Homeಮುಖಪುಟತಮಿಳು ನಾಡು: ಕೋಮುವಾದ ಬಿತ್ತಿದರೂ ಫಲ ನೀಡದ ಬಿಜೆಪಿಗರ ಸಂಕಟ

ತಮಿಳು ನಾಡು: ಕೋಮುವಾದ ಬಿತ್ತಿದರೂ ಫಲ ನೀಡದ ಬಿಜೆಪಿಗರ ಸಂಕಟ

- Advertisement -
- Advertisement -

ಕೋಮವಾದವನ್ನು ಬಿತ್ತಿ ಕೋಮು ಧ್ರುವೀಕರಣದ ಬೆಳೆ ತೆಗೆವ ಬಿಜೆಪಿ ಪಕ್ಷ ಆ ಯೋಜನೆಗಳ ಮೂಲಕವೇ ದೇಶದ ಹಲವೆಡೆ ಅಧಿಕಾರದ ಚುಕ್ಕಾಣಿ ಹಿಡಿದಿರುವುದಕ್ಕೆ ಸಾಕಷ್ಟು ಉದಾಹರಣೆಗಳಿವೆ. 1990 ಸೆಪ್ಟೆಂಬರ್ 25ರಂದು ಲಾಲ್ ಕೃಷ್ಣ ಅಡ್ವಾನಿ ಸೋಮನಾಥದಿಂದ ಅಯೋಧ್ಯೆಯವರೆಗೆ ರಥಯಾತ್ರೆ ಆರಂಭಿಸಿದ್ದರು. ಆ ರಥಯಾತ್ರೆ ನಡೆದ ದಾರಿಯಲ್ಲೆಲ್ಲ ರಕ್ತದ ಕಲೆಗಳಿವೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ರಥಯಾತ್ರೆಯ ಬೆನ್ನಿಗೆ 1992ರ ಬಾಬರಿ ಮಸೀದಿ ಧ್ವಂಸ ಹಾಗೂ ನಂತರ ನಡೆದ ಗಲಭೆಗಳ ರಕ್ತಪಾತದಲ್ಲಿ ಮೃತಪಟ್ಟವರ ಸಂಖ್ಯೆ 10,000ಕ್ಕೂ ಹೆಚ್ಚು ಎನ್ನುತ್ತವೆ ಹಲವು ವರದಿಗಳು. ಇನ್ನು ಗಾಯಗೊಂಡವರ ಮತ್ತು ಆಸ್ತಿಪಾಸ್ತಿ ಕಳೆದುಕೊಂಡವರ ಸಂಖ್ಯೆ ಅಸಂಖ್ಯಾತ.

2002ರ ಗುಜರಾತಿನ ಗೋದ್ರಾ ಹತ್ಯಾಕಾಂಡವನ್ನು ಈ ದೇಶ ಅಷ್ಟು ಸುಲಭಕ್ಕೆ ಮರೆಯಲು ಸಾಧ್ಯವೇ? ಈ ಎರಡೂ ಹತ್ಯಾಕಾಂಡಕ್ಕೆ ಕಾರಣವಾದದ್ದು ಬಿಜೆಪಿಯ ಕೋಮುವಾದ ಎಂಬ ಏಕೈಕ ಅಜೆಂಡ ಮತ್ತು ಈ ಅಜೆಂಡ ನೀಡಿದ ಫಲವೇ ಇಂದು ಉತ್ತರಪ್ರದೇಶ ಮತ್ತು ಗುಜರಾತಿನಲ್ಲಿ ದೀರ್ಘಾವಧಿಯ ಅಧಿಕಾರದ ಚುಕ್ಕಾಣಿ. 2017ರ ಉತ್ತರಪ್ರದೇಶ ಚುನಾವಣೆಗೆ ಪೂರ್ವಭಾವಿಯಾಗಿ 2013ರಲ್ಲೇ ಬಿಜೆಪಿಯಿಂದ ಪ್ರಯೋಜಿಸಲ್ಪಟ್ಟಿದ್ದ, 80 ಜನರ ಸಾವಿಗೆ ಕಾರಣವಾಗಿದ್ದ ಮುಜಫರ್ ನಗರದ ಕೋಮುಗಲಭೆಯನ್ನೂ ಇಲ್ಲಿ ಸ್ಮರಿಸಬಹುದು.

ಇನ್ನು ಕರ್ನಾಟಕದಲ್ಲೂ ಹುಬ್ಬಳ್ಳಿಯ ಈದ್ಗಾ ಮೈದಾನದ ಗಲಾಟೆ, ಚಿಕ್ಕಮಗಳೂರಿನ ದತ್ತಪೀಠ ವಿವಾದ ಬಿಜೆಪಿ ಪಾಲಿಗೆ ಚಿನ್ನದ ಗಣಿ ಎನ್ನಲು ಅಡ್ಡಿ ಇಲ್ಲ. ಈ ವಿವಾದಗಳು ಹುಟ್ಟಿದ ವರ್ಷಗಳನ್ನೂ ಹಾಗೂ ಕರ್ನಾಟಕದಲ್ಲಿ ಬಿಜೆಪಿಯ ಅಧಿಕಾರದ ಹಿಡಿದು ಗಟ್ಟಿಯಾಗುತ್ತಾ ಸಾಗಿದ್ದನ್ನು ತುಲನೆ ಮಾಡಿ ಗಮನಿಸಿದರೆ ಕೋಮುಗಲಭೆ ಮತ್ತು ಅಧಿಕಾರದ ಜೊತೆಗಿನ ಬಿಜೆಪಿಯ ನಯವಾದ ಆಟ ಸ್ಪಷ್ಟವಾಗಿ ಅರ್ಥವಾಗುತ್ತದೆ. ಬಿಜೆಪಿಯ ಈ ತಂತ್ರಗಾರಿಕೆ ಹಲವು ರಾಜ್ಯಗಳಲ್ಲಿ ಅವರ ಕೈಹಿಡಿದಿದೆ ನಿಜ. ಆದರೆ, ತಮಿಳುನಾಡು ಮಾತ್ರ ಜಪ್ಪಯ್ಯ ಎಂದರೂ ಇವರ ಆಟಕ್ಕೆ ಜಗ್ಗುತ್ತಿಲ್ಲ.

2020ರಲ್ಲಿ ಅಣ್ಣಾಮಲೈ ಎಂಬ ಮಾಜಿ ಐಪಿಎಸ್ ಅಧಿಕಾರಿಯನ್ನು ತಮಿಳುನಾಡಿನ ಬಿಜೆಪಿಗೆ ರಾಜ್ಯಾದ್ಯಕ್ಷನನ್ನಾಗಿ ನೇಮಕ ಮಾಡಲಾಗಿತ್ತು. ಬಿಜೆಪಿಯ ಸಾಂಪ್ರದಾಯಿಕ ಅಸ್ತ್ರವನ್ನೇ ಅಲ್ಲೂ ಪ್ರಯೋಗಿಸಿದ್ದ ಅಣ್ಣಾಮಲೈ 2021ರಲ್ಲಿ ಕ್ರೈಸ್ತರ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನೇ ಮುಂದಿಟ್ಟು, ಇದೊಂದು ಕೊಲೆ ಎಂದು ಜನಾಭಿಪ್ರಾಯ ರೂಪಿಸಿ ಧ್ರುವೀಕರಣ ಮಾಡಲು ಮುಂದಾಗಿ ಕೊನೆಗೆ ಜನರಿಂದಲೇ ಛೀಮಾರಿ ಹಾಕಿಸಿಕೊಂಡಿದ್ದರು. ಇದರ ಬೆನ್ನಿಗೆ ಸಾಲುಸಾಲು ಕೋಮುವಾದಿ ಗಲಭೆಗಳಿಗೆ ಅವರು ಬೀಜ ಬಿತ್ತಿದ್ದರೇನೋ ನಿಜ; ಆದರೆ, ಅದ್ಯಾವುದೂ ನಿರೀಕ್ಷಿತ ಫಲ ಕೊಡಲಿಲ್ಲ. ಪರಿಣಾಮ ಅಣ್ಣಾಮಲೈ ಇದೀಗ ಬಿಜೆಪಿಯ ಮತ್ತೊಂದು ಪ್ರಮುಖ ಅಸ್ತ್ರವಾದ ಸುಳ್ಳು ಸುದ್ದಿಯ ಮೊರೆ ಹೋಗಿದ್ದಾರೆ. ತಮಿಳರಿಂದ ಬಿಹಾರಿ ಕಾರ್ಮಿಕರ ಮೇಲೆ ದಾಳಿ ಎಂಬ ಬುರುಡೆ (ಸುಳ್ಸುದ್ದಿ) ಬಿಟ್ಟು ತಮಿಳರ ಸ್ವಾಭಿಮಾನವನ್ನು ಕೆಣಕಿ ಪೇಚಿಗೆ ಸಿಲುಕಿದ್ದಾರೆ. ಪರಿಣಾಮ ಇದೀಗ ಅವರ ರಾಜಕೀಯ ಭವಿಷ್ಯವೇ ಡೋಲಾಯಮಾನವಾಗಿದೆ.

ಏನಿದು ಸುಳ್ಳು ಸುದ್ದಿ ಪ್ರಕರಣ?

ಮಾರ್ಚ್ 1 ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಹುಟ್ಟುಹಬ್ಬ. ಸ್ಟಾಲಿನ್ ಹುಟ್ಟುಹಬ್ಬಕ್ಕೆ ಶುಭ ಕೋರಲೆಂದು ಬಿಹಾರದ ಉಪಮುಖ್ಯಮಂತ್ರಿ ಹಾಗೂ ಆರ್‌ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ತಮಿಳುನಾಡಿಗೆ ಆಗಮಿಸಿದ್ದರು.

ಆದರೆ, ಇದೇ ದಿನ ಬಿಹಾರದ ಬಿಜೆಪಿ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ “ತಮಿಳುನಾಡಿನಲ್ಲಿ ಹಿಂದಿ ಮಾತನಾಡಿದ್ದಕ್ಕಾಗಿ 12 ಜನರನ್ನು ಒಂದೇ ಕೋಣೆಯಲ್ಲಿ ಕೂಡಿಹಾಕಿ ನೇಣು ಬಿಗಿದು ಕೊಲ್ಲಲಾಗಿದೆ” ಎಂದು ಒಂದು ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು.

ಇದರ ಬೆನ್ನಿಗೆ “ಮನೀಶ್ ಕಶ್ಯಪ್” (Manish Kashyap Son of Bihar) ಎಂಬ ವ್ಯಕ್ತಿಯಂತು ಒಂದು ಹೆಜ್ಜೆ ಮುಂದೆ ಹೋಗಿ ತನ್ನ ಯೂಟ್ಯೂಬ್ ಚಾನೆಲ್ ಮತ್ತು ಫೇಸ್ಬುಕ್ ಅಕೌಂಟ್‌ನಲ್ಲಿ, ’ತಮಿಳುನಾಡಿನಲ್ಲಿ ಬಿಹಾರಿ ಕಾರ್ಮಿಕರನ್ನು ಕಂಡಕಂಡಲ್ಲಿ ಮಚ್ಚಿನಿಂದ ಕೊಚ್ಚಿ ಕೊಲ್ಲಲಾಗುತ್ತಿದೆ’ ಎಂದು ಬಾಯಿಗೆ ಬಂದಂತೆ ಬಡಬಡಿಸತೊಡಗಿದ. ಆತನ ವಿಡಿಯೋವನ್ನು 6 ಮಿಲಿಯನ್ ಜನ ವೀಕ್ಷಿಸಿದ್ದರು. ನೋಡನೋಡುತ್ತಿದ್ದಂತೆ ಆ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: ‘ನಕಲಿ ಪ್ರಚಾರ’ ಆರೋಪ; ಅಣ್ಣಾಮಲೈ ವಿರುದ್ಧ ಎಫ್‌ಐಆರ್‌ ದಾಖಲು

ಬಿಹಾರದ ವಿಧಾನಸಭೆಯಲ್ಲೂ ಈ ವಿಚಾರವಾಗಿ ಭಾರಿ ಚರ್ಚೆಯಾಗಿತ್ತು. ಅಲ್ಲಿನ ವಿರೋಧ ಪಕ್ಷವಾದ ಬಿಜೆಪಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ರಾಜೀನಾಮೆಗೆ ಪಟ್ಟುಹಿಡಿದಿತ್ತು. ವಿರೋಧ ಪಕ್ಷದ ನಾಯಕ ವಿಜಯ್ ಸಿನ್ಹ ಈ ಮನೀಶ್ ಕಶ್ಯಪ್ ಎಂಬ ವ್ಯಕ್ತಿಯ ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದ ತೇಜಸ್ವಿ ಯಾದವ್ ಬಗ್ಗೆ ಅವಹೇಳನಕಾರಿಯಾದಂತಹ ಮಾತುಗಳನ್ನಾಗಿದ್ದರು. “ಇಂತವರ ಸರ್ಕಾರ ಬಿಹಾರಕ್ಕೆ ಬೇಕೆ? ತೇಜಸ್ವಿ ಯಾದವ್ ಸ್ಟಾಲಿನ್‌ಗೆ ಕೇಕ್ ತಿನ್ನಿಸುವ ದಿನದಲ್ಲೇ ನಮ್ಮ ಬಿಹಾರಿಗಳು ಕೊಲೆಯಾಗುತ್ತಿದ್ದಾರೆ” ಎಂದು ಜನರನ್ನು ಪ್ರಚೋದಿಸಿದ್ದರು.

ಇನ್ನೂ ಟಿಆರ್‌ಪಿ ಗೀಳಿಗೆ ಬಿದ್ದ ದೃಶ್ಯ ಮಾಧ್ಯಮಗಳ ಬಗ್ಗೆ ಕೇಳಬೇಕೆ! ಬಿಜೆಪಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ವಿಡಿಯೋ ವೈರಲ್ ಆಗಿದ್ದೆ ತಡ ಇಡೀ ದಿನ ಹಿಂದಿ ಮತ್ತು ಆಂಗ್ಲ ದೃಶ್ಯ ಮಾಧ್ಯಮಗಳು ತಮಿಳುನಾಡಿನ ವಿರುದ್ಧ ಸಾಲುಸಾಲು ವರದಿಗಳನ್ನು ಬಿತ್ತರಿಸಿದವು. ತಮಿಳುನಾಡಿನಲ್ಲಿ ಬಿಹಾರಿ ಮತ್ತು ಉತ್ತರಪ್ರದೇಶ ಸೇರಿದಂತೆ ಹಿಂದಿ ಭಾಷಿಕರಿಗೆ ರಕ್ಷಣೆ ಇಲ್ಲ, ಅಲ್ಲಿನ ಸರ್ಕಾರವೇ ತಮಿಳು ಉಗ್ರಗಾಮಿಗಳ ಬೆನ್ನಿಗೆ ನಿಂತಿದೆ ಎಂದು ವಿಷಕಾರಲು ಆರಂಭಿಸಿದವು. ಪರಿಣಾಮ ಪ್ರಕರಣದ ತನಿಖೆಗೆ ಸಿಎಂ ನಿತೀಶ್ ಕುಮಾರ್ ಒಂದು ತಂಡವನ್ನು ರಚಿಸಿ ತಮಿಳುನಾಡಿಗೂ ಕಳಿಸಿದ್ದರು.

ವಿಡಿಯೋ ಅಸಲಿ ಕಥೆ, ಅಣ್ಣಾಮಲೈ ಎಂಬ ಮತಿಗೇಡಿ

ಈ ಸುಳ್ಳು ಸುದ್ದಿಯ ಬಿಸಿ ಬಿಹಾರದಿಂದ ಅಷ್ಟೇ ಶೀಘ್ರವಾಗಿ ತಮಿಳುನಾಡನ್ನೂ ಮುಟ್ಟಿತ್ತು. ಆದರೆ, ವಿಷಯದ ಸತ್ಯಾಸತ್ಯತೆಯನ್ನು ಪರಿಶೀಲಿಸದ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಹಾರಿಗಳ ಮೇಲಿನ ದಾಳಿಯ ’ಸುಳ್ಳು’ ವಿಡಿಯೋವನ್ನು ಹಂಚಿಕೊಂಡಿದ್ದರು. ಅಲ್ಲದೆ, “ಹಿಂದಿ ಭಾಷಿಕರ ಮತ್ತು ಉತ್ತರ ಭಾರತೀಯರ ವಿರುದ್ಧ ತಮಿಳರಲ್ಲಿ ಆಕ್ರೋಶ ಮನೆಮಾಡಲು ಡಿಎಂಕೆ ಪಕ್ಷ ಕಾರಣ” ಎಂದು ಆರೋಪಿಸಿದ್ದರು. ಈ ಬಗ್ಗೆ ಸಾಲುಸಾಲು ಟ್ವೀಟ್ ಮಾಡುತ್ತಾ ಡಿಎಂಕೆ ಪಕ್ಷದ ವಿರುದ್ಧ ದ್ವೇಷ ಪ್ರಚಾರದಲ್ಲಿ ತೊಡಗಿದ್ದರು.

ಮನೀಶ್ ಕಶ್ಯಪ್

ಆದರೆ, ಘಟನೆಯ ಮರುದಿನವೇ ಫ್ಯಾಕ್ಟ್‌ಚೆಕ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಸುಳ್ಳಿನ ಚರ್ಮ ಸುಲಿದಿದ್ದರು, “ಈ ಹಲ್ಲೆ ತಮಿಳುನಾಡಿನಲ್ಲಿ ನಡೆದದ್ದಲ್ಲ. ಇದೊಂದು ಸುಳ್ಳು ಸುದ್ದಿಯಾಗಿದ್ದು, ತಮಿಳುನಾಡಿನಲ್ಲಿ ಯಾವುದೇ ಬಿಹಾರಿ ಕಾರ್ಮಿಕರ ಮೇಲೆ ಹಲ್ಲೆಯಾಗಿಲ್ಲ ಎಂದು ಸಾಕ್ಷಿ ಸಮೇತ ಸರಣಿ ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಮೂಲಕ ಬಿಜೆಪಿಯ ಅಸಲಿ ತಂತ್ರಗಾರಿಕೆ ಜಗಜ್ಜಾಹೀರಾಗಿತ್ತು. ಒಂದೇ ಸುಳ್ಳು ಸುದ್ದಿಯ ಮೂಲಕ ಬಿಹಾರದಲ್ಲಿ ನಿತೀಶ್ ಕುಮಾರ್ ವಿರುದ್ಧ ಜನಾಭಿಪ್ರಾಯ ರೂಪಿಸುವುದು, ಮತ್ತು ಬಿಜೆಪಿಯೇತರ ಸರ್ಕಾರವಿರುವ ತಮಿಳುನಾಡಿನ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಅಪಪ್ರಚಾರ ಮಾಡುವುದು ಬಿಜೆಪಿಯ ಗುರಿಯಾಗಿತ್ತು. ಇದಕ್ಕೆ ಅವರು ಸಿಎಂ ಸ್ಟಾಲಿನ್ ಹುಟ್ಟುದಿನ ಮತ್ತು ತೇಜಸ್ವಿ ಯಾದವ್ ಭೇಟಿಯನ್ನೇ ಬಳಸಿಕೊಂಡು ಒಂದು ಅದ್ಭುತವಾದ ಚಿತ್ರಕಥೆಯನ್ನು ಸಿದ್ಧಪಡಿಸಿದ್ದರು ಎಂಬ ಅಂಶ ಬಟಾಬಯಲಾಗಿತ್ತು.

ತಮಿಳುನಾಡಿನ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳು ಬಿಜೆಪಿಯ ಈ ಸುಳ್ಳು ಸುದ್ದಿಯ ಬಗ್ಗೆ ಬಿಸಿಬಿಸಿ ಚರ್ಚೆ ಶುರು ಮಾಡುತ್ತಿದ್ದಂತೆ ಅಣ್ಣಾಮಲೈ ತನ್ನ ಖಾಸಗಿ ಟ್ವಿಟರ್ ಖಾತೆಯಿಂದ ಆ ವಿಡಿಯೋವನ್ನು ಡಿಲೀಟ್ ಮಾಡಿದ್ದರೇನೋ ನಿಜ. ಆದರೆ, “ಹಿಂದಿ ಭಾಷಿಕರ ವಿರುದ್ಧ ತಮಿಳರಲ್ಲಿ ಆಕ್ರೋಶ ಇದೆ, ಇದಕ್ಕೆ ಕಾರಣ ಡಿಎಂಕೆ ಪಕ್ಷ” ಎಂಬ ತಮ್ಮ ನಿಲುವನ್ನು ಮತ್ತೆ ಮತ್ತೆ ಸರಣಿ ಟ್ವೀಟ್ ಮೂಲಕ ಸಮರ್ಥಿಸಿಕೊಂಡಿದ್ದರು.

ಬಿಜೆಪಿ ಪ್ರಾಯೋಜಿತ ರಾಷ್ಟ್ರೀಯ ಮಾಧ್ಯಮಗಳು ತಮಿಳುನಾಡಿನ ವಿರುದ್ಧ ಹೀಗೆ ವಿಷಕಾರುವುದು ಹೊಸದೇನಲ್ಲ. ತಮಿಳರಿಗೆ ಅದು ಅಭ್ಯಾಸವಾಗಿಹೋಗಿದೆ. ಆದರೆ, ಈ ಸುಳ್ಳನ್ನೇ ಸತ್ಯ ಎಂದು ಅಲ್ಲಿನ ಜನರನ್ನು ನಂಬಿಸಲು ಸ್ವತಃ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮುಂದಾದದ್ದು ಮತ್ತು ತಮಿಳರ ವಿರುದ್ಧವೇ ಅಪಪ್ರಚಾರ ಮಾಡಿದ್ದು, ಇದೀಗ ತಮಿಳರ ಆಕ್ರೋಶಕ್ಕೆ ಕಾರಣವಾಗಿದೆ.

ಸುಳ್ಳು ಸುದ್ದಿಯ ಪರಿಣಾಮವೇನು?

ತಮಿಳುನಾಡು ಬಿಜೆಪಿಯಲ್ಲೇ ಅಣ್ಣಾಮಲೈ ಓರ್ವ ವಿವಾದಿತ ವ್ಯಕ್ತಿಯಾಗಿ ಛಾಪು ಮೂಡಿಸಿದ್ದಾರೆ. ಪಕ್ಷದಲ್ಲಿ ತನಗೆ ಪೈಪೋಟಿಯಾಗಿದ್ದ ಹಿರಿಯ ನಾಯಕ ಕೆ.ಟಿ ರಾಘವನ್ ಎಂಬುವವರನ್ನು ಅಶ್ಲೀಲ ಸಿಡಿ ಕೇಸ್‌ನಲ್ಲಿ ಸಿಲುಕಿಸಿ ಅವರ ರಾಜಕೀಯ ಜೀವನವನ್ನೇ ಮುಗಿಸಿದ ಆರೋಪ ಅಣ್ಣಾಮಲೈ ಮೇಲಿದೆ. ಇದಲ್ಲದೆ, ಪಕ್ಷದಲ್ಲಿ ತನಗೆ ಪೈಪೋಟಿಯಾಗಿರುವ ಇತರೆ ಹಿರಿಯ ನಾಯಕರದ್ದೂ ಅಶ್ಲೀಲ ವಿಡಿಯೋ ಮತ್ತು ಆಡಿಯೋ ಮಾಡಿಟ್ಟುಕೊಂಡಿದ್ದಾರೆ ಎನ್ನಲಾಗಿದೆ.

“ಅಣ್ಣಾಮಲೈ ತನ್ನ ವಿಡಿಯೋ ಮಾಡಿಟ್ಟುಕೊಂಡು ಸಾಮಾಜಿಕ ಜಾಲತಾಣ ಪಡೆಯ ಮೂಲಕ ನನ್ನ ಮೇಲೆ ವ್ಯಯಕ್ತಿಕ ದಾಳಿ ನಡೆಸುತ್ತಿದ್ದಾರೆ” ಎಂದು ಆರೋಪಿಸಿ ಬಿಜೆಪಿ ಪಕ್ಷದ ಕಲೆ ಸಾಂಸ್ಕೃತಿಕ ವಿಭಾಗದ ಅಧ್ಯಕ್ಷೆ ಮಾಜಿ ನಟಿ ಗಾಯತ್ರಿ ರಘುರಾಮ್ ಕಳೆದ ವರ್ಷ ಪಕ್ಷದಿಂದಲೇ ಹೊರ ನಡೆದಿದ್ದರು. ಇದೇ ಆರೋಪವನ್ನು ಮುಂದಿಟ್ಟು ಸೂರ್ಯ ಶಿವ ಎಂಬ ಮತ್ತೊಬ್ಬ ಬಿಜೆಪಿ ನಾಯಕನೂ ಇತ್ತೀಚೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇಬ್ಬರೂ ಅಣ್ಣಾಮಲೈ ವಿರುದ್ಧ ಸಾರ್ವಜನಿಕವಾಗಿ ಕಿಡಿಕಾರಿದ್ದರು. ಅಂದಿನಿಂದ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವನ್ನು “ಆಡಿಯೋ ವಿಡಿಯೋ ಪಕ್ಷ” ಎಂದೇ ಕರೆಯಲಾಗುತ್ತಿದೆ.

ತಮಿಳುನಾಡಿನಲ್ಲಿ ಬಿಹಾರಿ ಕಾರ್ಮಿಕರ ಮೇಲೆ ಹಲ್ಲೆ ಎನ್ನಲಾದ ನಕಲಿ ವಿಡಿಯೋ

ಈ ನಡುವೆ ಬಿಹಾರಿ ಕಾರ್ಮಿಕರ ಮೇಲಿನ ದಾಳಿ ಸಂಬಂಧಿಸಿದ ಸುದ್ದಿ ಸುಳ್ಳು ಎಂಬುದು ಜಗಜ್ಜಾಹೀರಾಗುತ್ತಿದ್ದಂತೆ ತಮಿಳುನಾಡಿನ ಬಿಜೆಪಿ ಐಟಿ ವಿಂಗ್ ಮುಖ್ಯಸ್ಥ ಸಿಟಿಆರ್ ನಿರ್ಮಲ್ ಕುಮಾರ್ ಸೇರಿದಂತೆ 11 ಜನ ನಿರ್ವಾಹಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ “ಎಡಿಎಂಕೆ” ಪಕ್ಷಕ್ಕೆ ಸೇರಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ನಿರ್ಮಲ್ ಕುಮಾರ್ ಬಿಡುಗಡೆ ಮಾಡಿರುವ ಹೇಳಿಕೆಯೊಂದು ತಮಿಳುನಾಡು ರಾಜಕೀಯದಲ್ಲಿ ಪ್ರಸ್ತುತ ಸಾಕಷ್ಟು ಸದ್ದು ಮಾಡುತ್ತಿದೆ.

ಇದನ್ನೂ ಓದಿ: ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

“ಅಣ್ಣಾಮಲೈ ಪಕ್ಷದ ಅನೇಕ ಹಿರಿಯ ನಾಯಕರ ವಿರುದ್ಧ ಗೂಢಚರ್ಯೆ ನಡೆಸುತ್ತಿದ್ದಾರೆ. ಅಶ್ಲೀಲ ಆಡಿಯೋ ವಿಡಿಯೋ ಮೂಲಕ ಹಲವರನ್ನು ಬ್ಲಾಕ್‌ಮೇಲ್ ಮಾಡಲಾಗುತ್ತಿದೆ. ತಾನೊಬ್ಬನೇ ಏಕಮೇವ ಬಿಜೆಪಿ ನಾಯಕನಾಗಲು ಅವರು ಹೊರಟಿದ್ದು, ಸುಳ್ಳು ಹರಡುವುದೊಂದೆ ಅಣ್ಣಾಮಲೈ ಹಾಗೂ ಬಿಜೆಪಿ ಪಕ್ಷದ ಅಜೆಂಡವಾಗಿದೆ. ಇಂತಹ ಪಕ್ಷ ತಮಿಳರಿಗೆ ಮತ್ತು ತಮಿಳುನಾಡಿಗೆ ಅಪಾಯಕಾರಿಯಾದದ್ದು” ಎಂಬ ಅಂಶಗಳು ನಿರ್ಮಲ್ ಕುಮಾರ್ ಹೇಳಿಕೆಯಲ್ಲಿದ್ದು, ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಒಂದು ಪಕ್ಷದ ರಾಜ್ಯಾಧ್ಯಕ್ಷನ ವಿರುದ್ಧ ಅದೇ ಪಕ್ಷದವರು ಬಿಡುಗಡೆ ಮಾಡಿರುವ ಅತ್ಯಂತ ಆಘಾತಕಾರಿ ಹೇಳಿಕೆ ಇದಾಗಿದೆ ಎಂದು ತಮಿಳುನಾಡಿನ ಮಾಧ್ಯಮಗಳು ವಿಶ್ಲೇಷಿಸುತ್ತಿವೆ.

ಒಟ್ಟಿನಲ್ಲಿ ದೇಶದ ಹಲವೆಡೆ ಕೆಲಸ ಮಾಡುವ ಬಿಜೆಪಿ ಪಕ್ಷದ ಸುಳ್ಳಿನ ತಂತ್ರಗಾರಿಕೆ ತಮಿಳು ನಾಡಿನಲ್ಲಿ ಕೈಕೊಟ್ಟಿರುವುದು ದೇಶದಲ್ಲಿಂದು ಚರ್ಚೆಗೆ ಗ್ರಾಸವಾಗಿದೆ.

ಅಶೋಕ್ ಕುಮಾರ್

ಅಶೋಕ್ ಕುಮಾರ್
ಮೂಲತಃ ಭದ್ರಾವತಿಯವರಾದ ಅಶೋಕ್, ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ಅನುಭವಿ ಯುವ ಪತ್ರಕರ್ತರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...