Homeಮುಖಪುಟಲಂಡನ್ ಭಾಷಣದ ವಿಚಾರ: ರಾಹುಲ್‌ ಲೋಕಸಭೆ ಸದಸ್ಯತ್ವ ಅಮಾನತ್ತಿಗೆ ಆಗ್ರಹಿಸಿದ ಬಿಜೆಪಿ

ಲಂಡನ್ ಭಾಷಣದ ವಿಚಾರ: ರಾಹುಲ್‌ ಲೋಕಸಭೆ ಸದಸ್ಯತ್ವ ಅಮಾನತ್ತಿಗೆ ಆಗ್ರಹಿಸಿದ ಬಿಜೆಪಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬ್ರಿಟನ್‌ನಲ್ಲಿ ಭಾರತೀಯ ಪ್ರಜಾಪ್ರಭುತ್ವದ ಕುರಿತು ಟೀಕೆ ಮಾಡಿರುವುದ್ದಕ್ಕೆ ಅವರು ಸದನದಲ್ಲಿ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಅವರನ್ನು ಲೋಕಸಭೆಯಿಂದ ಅಮಾನತುಗೊಳಿಸಬೇಕು ಎಂದು ಆಡಳಿತಾರೂಢ ಬಿಜೆಪಿ ಆಗ್ರಹಿಸಿದೆ.

ಈಗಾಗಲೇ ಬಿಜೆಪಿ, ರಾಹುಲ್ ಗಾಂಧಿ ಅವರನ್ನು ಸದನದಿಂದ ಅಮಾನತುಗೊಳಿಸುವ ಸಾಧ್ಯತೆಯನ್ನು ಪರಿಶೋಧಿಸುವ ವಿಶೇಷ ಸಮಿತಿಯನ್ನು ರಚಿಸುವಂತೆ ಕೋರಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಸಂಪರ್ಕಿಸಿದೆ.

ಒಂದುವೇಳೆ ವಿಶೇಷ ಸಮಿತಿ ರಚನೆಯಾದರೆ ಲೋಕಸಭೆಯಲ್ಲಿ ಬಿಜೆಪಿಯು ಸಂಖ್ಯಾಬಲದಲ್ಲಿ ಬಹುಮತ ಪಡೆಯಲಿದೆ. ವಿಶೇಷ ಸಮಿತಿಯು ಸಾಮಾನ್ಯವಾಗಿ ಒಂದು ತಿಂಗಳಲ್ಲಿ ತನ್ನ ವರದಿಯನ್ನು ಸಲ್ಲಿಸುತ್ತದೆ.

ಈ ಬಗ್ಗೆ ಪಕ್ಷದ ಹಿರಿಯ ನಾಯಕರೊಬ್ಬರು ಮಾತನಾಡಿ, ”ಬಿಜೆಪಿಯು ರಾಹುಲ್ ಗಾಂಧಿ ವಿಚಾರವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಇದು ಅಭಿಪ್ರಾಯ ಹಂಚಿಕೊಳ್ಳುವ ವಿಚಾರವಲ್ಲ, ಅದಕ್ಕೂ ಮೀರಿದ ಸಮಸ್ಯೆ ಆಗಿದೆ. ಹಾಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಕಿರಣ್ ರಿಜಿಜು, ಅನುರಾಗ್ ಠಾಕೂರ್, ಗಿರಿರಾಜ್ ಸಿಂಗ್ ಮತ್ತು ರಾಜೀವ್ ಚಂದ್ರಶೇಖರ್ ಮತ್ತು ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ಅವರು ಲಂಡನ್‌ನಲ್ಲಿ ಗಾಂಧಿ ಭಾರತದ ಬಗ್ಗೆ “ಸುಳ್ಳು” ಹೇಳಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ನಾಯಕ ಈ ವರೆಗೂ ತಮ್ಮ ಟೀಕೆಯ ಬಗ್ಗೆ  ಯಾವುದೇ ಪಶ್ಚಾತ್ತಾಪ ತೋರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಹಿತಿ ಮತ್ತು ಪ್ರಸಾರ ಸಚಿವ ಠಾಕೂರ್ ಮಾತನಾಡಿ, ”ಸಂಸತ್ತಿಗೆ ಸ್ವಾಗತ, ಒಂದು ವಾರದಿಂದ ಕಾಯುತ್ತಿದ್ದೇವೆ. ರಾಹುಲ್ ಗಾಂಧಿ ಅವರು ವಿದೇಶಿ ನೆಲದಿಂದ ಭಾರತದ ವಿರುದ್ಧ ಸುಳ್ಳುಗಳನ್ನು ಹರಡಿದ್ದಾರೆ ಮತ್ತು ಸಂಸತ್ತಿಗೆ ಅವಮಾನ ಮಾಡಿದ್ದಾರೆ. ಅವರು ಸದನಕ್ಕೆ ಬಂದು ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರೇ ದೇಶ ವಿರೋಧಿಗಳು: ನಡ್ಡಾಗೆ ಖರ್ಗೆ ತಿರುಗೇಟು

ಗುರುವಾರ  ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ”ಗಾಂಧಿ ಅವರು ಸಂಸತ್ತಿನ ಇತರ ಸದಸ್ಯರಿಗಿಂತ ಮೇಲಲ್ಲ ಮತ್ತು ಭಾರತೀಯ ಸಂಸತ್ತನ್ನು ಅವರ ವೈಯಕ್ತಿಕ ಅಧಿಕಾರದ ಕ್ಷೇತ್ರ ಎಂದು ಪರಿಗಣಿಸಬಾರದು” ಎಂದು ಹೇಳಿದರು.

”ರಾಷ್ಟ್ರಕ್ಕೆ ಸಂಬಂಧಿಸಿದಂತೆ ಯಾವುದೇ ಘಟನೆಯು ಅದು ಎಲ್ಲರಿಗೂ ಕಾಳಜಿಯ ವಿಷಯವಾಗಿದೆ. ಇದರಿಂದ ಕಾಂಗ್ರೆಸ್ ಅಥವಾ ಅದರ ನಾಯಕತ್ವ ಪರಿಣಾಮಗಳ ಬಗ್ಗೆ ನಾವು ತಲೆ ಕೆಡಸಿಕೊಳ್ಳುವುದಿಲ್ಲ. ಅವರು ರಾಷ್ಟ್ರವನ್ನು ಅವಮಾನಿಸಿದರೆ ನಾವು ಸುಮ್ಮನಿರಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

”ರಾಹುಲ್ ಗಾಂಧಿ ಅವರು ಭಾರತ ವಿರೋಧಿ ಶಕ್ತಿಗಳು ಮಾತನಾಡುವಂತೆ ಮಾತನಾಡುತ್ತಾರೆ. ಅದೇ ಭಾಷೆಯನ್ನೇ ರಾಹುಲ್ ಗಾಂಧಿ ಬಳಸಿದ್ದಾರೆ. ಇದು ಭಾರತದ ವಿರುದ್ಧ ಕೆಲಸ ಮಾಡುವ ಎಲ್ಲರ ಭಾಷೆಯಾಗಿದೆ” ಎಂದು ರಿಜಿಜು ಹೇಳಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಯಿಂದ ದೇಶಕ್ಕೆ ಮತ್ತು ಅವರು ಸದಸ್ಯರಾಗಿರುವ ಸಂಸತ್ತಿಗೆ ಹಾನಿಯಾಗಿದೆ. ಕೆಲವು ಜನರು ದೇಶದ ಗೌರವದ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈಗ ಕಾಂಗ್ರೆಸ್‌ ಲಂಡನ್‌ನಲ್ಲಿ ಪೊರಕೆಯಿಂದ ಗುಡಿಸಿ ಸ್ವಚ್ಚಗೊಳಿಸುವುದು ಎಂದು ಕೇಳಿದ್ದಾರೆ.

“ರಾಹುಲ್ ಗಾಂಧಿ ಅವರು ತಮ್ಮ 50 ವರ್ಷಗಳ ಕಾಲ ರಾಜವಂಶಸ್ತರಂತೆ ಬದುಕಿರಬಹುದು. 2014ರ ಮೊದಲು, ಅವರು ಸುಗ್ರೀವಾಜ್ಞೆಗಳನ್ನು ಹರಿದು ಹಾಕುವುದು ಸೇರಿದಂತೆ ಯಾವುದೇ ಹೊಣೆಗಾರಿಕೆಯಿಲ್ಲದೆ ತನಗೆ ಬೇಕಾದುದನ್ನು ಮಾಡಲು ಮತ್ತು ಹೇಳಲು ಅವಕಾಶ ಇತ್ತು. ಆದರೆ ಅದು ಈಗ ನಡೆಯಲ್ಲ. ಅವರ ಸುಳ್ಳಿಗೆ ಅವರೇ ಜವಾಬ್ದಾರನಾಗಿರಬೇಕು” ಎಂದು ರಾಜೀವ್ ಚಂದ್ರಶೇಖರ್ ಹೇಳಿದರು.

ಸಂಸತ್ತಿನಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ. ಇದಕ್ಕೆ ಪ್ರತಿಕ್ರಿಸಿರುವ ಅವರು, ತಾನು ಯಾವುದೇ “ಭಾರತ ವಿರೋಧಿ” ಟೀಕೆ ನೀಡಿಲ್ಲ ಮತ್ತು ಅವಕಾಶ ನೀಡಿದರೆ ಸಂಸತ್ತಿನಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಗುರುವಾರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...