Homeಕರ್ನಾಟಕಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

- Advertisement -
- Advertisement -

ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಎಂದರೆ ಬಿಎಸ್‌ವೈ ಎನ್ನುವ ಕಾಲವಿತ್ತು. ಆದರೆ ಅವರು ಪಕ್ಷದ ಅಣತಿಯಂತೆ ಮುಖ್ಯಮಂತ್ರಿ ಸ್ಥಾನವನ್ನೇ ಬಿಡಬೇಕಾಯಿತು. ಈಗ ತಮ್ಮ ಪುತ್ರನ ಒಂದು ಟಿಕೆಟ್‌ಗಾಗಿಯೂ ಕದನಕ್ಕೆ ಇಳಿಯುವ ಸ್ಥಿತಿ ನಿರ್ಮಾಣ ಆಗಿದೆ. ಬಿಎಸ್‌ವೈ ಸ್ಪರ್ಧೆ ಮಾಡುತ್ತಿದ್ದ ಶಿಕಾರಿಪುರ ಕ್ಷೇತ್ರದ ಟಿಕೆಟ್‌ ಅನ್ನು ತಮ್ಮ ಮಗ ವಿಜಯೇಂದ್ರನಿಗೆ ಕೊಡಿಸಲು ಪ್ಲ್ಯಾನ್ ಮಾಡಿದ್ದರು. ಆದರೆ ಅದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ತಕರಾರು ತಗೆದಿದ್ದಾರೆ.

ಸಿಟಿ ರವಿ ಹಾಗೂ ವಿಜಯೇಂದ್ರ ನಡುವೆ ಭರ್ಜರಿ ಟಾಕ್ ವಾರ್

ರಾಜ್ಯ ಬಿಜೆಪಿಯ ಭವಿಷ್ಯದ ನಾಯಕರಿಬ್ಬರ ನಡುವೆ, ಕೇವಲ ಒಂದು ಟಿಕೆಟ್ ವಿಚಾರಕ್ಕೆ ಕಿತ್ತಾಟ ನಡೆಯುತ್ತಿರುವುದು, ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ. ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಪುತ್ರನಿಗೆ ತಮ್ಮ ಕ್ಷೇತ್ರ ಶಿಕಾರಿಪುರದಿಂದಲೇ ಟಿಕೆಟ್ ಕೊಡಿಸಲು ಪ್ಲ್ಯಾನ್ ಹಾಕಿಕೊಂಡಿದ್ದಾರೆ. ಆದರೆ ಈ ಬಗ್ಗೆ ಸಿ.ಟಿ ರವಿ ಪ್ರಶ್ನೆ ಮಾಡುವ ಮೂಲಕ ಯಡಿಯೂರಪ್ಪ ಮತ್ತು ಅವರ ಮಗನ ವಿರುದ್ಧ ಯುದ್ಧ ಸಾರಿದ್ದಾರೆ.

ಬಿ.ಎಸ್ ಯಡಿಯೂರಪ್ಪ ಅವರು ಕಳೆದ ಅಧಿವೇಶನದಲ್ಲಿ ವಿಧಾನಸಭೆಗೆ ವಿದಾಯ ಹೇಳಿದ್ದಾರೆ. ಇತ್ತೀಚಿಗೆ ಅವರು, ಚುನಾವಣಾ ರಾಜಕೀಯದಿಂದ ನಿವೃತ್ತರಾದ ನಂತರ ತಮ್ಮ ಕಿರಿಯ ಪುತ್ರ ವಿಜಯೇಂದ್ರ ಅವರು 2023ರ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದರು. ಈಗ ಇದೇ ವಿಚಾರಕ್ಕೆ ಪಕ್ಷದಲ್ಲಿ ಕಿತ್ತಾಟಕ್ಕೆ ಕಾರಣವಾಗಿದೆ. ಎಲೆಕ್ಷನ್‌ಲ್ಲಿ ಟಿಕೆಟ್ ಯಾರಿಗೆ ಟಿಕೆಟ್ ಕೊಡಬೇಕು ಎನ್ನುವುದು ಮನೆಯಲ್ಲಿ ನಿರ್ಧಾರವಾಗಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಕರಾರು ತಗೆದಿದ್ದಾರೆ.

ಇದನ್ನೂ ಓದಿ: ಬಿಜೆಪಿ ವಿರುದ್ಧ ಬಿಆರ್‌ಎಸ್ ಪೋಸ್ಟರ್ ವಾರ್; ‘ಎಂಎಲ್‌ಎಗಳ ಬೇಟೆಗಾರ’ ಸಂತೋಷ್‌ ವಾಂಟೆಡ್ ಪೋಸ್ಟರ್ ವೈರಲ್

ಈ ಬಗ್ಗೆ ಇತ್ತೀಚೆಗೆ ವಿಜಯಪುರದಲ್ಲಿ ಮಾತನಾಡಿದ ಸಿ.ಟಿ ರವಿ, ಬಿಜೆಪಿಯಲ್ಲಿ ಟಿಕೆಟ್ ನೀಡುವ ಮಾನದಂಡದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ”ನಮ್ಮ ಪಕ್ಷದಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ವಿಚಾರ ಕುಟುಂಬದಲ್ಲಿ ತೀರ್ಮಾನವಾಗಲ್ಲ. ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಆಗುತ್ತೆ. ಸಮೀಕ್ಷೆಯ ಆಧಾರದ ಮೇಲೆ ಗೆಲ್ಲುವ ಮಾನದಂಡದ ಆಧರಿಸಿ ಟಿಕೆಟ್ ನೀಡುವ ಕುರಿತು ನಿರ್ಧರಿಸಲಾಗುತ್ತದೆ. ಆದರೆ ಕುಟುಂಬದಲ್ಲಿ ಸಮೀಕ್ಷೆ ನಡೆಯುವುದಿಲ್ಲ, ನಮ್ಮ ಪಕ್ಷದಲ್ಲಿ ಕಿಚನ್‌ನಲ್ಲಿ ತೀರ್ಮಾನ ತೆಗೆದುಕೊಳ್ಳಲ್ಲ. ನಾಯಕರ ಮಕ್ಕಳೆಂದ ಕಾರಣಕ್ಕೆ ಅವರಿಗೆ ಟಿಕೆಟ್ ಕೊಡಬೇಕಾ? ಎಂದು ಪ್ರಶ್ನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ವಿಜಯೇಂದ್ರ ಟಿಕೆಟ್ ನಿರ್ಧಾರವನ್ನು ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಹಿರಿಯ ನಾಯಕ ಯಡಿಯೂರಪ್ಪ ಅವರ ಆಟ ಇನ್ನೂ ಮುಂದೆ ನಡೆಯುವುದಿಲ್ಲ ಎನ್ನುವ ಸಂದೇಶವನ್ನು ಸಿಟಿ ರವಿ ನೀಡಿದ್ದಾರೆ.

ಸಿ.ಟಿ ರವಿ ತಕರಾರುಗಳಿಗೆ ಕೆಂಡವಾದ ವಿಜಯೇಂದ್ರ

ಈ ವಿಚಾರವಾಗಿ ಬಿಎಸ್‌ವೈ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಕೊಪ್ಪಳ ಜಿಲ್ಲೆಯ ಹನುಮಸಾಗರದಲ್ಲಿ ತಿರುಗೇಟು ನೀಡಿದ್ದಾರೆ. ”ಬಿಜೆಪಿ ಟಿಕೆಟ್ ವಿಚಾರ ಬಿಎಸ್‌ವೈ ಕಿಚನ್‌ನಲ್ಲು ಆಗೋಲ್ಲ, ಮತ್ತೊಬ್ಬರ ಕಿಚನ್‌ನಲ್ಲು ಆಗೋಲ್ಲ” ಎಂದು ಸಿಟಿ ರವಿಗೆ ತಿರುಗೇಟು ನೀಡಿದ್ದಾರೆ.

”ರಾಜಕಾರಣದಲ್ಲಿ ಶತ್ರುಗಳ ಸಂಖ್ಯೆ ಹೆಚ್ಚಾದಾಗಲೇ ನಾವು ಎತ್ತರಕ್ಕೆ ಬೆಳೆಯೋಕೆ ಸಾಧ್ಯ ಆಗೋದು” ಎಂದು ವಾಗ್ದಾಳಿ ನಡೆಸುವ ಮೂಲಕ ಸಿಟಿ ರವಿ ಅವರನ್ನು ತಮ್ಮ ಶತ್ರು ಎಂದು ಘೋಷಿಸಿದ್ದಾರೆ. ಬಿಜೆಪಿ ಕಟ್ಟಿದ್ದು ಬಿಎಸ್‌ವೈ ಅಂತ ಅವರಿಗೂ ನೆನಪಿರಲಿ ಎಂದು ತಮ್ಮ ತಂದೆಯ ಸ್ಥಾನಮಾನದ ಬಗ್ಗೆ ಸಿಟಿ ರವಿಗೆ ನೆನಪಿಸಿದ್ದಾರೆ.

ಈ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿಬೆಳಸಿದ್ದೇ ಯಡಿಯೂರಪ್ಪನವರು, ಅವರಿಗೆ ಟಿಕೆಟ್ ಹೇಗೆ ಕೊಡಬೇಕು ಅನ್ನೋದು ಗೊತ್ತಿದೆ. ಸಿ.ಟಿ ರವಿಯವರು ಹಿರಿಯರಿದ್ದಾರೆ. ಕರ್ನಾಟಕದಲ್ಲಿ ಯಡಿಯೂರಪ್ಪ ಅವರು ಎಷ್ಟು ದೊಡ್ಡವರೆಂದು ಅವರಿಗೂ ಗೊತ್ತಿದೆ. ಮೊದಲಿನಿಂದ ಪಕ್ಷ ಹೇಗೆ ಕಟ್ಟಿದ್ದಾರೆ ಎಂಬುವುದು ಗೊತ್ತಿದೆ. ಪಕ್ಷದಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಅನ್ನೋದು ಯಡಿಯೂರಪ್ಪ ಕಿಚನ್‌ನಲ್ಲು ತೀರ್ಮಾನ ಮಾಡಲ್ಲ, ಇನ್ನೊಬ್ಬರ ಕಿಚನ್‌ನಲ್ಲು ತೀರ್ಮಾನ ಆಗಲ್ಲ ಎಂದು ಸಿಟಿ ರವಿಗೆ ವಿಜಯೇಂದ್ರ ಜಾಡಿಸಿದ್ದಾರೆ.

ಬಿಜೆಪಿಯಲ್ಲಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡುತ್ತಿರುವುದರ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ.  ”BSY ಅವರಿಗೆ ಅಧಿಕಾರವಿಲ್ಲ, ಟಿಕೆಟ್ ಕೂಡ ಇಲ್ಲ. BSYರಿಗೆ ಟಿಕೆಟ್ ನಿರ್ಧರಿಸುವ ಹಕ್ಕಿಲ್ಲ. BSYರಿಗೆ ಪ್ರಚಾರ ಸಮಿತಿಯ ನೇತೃತ್ವವಿಲ್ಲ. BSYರಿಗೆ ವೇದಿಕೆಗಳಲ್ಲಿ ಜಾಗವಿಲ್ಲ. BSY ಅವರ ರಾಜ್ಯ ಪ್ರವಾಸಕ್ಕೆ ಅವಕಾಶ ಕೊಡಲಿಲ್ಲ. BSY ಬಿಜೆಪಿಗೆ ಅನಿವಾರ್ಯವಲ್ಲ ಎಂದು ಕಟೀಲ್ ಹೇಳುತ್ತಾರೆ. ಈ ಘಟನೆಗಳೇ ಈ ಹೇಳಿಕೆಗೆ ಸ್ಪೂರ್ತಿಯೇ ಬಿಜೆಪಿ? ಎಂದು ಪ್ರಶ್ನೆ ಮಾಡಿದ್ದು, ಇದರ ಜೊತೆಗೆ ವಿಜಯೇಂದ್ರ ಅವರ- ”ರಾಜ್ಯದಲ್ಲಿ ಯಡಿಯೂರಪ್ಪರನ್ನ ಬಿಟ್ಟು ಬಿಜೆಪಿಯನ್ನು ಅಧಿಕಾರಕ್ಕೆ ತರುವ ಎದೆಗಾರಿಕೆ ಯಾರಿಗೆ ಇದೆ?” ಎಂಬ ಹೇಳಿಕೆಯನ್ನು ಕಾಂಗ್ರೆಸ್ ಹಂಚಿಕೊಂಡಿದೆ.

ಸಿಟಿ ರವಿ- ವಿಜಯೇಂದ್ರ ಅವರು ಟಾಕ್ ವಾರ್ ಜೋರಾಗುತ್ತಿದ್ದಂತೆ ಮಧ್ಯ ಪ್ರವೇಶಿಸಿರುವ ಬಿಎಸ್‌ವೈ ಅದನ್ನು ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ. ”ಸಿಟಿ ರವಿ ಹೇಳಿದ್ದು ಸರಿ ಇದೆ. ಯಾವುದೇ ಟಿಕೆಟ್ ಆಕಾಂಕ್ಷಿಯ ತೀರ್ಮಾನ ಚುನಾವಣಾ ಸಮಿತಿ ಮಾಡುತ್ತದೆ ಹೊರತು, ನಾವ್ಯಾರು ತೀರ್ಮಾನ ಮಾಡೋಕಾಗೋದಿಲ್ಲ” ಎಂದು ಹೇಳುವ ಮೂಲಕ ಬಿಜೆಪಿಯಲ್ಲಿನ ಕದನಕ್ಕೆ ವಿರಾಮ ಘೋಷಿಸುವ ಪ್ರಯತ್ನ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...