Homeಮುಖಪುಟಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳನ್ನಿಟ್ಟುಕೊಂಡು ಸಿ.ಟಿ.ರವಿ ದಿನವೂ ವಿಷ ಕಕ್ಕುತ್ತಿದ್ದಾರೆ. ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ- ಹೆಚ್ ಡಿ ಕುಮಾರಸ್ವಾಮಿ

- Advertisement -
- Advertisement -

ಇತಿಹಾಸದಲ್ಲಿ ಇಲ್ಲದ ಪಾತ್ರಗಳನ್ನು ಸೃಷ್ಟಿಸಿ ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳನ್ನಿಟ್ಟುಕೊಂಡು ಸಿ.ಟಿ.ರವಿ ದಿನವೂ ವಿಷ ಕಕ್ಕುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಚಿವ ಮತ್ತು ಚಿತ್ರ ನಿರ್ಮಾಪಕರಾದ ಮುನಿರತ್ನರವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ‘ಉರೀಗೌಡ ನಂಜೇಗೌಡ’ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿಯವರು ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸರಣಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಅವರು, “ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ ಬಿಜೆಪಿಗೆ ಇರುವುದಂತೂ ಸತ್ಯ. ಈ ಮಹಾ ಷಡ್ಯಂತ್ರದ ಭಾಗವೇ ಉರಿಗೌಡ, ನಂಜೇಗೌಡ ಎಂಬ ಸುಳ್ಳುಪಾತ್ರಗಳ ಸೃಷ್ಟಿ” ಎಂದಿದ್ದಾರೆ.

ಟಿಪ್ಪುವನ್ನು ಕೊಂದವರೆಂದು ಸೃಷ್ಟಿಸಲಾದ ಕಲ್ಪಿತ ಒಕ್ಕಲಿಗ ಹೆಸರುಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಕಳಂಕದ ದಳ್ಳುರಿಗೆ ತಳ್ಳುವ, ಐತಿಹಾಸಿಕ ನಂಜಿನ ವಿಷವರ್ತುಲಕ್ಕೆ ನೂಕುವ ಹೇಯ ಕೃತ್ಯವನ್ನು ಬಿಜೆಪಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು ಬಿಜೆಪಿ ಸರಕಾರ. ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಹೆಸರನ್ನು ಮರೆಮಾಚಿ ಕಲ್ಪಿತ ಹೆಸರುಗಳ ಕಮಾನು ಕಟ್ಟಿದ್ದೇ ಪರಮದ್ರೋಹ.
ಕುಲಕ್ಕೆ, ಕುಲ ಗುರುವಿಗಾದ ಈ ಘೋರ ಅಪಮಾನದಿಂದ ಕುದಿಯುತ್ತಿರುವ ಒಕ್ಕಲಿಗ ಸಮಾಜವನ್ನು ಇನ್ನಷ್ಟು ಹೀನಾಯವಾಗಿ ಕಳಂಕದ ಕೂಪಕ್ಕೆ ತಳ್ಳಲು ಇದೇ ಬಿಜೆಪಿ ಸರಕಾರದ ಸಚಿವರೊಬ್ಬರು ಧೂರ್ತ ಪ್ರಯತ್ನ ನಡೆಸಿದ್ದಾರೆ ಎಂದಿದ್ದಾರೆ.

ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ. ಬಿಜೆಪಿ ಸೃಷ್ಟಿಸಿದ ಕಿರಾತಕ ಸುಳ್ಳನ್ನೇ ಸಿನಿಮಾ ಮಾಡಿ ಒಕ್ಕಲಿಗರನ್ನು ಇತಿಹಾಸದಲ್ಲಿ ಶಾಶ್ವತವಾಗಿ ಖಳನಾಯಕರನ್ನಾಗಿ ಚಿತ್ರಿಸುವುದೇ ಅವರ ದುರುದ್ದೇಶವಾಗಿದೆ. ಈ ದ್ರೋಹವನ್ನು ಒಕ್ಕಲಿಗರು ಸಹಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಚರಿತ್ರೆಯನ್ನು ವಿರೂಪಗೊಳಿಸುವ ನಿರ್ಲಜ್ಜ ರಾಜಕಾರಣಕ್ಕೆ ಮೂಲಕಾರಣರು ಯಾರು? ಇಷ್ಟಕ್ಕೂ ಈ ಮುನಿರತ್ನಗೂ ಮಂಡ್ಯದ ಒಕ್ಕಲಿಗರಿಗೂ ಸಂಬಂಧವೇನು? ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು ಎಂದು ತಿಳಿಸಿದ್ದಾರೆ.

ಮುನಿರತ್ನ ಮಾಡುವ ಸಿನಿಮಾಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಥೆ ಬರೆಯುತ್ತಾರಾ? ಟಿಪ್ಪು ನೆಪದಲ್ಲಿ ಜನ್ಮತೆಳೆದ ಜಾತಿ ವಿರುದ್ಧವೇ ವಿಷ ಕಕ್ಕುತ್ತಿರುವ, ಬಿಜೆಪಿಯನ್ನು ಎತ್ತಿ ಕಟ್ಟುತ್ತಿರುವ ಸಿ.ಟಿ.ರವಿ ಅವರು ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳ ನೆಪದಲ್ಲಿ ದಿನವೂ ವಿಷ ಕಕ್ಕುತ್ತಿದ್ದಾರೆ ಎಂದಿದ್ದಾರೆ.

ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಂತೂ ಈಗ ಉರಿಗೌಡ, ನಂಜೇಗೌಡ ಎಂದು ವಿಷನಂಜು ಉಗಳುತ್ತಿದ್ದಾರೆ. ಅವರು ಈ ಸಿನಿಮಾಕ್ಕೆ ಚಿತ್ರಕಥೆ ಬರೆಯುತ್ತಾರಾಯೇ? ಬರೆದರೂ ಬರೆಯಬಹುದು. ಏಕೆಂದರೆ, ಇವರಿಬ್ಬರೂ ಕುಲದ್ರೋಹಿಗಳಷ್ಟೇ ಅಲ್ಲ, ಒಕ್ಕಲು ಸಂಕುಲದ ವಿನಾಶಕರು ಎಂದು ಕಿಡಿಕಾರಿದ್ದಾರೆ.

ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಬಿಜೆಪಿ ಸ್ಥಿತಿ. ಪ್ರತೀ ಸೂಕ್ಷ್ಮ ವಿಷಯದಲ್ಲೂ ಮತ ರಾಜಕಾರಣ ಮಾಡುವ ಕಮಲ ಪಕ್ಷಕ್ಕೆ ಕರ್ನಾಟಕವೇ ಪ್ರಯೋಗ ಶಾಲೆ. ಜಾತಿ, ಧರ್ಮಗಳ ನಡುವೆ ಕಿಚ್ಚಿಟ್ಟು, ಸರ್ವಜನಾಂಗದ ತೋಟವಾದ ಕರ್ನಾಟಕಕ್ಕೆ ಕೋಮುಪ್ರಾಷನ ಮಾಡಿಸುತ್ತಿದೆ ಬಿಜೆಪಿ . ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಒಕ್ಕಲಿಗ ಹೆಸರುಗಳ ಸೃಷ್ಟಿ, ಸಿನಿಮಾ ಮಾಡುವ ದುರುಳ ಐಡಿಯಾ, ಒಕ್ಕಲಿಗರ ಮೇಲೆ ಬಿಜೆಪಿ ಬೀರುತ್ತಿರುವ ವಕ್ರದೃಷ್ಟಿ… ಇದೆಲ್ಲವೂ ಒಕ್ಕಲಿಗರನ್ನು ರಾಜಕೀಯವಾಗಿ ಮುಗಿಸಿಬಿಡುವ ಬಿಜೆಪಿ ರಕ್ಕಸ ಹಿಡೆನ್ ಅಜೆಂಡಾ ಅಲ್ಲದೆ ಮತ್ತೇನೂ ಅಲ್ಲ ಎಂದಿದ್ದಾರೆ.

ಇದನ್ನೂ ಓದಿ: ವಿಶ್ವದಲ್ಲಿ ಭಾರತದ ಮಾನ ತೆಗೆದ ನಿಜವಾದ ಅಪರಾಧಿ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...