Homeಕರ್ನಾಟಕಬಿಜೆಪಿ ವಿರುದ್ಧ ಬಿಆರ್‌ಎಸ್ ಪೋಸ್ಟರ್ ವಾರ್; 'ಎಂಎಲ್‌ಎಗಳ ಬೇಟೆಗಾರ' ಸಂತೋಷ್‌ ವಾಂಟೆಡ್ ಪೋಸ್ಟರ್ ವೈರಲ್

ಬಿಜೆಪಿ ವಿರುದ್ಧ ಬಿಆರ್‌ಎಸ್ ಪೋಸ್ಟರ್ ವಾರ್; ‘ಎಂಎಲ್‌ಎಗಳ ಬೇಟೆಗಾರ’ ಸಂತೋಷ್‌ ವಾಂಟೆಡ್ ಪೋಸ್ಟರ್ ವೈರಲ್

- Advertisement -
- Advertisement -

ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಮತ್ತು ಎಂಎಲ್‌ಸಿ ಕೆ ಕವಿತಾ ಅವರ ಇಡಿ ವಿಚಾರಣೆಗೆ ಗುರುವಾರ ಹಾಜರಾಗಲಿದ್ದಾರೆ. ಈ ಬೆನ್ನಲ್ಲೇ ತೆಲಂಗಾಣದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯು (ಬಿಆರ್‌ಎಸ್)  ಬಿಜೆಪಿ ವಿರುದ್ಧ ಪೋಸ್ಟರ್ ವಾರ್ ಆರಂಭಿಸಿದೆ.

ಹೈದರಾಬಾದ್‌ನ ಎರಡು ಸ್ಥಳಗಳಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಫೋಟೋದ ಮೇಲೆ ‘ವಾಂಟೆಡ್’ ಎಂದು ಬರೆದಿರುವ ಪೋಸ್ಟರ್‌ಗಳನ್ನು ಹಾಕಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಆ ಪೋಸ್ಟರ್‌ನಲ್ಲಿ ”ಸಂತೋಷ್‌ಗೆ ‘ಎಂಎಲ್‌ಎಗಳ ಬೇಟೆಗಾರ’ ಎಂದು ಹೇಳಲಾಗಿದೆ. ಸಂತೋಷ್ ಅವರನ್ನು ಹುಡುಕಿಕೊಟ್ಟರೆ ಬಹುಮಾನವಾಗಿ ‘ಮೋದಿಯವರ ₹ 15,00,000 ಭರವಸೆಯ ಮಂಜೂರಾತಿ’ಯ ಹಣವನ್ನು ನೀಡಲಾಗುತ್ತದೆ” ಎಂದು ಪೋಸ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಗೇಲಿ ಮಾಡಲಾಗಿದೆ.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕವಿತಾ ಅವರನ್ನು ED ವಿಚಾರಣೆಗೆ ಕರೆದ ಬಳಿಕ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯ ಆರೋಪದ ಮೇಲೆ ಕೇಂದ್ರವನ್ನು ಟೀಕಿಸಲು ಬಿಆರ್‌ಎಸ್ ಜೊತೆಗೆ ಆಮ್ ಆದ್ಮಿ ಪಾರ್ಟಿ (ಎಎಪಿ) ಕೂಡ ಪೋಸ್ಟರ್ ವಾರ್‌ನಲ್ಲಿ ಭಾಗವಹಿಸಿತ್ತು.

ಮೋದಿ ಪ್ರಜಾಪ್ರಭುತ್ವದ ಧ್ವಂಸಕ, ಬೂಟಾಟಿಕೆಯ ಪಿತಾಮಹ ಪೋಸ್ಟರ್:

ಇತ್ತೀಚೆಗೆ ನಗರದಲ್ಲಿ ಬಿಆರ್‌ಎಸ್‌ ಕಾರ್ಯಕರ್ತರು ಪೋಸ್ಟರ್‌ ಅಂಟಿಸಿ ಪ್ರತಿಭಟನೆ ಮಾಡಿದ್ದರು. ಇಲ್ಲಿನ ಗೋಡೆಗಳ ಮೇಲೆ ‘ನರೇಂದ್ರ ಮೋದಿ ಪ್ರಜಾಪ್ರಭುತ್ವದ ಧ್ವಂಸಕ, ಬೂಟಾಟಿಕೆಯ ಪಿತಾಮಹ’ ಎಂಬ ಪೋಸ್ಟರ್‌ ಅಂಟಿಸಿ ವಿರೋಧಿಸಿದರು. ಇದರೊಂದಿಗೆ ಮೋದಿ ಸರ್ಕಾರ ಅವರ ವಿರೋಧಿಗಳ ವಿರುದ್ಧ ಇಂತಹ ಕೇಂದ್ರದ ತನಿಖಾ ಸಂಸ್ಥೆಗಳನ್ನು ಶಸ್ತ್ರವಾಗಿ ಬಳಸುತ್ತಿದೆ ಎಂದು ಪೋಸ್ಟರ್ ಮೂಲಕ ಆರೋಪ ಮಾಡಿದ್ದರು.

ಡಿಟರ್ಜೆಂಟ್ ಪೌಡರ್ ಬ್ರಾಂಡ್ ನಿರ್ಮಾ ಜೊತೆ ಬಿಜೆಪಿ ಹೋಲಿಕೆ ಪೋಸ್ಟರ್:

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ರೈಸಿಂಗ್ ಡೇಗೆ ಹಾಜರಾಗಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೈದರಾಬಾದ್‌ಗೆ ಭೇಟಿ ನೀಡುವ ಮೊದಲು, ಬಿಆರ್‌ಎಸ್ ಅವರನ್ನು ವ್ಯಂಗ್ಯದೊಂದಿಗೆ ಸ್ವಾಗತಿಸಿತು. ಬೇರೆ ಬೇರೆ ಪಕ್ಷಗಳಿಂದ ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿ ನಾಯಕರನ್ನು ಒಳಗೊಂಡ ಪೋಸ್ಟರ್ ಅನ್ನು ಹಾಕಲಾಗಿತ್ತು. ಅದರ ಜೊತೆಗೆ ಅವರು ವಿವಿಧ ಹಗರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಬಿಜೆಪಿಯನ್ನು ಡಿಟರ್ಜೆಂಟ್ ಪೌಡರ್ ಬ್ರಾಂಡ್ ನಿರ್ಮಾ ಜೊತೆ ಹೋಲಿಸಿ ಬಿಆರ್‌ಎಸ್ ಪೋಸ್ಟರ್ ಹಾಕಿತ್ತು. ಇದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿತ್ತು.

ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ತೆರಳಿದ್ದಾರೆ ಎಂದು ಹೇಳಲಾದ ‘ರೇಡ್ ಡಿಟರ್ಜೆಂಟ್’ಗಳನ್ನು ಉಲ್ಲೇಖಿಸುವ ಪೋಸ್ಟರ್‌ಗಳನ್ನು ಹೈದರಾಬಾದ್‌ನಾದ್ಯಂತ ಹಾಕಲಾಗಿತ್ತು. ಡಿಟರ್ಜೆಂಟ್ ಬಳಸಿದ ನಂತರ ನಾಯಕರ ಕೊಳಕು ಬಿಳಿ ಟಿ-ಶರ್ಟ್‌ಗಳಿಗೆ ಕೇಸರಿ ಬಣ್ಣ ಹಾಕಲಾಗಿದೆ ಎಂದು ಪೋಸ್ಟರ್ ತೋರಿಸಿತ್ತು. ಇದು ಭ್ರಷ್ಟಾಚಾರ ಆರೋಪ ಹೊತ್ತಿರುವ ನಾಯಕರು ಬಿಜೆಪಿಗೆ ಸೇರಿದ ಕೆಲವೇ ದಿನಗಳಲ್ಲಿ ಆರೋಪ ಮುಕ್ತರಾಗಿ ಶುಭ್ರವಾಗುತ್ತಾರೆ ಎನ್ನುವುದನ್ನು ತೋರಿಸುತ್ತದೆ.

ಇದನ್ನೂ ಓದಿ: ರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಬಿಜೆಪಿ ನಾಯಕರಿಗೆ ಖರ್ಗೆ ಖಡಕ್ ಉತ್ತರ

ಬೊಮ್ಮಾಯಿಗೆ 40% ಸಿಎಂ ಎಂದು ಸ್ವಾಗತದ ಪೋಸ್ಟರ್:

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು 40% ಸಿಎಂ ಎಂದು ಬಿಆರ್‌ಎಸ್ ಪಕ್ಷ ವ್ಯಂಗ್ಯವಾಡಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳಿದ್ದರು.

ಈ ಸಂದರ್ಭದಲ್ಲಿ ”40% ಸಿಎಂಗೆ ಸ್ವಾಗತ” ಎಂದು ದೊಡ್ಡ ಅಕ್ಷರಗಳಲ್ಲಿ ಬರೆದ ಬ್ಯಾನರ್ ಅನ್ನು ನಿಲ್ಲಿಸಲಾಗಿತ್ತು. ಇದು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಗುರಿಯಾಗಿಸಿ ಮಾಡಿರುವ ಟೀಕೆ ಎನ್ನುವುದು ಸ್ಪಷ್ಟವಾಗಿದೆ. ಇದರ ವಿಡಿಯೋ ಮತ್ತು ಫೋಟೋ ವೈರಲ್ ಆಗಿತ್ತು.

ಈ ಹಿಂದೆ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕವಿತಾ ಅವರನ್ನು ಇಡಿ ವಿಚಾರಣೆ ನಡೆಸಿತ್ತು. ಯಾವುದೇ ಎಫ್‌ಐಆರ್‌ನಲ್ಲಿ ತನ್ನ ಹೆಸರು ಇಲ್ಲ. ಆದರೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಕೆಲವು ವ್ಯಕ್ತಿಗಳ ಕೆಲವು ಹೇಳಿಕೆಗಳ ಆಧಾರದ ಮೇಲೆ ಅವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ಅವರು ಹೇಳಿದ್ದರು. ನಂತರ ಅವರು ಇಡಿ ನೀಡಿದ ಸಮನ್ಸ್ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು, ನಂತರ ಅದನ್ನು ತಿರಸ್ಕರಿಸಲಾಯಿತು.

ತಮ್ಮ ನಿವಾಸದಲ್ಲಿಯೇ ಇಡಿ ಅಧಿಕಾರಿಗಳು ವಿಚಾರಣೆ ನಡೆಸಬೇಕು, ಈ ಸಂದಭಧದಲ್ಲಿ ಇತರ ಆರೋಪಿಗಳೊಂದಿಗೆ ತನ್ನ ವಿಚಾರಣೆಯ ವೀಡಿಯೊಗ್ರಫಿಗೆ ಅವಕಾಶ ನೀಡಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಕವಿತಾ ಅವರು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...