Homeಮುಖಪುಟಕಾಂಗ್ರೆಸ್ ಹೊರಗಿಟ್ಟು ವಿರೋಧಿ ಬಣ ಕಟ್ಟಲು ಮುಂದಾದ ಟಿಎಂಸಿ, ಎಸ್‌ಪಿ

ಕಾಂಗ್ರೆಸ್ ಹೊರಗಿಟ್ಟು ವಿರೋಧಿ ಬಣ ಕಟ್ಟಲು ಮುಂದಾದ ಟಿಎಂಸಿ, ಎಸ್‌ಪಿ

- Advertisement -
- Advertisement -

ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನೂ ಒಂದು ಒಂದೇ ಅಂತರದಲ್ಲಿ ಇರಿಸಲು ಮೂರು ಪ್ರಮುಖ ವಿರೋಧ ಪಕ್ಷಗಳು ಒಪ್ಪಿಕೊಂಡಿವೆ. ಕಾಂಗ್ರೆಸ್‌, ಬಿಜೆಪಿಯನ್ನು ಸಮಾನವಾಗಿ ಪರಿಗಣಿಸಲು ಮುಂದಾಗಿವೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಇಂದು ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಬಿಜು ಜನತಾ ದಳದ ಮುಖ್ಯಸ್ಥರಾದ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಂದಿನ ವಾರ ಭೇಟಿಯಾಗಲಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷಗಳ ಗುಂಪಿನ ಪ್ರಮುಖ ನಾಯಕ ಎಂದು ಬಿಂಬಿಸುವ ಬಿಜೆಪಿಯ ಪ್ರಯತ್ನವನ್ನು ಎದುರಿಸುವ ಗುರಿಯನ್ನು ಈ ತಂತ್ರ ಹೊಂದಿದೆ ಎಂದು ಹೇಳಲಾಗುತ್ತಿದೆ.

ಭಾರತದ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ ಎಂದು ಲಂಡನ್‌ನಲ್ಲಿ ರಾಹುಲ್‌ ಗಾಂಧಿಯವರು ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಬಿಜೆಪಿ, ಕಾಂಗ್ರೆಸ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತಿದೆ. ಈ ವಿರೋಧ ಪಕ್ಷಗಳು ಬೇರೆಯದೇ ರೀತಿಯಲ್ಲಿ ಈ ವಿದ್ಯಮಾನವನ್ನು ಪರಿಭಾವಿಸಿವೆ. “ಈಗ ಬಿಜೆಪಿಯು ರಾಹುಲ್ ಅವರನ್ನು ಬಳಸಿಕೊಂಡು ನಮ್ಮನ್ನು ಗುರಿಯಾಗಿಸಿಕೊಂಡಿದೆ” ಈ  ಶಂಕಿಸುತ್ತಿವೆ.

“ರಾಹುಲ್ ಗಾಂಧಿಯವರು ವಿದೇಶದಲ್ಲಿ ಭಾಷಣ ಮಾಡಿದ್ದಾರೆ, ಅವರು ಕ್ಷಮೆಯಾಚಿಸುವವರೆಗೂ ಬಿಜೆಪಿ ಸಂಸತ್ತಿನ ಕಲಾಪಗಳಿಗೆ ಅವಕಾಶ ನೀಡುವುದಿಲ್ಲ. ಇದರರ್ಥ ಅವರು ಕಾಂಗ್ರೆಸ್ ಅನ್ನು ಬಳಸಿಕೊಂಡು ಕಲಾಪಗಳು ನಡೆಯದಂತೆ ನೋಡಿಕೊಂಡಿದೆ. ರಾಹುಲ್ ಗಾಂಧಿಯವರು ವಿರೋಧಿ ಬಣದ ಮುಖವಾಗಿರಬೇಕೆಂದು ಬಿಜೆಪಿ ಬಯಸುತ್ತದೆ. ಇದರಿಂದ ಬಿಜೆಪಿಗೆ ಅನುಕೂಲವಾಗುತ್ತದೆ. (2024ರ ಚುನಾವಣೆಗೆ) ಪ್ರಧಾನ ಮಂತ್ರಿಯ ಮುಖವನ್ನು ನಿರ್ಧರಿಸುವ ಅಗತ್ಯವಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ತಿಳಿಸಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ವಿರೋಧ ಪಕ್ಷದ ‘ಬಿಗ್ ಬಾಸ್ ಕಾಂಗ್ರೆಸ್’ ಎಂದು ಭಾವಿಸುವುದು ತಪ್ಪು ಎಂದು ಬಂಡೋಪಾಧ್ಯಾಯ ಹೇಳಿದ್ದಾರೆ.

“ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾರ್ಚ್ 23 ರಂದು ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿದ್ದಾರೆ. ನಾವು ಇದನ್ನು (ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಸಮಾನ ಅಂತರವನ್ನು ಕಾಯ್ದುಕೊಳ್ಳುವ ಯೋಜನೆ) ಇತರ ವಿರೋಧ ಪಕ್ಷಗಳೊಂದಿಗೆ ಚರ್ಚಿಸುತ್ತೇವೆ. ಇದು ತೃತೀಯ ರಂಗ ಎಂದು ನಾವು ಹೇಳುತ್ತಿಲ್ಲ, ಆದರೆ ಪ್ರಾದೇಶಿಕ ಪಕ್ಷಗಳಿಗೆ ಈ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಇದೆ” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಸಮಾನ ಅಂತರವನ್ನು ಕಾಯ್ದುಕೊಳ್ಳಲು ಬಯಸಿದ್ದೇನೆ” ಎಂದು ಅಖಿಲೇಶ್ ಯಾದವ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿರಿ: ‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

“ಬಂಗಾಳದಲ್ಲಿ, ನಾವು ಮಮತಾ ದೀದಿಯವರೊಂದಿಗೆ ಇದ್ದೇವೆ. ಇದೀಗ, ನಮ್ಮ ನಿಲುವು ಬಿಜೆಪಿ ಮತ್ತು ಕಾಂಗ್ರೆಸ್ ಎರಡರಿಂದಲೂ ಸಮಾನ ಅಂತರವನ್ನು ಕಾಯ್ದುಕೊಳ್ಳುವುದಾಗಿದೆ” ಎಂದು ಅಖಿಲೇಶ್‌ ಕೋಲ್ಕತ್ತಾದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಿಜೆಪಿಗೆ ಸೇರಿದ ನಂತರ ಕೇಂದ್ರ ತನಿಖಾ ಸಂಸ್ಥೆಗಳ ಪ್ರಕರಣಗಳಿಂದ ಬಚಾವಾದ ವಿರೋಧ ಪಕ್ಷದ ಮಾಜಿ ನಾಯಕರನ್ನು ಉಲ್ಲೇಖಿಸಿ ಮಾತನಾಡಿರುವ ಅವರು, “ಬಿಜೆಪಿ ಲಸಿಕೆ ಪಡೆಯುವವರಿಗೆ ಸಿಬಿಐ, ಇಡಿ ಅಥವಾ ಐಟಿಯಿಂದ ತೊಂದರೆಯಾಗುವುದಿಲ್ಲ” ಎಂದು ಟೀಕಿಸಿದ್ದಾರೆ.

ಇತ್ತೀಚೆಗೆ ಆಮ್ ಆದ್ಮಿ ಪಕ್ಷದ ಮನೀಶ್ ಸಿಸೋಡಿಯಾ, ರಾಷ್ಟ್ರೀಯ ಜನತಾ ದಳದ ಲಾಲು ಯಾದವ್ ಮತ್ತು ಅವರ ಕುಟುಂಬದ ಹಲವಾರು ವಿರೋಧ ಪಕ್ಷದ ನಾಯಕರನ್ನು ಕೇಂದ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯದಿಂದ ಬೇಟೆಯಾಡಲಾಗಿದೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...