Homeಮುಖಪುಟ‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

ರಾಹುಲ್ ಗಾಂಧಿಯವರು ವಿದೇಶಕ್ಕೆ ಹೋದಾಗ ಭಾರತವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ

- Advertisement -
- Advertisement -

ವಿದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ರಾಹುಲ್‌ ಗಾಂಧಿಯವರು ಭಾರತವನ್ನು ವಿದೇಶಿ ನೆಲದಲ್ಲಿ ನಿಂತು ಅಗೌರವಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ಮೋದಿಯವರು ವಿವಿಧ ದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರದ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ತುಣುಕುಗಳನ್ನು ಕಾಂಗ್ರೆಸ್‌ ಹಂಚಿಕೊಂಡಿದ್ದು, ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರಿನಾಟೆ, “ಪ್ರಧಾನಿ ಮೋದಿ ಅವರು ವಿದೇಶದಲ್ಲಿ ನಿಂತು ಭಾರತವನ್ನು ಅವಮಾನಿಸಿದ ಸಂದರ್ಭಗಳಿವು” ಎಂದು ತಿಳಿಸಿದ್ದಾರೆ.

ಮೋದಿಯವರು ವಿದೇಶಿಯರನ್ನು ಉದ್ದೇಶಿಸಿ ಮಾತನಾಡಿರುವ ಒಂಬತ್ತು ಭಾಷಣಗಳ ತುಣುಕುಗಳನ್ನು ಈ ಸರಣಿ ಟ್ವೀಟ್ ಒಳಗೊಂಡಿದೆ. ಮೋದಿ ಅಧಿಕಾರಕ್ಕೆ ಬಂದ ನಂತರದ ಮೊದಲ ಕೆಲವು ವರ್ಷಗಳಲ್ಲಿ ಮಾಡಿದ ಹೆಚ್ಚಿನ ಭಾಷಣಗಳಲ್ಲಿ ಮನಮೋಹನ್ ಸಿಂಗ್ ಸರ್ಕಾರವನ್ನು ಉಲ್ಲೇಖಿಸುತ್ತಾ ಟೀಕೆಗಳನ್ನು ಮಾಡಿದ್ದರು.

ಚೀನಾ

2015ರಲ್ಲಿ ಮೋದಿ ಅವರು ಚೀನಾದ ಶಾಂಘೈನಲ್ಲಿ ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದರು. “ವಿದೇಶದಲ್ಲಿರುವ ಭಾರತೀಯರಿಗೆ ನಾನು ಭಾರತಕ್ಕೆ ಸೇರಿದವರು ಎಂಬ ಹೆಮ್ಮೆಯ ಭಾವನೆಯನ್ನು ನೀಡಿದ್ದೇನೆ” ಎಂದು ಹೇಳಿಕೆ ನೀಡಿದ್ದರು.

‘ದಿ ಹಿಂದೂ’ ಪತ್ರಿಕೆಯ ರಾಜತಾಂತ್ರಿಕ ಸಂಪಾದಕಿ ಸುಹಾಸಿನಿ ಹೈದರ್ ಟ್ವೀಟ್ ಮಾಡಿದ್ದು ಮೋದಿ ಹೇಳಿರುವ ಮಾತನ್ನು ಉಲ್ಲೇಖಿಸಿದ್ದಾರೆ. “ಒಂದು ವರ್ಷದ ಹಿಂದೆ ವಿದೇಶದಲ್ಲಿರುವ ಭಾರತೀಯರು ನಮ್ಮ ಗೆಲುವನ್ನು ಸಂಭ್ರಮಿಸಿದರು, ಹಾಡಿದರು, ಕೆಟ್ಟ ದಿನಗಳು ಹೋದವು. ಮೊದಲು ನಾಚಿಕೆಪಡುತ್ತಿದ್ದ ನೀವು ಇಂದು ಭಾರತದ ಬಗ್ಗೆ ಹೆಮ್ಮೆ ಪಡುತ್ತೀರಿ” ಎಂದಿದ್ದರು ಮೋದಿ. ಈ ಬಗ್ಗೆ ‘ದಿ ಹಿಂದೂ’ ಪತ್ರಿಕೆಯೂ ವರದಿ ಮಾಡಿತ್ತು. (ವರದಿ ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ)

ಈ ಮಾತಿಗೆ ಅನೇಕರು ವಿರೋಧ ವ್ಯಕ್ತಪಡಿಸಿರುವುದನ್ನು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿತ್ತು.

ದಕ್ಷಿಣ ಕೊರಿಯಾ

ದಕ್ಷಿಣ ಕೊರಿಯಾದಲ್ಲಿ ಮೇ 18, 2015ರಂದು ಸಿಯೋಲ್‌ನಲ್ಲಿನ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಿದ್ದರು. “ನಾವಿಂದು ಭಾರತದಲ್ಲಿ ಜೀವಿತಾವಧಿ ಶಿಕ್ಷೆಗೆ ಒಳಗಾಗಲು ನಾವು ಈ ಹಿಂದೆ ಏನು ಮಾಡಿದ್ದೆವು ಎಂದು ಆಶ್ಚರ್ಯಪಡುತ್ತಾ ಭಾರತೀಯರು ಹೇಳುವ ಕಾಲವಿತ್ತು. ಇದು ದೇಶವೇ? ಇದು ಸರ್ಕಾರವೇ? ಇವರು ಜನರೇ? ಹೋಗಲಿ ಬಿಡಿ” ಎಂದಿದ್ದರು ಮೋದಿ.

ಮೋದಿಯವರ ಹೆಸರಿನಲ್ಲಿರುವ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾದ ವಿಡಿಯೋದಲ್ಲಿಯೂ ಭಾಷಣ ಲಭ್ಯವಿದೆ.

ಮುಂದುವರಿದು ಮೋದಿ, “ಜನರು (ಹೊರಗೆ) ಹೊರಡುತ್ತಾರೆ. ‘ಸಹೋದರ ನೀವು ಇಲ್ಲಿ ವ್ಯಾಪಾರ ಮಾಡಬಾರದು, ಇಲ್ಲಿ ಬದುಕಬಾರದು’ ಎಂದು ಜನರಿಗೆ ಹೇಳುವುದನ್ನು ನಾವು ನೋಡುತ್ತೇವೆ. ಹೆಚ್ಚಿನ ಜನರು ಈಗಾಗಲೇ ದೇಶದ ಹೊರಗೆ ಕಾಲಿಟ್ಟಿದ್ದಾರೆ. ನಾನು ಕಾರಣಗಳಿಗೆ ಹೋಗಲು ಬಯಸುವುದಿಲ್ಲ. ಇದರ ರಾಜಕೀಯದ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಆದರೆ ಇದು ನೆಲದ ಸತ್ಯ. ಜನರು ನಿರಾಶೆಗೊಂಡರು, ಕೋಪಗೊಂಡರು. ನಾನು ಇಂದು ನಂಬಿಕೆಯಿಂದ ಹೇಳಬಲ್ಲೆ: ವಿವಿಧ ಕ್ಷೇತ್ರಗಳಲ್ಲಿನ ಸಾಧಕರು (ಪ್ರಸಿದ್ಧ ವಿಜ್ಞಾನಿಗಳು ಮತ್ತು ಮುಂತಾದವರು) ವಿದೇಶದಲ್ಲಿ ಇರುವುದಕ್ಕಿಂತ, ಕಡಿಮೆ ಹಣವನ್ನು ಪಡೆಯಲಿದ್ದರೂ ಸಹ ಭಾರತಕ್ಕೆ ಮರಳಲು ಉತ್ಸುಕರಾಗಿದ್ದಾರೆ” ಎಂದು ತಿಳಿಸಿದ್ದರು.

“ಈಗ ಮನಸ್ಥಿತಿ ಬದಲಾಗಿದೆ” ಎಂದು ಪ್ರಧಾನಿ ಬಣ್ಣಿಸಿದ್ದರು. “ಸರ್ಕಾರವೆಂದರೆ ದೇಶವಲ್ಲ, ಇದು 125 ಕೋಟಿ ಜನರ ಉತ್ಸಾಹ” ಎಂದು ತಾತ್ವಿಕವಾಗಿ ಮಾತನಾಡಿದ್ದರು.

ಜರ್ಮನಿ

ಯುರೋಪ್ ಪ್ರವಾಸದ ಭಾಗವಾಗಿ ಜರ್ಮನಿಯ ಬರ್ಲಿನ್‌ನಲ್ಲಿ ಮೋದಿಯವರು ಮಾತನಾಡಿ ಕಾಂಗ್ರೆಸ್‌ನ ವಿರುದ್ಧ ವಾಗ್ದಾಳಿ ನಡೆಸಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. “ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಭಾರತೀಯರು 1 ರೂಪಾಯಿಯಲ್ಲಿ ಕೇವಲ 15 ಪೈಸೆಗಳನ್ನು ಪಡೆಯುತ್ತಿದ್ದರು” ಎಂದು ಮೋದಿ ಟೀಕಿಸಿದ್ದರು.

“ವೋ ಕೌನ್ಸಾ ಪಂಜಾ ಥಾ ಜೋ 85 ಪೈಸೆ ಘಿಸ್ ಲೇತಾ ಥಾ?” (85 ಪೈಸೆಗಳನ್ನು ಯಾವ ಕೈಗಳು ತೆಗೆದುಕೊಂಡು ಹೋಗುತ್ತಿದ್ದವು?” ಎಂದು ಪ್ರಶ್ನಿಸಿದ್ದರು.

(ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ದ ಗುರುತು.)

ಆಸ್ಟ್ರೇಲಿಯಾ

2014ರಲ್ಲಿ ತಮ್ಮ ಜನಪ್ರಿಯತೆಯ ಉತ್ತುಂಗದಲ್ಲಿದ್ದಾಗ ಮೋದಿಯವರು ಸಿಡ್ನಿಯ ಒಲಿಂಪಿಕ್ ಪಾರ್ಕ್‌ನಲ್ಲಿರುವ ಆಲ್‌ಫೋನ್ಸ್ ಅರೆನಾದಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದರು. ಸುಮಾರು ಮೂರು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಿದ್ದು ಇದೇ ಮೊದಲಾಗಿತ್ತು.

ಮೋದಿ ತಮ್ಮ ಭಾಷಣದಲ್ಲಿ, “ಹಿಂದಿನ ಸರ್ಕಾರವು, ‘ನಾವು ಈ ಕಾನೂನು ಮಾಡಿದೆವು, ಆ ಕಾನೂನು ಮಾಡಿದೆವು’ ಎಂದು ಹೇಳುತ್ತಿತ್ತು. ಆದರೆ ನನ್ನ ವಾಹನ ಬೇರೆ ದಾರಿಯಲ್ಲಿ ಹೋಗುತ್ತದೆ. ಕಾನೂನುಗಳನ್ನು ರಚಿಸುವಲ್ಲಿ ಅವರು ಸಂತೋಷವನ್ನು ಕಂಡುಕೊಳ್ಳುತ್ತಾರೆ. ಅವುಗಳನ್ನು ಕೊನೆಗೊಳಿಸುವುದರಲ್ಲಿ ನಾನು ಸಂತೋಷವನ್ನು ಕಂಡುಕೊಳ್ಳುತ್ತೇನೆ” ಎಂದು ತಿಳಿಸಿದ್ದರು.

(ಪೂರ್ಣ ಭಾಷಣವನ್ನು ಇಲ್ಲಿ ಕಾಣಬಹುದು.)

ಅಮೆರಿಕ

2014ರ ಸೆಪ್ಟಂಬರ್‌ನಲ್ಲಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮಾತನಾಡಿದ ಮೋದಿ ಅವರು, ಆಸ್ಟ್ರೆಲಿಯಾದಲ್ಲಿ ಮಾತನಾಡಿದ್ದನ್ನೇ ಪುನರುಚ್ಚರಿಸಿದ್ದರು.

ಅವರು ಹಿಂದಿಯಲ್ಲಿ ಮಾಡಿದ ಭಾಷಣದ ಭಾಷಾಂತರವನ್ನು ಇಂಗ್ಲಿಷ್‌ನಲ್ಲಿ ‘ಪ್ರೆಸ್ ಬ್ಯುರೊ ಆಫ್‌ ಇಂಡಿಯಾ’ ಒದಗಿಸಿತ್ತು. (ಅದನ್ನು ‘ಇಲ್ಲಿ’ ನೋಡಬಹುದು.)

“ಅವರು ಆ, ಈ ಕಾನೂನು ಮಾಡಿದ್ದರ ಬಗ್ಗೆ ಹೆಮ್ಮೆಪಡುತ್ತಾರೆ. ಇಡೀ ಚುನಾವಣಾ ಪ್ರಚಾರದಲ್ಲಿ ನೀವು ಇದನ್ನು ಕೇಳಿರಬೇಕು. ನಾನು ವಿಭಿನ್ನವಾಗಿ ಕೆಲಸ ಮಾಡುತ್ತೇನೆ. ಅನಗತ್ಯ ಕಾನೂನುಗಳನ್ನು ತೆಗೆದುಹಾಕಲು ನಾನು ಕೆಲಸ ಮಾಡುತ್ತಿದ್ದೇನೆ. ಇಂತಹ ಹಳತಾದ ಕಾನೂನು, ಅನಗತ್ಯ ಕಾನೂನುಗಳ ಜಾಲದಲ್ಲಿ ಒಬ್ಬ ಸಾಮಾನ್ಯ ಮನುಷ್ಯನು ಪ್ರವೇಶಿಸಲು ಧೈರ್ಯ ಮಾಡಿದರೆ, ಅವನು ತನ್ನ ದಾರಿಯನ್ನು ಕಂಡುಕೊಳ್ಳುವುದಿಲ್ಲ. ನಾನು ವಿಶೇಷವಾಗಿ ತಜ್ಞರ ತಂಡವನ್ನು ರಚಿಸಿದ್ದೇನೆ. ಪ್ರತಿದಿನ ಒಂದಾದರೂ ಕಾನೂನನ್ನು ತೊಡೆದುಹಾಕಲು ಸಾಧ್ಯವಾದರೆ ನಾನು ಹೆಚ್ಚು ಸಂತೋಷವಾಗಿರುತ್ತೇನೆ ಎಂದು ನಾನು ಅವರಿಗೆ ಸೂಚನೆ ನೀಡಿದ್ದೇನೆ” ಎಂದಿದ್ದರು ಪ್ರಧಾನಿ.

ಕೆನಡಾ

ಯೂಟ್ಯೂಬ್‌ನಲ್ಲಿನ ಅಧಿಕೃತ ‘ಪಿಎಂಒ ಇಂಡಿಯಾ’ ಖಾತೆಗೆ 2015ರಲ್ಲಿ ಅಪ್‌ಲೋಡ್ ಮಾಡಿದ ಭಾಷಣವು ಕೆನಡಾದ ಟೊರೊಂಟೊದಲ್ಲಿ ದೊಡ್ಡ ಜನಸಮೂಹವನ್ನುದ್ದೇಶಿಸಿ ಮೋದಿಯವರು ಮಾತನಾಡಿದ್ದಕ್ಕೆ ಸಂಬಂಧಿಸಿದೆ. “ಅಪದ್ರವ ಸೃಷ್ಟಿಸಿದವರು ತೊರೆದಿದ್ದಾರೆ, ಆದರೆ ನಾನು ಅದನ್ನು ಸ್ವಚ್ಛಗೊಳಿಸುತ್ತೇನೆ” ಎನ್ನುತ್ತಾರೆ ಮೋದಿ.

(ಪ್ರೇಕ್ಷಕರ ಚಪ್ಪಾಳೆ ಕೇಳಿಬರುತ್ತದೆ.)

ಯುಕೆ

2018ರಲ್ಲಿ ಲಂಡನ್‌ನಲ್ಲಿ ಮೋದಿಯವರು ಮಾತನಾಡಿರುವ ವಿಡಿಯೊ ಕ್ಲಿಪ್ ಕೂಡ ಸುಪ್ರಿಯಾ ಹಂಚಿಕೊಂಡಿದ್ದಾರೆ. ಈ ಭಾಷಣದ ಬಗ್ಗೆ ‘ದಿ ವೈರ್’ ಕೂಡ ವರದಿ ಮಾಡಿದೆ. ಮೋದಿಯವರು ಲಂಡನ್‌ನಲ್ಲಿ ಮಾಡಿದ ಭಾಷಣಕ್ಕೆ ಭಾರತೀಯ ವೈದ್ಯರು ಅಸಮಾಧಾನ ವ್ಯಕ್ತಪಡಿಸಿದ್ದನ್ನು ‘ದಿ ವೈರ್‌’ ವರದಿಯಲ್ಲಿ ಕಾಣಬಹುದು.

ಸಾಮಾಜಿಕ ಮಾಧ್ಯಮಗಳಲ್ಲಿ ಮೋದಿಯವರ ಭಾಷಣ ವ್ಯಾಪಕವಾಗಿ ವೈರಲ್ ಆಗಿತ್ತು. “ಔಷಧೀಯ ಕಂಪನಿಗಳ ಪ್ರಾಯೋಜಿತ ಸಮ್ಮೇಳನಗಳಲ್ಲಿ ಪಾಲ್ಗೊಳ್ಳಲು ವೈದ್ಯರು ವಿದೇಶಿ ಪ್ರವಾಸ ಮಾಡುತ್ತಾರೆ” ಎಂಬುದಾಗಿ ಮೋದಿ ಹೇಳಿಕೆ ನೀಡಿದ್ದರು. “ವೈದ್ಯರ ಸಮ್ಮೇಳನಗಳನ್ನು ಕೆಲವೊಮ್ಮೆ ಸಿಂಗಾಪುರದಲ್ಲಿ, ಕೆಲವೊಮ್ಮೆ ದುಬೈನಲ್ಲಿ ನಡೆಸಲಾಗುತ್ತದೆ ಎಂದು ನಿಮಗೆ ತಿಳಿದಿರಬಹುದು. ಅಲ್ಲಿ ಜನರು ಅನಾರೋಗ್ಯದಿಂದ ಬಳಲುತ್ತಿದ್ದಾರೆಂದು ಅವರು ಅಲ್ಲಿಗೆ ಹೋಗುವುದಿಲ್ಲ; ಔಷಧ ಕಂಪನಿಗಳಿಗೆ ಬೇಕಾಗಿರುವುದರಿಂದ ಅವರು ಹೋಗುತ್ತಾರೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...