಬೊಮ್ಮಾಯಿಗೆ 40% ಸಿಎಂ ಎಂದು ಸ್ವಾಗತದ ಪೋಸ್ಟರ್:

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು 40% ಸಿಎಂ ಎಂದು ಬಿಆರ್‌ಎಸ್ ಪಕ್ಷ ವ್ಯಂಗ್ಯವಾಡಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳಿದ್ದರು.

ಈ ಸಂದರ್ಭದಲ್ಲಿ ”40% ಸಿಎಂಗೆ ಸ್ವಾಗತ” ಎಂದು ದೊಡ್ಡ ಅಕ್ಷರಗಳಲ್ಲಿ ಬರೆದ ಬ್ಯಾನರ್ ಅನ್ನು ನಿಲ್ಲಿಸಲಾಗಿತ್ತು. ಇದು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಗುರಿಯಾಗಿಸಿ ಮಾಡಿರುವ ಟೀಕೆ ಎನ್ನುವುದು ಸ್ಪಷ್ಟವಾಗಿದೆ. ಇದರ ವಿಡಿಯೋ ಮತ್ತು ಫೋಟೋ ವೈರಲ್ ಆಗಿತ್ತು.

ಈ ಹಿಂದೆ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕವಿತಾ ಅವರನ್ನು ಇಡಿ ವಿಚಾರಣೆ ನಡೆಸಿತ್ತು. ಯಾವುದೇ ಎಫ್‌ಐಆರ್‌ನಲ್ಲಿ ತನ್ನ ಹೆಸರು ಇಲ್ಲ. ಆದರೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಕೆಲವು ವ್ಯಕ್ತಿಗಳ ಕೆಲವು ಹೇಳಿಕೆಗಳ ಆಧಾರದ ಮೇಲೆ ಅವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ಅವರು ಹೇಳಿದ್ದರು. ನಂತರ ಅವರು ಇಡಿ ನೀಡಿದ ಸಮನ್ಸ್ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು, ನಂತರ ಅದನ್ನು ತಿರಸ್ಕರಿಸಲಾಯಿತು.

ತಮ್ಮ ನಿವಾಸದಲ್ಲಿಯೇ ಇಡಿ ಅಧಿಕಾರಿಗಳು ವಿಚಾರಣೆ ನಡೆಸಬೇಕು, ಈ ಸಂದಭಧದಲ್ಲಿ ಇತರ ಆರೋಪಿಗಳೊಂದಿಗೆ ತನ್ನ ವಿಚಾರಣೆಯ ವೀಡಿಯೊಗ್ರಫಿಗೆ ಅವಕಾಶ ನೀಡಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಕವಿತಾ ಅವರು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...