Homeಕರ್ನಾಟಕಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

- Advertisement -
- Advertisement -

ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಎಂದರೆ ಬಿಎಸ್‌ವೈ ಎನ್ನುವ ಕಾಲವಿತ್ತು. ಆದರೆ ಅವರು ಪಕ್ಷದ ಅಣತಿಯಂತೆ ಮುಖ್ಯಮಂತ್ರಿ ಸ್ಥಾನವನ್ನೇ ಬಿಡಬೇಕಾಯಿತು. ಈಗ ತಮ್ಮ ಪುತ್ರನ ಒಂದು ಟಿಕೆಟ್‌ಗಾಗಿಯೂ ಕದನಕ್ಕೆ ಇಳಿಯುವ ಸ್ಥಿತಿ ನಿರ್ಮಾಣ ಆಗಿದೆ. ಬಿಎಸ್‌ವೈ ಸ್ಪರ್ಧೆ ಮಾಡುತ್ತಿದ್ದ ಶಿಕಾರಿಪುರ ಕ್ಷೇತ್ರದ ಟಿಕೆಟ್‌ ಅನ್ನು ತಮ್ಮ ಮಗ ವಿಜಯೇಂದ್ರನಿಗೆ ಕೊಡಿಸಲು ಪ್ಲ್ಯಾನ್ ಮಾಡಿದ್ದರು. ಆದರೆ ಅದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ತಕರಾರು ತಗೆದಿದ್ದಾರೆ.

ಸಿಟಿ ರವಿ ಹಾಗೂ ವಿಜಯೇಂದ್ರ ನಡುವೆ ಭರ್ಜರಿ ಟಾಕ್ ವಾರ್

ರಾಜ್ಯ ಬಿಜೆಪಿಯ ಭವಿಷ್ಯದ ನಾಯಕರಿಬ್ಬರ ನಡುವೆ, ಕೇವಲ ಒಂದು ಟಿಕೆಟ್ ವಿಚಾರಕ್ಕೆ ಕಿತ್ತಾಟ ನಡೆಯುತ್ತಿರುವುದು, ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ. ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಪುತ್ರನಿಗೆ ತಮ್ಮ ಕ್ಷೇತ್ರ ಶಿಕಾರಿಪುರದಿಂದಲೇ ಟಿಕೆಟ್ ಕೊಡಿಸಲು ಪ್ಲ್ಯಾನ್ ಹಾಕಿಕೊಂಡಿದ್ದಾರೆ. ಆದರೆ ಈ ಬಗ್ಗೆ ಸಿ.ಟಿ ರವಿ ಪ್ರಶ್ನೆ ಮಾಡುವ ಮೂಲಕ ಯಡಿಯೂರಪ್ಪ ಮತ್ತು ಅವರ ಮಗನ ವಿರುದ್ಧ ಯುದ್ಧ ಸಾರಿದ್ದಾರೆ.

ಬಿ.ಎಸ್ ಯಡಿಯೂರಪ್ಪ ಅವರು ಕಳೆದ ಅಧಿವೇಶನದಲ್ಲಿ ವಿಧಾನಸಭೆಗೆ ವಿದಾಯ ಹೇಳಿದ್ದಾರೆ. ಇತ್ತೀಚಿಗೆ ಅವರು, ಚುನಾವಣಾ ರಾಜಕೀಯದಿಂದ ನಿವೃತ್ತರಾದ ನಂತರ ತಮ್ಮ ಕಿರಿಯ ಪುತ್ರ ವಿಜಯೇಂದ್ರ ಅವರು 2023ರ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದರು. ಈಗ ಇದೇ ವಿಚಾರಕ್ಕೆ ಪಕ್ಷದಲ್ಲಿ ಕಿತ್ತಾಟಕ್ಕೆ ಕಾರಣವಾಗಿದೆ. ಎಲೆಕ್ಷನ್‌ಲ್ಲಿ ಟಿಕೆಟ್ ಯಾರಿಗೆ ಟಿಕೆಟ್ ಕೊಡಬೇಕು ಎನ್ನುವುದು ಮನೆಯಲ್ಲಿ ನಿರ್ಧಾರವಾಗಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಕರಾರು ತಗೆದಿದ್ದಾರೆ.

ಇದನ್ನೂ ಓದಿ: ಬಿಜೆಪಿ ವಿರುದ್ಧ ಬಿಆರ್‌ಎಸ್ ಪೋಸ್ಟರ್ ವಾರ್; ‘ಎಂಎಲ್‌ಎಗಳ ಬೇಟೆಗಾರ’ ಸಂತೋಷ್‌ ವಾಂಟೆಡ್ ಪೋಸ್ಟರ್ ವೈರಲ್

ಈ ಬಗ್ಗೆ ಇತ್ತೀಚೆಗೆ ವಿಜಯಪುರದಲ್ಲಿ ಮಾತನಾಡಿದ ಸಿ.ಟಿ ರವಿ, ಬಿಜೆಪಿಯಲ್ಲಿ ಟಿಕೆಟ್ ನೀಡುವ ಮಾನದಂಡದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ”ನಮ್ಮ ಪಕ್ಷದಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ವಿಚಾರ ಕುಟುಂಬದಲ್ಲಿ ತೀರ್ಮಾನವಾಗಲ್ಲ. ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಆಗುತ್ತೆ. ಸಮೀಕ್ಷೆಯ ಆಧಾರದ ಮೇಲೆ ಗೆಲ್ಲುವ ಮಾನದಂಡದ ಆಧರಿಸಿ ಟಿಕೆಟ್ ನೀಡುವ ಕುರಿತು ನಿರ್ಧರಿಸಲಾಗುತ್ತದೆ. ಆದರೆ ಕುಟುಂಬದಲ್ಲಿ ಸಮೀಕ್ಷೆ ನಡೆಯುವುದಿಲ್ಲ, ನಮ್ಮ ಪಕ್ಷದಲ್ಲಿ ಕಿಚನ್‌ನಲ್ಲಿ ತೀರ್ಮಾನ ತೆಗೆದುಕೊಳ್ಳಲ್ಲ. ನಾಯಕರ ಮಕ್ಕಳೆಂದ ಕಾರಣಕ್ಕೆ ಅವರಿಗೆ ಟಿಕೆಟ್ ಕೊಡಬೇಕಾ? ಎಂದು ಪ್ರಶ್ನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ವಿಜಯೇಂದ್ರ ಟಿಕೆಟ್ ನಿರ್ಧಾರವನ್ನು ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಹಿರಿಯ ನಾಯಕ ಯಡಿಯೂರಪ್ಪ ಅವರ ಆಟ ಇನ್ನೂ ಮುಂದೆ ನಡೆಯುವುದಿಲ್ಲ ಎನ್ನುವ ಸಂದೇಶವನ್ನು ಸಿಟಿ ರವಿ ನೀಡಿದ್ದಾರೆ.

ಸಿ.ಟಿ ರವಿ ತಕರಾರುಗಳಿಗೆ ಕೆಂಡವಾದ ವಿಜಯೇಂದ್ರ

ಈ ವಿಚಾರವಾಗಿ ಬಿಎಸ್‌ವೈ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಕೊಪ್ಪಳ ಜಿಲ್ಲೆಯ ಹನುಮಸಾಗರದಲ್ಲಿ ತಿರುಗೇಟು ನೀಡಿದ್ದಾರೆ. ”ಬಿಜೆಪಿ ಟಿಕೆಟ್ ವಿಚಾರ ಬಿಎಸ್‌ವೈ ಕಿಚನ್‌ನಲ್ಲು ಆಗೋಲ್ಲ, ಮತ್ತೊಬ್ಬರ ಕಿಚನ್‌ನಲ್ಲು ಆಗೋಲ್ಲ” ಎಂದು ಸಿಟಿ ರವಿಗೆ ತಿರುಗೇಟು ನೀಡಿದ್ದಾರೆ.

”ರಾಜಕಾರಣದಲ್ಲಿ ಶತ್ರುಗಳ ಸಂಖ್ಯೆ ಹೆಚ್ಚಾದಾಗಲೇ ನಾವು ಎತ್ತರಕ್ಕೆ ಬೆಳೆಯೋಕೆ ಸಾಧ್ಯ ಆಗೋದು” ಎಂದು ವಾಗ್ದಾಳಿ ನಡೆಸುವ ಮೂಲಕ ಸಿಟಿ ರವಿ ಅವರನ್ನು ತಮ್ಮ ಶತ್ರು ಎಂದು ಘೋಷಿಸಿದ್ದಾರೆ. ಬಿಜೆಪಿ ಕಟ್ಟಿದ್ದು ಬಿಎಸ್‌ವೈ ಅಂತ ಅವರಿಗೂ ನೆನಪಿರಲಿ ಎಂದು ತಮ್ಮ ತಂದೆಯ ಸ್ಥಾನಮಾನದ ಬಗ್ಗೆ ಸಿಟಿ ರವಿಗೆ ನೆನಪಿಸಿದ್ದಾರೆ.

ಈ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿಬೆಳಸಿದ್ದೇ ಯಡಿಯೂರಪ್ಪನವರು, ಅವರಿಗೆ ಟಿಕೆಟ್ ಹೇಗೆ ಕೊಡಬೇಕು ಅನ್ನೋದು ಗೊತ್ತಿದೆ. ಸಿ.ಟಿ ರವಿಯವರು ಹಿರಿಯರಿದ್ದಾರೆ. ಕರ್ನಾಟಕದಲ್ಲಿ ಯಡಿಯೂರಪ್ಪ ಅವರು ಎಷ್ಟು ದೊಡ್ಡವರೆಂದು ಅವರಿಗೂ ಗೊತ್ತಿದೆ. ಮೊದಲಿನಿಂದ ಪಕ್ಷ ಹೇಗೆ ಕಟ್ಟಿದ್ದಾರೆ ಎಂಬುವುದು ಗೊತ್ತಿದೆ. ಪಕ್ಷದಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಅನ್ನೋದು ಯಡಿಯೂರಪ್ಪ ಕಿಚನ್‌ನಲ್ಲು ತೀರ್ಮಾನ ಮಾಡಲ್ಲ, ಇನ್ನೊಬ್ಬರ ಕಿಚನ್‌ನಲ್ಲು ತೀರ್ಮಾನ ಆಗಲ್ಲ ಎಂದು ಸಿಟಿ ರವಿಗೆ ವಿಜಯೇಂದ್ರ ಜಾಡಿಸಿದ್ದಾರೆ.

ಬಿಜೆಪಿಯಲ್ಲಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡುತ್ತಿರುವುದರ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ.  ”BSY ಅವರಿಗೆ ಅಧಿಕಾರವಿಲ್ಲ, ಟಿಕೆಟ್ ಕೂಡ ಇಲ್ಲ. BSYರಿಗೆ ಟಿಕೆಟ್ ನಿರ್ಧರಿಸುವ ಹಕ್ಕಿಲ್ಲ. BSYರಿಗೆ ಪ್ರಚಾರ ಸಮಿತಿಯ ನೇತೃತ್ವವಿಲ್ಲ. BSYರಿಗೆ ವೇದಿಕೆಗಳಲ್ಲಿ ಜಾಗವಿಲ್ಲ. BSY ಅವರ ರಾಜ್ಯ ಪ್ರವಾಸಕ್ಕೆ ಅವಕಾಶ ಕೊಡಲಿಲ್ಲ. BSY ಬಿಜೆಪಿಗೆ ಅನಿವಾರ್ಯವಲ್ಲ ಎಂದು ಕಟೀಲ್ ಹೇಳುತ್ತಾರೆ. ಈ ಘಟನೆಗಳೇ ಈ ಹೇಳಿಕೆಗೆ ಸ್ಪೂರ್ತಿಯೇ ಬಿಜೆಪಿ? ಎಂದು ಪ್ರಶ್ನೆ ಮಾಡಿದ್ದು, ಇದರ ಜೊತೆಗೆ ವಿಜಯೇಂದ್ರ ಅವರ- ”ರಾಜ್ಯದಲ್ಲಿ ಯಡಿಯೂರಪ್ಪರನ್ನ ಬಿಟ್ಟು ಬಿಜೆಪಿಯನ್ನು ಅಧಿಕಾರಕ್ಕೆ ತರುವ ಎದೆಗಾರಿಕೆ ಯಾರಿಗೆ ಇದೆ?” ಎಂಬ ಹೇಳಿಕೆಯನ್ನು ಕಾಂಗ್ರೆಸ್ ಹಂಚಿಕೊಂಡಿದೆ.

ಸಿಟಿ ರವಿ- ವಿಜಯೇಂದ್ರ ಅವರು ಟಾಕ್ ವಾರ್ ಜೋರಾಗುತ್ತಿದ್ದಂತೆ ಮಧ್ಯ ಪ್ರವೇಶಿಸಿರುವ ಬಿಎಸ್‌ವೈ ಅದನ್ನು ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ. ”ಸಿಟಿ ರವಿ ಹೇಳಿದ್ದು ಸರಿ ಇದೆ. ಯಾವುದೇ ಟಿಕೆಟ್ ಆಕಾಂಕ್ಷಿಯ ತೀರ್ಮಾನ ಚುನಾವಣಾ ಸಮಿತಿ ಮಾಡುತ್ತದೆ ಹೊರತು, ನಾವ್ಯಾರು ತೀರ್ಮಾನ ಮಾಡೋಕಾಗೋದಿಲ್ಲ” ಎಂದು ಹೇಳುವ ಮೂಲಕ ಬಿಜೆಪಿಯಲ್ಲಿನ ಕದನಕ್ಕೆ ವಿರಾಮ ಘೋಷಿಸುವ ಪ್ರಯತ್ನ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...