Homeಕರ್ನಾಟಕಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

- Advertisement -
- Advertisement -

ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಎಂದರೆ ಬಿಎಸ್‌ವೈ ಎನ್ನುವ ಕಾಲವಿತ್ತು. ಆದರೆ ಅವರು ಪಕ್ಷದ ಅಣತಿಯಂತೆ ಮುಖ್ಯಮಂತ್ರಿ ಸ್ಥಾನವನ್ನೇ ಬಿಡಬೇಕಾಯಿತು. ಈಗ ತಮ್ಮ ಪುತ್ರನ ಒಂದು ಟಿಕೆಟ್‌ಗಾಗಿಯೂ ಕದನಕ್ಕೆ ಇಳಿಯುವ ಸ್ಥಿತಿ ನಿರ್ಮಾಣ ಆಗಿದೆ. ಬಿಎಸ್‌ವೈ ಸ್ಪರ್ಧೆ ಮಾಡುತ್ತಿದ್ದ ಶಿಕಾರಿಪುರ ಕ್ಷೇತ್ರದ ಟಿಕೆಟ್‌ ಅನ್ನು ತಮ್ಮ ಮಗ ವಿಜಯೇಂದ್ರನಿಗೆ ಕೊಡಿಸಲು ಪ್ಲ್ಯಾನ್ ಮಾಡಿದ್ದರು. ಆದರೆ ಅದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ತಕರಾರು ತಗೆದಿದ್ದಾರೆ.

ಸಿಟಿ ರವಿ ಹಾಗೂ ವಿಜಯೇಂದ್ರ ನಡುವೆ ಭರ್ಜರಿ ಟಾಕ್ ವಾರ್

ರಾಜ್ಯ ಬಿಜೆಪಿಯ ಭವಿಷ್ಯದ ನಾಯಕರಿಬ್ಬರ ನಡುವೆ, ಕೇವಲ ಒಂದು ಟಿಕೆಟ್ ವಿಚಾರಕ್ಕೆ ಕಿತ್ತಾಟ ನಡೆಯುತ್ತಿರುವುದು, ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ. ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಪುತ್ರನಿಗೆ ತಮ್ಮ ಕ್ಷೇತ್ರ ಶಿಕಾರಿಪುರದಿಂದಲೇ ಟಿಕೆಟ್ ಕೊಡಿಸಲು ಪ್ಲ್ಯಾನ್ ಹಾಕಿಕೊಂಡಿದ್ದಾರೆ. ಆದರೆ ಈ ಬಗ್ಗೆ ಸಿ.ಟಿ ರವಿ ಪ್ರಶ್ನೆ ಮಾಡುವ ಮೂಲಕ ಯಡಿಯೂರಪ್ಪ ಮತ್ತು ಅವರ ಮಗನ ವಿರುದ್ಧ ಯುದ್ಧ ಸಾರಿದ್ದಾರೆ.

ಬಿ.ಎಸ್ ಯಡಿಯೂರಪ್ಪ ಅವರು ಕಳೆದ ಅಧಿವೇಶನದಲ್ಲಿ ವಿಧಾನಸಭೆಗೆ ವಿದಾಯ ಹೇಳಿದ್ದಾರೆ. ಇತ್ತೀಚಿಗೆ ಅವರು, ಚುನಾವಣಾ ರಾಜಕೀಯದಿಂದ ನಿವೃತ್ತರಾದ ನಂತರ ತಮ್ಮ ಕಿರಿಯ ಪುತ್ರ ವಿಜಯೇಂದ್ರ ಅವರು 2023ರ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದರು. ಈಗ ಇದೇ ವಿಚಾರಕ್ಕೆ ಪಕ್ಷದಲ್ಲಿ ಕಿತ್ತಾಟಕ್ಕೆ ಕಾರಣವಾಗಿದೆ. ಎಲೆಕ್ಷನ್‌ಲ್ಲಿ ಟಿಕೆಟ್ ಯಾರಿಗೆ ಟಿಕೆಟ್ ಕೊಡಬೇಕು ಎನ್ನುವುದು ಮನೆಯಲ್ಲಿ ನಿರ್ಧಾರವಾಗಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಕರಾರು ತಗೆದಿದ್ದಾರೆ.

ಇದನ್ನೂ ಓದಿ: ಬಿಜೆಪಿ ವಿರುದ್ಧ ಬಿಆರ್‌ಎಸ್ ಪೋಸ್ಟರ್ ವಾರ್; ‘ಎಂಎಲ್‌ಎಗಳ ಬೇಟೆಗಾರ’ ಸಂತೋಷ್‌ ವಾಂಟೆಡ್ ಪೋಸ್ಟರ್ ವೈರಲ್

ಈ ಬಗ್ಗೆ ಇತ್ತೀಚೆಗೆ ವಿಜಯಪುರದಲ್ಲಿ ಮಾತನಾಡಿದ ಸಿ.ಟಿ ರವಿ, ಬಿಜೆಪಿಯಲ್ಲಿ ಟಿಕೆಟ್ ನೀಡುವ ಮಾನದಂಡದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ”ನಮ್ಮ ಪಕ್ಷದಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ವಿಚಾರ ಕುಟುಂಬದಲ್ಲಿ ತೀರ್ಮಾನವಾಗಲ್ಲ. ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಆಗುತ್ತೆ. ಸಮೀಕ್ಷೆಯ ಆಧಾರದ ಮೇಲೆ ಗೆಲ್ಲುವ ಮಾನದಂಡದ ಆಧರಿಸಿ ಟಿಕೆಟ್ ನೀಡುವ ಕುರಿತು ನಿರ್ಧರಿಸಲಾಗುತ್ತದೆ. ಆದರೆ ಕುಟುಂಬದಲ್ಲಿ ಸಮೀಕ್ಷೆ ನಡೆಯುವುದಿಲ್ಲ, ನಮ್ಮ ಪಕ್ಷದಲ್ಲಿ ಕಿಚನ್‌ನಲ್ಲಿ ತೀರ್ಮಾನ ತೆಗೆದುಕೊಳ್ಳಲ್ಲ. ನಾಯಕರ ಮಕ್ಕಳೆಂದ ಕಾರಣಕ್ಕೆ ಅವರಿಗೆ ಟಿಕೆಟ್ ಕೊಡಬೇಕಾ? ಎಂದು ಪ್ರಶ್ನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ವಿಜಯೇಂದ್ರ ಟಿಕೆಟ್ ನಿರ್ಧಾರವನ್ನು ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಹಿರಿಯ ನಾಯಕ ಯಡಿಯೂರಪ್ಪ ಅವರ ಆಟ ಇನ್ನೂ ಮುಂದೆ ನಡೆಯುವುದಿಲ್ಲ ಎನ್ನುವ ಸಂದೇಶವನ್ನು ಸಿಟಿ ರವಿ ನೀಡಿದ್ದಾರೆ.

ಸಿ.ಟಿ ರವಿ ತಕರಾರುಗಳಿಗೆ ಕೆಂಡವಾದ ವಿಜಯೇಂದ್ರ

ಈ ವಿಚಾರವಾಗಿ ಬಿಎಸ್‌ವೈ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಕೊಪ್ಪಳ ಜಿಲ್ಲೆಯ ಹನುಮಸಾಗರದಲ್ಲಿ ತಿರುಗೇಟು ನೀಡಿದ್ದಾರೆ. ”ಬಿಜೆಪಿ ಟಿಕೆಟ್ ವಿಚಾರ ಬಿಎಸ್‌ವೈ ಕಿಚನ್‌ನಲ್ಲು ಆಗೋಲ್ಲ, ಮತ್ತೊಬ್ಬರ ಕಿಚನ್‌ನಲ್ಲು ಆಗೋಲ್ಲ” ಎಂದು ಸಿಟಿ ರವಿಗೆ ತಿರುಗೇಟು ನೀಡಿದ್ದಾರೆ.

”ರಾಜಕಾರಣದಲ್ಲಿ ಶತ್ರುಗಳ ಸಂಖ್ಯೆ ಹೆಚ್ಚಾದಾಗಲೇ ನಾವು ಎತ್ತರಕ್ಕೆ ಬೆಳೆಯೋಕೆ ಸಾಧ್ಯ ಆಗೋದು” ಎಂದು ವಾಗ್ದಾಳಿ ನಡೆಸುವ ಮೂಲಕ ಸಿಟಿ ರವಿ ಅವರನ್ನು ತಮ್ಮ ಶತ್ರು ಎಂದು ಘೋಷಿಸಿದ್ದಾರೆ. ಬಿಜೆಪಿ ಕಟ್ಟಿದ್ದು ಬಿಎಸ್‌ವೈ ಅಂತ ಅವರಿಗೂ ನೆನಪಿರಲಿ ಎಂದು ತಮ್ಮ ತಂದೆಯ ಸ್ಥಾನಮಾನದ ಬಗ್ಗೆ ಸಿಟಿ ರವಿಗೆ ನೆನಪಿಸಿದ್ದಾರೆ.

ಈ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿಬೆಳಸಿದ್ದೇ ಯಡಿಯೂರಪ್ಪನವರು, ಅವರಿಗೆ ಟಿಕೆಟ್ ಹೇಗೆ ಕೊಡಬೇಕು ಅನ್ನೋದು ಗೊತ್ತಿದೆ. ಸಿ.ಟಿ ರವಿಯವರು ಹಿರಿಯರಿದ್ದಾರೆ. ಕರ್ನಾಟಕದಲ್ಲಿ ಯಡಿಯೂರಪ್ಪ ಅವರು ಎಷ್ಟು ದೊಡ್ಡವರೆಂದು ಅವರಿಗೂ ಗೊತ್ತಿದೆ. ಮೊದಲಿನಿಂದ ಪಕ್ಷ ಹೇಗೆ ಕಟ್ಟಿದ್ದಾರೆ ಎಂಬುವುದು ಗೊತ್ತಿದೆ. ಪಕ್ಷದಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಅನ್ನೋದು ಯಡಿಯೂರಪ್ಪ ಕಿಚನ್‌ನಲ್ಲು ತೀರ್ಮಾನ ಮಾಡಲ್ಲ, ಇನ್ನೊಬ್ಬರ ಕಿಚನ್‌ನಲ್ಲು ತೀರ್ಮಾನ ಆಗಲ್ಲ ಎಂದು ಸಿಟಿ ರವಿಗೆ ವಿಜಯೇಂದ್ರ ಜಾಡಿಸಿದ್ದಾರೆ.

ಬಿಜೆಪಿಯಲ್ಲಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡುತ್ತಿರುವುದರ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ.  ”BSY ಅವರಿಗೆ ಅಧಿಕಾರವಿಲ್ಲ, ಟಿಕೆಟ್ ಕೂಡ ಇಲ್ಲ. BSYರಿಗೆ ಟಿಕೆಟ್ ನಿರ್ಧರಿಸುವ ಹಕ್ಕಿಲ್ಲ. BSYರಿಗೆ ಪ್ರಚಾರ ಸಮಿತಿಯ ನೇತೃತ್ವವಿಲ್ಲ. BSYರಿಗೆ ವೇದಿಕೆಗಳಲ್ಲಿ ಜಾಗವಿಲ್ಲ. BSY ಅವರ ರಾಜ್ಯ ಪ್ರವಾಸಕ್ಕೆ ಅವಕಾಶ ಕೊಡಲಿಲ್ಲ. BSY ಬಿಜೆಪಿಗೆ ಅನಿವಾರ್ಯವಲ್ಲ ಎಂದು ಕಟೀಲ್ ಹೇಳುತ್ತಾರೆ. ಈ ಘಟನೆಗಳೇ ಈ ಹೇಳಿಕೆಗೆ ಸ್ಪೂರ್ತಿಯೇ ಬಿಜೆಪಿ? ಎಂದು ಪ್ರಶ್ನೆ ಮಾಡಿದ್ದು, ಇದರ ಜೊತೆಗೆ ವಿಜಯೇಂದ್ರ ಅವರ- ”ರಾಜ್ಯದಲ್ಲಿ ಯಡಿಯೂರಪ್ಪರನ್ನ ಬಿಟ್ಟು ಬಿಜೆಪಿಯನ್ನು ಅಧಿಕಾರಕ್ಕೆ ತರುವ ಎದೆಗಾರಿಕೆ ಯಾರಿಗೆ ಇದೆ?” ಎಂಬ ಹೇಳಿಕೆಯನ್ನು ಕಾಂಗ್ರೆಸ್ ಹಂಚಿಕೊಂಡಿದೆ.

ಸಿಟಿ ರವಿ- ವಿಜಯೇಂದ್ರ ಅವರು ಟಾಕ್ ವಾರ್ ಜೋರಾಗುತ್ತಿದ್ದಂತೆ ಮಧ್ಯ ಪ್ರವೇಶಿಸಿರುವ ಬಿಎಸ್‌ವೈ ಅದನ್ನು ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ. ”ಸಿಟಿ ರವಿ ಹೇಳಿದ್ದು ಸರಿ ಇದೆ. ಯಾವುದೇ ಟಿಕೆಟ್ ಆಕಾಂಕ್ಷಿಯ ತೀರ್ಮಾನ ಚುನಾವಣಾ ಸಮಿತಿ ಮಾಡುತ್ತದೆ ಹೊರತು, ನಾವ್ಯಾರು ತೀರ್ಮಾನ ಮಾಡೋಕಾಗೋದಿಲ್ಲ” ಎಂದು ಹೇಳುವ ಮೂಲಕ ಬಿಜೆಪಿಯಲ್ಲಿನ ಕದನಕ್ಕೆ ವಿರಾಮ ಘೋಷಿಸುವ ಪ್ರಯತ್ನ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...