Homeಮುಖಪುಟನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

ನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

- Advertisement -
- Advertisement -

ಕೆನಡಾದ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮ ದಾಖಲಾತಿಯ ಕುರಿತಾದ ದಾಖಲೆಪತ್ರಗಳು ನಕಲಿಯೆಂಬುದನ್ನು ದೇಶದ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಗಡಿಪಾರಿನ ಭೀತಿಯನ್ನು ಎದುರಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕೆನಡಾದ ಗಡಿ ಭದ್ರತಾ ಏಜೆನ್ಸಿ (ಸಿಬಿಎಸ್ಎ)ಯಿಂದ ಗಡಿಪಾರು ಪತ್ರಗಳು ಬಂದಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೆನಡಿಯನ್ ಬಾರ್ಡರ್ ಸೆಕ್ಯುರಿಟಿ ಏಜೆನ್ಸಿಯು ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಿತು, ಅದು ಅವರ ಪ್ರಸ್ತಾಪ ಪತ್ರಗಳು ಅಧಿಕೃತವಲ್ಲ ಎಂದು ಬಹಿರಂಗಪಡಿಸಿತು.

ಮಾಧ್ಯಮ ವರದಿಗಳ ಪ್ರಕಾರ, ಜಲಂಧರ್‌ನಲ್ಲಿರುವ ಶೈಕ್ಷಣಿಕ ವಲಸೆ ಸೇವಾ ಸಂಸ್ಥೆಯ ಮೂಲಕ ಸುಮಾರು 700 ವಿದ್ಯಾರ್ಥಿಗಳು ಕೆನಡಾದಲ್ಲಿ ಅಧ್ಯಯನ ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಬ್ರಿಜೇಶ್ ಮಿಶ್ರಾ ನೇತೃತ್ವದ ಈ ಸಂಸ್ಥೆಯು ಕೆನಡದ ಪ್ರತಿಷ್ಠಿ ಶಿಕ್ಷಣ ಸಂಸ್ಥೆ ಹಂಬರ್ ಕಾಲೇಜ್‌ನಲ್ಲಿ ದಾಖಲಾತಿ ಶುಲ್ಕ ಸೇರಿದಂತೆ ಎಲ್ಲಾ ವೆಚ್ಚಗಳಿಗಾಗಿ 16 ಲಕ್ಷ ರೂ.ಗೂ ಅಧಿಕ ಶುಲ್ಕವನ್ನು ಪ್ರತಿ ವಿದ್ಯಾರ್ಥಿಗೂ ವಿಧಿಸುತ್ತಿತ್ತು. ಆದರೆ ವಿಮಾನಯಾನದರ ಹಾಗೂ ಭದ್ರತಾ ಠೇವಣಿಗಳನ್ನು ಪ್ರತ್ಯೇಕವಾಗಿ ವಿಧಿಸುತ್ತಿತ್ತು.

ಇದನ್ನೂ ಓದಿ: ಬೆಂಗಳೂರು: ನಕಲಿ ಅಂಕಪಟ್ಟಿ ದಂಧೆ ಬಯಲಿಗೆಳೆದ ಪೊಲೀಸರು

ಈ ವಿದ್ಯಾರ್ಥಿಗಳು ಅಧ್ಯಯನದ ಆಧಾರದಲ್ಲಿ 2018-19ರ ಸಾಲಿನಲ್ಲಿ ಕೆನಡಾಕ್ಕೆ ತೆರಳಿದ್ದರು. ಈ ವಿದ್ಯಾರ್ಥಿಗಳು ಕೆನಡಾದಲ್ಲಿ ಖಾಯಂ ವಾಸ್ತವ್ಯಕ್ಕಾಗಿ ಅರ್ಜಿ ಸಲ್ಲಿಸಿದಾಗ, ಈ ವೀಸಾ ವಂಚನೆ ಬೆಳಕಿಗೆ ಬಂದಿದೆ. ಈ ಸಂದರ್ಭದಲ್ಲಿ ಪ್ರವೇಶ ಪತ್ರಗಳನ್ನು ಕೆನಡಾದ ಗಡಿ ಭದ್ರತಾ ಏಜೆನ್ಸಿ ಪರಿಶೀಲಿಸಿದಾಗ ಅವು ನಕಲಿಯೆಂಬುದು ಬೆಳಕಿಗೆ ಬಂದಿದೆ.

ಈ ವಿದ್ಯಾರ್ಥಿಗಳು ಸಲ್ಲಿಸಿದ ಆಡ್ಮಿಶನ್ ಆಫರ್‌ಗೆ ಸಂಬಂಧಿಸಿದ ದಾಖಲಾತಿ ಪತ್ರಗಳು ನಕಲಿಯೆಂದು ಮನವರಿಕೆಯಾದ ಶಿಕ್ಷಣ ಸಂಸ್ಥೆಗಳು ಅವರನ್ನು ಬೇರೆ ಕಾಲೇಜುಗಳಿಗೆ ಹೋಗುವಂತೆ ಸೂಚನೆ ನೀಡಿದ್ದವು. ಹೀಗೆ ಕಾಲೇಜು ಬದಲಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಯೂ ಗಣನೀಯವಾಗಿದೆ ಎಂಬ ವಿಚಾರವು ಈಗ ಬೆಳಕಿಗೆ ಬಂದಿದೆ.

ಕಳೆದ ಆರು ತಿಂಗಳಿನಿಂದ ಮಿಶ್ರಾ ಅವರ ಕಚೇರಿಯನ್ನು ಮುಚ್ಚಲಾಗಿದೆ ಎಂದು ಜಲಂಧರ್ ಪೊಲೀಸರು ಗುರುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜಲಂಧರ್ ಡೆಪ್ಯುಟಿ ಕಮಿಷನರ್ ಜಸ್ಪ್ರೀತ್ ಸಿಂಗ್ ಅವರು ಗುರುವಾರ ಶಿಕ್ಷಣ ವಲಸೆ ಸೇವೆಗಳಲ್ಲಿ ಮಿಶ್ರಾ ಅವರ ಪಾಲುದಾರರಲ್ಲಿ ಒಬ್ಬರಾದ ರಾಹುಲ್ ಭಾರ್ಗವ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.

ಈ ಬಗ್ಗೆ ತಜ್ಞರೊಬ್ಬರು ಮಾತನಾಡಿದ್ದು, ”ಈ ರೀತಿಯ ವಂಚನೆ, ಕೆನಡಾದಲ್ಲಿ ಮೊದಲ ಬಾರಿಗೆ ಕಂಡುಬಂದಿದೆ. ಕೆನಡಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಿವಿಧ ಉದ್ದೇಶಗಳಿಗಾಗಿ ಅರ್ಜಿ ಹಾಕುತ್ತಾರೆ. ಇದರಿಂದಾಗಿ ಈ ರೀತಿಯ ದೊಡ್ಡ ವಂಚನೆಯಾಗಿದೆ” ಎಂದು ಹೇಳಿದ್ದಾರೆ.

”ಇಂತಹ ವಂಚನೆಗಳಲ್ಲಿ ಕಾಲೇಜುಗಳ ನಕಲಿ ಆಫರ್ ಲೆಟರ್‌ಗಳನ್ನು ಪಡೆಯುವುದರಿಂದ ಹಿಡಿದು ವೀಸಾ ಪಡೆಯಲು ವಿದ್ಯಾರ್ಥಿಗಳಿಗೆ ನಕಲಿ ಶುಲ್ಕ ಪಾವತಿ ರಸೀದಿಗಳನ್ನು ಒದಗಿಸುವವರೆಗೆ ಅನೇಕ ಅಂಶಗಳು ಒಳಗೊಂಡಿವೆ . ಕಾಲೇಜುಗಳಿಗೆ ಶುಲ್ಕವನ್ನು ಪಾವತಿಸಿದ ನಂತರವೇ ವೀಸಾಗಳನ್ನು ನೀಡಲಾಗುತ್ತದೆ” ಎಂದು ಜಲಂಧರ್ ಮೂಲದ ಸಮಾಲೋಚಕರೊಬ್ಬರು” ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...