Homeಮುಖಪುಟಲಂಡನ್ ಭಾಷಣದ ವಿಚಾರ: ರಾಹುಲ್‌ ಲೋಕಸಭೆ ಸದಸ್ಯತ್ವ ಅಮಾನತ್ತಿಗೆ ಆಗ್ರಹಿಸಿದ ಬಿಜೆಪಿ

ಲಂಡನ್ ಭಾಷಣದ ವಿಚಾರ: ರಾಹುಲ್‌ ಲೋಕಸಭೆ ಸದಸ್ಯತ್ವ ಅಮಾನತ್ತಿಗೆ ಆಗ್ರಹಿಸಿದ ಬಿಜೆಪಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬ್ರಿಟನ್‌ನಲ್ಲಿ ಭಾರತೀಯ ಪ್ರಜಾಪ್ರಭುತ್ವದ ಕುರಿತು ಟೀಕೆ ಮಾಡಿರುವುದ್ದಕ್ಕೆ ಅವರು ಸದನದಲ್ಲಿ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಅವರನ್ನು ಲೋಕಸಭೆಯಿಂದ ಅಮಾನತುಗೊಳಿಸಬೇಕು ಎಂದು ಆಡಳಿತಾರೂಢ ಬಿಜೆಪಿ ಆಗ್ರಹಿಸಿದೆ.

ಈಗಾಗಲೇ ಬಿಜೆಪಿ, ರಾಹುಲ್ ಗಾಂಧಿ ಅವರನ್ನು ಸದನದಿಂದ ಅಮಾನತುಗೊಳಿಸುವ ಸಾಧ್ಯತೆಯನ್ನು ಪರಿಶೋಧಿಸುವ ವಿಶೇಷ ಸಮಿತಿಯನ್ನು ರಚಿಸುವಂತೆ ಕೋರಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಸಂಪರ್ಕಿಸಿದೆ.

ಒಂದುವೇಳೆ ವಿಶೇಷ ಸಮಿತಿ ರಚನೆಯಾದರೆ ಲೋಕಸಭೆಯಲ್ಲಿ ಬಿಜೆಪಿಯು ಸಂಖ್ಯಾಬಲದಲ್ಲಿ ಬಹುಮತ ಪಡೆಯಲಿದೆ. ವಿಶೇಷ ಸಮಿತಿಯು ಸಾಮಾನ್ಯವಾಗಿ ಒಂದು ತಿಂಗಳಲ್ಲಿ ತನ್ನ ವರದಿಯನ್ನು ಸಲ್ಲಿಸುತ್ತದೆ.

ಈ ಬಗ್ಗೆ ಪಕ್ಷದ ಹಿರಿಯ ನಾಯಕರೊಬ್ಬರು ಮಾತನಾಡಿ, ”ಬಿಜೆಪಿಯು ರಾಹುಲ್ ಗಾಂಧಿ ವಿಚಾರವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಇದು ಅಭಿಪ್ರಾಯ ಹಂಚಿಕೊಳ್ಳುವ ವಿಚಾರವಲ್ಲ, ಅದಕ್ಕೂ ಮೀರಿದ ಸಮಸ್ಯೆ ಆಗಿದೆ. ಹಾಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಕಿರಣ್ ರಿಜಿಜು, ಅನುರಾಗ್ ಠಾಕೂರ್, ಗಿರಿರಾಜ್ ಸಿಂಗ್ ಮತ್ತು ರಾಜೀವ್ ಚಂದ್ರಶೇಖರ್ ಮತ್ತು ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ಅವರು ಲಂಡನ್‌ನಲ್ಲಿ ಗಾಂಧಿ ಭಾರತದ ಬಗ್ಗೆ “ಸುಳ್ಳು” ಹೇಳಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ನಾಯಕ ಈ ವರೆಗೂ ತಮ್ಮ ಟೀಕೆಯ ಬಗ್ಗೆ  ಯಾವುದೇ ಪಶ್ಚಾತ್ತಾಪ ತೋರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಹಿತಿ ಮತ್ತು ಪ್ರಸಾರ ಸಚಿವ ಠಾಕೂರ್ ಮಾತನಾಡಿ, ”ಸಂಸತ್ತಿಗೆ ಸ್ವಾಗತ, ಒಂದು ವಾರದಿಂದ ಕಾಯುತ್ತಿದ್ದೇವೆ. ರಾಹುಲ್ ಗಾಂಧಿ ಅವರು ವಿದೇಶಿ ನೆಲದಿಂದ ಭಾರತದ ವಿರುದ್ಧ ಸುಳ್ಳುಗಳನ್ನು ಹರಡಿದ್ದಾರೆ ಮತ್ತು ಸಂಸತ್ತಿಗೆ ಅವಮಾನ ಮಾಡಿದ್ದಾರೆ. ಅವರು ಸದನಕ್ಕೆ ಬಂದು ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರೇ ದೇಶ ವಿರೋಧಿಗಳು: ನಡ್ಡಾಗೆ ಖರ್ಗೆ ತಿರುಗೇಟು

ಗುರುವಾರ  ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ”ಗಾಂಧಿ ಅವರು ಸಂಸತ್ತಿನ ಇತರ ಸದಸ್ಯರಿಗಿಂತ ಮೇಲಲ್ಲ ಮತ್ತು ಭಾರತೀಯ ಸಂಸತ್ತನ್ನು ಅವರ ವೈಯಕ್ತಿಕ ಅಧಿಕಾರದ ಕ್ಷೇತ್ರ ಎಂದು ಪರಿಗಣಿಸಬಾರದು” ಎಂದು ಹೇಳಿದರು.

”ರಾಷ್ಟ್ರಕ್ಕೆ ಸಂಬಂಧಿಸಿದಂತೆ ಯಾವುದೇ ಘಟನೆಯು ಅದು ಎಲ್ಲರಿಗೂ ಕಾಳಜಿಯ ವಿಷಯವಾಗಿದೆ. ಇದರಿಂದ ಕಾಂಗ್ರೆಸ್ ಅಥವಾ ಅದರ ನಾಯಕತ್ವ ಪರಿಣಾಮಗಳ ಬಗ್ಗೆ ನಾವು ತಲೆ ಕೆಡಸಿಕೊಳ್ಳುವುದಿಲ್ಲ. ಅವರು ರಾಷ್ಟ್ರವನ್ನು ಅವಮಾನಿಸಿದರೆ ನಾವು ಸುಮ್ಮನಿರಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

”ರಾಹುಲ್ ಗಾಂಧಿ ಅವರು ಭಾರತ ವಿರೋಧಿ ಶಕ್ತಿಗಳು ಮಾತನಾಡುವಂತೆ ಮಾತನಾಡುತ್ತಾರೆ. ಅದೇ ಭಾಷೆಯನ್ನೇ ರಾಹುಲ್ ಗಾಂಧಿ ಬಳಸಿದ್ದಾರೆ. ಇದು ಭಾರತದ ವಿರುದ್ಧ ಕೆಲಸ ಮಾಡುವ ಎಲ್ಲರ ಭಾಷೆಯಾಗಿದೆ” ಎಂದು ರಿಜಿಜು ಹೇಳಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಯಿಂದ ದೇಶಕ್ಕೆ ಮತ್ತು ಅವರು ಸದಸ್ಯರಾಗಿರುವ ಸಂಸತ್ತಿಗೆ ಹಾನಿಯಾಗಿದೆ. ಕೆಲವು ಜನರು ದೇಶದ ಗೌರವದ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈಗ ಕಾಂಗ್ರೆಸ್‌ ಲಂಡನ್‌ನಲ್ಲಿ ಪೊರಕೆಯಿಂದ ಗುಡಿಸಿ ಸ್ವಚ್ಚಗೊಳಿಸುವುದು ಎಂದು ಕೇಳಿದ್ದಾರೆ.

“ರಾಹುಲ್ ಗಾಂಧಿ ಅವರು ತಮ್ಮ 50 ವರ್ಷಗಳ ಕಾಲ ರಾಜವಂಶಸ್ತರಂತೆ ಬದುಕಿರಬಹುದು. 2014ರ ಮೊದಲು, ಅವರು ಸುಗ್ರೀವಾಜ್ಞೆಗಳನ್ನು ಹರಿದು ಹಾಕುವುದು ಸೇರಿದಂತೆ ಯಾವುದೇ ಹೊಣೆಗಾರಿಕೆಯಿಲ್ಲದೆ ತನಗೆ ಬೇಕಾದುದನ್ನು ಮಾಡಲು ಮತ್ತು ಹೇಳಲು ಅವಕಾಶ ಇತ್ತು. ಆದರೆ ಅದು ಈಗ ನಡೆಯಲ್ಲ. ಅವರ ಸುಳ್ಳಿಗೆ ಅವರೇ ಜವಾಬ್ದಾರನಾಗಿರಬೇಕು” ಎಂದು ರಾಜೀವ್ ಚಂದ್ರಶೇಖರ್ ಹೇಳಿದರು.

ಸಂಸತ್ತಿನಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ. ಇದಕ್ಕೆ ಪ್ರತಿಕ್ರಿಸಿರುವ ಅವರು, ತಾನು ಯಾವುದೇ “ಭಾರತ ವಿರೋಧಿ” ಟೀಕೆ ನೀಡಿಲ್ಲ ಮತ್ತು ಅವಕಾಶ ನೀಡಿದರೆ ಸಂಸತ್ತಿನಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಗುರುವಾರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...