Homeಅಂತರಾಷ್ಟ್ರೀಯಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಕೈಗೊಂಡಿರುವ ಕ್ರಮ ಜಾರಿ ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ.

- Advertisement -
- Advertisement -

ಉಕ್ರೇನ್- ರಷ್ಯಾ ಯುದ್ಧದ ಸಂಬಂಧ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಬಂಧನ ವಾರಂಟ್ ಹೊರಡಿಸುವ ಪ್ರಮುಖ ಕ್ರಮವನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ಐಸಿಸಿ) ತೆಗೆದುಕೊಂಡಿದೆ.

ಮಕ್ಕಳನ್ನು ಗಡೀಪಾರು ಮಾಡುವ ಯುದ್ಧ ಅಪರಾಧದ ಆರೋಪ ಹೊತ್ತಿರುವ ರಷ್ಯಾದ ಅಧ್ಯಕ್ಷರು ನಿಜವಾಗಿಯೂ ಹೇಗ್‌ನಲ್ಲಿ ವಿಚಾರಣೆಗೆ ನಿಲ್ಲುವ ಸಾಧ್ಯತೆಯಿದೆಯೇ ಎಂಬ ಪ್ರಶ್ನೆ ಸದ್ಯಕ್ಕೆ ಹುಟ್ಟಿಕೊಂಡಿದೆ.

ಪುಟಿನ್ ಮತ್ತು ಮಕ್ಕಳ ಹಕ್ಕುಗಳ ರಷ್ಯಾದ ಅಧ್ಯಕ್ಷೀಯ ಕಮಿಷನರ್ ಮರಿಯಾ ಲ್ವೊವಾ-ಬೆಲೋವಾ ಅವರು ಐಸಿಸಿ ಸದಸ್ಯ ದೇಶಗಳಿಗೆ ಪ್ರಯಾಣಿಸಿದರೆ ಬಂಧನ ವಾರಂಟ್‌ಗಳನ್ನು ಎದುರಿಸುವ ಸಾಧ್ಯತೆ ಇದೆ. ಆದರೆ ಈ ಕ್ರಮವನ್ನು ಐಸಿಸಿ ಸದಸ್ಯ ರಾಷ್ಟ್ರಗಳು ಜರುಗಿಸುತ್ತವೆಯೇ ಎಂಬುದು ಸದ್ಯದ ಪ್ರಶ್ನೆ.

ಪುಟಿನ್ ಆ 123 ರಾಷ್ಟ್ರಗಳಲ್ಲಿ ಯಾವುದಾದರೂ ಒಂದು ದೇಶಕ್ಕೆ ಕಾಲಿಟ್ಟರೆ ಬಂಧನಕ್ಕೆ ಹೊಣೆಯಾಗುತ್ತಾರೆಯೇ ಎಂದು ಕೇಳಿದಾಗ ‘ಅದು ಸರಿ’ ಎಂದು ಐಸಿಸಿ ಪ್ರಾಸಿಕ್ಯೂಟರ್ ಕರೀಮ್ ಖಾನ್ ಅವರು ಎಎಫ್‌ಪಿಗೆ ತಿಳಿಸಿದ್ದಾರೆ.

ಆದರೆ ಈ ಕ್ರಮದಿಂದಾಗಿ ಪುಟಿನ್‌ ಅವರ ಪ್ರಯಾಣವನ್ನು ಕಷ್ಟಕರವಾಗಿಸಬಹುದು. ನ್ಯಾಯಾಲಯವು ತನ್ನ ವಾರಂಟ್‌ಗಳನ್ನು ಜಾರಿಗೊಳಿಸಲು ತನ್ನದೇ ಆದ ಪೋಲೀಸ್ ಬಲವನ್ನು ಹೊಂದಿಲ್ಲ. ಐಸಿಸಿ ವ್ಯಾಪ್ತಿಯ ದೇಶಗಳ ಮೇಲೆ ಈ ಕ್ರಮ ಅವಲಂಬಿತವಾಗಿದೆ.

ವಿಶೇಷವಾಗಿ ಪುಟಿನ್‌ ಅಂಥವರ ವಿಚಾರದಲ್ಲಿ ಐಸಿಸಿ ಸದಸ್ಯ ದೇಶಗಳು ಯಾವತ್ತೂ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ.

ಸುಡಾನ್‌ನ ಮಾಜಿ ನಾಯಕ ಒಮರ್ ಅಲ್-ಬಶೀರ್ ಅವರು ಐಸಿಸಿ ವಾರಂಟ್‌ಗೆ ಒಳಪಟ್ಟಿದ್ದರೂ ಸಹ ದಕ್ಷಿಣ ಆಫ್ರಿಕಾ ಮತ್ತು ಜೋರ್ಡಾನ್ ಸೇರಿದಂತೆ ಹಲವಾರು ಐಸಿಸಿ ಸದಸ್ಯ ರಾಷ್ಟ್ರಗಳಿಗೆ ಭೇಟಿ ನೀಡುವಲ್ಲಿ ಯಶಸ್ವಿಯಾಗಿದ್ದರು.

2019ರಲ್ಲಿ ಪದಚ್ಯುತಗೊಂಡಿದ್ದರೂ, ಸುಡಾನ್ ಇನ್ನೂ ಅವರನ್ನು ಹಸ್ತಾಂತರಿಸಿಲ್ಲ.

ಕೊಲಂಬಿಯಾ ಕಾನೂನು ಶಾಲೆಯ ಪ್ರೊಫೆಸರ್ ಮ್ಯಾಥ್ಯೂ ವ್ಯಾಕ್ಸ್‌ಮನ್ ಪ್ರತಿಕ್ರಿಯಿಸಿ, “ಇದು ಐಸಿಸಿಯ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. ಆದರೆ ನಾವು ಪುಟಿನ್ ಅವರನ್ನು ಬಂಧಿಸುವುದನ್ನು ನೋಡುವ ಸಾಧ್ಯತೆಗಳು ಕಡಿಮೆ” ಎಂದಿದ್ದಾರೆ.

ಮುಖ್ಯ ಅಡಚಣೆಗಳೇನು?

ಯುನೈಟೆಡ್ ಸ್ಟೇಟ್ಸ್, ಚೀನಾ ದೇಶಗಳ ಹಾಗೆ ರಶಿಯಾ ಕೂಡ ಐಸಿಸಿ ಸದಸ್ಯತ್ವ ಹೊಂದಿಲ್ಲ.

ಐಸಿಸಿಯು ಪುಟಿನ್ ವಿರುದ್ಧ ಆರೋಪಗಳನ್ನು ಸಲ್ಲಿಸಲು ಸಾಧ್ಯವಾಯಿತು. ಏಕೆಂದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಉಕ್ರೇನ್ ತನ್ನ ಅಧಿಕಾರ ವ್ಯಾಪ್ತಿಯನ್ನು ಒಪ್ಪಿಕೊಂಡಿದೆ, ಆದರೂ ಕೀವ್ (ಉಕ್ರೇನ್ ರಾಜಧಾನಿ) ಕೂಡ ಸದಸ್ಯತ್ವವನ್ನು ಹೊಂದಿಲ್ಲ.

ಇದನ್ನೂ ಓದಿರಿ: ಉಕ್ರೇನ್‌ನಿಂದ ರಷ್ಯಾ ಪಡೆ ಹಿಂತೆಗೆದುಕೊಳ್ಳುವ ನಿರ್ಣಯದ ಮೇಲೆ ಮತದಾನ: ದೂರ ಉಳಿದ ಭಾರತ

ಆದರೆ ಪುಟಿನ್ ವಿರುದ್ಧದ ವಾರಂಟ್‌ಗಳನ್ನು ಮಾಸ್ಕೋ (ರಷ್ಯಾ) ವಜಾಗೊಳಿಸಿದೆ.

ಯಾವುದೇ ಸಂದರ್ಭದಲ್ಲಿ ರಷ್ಯಾ ತನ್ನ ನಾಗರಿಕರನ್ನು ಹಸ್ತಾಂತರಿಸುವುದಿಲ್ಲ.

ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು, “ಈ ನ್ಯಾಯಾಲಯದ ನ್ಯಾಯವ್ಯಾಪ್ತಿಯನ್ನು ರಷ್ಯಾ ಗುರುತಿಸುವುದಿಲ್ಲ. ಆದ್ದರಿಂದ ಕಾನೂನು ದೃಷ್ಟಿಕೋನದಿಂದ, ಈ ನ್ಯಾಯಾಲಯದ ನಿರ್ಧಾರಗಳು ಅನೂರ್ಜಿತವಾಗಿವೆ” ಎಂದು ಹೇಳಿದ್ದಾರೆ.

ರಷ್ಯಾ ವಾಸ್ತವವಾಗಿ ನ್ಯಾಯಾಲಯದ ಮಹತ್ವದ ನಿರ್ಧಾರವಾದ ರೋಮ್ ಶಾಸನಕ್ಕೆ ಸಹಿ ಹಾಕಿತು. ಆದರೆ ಸದಸ್ಯರಾಗಲು ಅದನ್ನು ಅಂಗೀಕರಿಸಲಿಲ್ಲ. ನಂತರ ಜಾರ್ಜಿಯಾದಲ್ಲಿ 2008 ರ ಯುದ್ಧದ ಬಗ್ಗೆ ಐಸಿಸಿ ತನಿಖೆಯನ್ನು ಪ್ರಾರಂಭಿಸಿದ ನಂತರ 2016ರಲ್ಲಿ ಪುಟಿನ್ ಅವರ ಆದೇಶದ ಮೇರೆಗೆ ತನ್ನ ಸಹಿಯನ್ನೂ ಹಿಂತೆಗೆದುಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...