Homeಮುಖಪುಟಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳನ್ನಿಟ್ಟುಕೊಂಡು ಸಿ.ಟಿ.ರವಿ ದಿನವೂ ವಿಷ ಕಕ್ಕುತ್ತಿದ್ದಾರೆ. ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ- ಹೆಚ್ ಡಿ ಕುಮಾರಸ್ವಾಮಿ

- Advertisement -
- Advertisement -

ಇತಿಹಾಸದಲ್ಲಿ ಇಲ್ಲದ ಪಾತ್ರಗಳನ್ನು ಸೃಷ್ಟಿಸಿ ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳನ್ನಿಟ್ಟುಕೊಂಡು ಸಿ.ಟಿ.ರವಿ ದಿನವೂ ವಿಷ ಕಕ್ಕುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಚಿವ ಮತ್ತು ಚಿತ್ರ ನಿರ್ಮಾಪಕರಾದ ಮುನಿರತ್ನರವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ‘ಉರೀಗೌಡ ನಂಜೇಗೌಡ’ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿಯವರು ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸರಣಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಅವರು, “ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ ಬಿಜೆಪಿಗೆ ಇರುವುದಂತೂ ಸತ್ಯ. ಈ ಮಹಾ ಷಡ್ಯಂತ್ರದ ಭಾಗವೇ ಉರಿಗೌಡ, ನಂಜೇಗೌಡ ಎಂಬ ಸುಳ್ಳುಪಾತ್ರಗಳ ಸೃಷ್ಟಿ” ಎಂದಿದ್ದಾರೆ.

ಟಿಪ್ಪುವನ್ನು ಕೊಂದವರೆಂದು ಸೃಷ್ಟಿಸಲಾದ ಕಲ್ಪಿತ ಒಕ್ಕಲಿಗ ಹೆಸರುಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಕಳಂಕದ ದಳ್ಳುರಿಗೆ ತಳ್ಳುವ, ಐತಿಹಾಸಿಕ ನಂಜಿನ ವಿಷವರ್ತುಲಕ್ಕೆ ನೂಕುವ ಹೇಯ ಕೃತ್ಯವನ್ನು ಬಿಜೆಪಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು ಬಿಜೆಪಿ ಸರಕಾರ. ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಹೆಸರನ್ನು ಮರೆಮಾಚಿ ಕಲ್ಪಿತ ಹೆಸರುಗಳ ಕಮಾನು ಕಟ್ಟಿದ್ದೇ ಪರಮದ್ರೋಹ.
ಕುಲಕ್ಕೆ, ಕುಲ ಗುರುವಿಗಾದ ಈ ಘೋರ ಅಪಮಾನದಿಂದ ಕುದಿಯುತ್ತಿರುವ ಒಕ್ಕಲಿಗ ಸಮಾಜವನ್ನು ಇನ್ನಷ್ಟು ಹೀನಾಯವಾಗಿ ಕಳಂಕದ ಕೂಪಕ್ಕೆ ತಳ್ಳಲು ಇದೇ ಬಿಜೆಪಿ ಸರಕಾರದ ಸಚಿವರೊಬ್ಬರು ಧೂರ್ತ ಪ್ರಯತ್ನ ನಡೆಸಿದ್ದಾರೆ ಎಂದಿದ್ದಾರೆ.

ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ. ಬಿಜೆಪಿ ಸೃಷ್ಟಿಸಿದ ಕಿರಾತಕ ಸುಳ್ಳನ್ನೇ ಸಿನಿಮಾ ಮಾಡಿ ಒಕ್ಕಲಿಗರನ್ನು ಇತಿಹಾಸದಲ್ಲಿ ಶಾಶ್ವತವಾಗಿ ಖಳನಾಯಕರನ್ನಾಗಿ ಚಿತ್ರಿಸುವುದೇ ಅವರ ದುರುದ್ದೇಶವಾಗಿದೆ. ಈ ದ್ರೋಹವನ್ನು ಒಕ್ಕಲಿಗರು ಸಹಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಚರಿತ್ರೆಯನ್ನು ವಿರೂಪಗೊಳಿಸುವ ನಿರ್ಲಜ್ಜ ರಾಜಕಾರಣಕ್ಕೆ ಮೂಲಕಾರಣರು ಯಾರು? ಇಷ್ಟಕ್ಕೂ ಈ ಮುನಿರತ್ನಗೂ ಮಂಡ್ಯದ ಒಕ್ಕಲಿಗರಿಗೂ ಸಂಬಂಧವೇನು? ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು ಎಂದು ತಿಳಿಸಿದ್ದಾರೆ.

ಮುನಿರತ್ನ ಮಾಡುವ ಸಿನಿಮಾಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಥೆ ಬರೆಯುತ್ತಾರಾ? ಟಿಪ್ಪು ನೆಪದಲ್ಲಿ ಜನ್ಮತೆಳೆದ ಜಾತಿ ವಿರುದ್ಧವೇ ವಿಷ ಕಕ್ಕುತ್ತಿರುವ, ಬಿಜೆಪಿಯನ್ನು ಎತ್ತಿ ಕಟ್ಟುತ್ತಿರುವ ಸಿ.ಟಿ.ರವಿ ಅವರು ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳ ನೆಪದಲ್ಲಿ ದಿನವೂ ವಿಷ ಕಕ್ಕುತ್ತಿದ್ದಾರೆ ಎಂದಿದ್ದಾರೆ.

ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಂತೂ ಈಗ ಉರಿಗೌಡ, ನಂಜೇಗೌಡ ಎಂದು ವಿಷನಂಜು ಉಗಳುತ್ತಿದ್ದಾರೆ. ಅವರು ಈ ಸಿನಿಮಾಕ್ಕೆ ಚಿತ್ರಕಥೆ ಬರೆಯುತ್ತಾರಾಯೇ? ಬರೆದರೂ ಬರೆಯಬಹುದು. ಏಕೆಂದರೆ, ಇವರಿಬ್ಬರೂ ಕುಲದ್ರೋಹಿಗಳಷ್ಟೇ ಅಲ್ಲ, ಒಕ್ಕಲು ಸಂಕುಲದ ವಿನಾಶಕರು ಎಂದು ಕಿಡಿಕಾರಿದ್ದಾರೆ.

ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಬಿಜೆಪಿ ಸ್ಥಿತಿ. ಪ್ರತೀ ಸೂಕ್ಷ್ಮ ವಿಷಯದಲ್ಲೂ ಮತ ರಾಜಕಾರಣ ಮಾಡುವ ಕಮಲ ಪಕ್ಷಕ್ಕೆ ಕರ್ನಾಟಕವೇ ಪ್ರಯೋಗ ಶಾಲೆ. ಜಾತಿ, ಧರ್ಮಗಳ ನಡುವೆ ಕಿಚ್ಚಿಟ್ಟು, ಸರ್ವಜನಾಂಗದ ತೋಟವಾದ ಕರ್ನಾಟಕಕ್ಕೆ ಕೋಮುಪ್ರಾಷನ ಮಾಡಿಸುತ್ತಿದೆ ಬಿಜೆಪಿ . ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಒಕ್ಕಲಿಗ ಹೆಸರುಗಳ ಸೃಷ್ಟಿ, ಸಿನಿಮಾ ಮಾಡುವ ದುರುಳ ಐಡಿಯಾ, ಒಕ್ಕಲಿಗರ ಮೇಲೆ ಬಿಜೆಪಿ ಬೀರುತ್ತಿರುವ ವಕ್ರದೃಷ್ಟಿ… ಇದೆಲ್ಲವೂ ಒಕ್ಕಲಿಗರನ್ನು ರಾಜಕೀಯವಾಗಿ ಮುಗಿಸಿಬಿಡುವ ಬಿಜೆಪಿ ರಕ್ಕಸ ಹಿಡೆನ್ ಅಜೆಂಡಾ ಅಲ್ಲದೆ ಮತ್ತೇನೂ ಅಲ್ಲ ಎಂದಿದ್ದಾರೆ.

ಇದನ್ನೂ ಓದಿ: ವಿಶ್ವದಲ್ಲಿ ಭಾರತದ ಮಾನ ತೆಗೆದ ನಿಜವಾದ ಅಪರಾಧಿ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...