Homeಮುಖಪುಟಬಿಜೆಪಿಯವರೇ ದೇಶ ವಿರೋಧಿಗಳು: ನಡ್ಡಾಗೆ ಖರ್ಗೆ ತಿರುಗೇಟು

ಬಿಜೆಪಿಯವರೇ ದೇಶ ವಿರೋಧಿಗಳು: ನಡ್ಡಾಗೆ ಖರ್ಗೆ ತಿರುಗೇಟು

- Advertisement -
- Advertisement -

ಇತ್ತೀಚೆಗೆ ಬ್ರಿಟನ್‌ನಲ್ಲಿ ಪ್ರಜಾಪ್ರಭತ್ವದ ಬಗ್ಗೆ ಮಾಡಿದ ಟೀಕೆಗಳ ಕುರಿತು ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಾಗ್ದಾಳಿ ನಡೆಸಿ, ”ರಾಹುಲ್ ಗಾಂಧಿ, ‘ರಾಷ್ಟ್ರ ವಿರೋಧಿ ಟೂಲ್‌ಕಿಟ್‌ನ ಶಾಶ್ವತ ಭಾಗ’ವಾಗಿದ್ದಾರೆ” ಎಂದು ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆಡಳಿತಾರೂಢ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

”ರಾಹುಲ್ ಗಾಂಧಿ ಎಂದಾದರೂ ದೇಶ ವಿರೋಧಿಯಾಗಲು ಸಾಧ್ಯವೇ? ಪ್ರಜಾಪ್ರಭುತ್ವದ ಬಗ್ಗೆ ಚರ್ಚೆ ಮಾಡುವವರು ದೇಶ ವಿರೋಧಿಗಳೇ?” ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.

”ಅವರೇ (ಬಿಜೆಪಿ) ದೇಶ ವಿರೋಧಿಗಳು. ಅವರು ಎಂದಿಗೂ ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಲಿಲ್ಲ. ಮತ್ತು ಅವರು ಇತರರನ್ನು ದೇಶ ವಿರೋಧಿಗಳು ಎಂದು ಕರೆಯುತ್ತಿದ್ದಾರೆ. ನಿರುದ್ಯೋಗ ಮತ್ತು ಹಣದುಬ್ಬರ ಸಮಸ್ಯೆಗಳಿಂದ ವಿಮುಖರಾಗಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ಮುಖ್ಯಸ್ಥರ ಹೇಳಿಕೆಗೆ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ರಾಹುಲ್ ಗಾಂಧಿ ಎಂದಾದರೂ ದೇಶ ವಿರೋಧಿಯಾಗಬಹುದೇ? ಪ್ರಜಾಪ್ರಭುತ್ವದ ಬಗ್ಗೆ ಚರ್ಚೆ ಮಾಡುವವರು ದೇಶ ವಿರೋಧಿಗಳೇ? ಜೆಪಿ ನಡ್ಡಾ ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಅವರು ರಾಹುಲ್ ಗಾಂಧಿಗೆ ಸಂಸತ್ತಿನಲ್ಲಿ ಮಾತನಾಡಲು ಏಕೆ ಅವಕಾಶ ನೀಡುತ್ತಿಲ್ಲ? ಎಂದು ಖರ್ಗೆ ಪ್ರಶ್ನೆ ಮಾಡಿದ್ಧಾರೆ.

“ರಾಹುಲ್ ಗಾಂಧಿ ರಾಷ್ಟ್ರ ವಿರೋಧಿ ಟೂಲ್‌ಕಿಟ್‌ನ ಶಾಶ್ವತ ಭಾಗ”: ನಡ್ಡಾ ಆರೋಪ

ನಡ್ಡಾ ಅವರು ವಿಡಿಯೋ ಸಂದೇಶದಲ್ಲಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಮೇಲೆ ವಾಗ್ದಾಳಿ ನಡೆಸಿದ್ದು, ”ಕಾಂಗ್ರೆಸ್ ಪಕ್ಷವು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ದುರದೃಷ್ಟಕರ. ರಾಹುಲ್ ಗಾಂಧಿ ಈಗ ರಾಷ್ಟ್ರವಿರೋಧಿ ಟೂಲ್‌ಕಿಟ್‌ನ ಶಾಶ್ವತ ಭಾಗವಾಗಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

”ಭಾರತದ ಆಂತರಿಕ ವಿಷಯಗಳಲ್ಲಿ ಇನ್ನೊಂದು ದೇಶವು ಹಸ್ತಕ್ಷೇಪ ಮಾಡುವಂತೆ ಕೇಳುವುದು ಭಾರತದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ.. ಭಾರತದ ದೇಶೀಯ ವಿಷಯಗಳಲ್ಲಿ ಮಧ್ಯಪ್ರವೇಶಿಸುವಂತೆ ಯುರೋಪ್ ಮತ್ತು ಅಮೆರಿಕವನ್ನು ಒತ್ತಾಯಿಸುವುದರ ಹಿಂದೆ ಅವರ ಉದ್ದೇಶವೇನು ಎಂದು ನಾನು ರಾಹುಲ್ ಗಾಂಧಿಯನ್ನು ಕೇಳಲು ಬಯಸುತ್ತೇನೆ” ಎಂದು ನಡ್ಡಾ ಹೇಳಿದರು.

”ಅವರು (ರಾಹುಲ್ ಗಾಂಧಿ), ಭಾರತ, ಸಂಸತ್ತು, ವಿದೇಶಿ ನೆಲದಲ್ಲಿರುವ ಭಾರತೀಯ ಜನರನ್ನು ಅವಮಾನಿಸಿದ್ದಾರೆ. ಇದು ದೇಶದ ವಿರುದ್ಧ ಕೆಲಸ ಮಾಡುವವರನ್ನು ಬಲಪಡಿಸುತ್ತದೆ” ಎಂದು ಹೇಳಿದ್ದಾರೆ.

”ಜಾರ್ಜ್ ಸೊರೊಸ್ ಮತ್ತು ರಾಹುಲ್ ಗಾಂಧಿ ಏಕೆ ಒಂದೇ ಭಾಷೆಯನ್ನು ಮಾತನಾಡುತ್ತಾರೆ?” ಎಂದು ನಡ್ಡಾ ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...