Homeಕರ್ನಾಟಕಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

- Advertisement -
- Advertisement -

ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಎಂದರೆ ಬಿಎಸ್‌ವೈ ಎನ್ನುವ ಕಾಲವಿತ್ತು. ಆದರೆ ಅವರು ಪಕ್ಷದ ಅಣತಿಯಂತೆ ಮುಖ್ಯಮಂತ್ರಿ ಸ್ಥಾನವನ್ನೇ ಬಿಡಬೇಕಾಯಿತು. ಈಗ ತಮ್ಮ ಪುತ್ರನ ಒಂದು ಟಿಕೆಟ್‌ಗಾಗಿಯೂ ಕದನಕ್ಕೆ ಇಳಿಯುವ ಸ್ಥಿತಿ ನಿರ್ಮಾಣ ಆಗಿದೆ. ಬಿಎಸ್‌ವೈ ಸ್ಪರ್ಧೆ ಮಾಡುತ್ತಿದ್ದ ಶಿಕಾರಿಪುರ ಕ್ಷೇತ್ರದ ಟಿಕೆಟ್‌ ಅನ್ನು ತಮ್ಮ ಮಗ ವಿಜಯೇಂದ್ರನಿಗೆ ಕೊಡಿಸಲು ಪ್ಲ್ಯಾನ್ ಮಾಡಿದ್ದರು. ಆದರೆ ಅದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ತಕರಾರು ತಗೆದಿದ್ದಾರೆ.

ಸಿಟಿ ರವಿ ಹಾಗೂ ವಿಜಯೇಂದ್ರ ನಡುವೆ ಭರ್ಜರಿ ಟಾಕ್ ವಾರ್

ರಾಜ್ಯ ಬಿಜೆಪಿಯ ಭವಿಷ್ಯದ ನಾಯಕರಿಬ್ಬರ ನಡುವೆ, ಕೇವಲ ಒಂದು ಟಿಕೆಟ್ ವಿಚಾರಕ್ಕೆ ಕಿತ್ತಾಟ ನಡೆಯುತ್ತಿರುವುದು, ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ. ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಪುತ್ರನಿಗೆ ತಮ್ಮ ಕ್ಷೇತ್ರ ಶಿಕಾರಿಪುರದಿಂದಲೇ ಟಿಕೆಟ್ ಕೊಡಿಸಲು ಪ್ಲ್ಯಾನ್ ಹಾಕಿಕೊಂಡಿದ್ದಾರೆ. ಆದರೆ ಈ ಬಗ್ಗೆ ಸಿ.ಟಿ ರವಿ ಪ್ರಶ್ನೆ ಮಾಡುವ ಮೂಲಕ ಯಡಿಯೂರಪ್ಪ ಮತ್ತು ಅವರ ಮಗನ ವಿರುದ್ಧ ಯುದ್ಧ ಸಾರಿದ್ದಾರೆ.

ಬಿ.ಎಸ್ ಯಡಿಯೂರಪ್ಪ ಅವರು ಕಳೆದ ಅಧಿವೇಶನದಲ್ಲಿ ವಿಧಾನಸಭೆಗೆ ವಿದಾಯ ಹೇಳಿದ್ದಾರೆ. ಇತ್ತೀಚಿಗೆ ಅವರು, ಚುನಾವಣಾ ರಾಜಕೀಯದಿಂದ ನಿವೃತ್ತರಾದ ನಂತರ ತಮ್ಮ ಕಿರಿಯ ಪುತ್ರ ವಿಜಯೇಂದ್ರ ಅವರು 2023ರ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದರು. ಈಗ ಇದೇ ವಿಚಾರಕ್ಕೆ ಪಕ್ಷದಲ್ಲಿ ಕಿತ್ತಾಟಕ್ಕೆ ಕಾರಣವಾಗಿದೆ. ಎಲೆಕ್ಷನ್‌ಲ್ಲಿ ಟಿಕೆಟ್ ಯಾರಿಗೆ ಟಿಕೆಟ್ ಕೊಡಬೇಕು ಎನ್ನುವುದು ಮನೆಯಲ್ಲಿ ನಿರ್ಧಾರವಾಗಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಕರಾರು ತಗೆದಿದ್ದಾರೆ.

ಇದನ್ನೂ ಓದಿ: ಬಿಜೆಪಿ ವಿರುದ್ಧ ಬಿಆರ್‌ಎಸ್ ಪೋಸ್ಟರ್ ವಾರ್; ‘ಎಂಎಲ್‌ಎಗಳ ಬೇಟೆಗಾರ’ ಸಂತೋಷ್‌ ವಾಂಟೆಡ್ ಪೋಸ್ಟರ್ ವೈರಲ್

ಈ ಬಗ್ಗೆ ಇತ್ತೀಚೆಗೆ ವಿಜಯಪುರದಲ್ಲಿ ಮಾತನಾಡಿದ ಸಿ.ಟಿ ರವಿ, ಬಿಜೆಪಿಯಲ್ಲಿ ಟಿಕೆಟ್ ನೀಡುವ ಮಾನದಂಡದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ”ನಮ್ಮ ಪಕ್ಷದಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ವಿಚಾರ ಕುಟುಂಬದಲ್ಲಿ ತೀರ್ಮಾನವಾಗಲ್ಲ. ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಆಗುತ್ತೆ. ಸಮೀಕ್ಷೆಯ ಆಧಾರದ ಮೇಲೆ ಗೆಲ್ಲುವ ಮಾನದಂಡದ ಆಧರಿಸಿ ಟಿಕೆಟ್ ನೀಡುವ ಕುರಿತು ನಿರ್ಧರಿಸಲಾಗುತ್ತದೆ. ಆದರೆ ಕುಟುಂಬದಲ್ಲಿ ಸಮೀಕ್ಷೆ ನಡೆಯುವುದಿಲ್ಲ, ನಮ್ಮ ಪಕ್ಷದಲ್ಲಿ ಕಿಚನ್‌ನಲ್ಲಿ ತೀರ್ಮಾನ ತೆಗೆದುಕೊಳ್ಳಲ್ಲ. ನಾಯಕರ ಮಕ್ಕಳೆಂದ ಕಾರಣಕ್ಕೆ ಅವರಿಗೆ ಟಿಕೆಟ್ ಕೊಡಬೇಕಾ? ಎಂದು ಪ್ರಶ್ನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ವಿಜಯೇಂದ್ರ ಟಿಕೆಟ್ ನಿರ್ಧಾರವನ್ನು ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಹಿರಿಯ ನಾಯಕ ಯಡಿಯೂರಪ್ಪ ಅವರ ಆಟ ಇನ್ನೂ ಮುಂದೆ ನಡೆಯುವುದಿಲ್ಲ ಎನ್ನುವ ಸಂದೇಶವನ್ನು ಸಿಟಿ ರವಿ ನೀಡಿದ್ದಾರೆ.

ಸಿ.ಟಿ ರವಿ ತಕರಾರುಗಳಿಗೆ ಕೆಂಡವಾದ ವಿಜಯೇಂದ್ರ

ಈ ವಿಚಾರವಾಗಿ ಬಿಎಸ್‌ವೈ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಕೊಪ್ಪಳ ಜಿಲ್ಲೆಯ ಹನುಮಸಾಗರದಲ್ಲಿ ತಿರುಗೇಟು ನೀಡಿದ್ದಾರೆ. ”ಬಿಜೆಪಿ ಟಿಕೆಟ್ ವಿಚಾರ ಬಿಎಸ್‌ವೈ ಕಿಚನ್‌ನಲ್ಲು ಆಗೋಲ್ಲ, ಮತ್ತೊಬ್ಬರ ಕಿಚನ್‌ನಲ್ಲು ಆಗೋಲ್ಲ” ಎಂದು ಸಿಟಿ ರವಿಗೆ ತಿರುಗೇಟು ನೀಡಿದ್ದಾರೆ.

”ರಾಜಕಾರಣದಲ್ಲಿ ಶತ್ರುಗಳ ಸಂಖ್ಯೆ ಹೆಚ್ಚಾದಾಗಲೇ ನಾವು ಎತ್ತರಕ್ಕೆ ಬೆಳೆಯೋಕೆ ಸಾಧ್ಯ ಆಗೋದು” ಎಂದು ವಾಗ್ದಾಳಿ ನಡೆಸುವ ಮೂಲಕ ಸಿಟಿ ರವಿ ಅವರನ್ನು ತಮ್ಮ ಶತ್ರು ಎಂದು ಘೋಷಿಸಿದ್ದಾರೆ. ಬಿಜೆಪಿ ಕಟ್ಟಿದ್ದು ಬಿಎಸ್‌ವೈ ಅಂತ ಅವರಿಗೂ ನೆನಪಿರಲಿ ಎಂದು ತಮ್ಮ ತಂದೆಯ ಸ್ಥಾನಮಾನದ ಬಗ್ಗೆ ಸಿಟಿ ರವಿಗೆ ನೆನಪಿಸಿದ್ದಾರೆ.

ಈ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿಬೆಳಸಿದ್ದೇ ಯಡಿಯೂರಪ್ಪನವರು, ಅವರಿಗೆ ಟಿಕೆಟ್ ಹೇಗೆ ಕೊಡಬೇಕು ಅನ್ನೋದು ಗೊತ್ತಿದೆ. ಸಿ.ಟಿ ರವಿಯವರು ಹಿರಿಯರಿದ್ದಾರೆ. ಕರ್ನಾಟಕದಲ್ಲಿ ಯಡಿಯೂರಪ್ಪ ಅವರು ಎಷ್ಟು ದೊಡ್ಡವರೆಂದು ಅವರಿಗೂ ಗೊತ್ತಿದೆ. ಮೊದಲಿನಿಂದ ಪಕ್ಷ ಹೇಗೆ ಕಟ್ಟಿದ್ದಾರೆ ಎಂಬುವುದು ಗೊತ್ತಿದೆ. ಪಕ್ಷದಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಅನ್ನೋದು ಯಡಿಯೂರಪ್ಪ ಕಿಚನ್‌ನಲ್ಲು ತೀರ್ಮಾನ ಮಾಡಲ್ಲ, ಇನ್ನೊಬ್ಬರ ಕಿಚನ್‌ನಲ್ಲು ತೀರ್ಮಾನ ಆಗಲ್ಲ ಎಂದು ಸಿಟಿ ರವಿಗೆ ವಿಜಯೇಂದ್ರ ಜಾಡಿಸಿದ್ದಾರೆ.

ಬಿಜೆಪಿಯಲ್ಲಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡುತ್ತಿರುವುದರ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ.  ”BSY ಅವರಿಗೆ ಅಧಿಕಾರವಿಲ್ಲ, ಟಿಕೆಟ್ ಕೂಡ ಇಲ್ಲ. BSYರಿಗೆ ಟಿಕೆಟ್ ನಿರ್ಧರಿಸುವ ಹಕ್ಕಿಲ್ಲ. BSYರಿಗೆ ಪ್ರಚಾರ ಸಮಿತಿಯ ನೇತೃತ್ವವಿಲ್ಲ. BSYರಿಗೆ ವೇದಿಕೆಗಳಲ್ಲಿ ಜಾಗವಿಲ್ಲ. BSY ಅವರ ರಾಜ್ಯ ಪ್ರವಾಸಕ್ಕೆ ಅವಕಾಶ ಕೊಡಲಿಲ್ಲ. BSY ಬಿಜೆಪಿಗೆ ಅನಿವಾರ್ಯವಲ್ಲ ಎಂದು ಕಟೀಲ್ ಹೇಳುತ್ತಾರೆ. ಈ ಘಟನೆಗಳೇ ಈ ಹೇಳಿಕೆಗೆ ಸ್ಪೂರ್ತಿಯೇ ಬಿಜೆಪಿ? ಎಂದು ಪ್ರಶ್ನೆ ಮಾಡಿದ್ದು, ಇದರ ಜೊತೆಗೆ ವಿಜಯೇಂದ್ರ ಅವರ- ”ರಾಜ್ಯದಲ್ಲಿ ಯಡಿಯೂರಪ್ಪರನ್ನ ಬಿಟ್ಟು ಬಿಜೆಪಿಯನ್ನು ಅಧಿಕಾರಕ್ಕೆ ತರುವ ಎದೆಗಾರಿಕೆ ಯಾರಿಗೆ ಇದೆ?” ಎಂಬ ಹೇಳಿಕೆಯನ್ನು ಕಾಂಗ್ರೆಸ್ ಹಂಚಿಕೊಂಡಿದೆ.

ಸಿಟಿ ರವಿ- ವಿಜಯೇಂದ್ರ ಅವರು ಟಾಕ್ ವಾರ್ ಜೋರಾಗುತ್ತಿದ್ದಂತೆ ಮಧ್ಯ ಪ್ರವೇಶಿಸಿರುವ ಬಿಎಸ್‌ವೈ ಅದನ್ನು ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ. ”ಸಿಟಿ ರವಿ ಹೇಳಿದ್ದು ಸರಿ ಇದೆ. ಯಾವುದೇ ಟಿಕೆಟ್ ಆಕಾಂಕ್ಷಿಯ ತೀರ್ಮಾನ ಚುನಾವಣಾ ಸಮಿತಿ ಮಾಡುತ್ತದೆ ಹೊರತು, ನಾವ್ಯಾರು ತೀರ್ಮಾನ ಮಾಡೋಕಾಗೋದಿಲ್ಲ” ಎಂದು ಹೇಳುವ ಮೂಲಕ ಬಿಜೆಪಿಯಲ್ಲಿನ ಕದನಕ್ಕೆ ವಿರಾಮ ಘೋಷಿಸುವ ಪ್ರಯತ್ನ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...