Homeಮುಖಪುಟಮೂಡಿಗೆರೆ: ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ - ವಿಜಯ ಸಂಕಲ್ಪ ಯಾತ್ರೆ ರದ್ದು

ಮೂಡಿಗೆರೆ: ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ – ವಿಜಯ ಸಂಕಲ್ಪ ಯಾತ್ರೆ ರದ್ದು

- Advertisement -
- Advertisement -

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಯವರ ಪರ ಮತ್ತು ವಿರೋಧಿ ಬಣದ ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿ ತಳ್ಳಾಟ-ನೂಕಾಟ ನಡೆಸಿದ ಪರಿಣಾಮ ಇಂದು ಮೂಡಿಗೆರೆಯಲ್ಲಿ ನಡೆಯಬೇಕಿದ್ದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ರದ್ದಾಗಿದೆ.

ಇಂದು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಆಗಮಿಸಿದ್ದರು. ಅವರು ಶೃಂಗೇರಿಯಿಂದ ಮೂಡಿಗೆರೆ ತಲುಪಿದೊಡನೆ ಕಾರ್ಯಕರ್ತರ ಗುಂಪೊಂದು ಬೇಡ ಬೇಡ ಕುಮಾರಸ್ವಾಮಿ ಬೇಡ, ಬೇಕು ಬೇಕು ಬಿಜೆಪಿ ಬೇಕು ಎಂಬ ಘೋಷಣೆಗಳನ್ನು ಕೂಗಿದರು. ಕುಮಾರಸ್ವಾಮಿ ವಿರುದ್ಧ ಫ್ಲೆಕಾರ್ಡ್‌ಗಳನ್ನು ಪ್ರದರ್ಶಿಸಿ, ಕಾರಿಗೆ ಮುತ್ತಿಗೆ ಹಾಕಿದರು. ಕೂಡಲೇ ಮತ್ತೊಂದು ಗುಂಪು ‘ಬೇಕೇ ಬೇಕು ಕುಮಾರಸ್ವಾಮಿ ಬೇಕು’ ಎಂದು ಘೋಷಣೆಗಳನ್ನು ಕೂಗಿದರು. ಇದರಿಂದ ಬಿಗುವಿನ ವಾತವಾರಣ ನಿರ್ಮಾಣವಾಯಿತು.

ಸ್ಥಳದಲ್ಲಿ ತಳ್ಳಾಟ, ನೂಕಾಟ ನಡೆಯಿತು. ನೂಕು ನುಗ್ಗಲು  ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಯಡಿಯೂರಪ್ಪನವರು ಕಾರಿನಿಂದ ಇಳಿಯದೆ ಅಲ್ಲಿಂದ ಚಿಕ್ಕಮಗಳೂರಿಗೆ ತೆರಳಿದರು. ಸಂಕಲ್ಪ ಯಾತ್ರೆ ಮೊಟಕುಗೊಂಡಿತು. ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಸಿ.ಕಲ್ಮರುಡಪ್ಪ, ಎಂ.ಕೆ.ಪ್ರಾಣೇಶ್‌ ಮೊದಲಾದವರು ಇದ್ದರು ಸಹ ಪರಿಸ್ಥಿತಿ ತಿಳಿಗೊಳಿಸಲು ಸಾಧ್ಯವಾಗಲಿಲ್ಲ.

ಇತ್ತೀಚೆಗೆ ಕೋಲಾರದಲ್ಲಿಯೂ ಸಹ ನಿರೀಕ್ಷಿತ ಜನ ಸೇರದ ಕಾರಣ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ರದ್ದಾಗಿತ್ತು. ಆ ಪಟ್ಟಿಗೆ ಮೂಡಿಗೆರೆ ಸಹ ಸೇರಿಕೊಂಡಿದೆ.

ತದನಂತರ ಪತ್ರಿಕಾ ಗೋಷ್ಟಿ ನಡೆಸಿದ ಎಂ.ಪಿ ಕುಮಾರಸ್ವಾಮಿಯವರು “ನಾನೊಬ್ಬ ದಲಿತ ಎನ್ನುವ ಕಾರಣದಿಂದ ಪಕ್ಷದಲ್ಲಿ ನನ್ನ ವಿರುದ್ದ ಕೆಲಸವರು ಪಿತೂರಿ ನಡೆಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ನನ್ನಿಂದಾಗಿ ಪಕ್ಷದ ನಾಯಕರಿಗೆ ಮುಜುಗರ ಆಗಿದ್ದಕ್ಕೆ ಕ್ಷಮೆ ಯಾಚಿಸಿರುವ ಅವರು, ಕ್ಷೇತ್ರದಲ್ಲಿ ಬಹುತೇಕ ವಿಶ್ವಾಸ ನನಗಿದೆ. ಆದರೆ ಕೆಲವರು ಸೋಲಿಸಬೇಕೆಂದು ಪಿತೂರಿ ಮಾಡುತ್ತಿದ್ದಾರೆ ಎಂದರು.

ಘಟನೆಯ ನಂತರವೂ ಬಿ.ಎಸ್ ಯಡಿಯೂರಪ್ಪನವರು ನನ್ನನ್ನು ಹತ್ತಿರಕ್ಕೆ ಕರೆದು ನೀನೆ ಕ್ಷೇತ್ರದ ಅಭ್ಯರ್ಥಿ ಮತ್ತು ನೀನು ಗೆಲ್ಲುತ್ತೀಯ ಎಂದು ಅಭಯ ನೀಡಿದ್ದಾರೆ ಎಂದರು.

ಶಾಸಕ ಎಂ.ಪಿ ಕುಮಾರಸ್ವಾಮಿಯವರ ವಿರುದ್ಧ ಬಿಜೆಪಿಯ ಬಣವೊಂದು ಬಹಳ ಹಿಂದಿನಿಂದಲೂ ಕೆಲಸ ಮಾಡುತ್ತಿದ್ದು, ಈ ಬಾರಿ ಅವರಿಗೆ ಬಿಜೆಪಿ ಟಿಕೆಟ್ ನೀಡಬಾರದೆಂದು ಆಗ್ರಹಿಸಿದೆ. ಇನ್ನು ಎಂ.ಪಿ ಕುಮಾರಸ್ವಾಮಿಯವರು ಸಹ ಬಿಜೆಪಿ ಪಕ್ಷದೊಂದಿಗೆ ಅಷ್ಟಕಷ್ಟೆ ಎನ್ನುವ ಸಂಬಂಧ ಹೊಂದಿದ್ದಾರೆ.

ಎಂ.ಪಿ ಕುಮಾರಸ್ವಾಮಿಯವರು 2021ರಲ್ಲಿ ‘ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ವ್ಯಾಪ್ತಿಗೆ ಮೂಡಿಗೆರೆ ಕ್ಷೇತ್ರವನ್ನು ಸೇರಿಸಿ, ಮನೆ, ಜಮೀನು ಮತ್ತು ಬೆಳೆಹಾನಿ ಆದವರಿಗೆ ಪರಿಹಾರ ನೀಡಿ’ ಎಂದು ಒತ್ತಾಯಿಸಿ ವಿಧಾನಸೌಧದ ಮುಂದಿನ ಗಾಂಧಿ ಪ್ರತಿಮೆ ಎದುರು ತಮ್ಮದೇ ಸರ್ಕಾರದ ವಿರುದ್ಧ ಏಕಾಂಗಿಯಾಗಿ ಧರಣಿ ನಡೆಸಿ ಗಮನ ಸೆಳೆದಿದ್ದರು.

ಅಲ್ಲದೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಪತ್ರಿಕಾ ಹೇಳಿಕೆ ನೀಡಿ ಖಂಡಿಸಿದ್ದರು. “ಇತ್ತೀಚೆಗೆ ದ್ವೇಷದ ರಾಜಕಾರಣ ಹೆಚ್ಚುತ್ತಿದೆ. ಇದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದುದು. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ, ಆಡಳಿತ ಪಕ್ಷಗಳು ಹೇಗಿರಬೇಕೆಂದು ಹಿಂದಿನ ನಾಯಕರು ಮಾದರಿ ಹಾಕಿಕೊಟ್ಟಿದ್ದಾರೆ. ಅಂತಹ ನಾಯಕರನ್ನು ಟೀಕಿಸುವುದು ಸರಿಯಲ್ಲ” ಎಂದಿದ್ದರು.

ಎಂ.ಪಿ ಕುಮಾರಸ್ವಾಮಿಯವರ ಕಳೆದ ವರ್ಷ ತನ್ನ ಮೇಲೆ ಹಲ್ಲೆಯಾಗಿದೆ ಎಂದು ದೂರು ನೀಡಿದ್ದರು. ಆನೆ ನಿಗ್ರಹ ಕೆಲಸದಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಕೆಲ ಗ್ರಾಮಸ್ಥರು ಅವರ ಮೇಲೆ ಹಲ್ಲೆ ನಡೆಸಿದ್ದರು. ಹಾಗಾಗಿ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ನೆಹರು ಕುರಿತು ಸಿ.ಟಿ ರವಿ ಅವಹೇಳನಕಾರಿ ಹೇಳಿಕೆಗೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪರೋಕ್ಷ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...