Homeಅಂತರಾಷ್ಟ್ರೀಯಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಕೈಗೊಂಡಿರುವ ಕ್ರಮ ಜಾರಿ ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ.

- Advertisement -
- Advertisement -

ಉಕ್ರೇನ್- ರಷ್ಯಾ ಯುದ್ಧದ ಸಂಬಂಧ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಬಂಧನ ವಾರಂಟ್ ಹೊರಡಿಸುವ ಪ್ರಮುಖ ಕ್ರಮವನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ಐಸಿಸಿ) ತೆಗೆದುಕೊಂಡಿದೆ.

ಮಕ್ಕಳನ್ನು ಗಡೀಪಾರು ಮಾಡುವ ಯುದ್ಧ ಅಪರಾಧದ ಆರೋಪ ಹೊತ್ತಿರುವ ರಷ್ಯಾದ ಅಧ್ಯಕ್ಷರು ನಿಜವಾಗಿಯೂ ಹೇಗ್‌ನಲ್ಲಿ ವಿಚಾರಣೆಗೆ ನಿಲ್ಲುವ ಸಾಧ್ಯತೆಯಿದೆಯೇ ಎಂಬ ಪ್ರಶ್ನೆ ಸದ್ಯಕ್ಕೆ ಹುಟ್ಟಿಕೊಂಡಿದೆ.

ಪುಟಿನ್ ಮತ್ತು ಮಕ್ಕಳ ಹಕ್ಕುಗಳ ರಷ್ಯಾದ ಅಧ್ಯಕ್ಷೀಯ ಕಮಿಷನರ್ ಮರಿಯಾ ಲ್ವೊವಾ-ಬೆಲೋವಾ ಅವರು ಐಸಿಸಿ ಸದಸ್ಯ ದೇಶಗಳಿಗೆ ಪ್ರಯಾಣಿಸಿದರೆ ಬಂಧನ ವಾರಂಟ್‌ಗಳನ್ನು ಎದುರಿಸುವ ಸಾಧ್ಯತೆ ಇದೆ. ಆದರೆ ಈ ಕ್ರಮವನ್ನು ಐಸಿಸಿ ಸದಸ್ಯ ರಾಷ್ಟ್ರಗಳು ಜರುಗಿಸುತ್ತವೆಯೇ ಎಂಬುದು ಸದ್ಯದ ಪ್ರಶ್ನೆ.

ಪುಟಿನ್ ಆ 123 ರಾಷ್ಟ್ರಗಳಲ್ಲಿ ಯಾವುದಾದರೂ ಒಂದು ದೇಶಕ್ಕೆ ಕಾಲಿಟ್ಟರೆ ಬಂಧನಕ್ಕೆ ಹೊಣೆಯಾಗುತ್ತಾರೆಯೇ ಎಂದು ಕೇಳಿದಾಗ ‘ಅದು ಸರಿ’ ಎಂದು ಐಸಿಸಿ ಪ್ರಾಸಿಕ್ಯೂಟರ್ ಕರೀಮ್ ಖಾನ್ ಅವರು ಎಎಫ್‌ಪಿಗೆ ತಿಳಿಸಿದ್ದಾರೆ.

ಆದರೆ ಈ ಕ್ರಮದಿಂದಾಗಿ ಪುಟಿನ್‌ ಅವರ ಪ್ರಯಾಣವನ್ನು ಕಷ್ಟಕರವಾಗಿಸಬಹುದು. ನ್ಯಾಯಾಲಯವು ತನ್ನ ವಾರಂಟ್‌ಗಳನ್ನು ಜಾರಿಗೊಳಿಸಲು ತನ್ನದೇ ಆದ ಪೋಲೀಸ್ ಬಲವನ್ನು ಹೊಂದಿಲ್ಲ. ಐಸಿಸಿ ವ್ಯಾಪ್ತಿಯ ದೇಶಗಳ ಮೇಲೆ ಈ ಕ್ರಮ ಅವಲಂಬಿತವಾಗಿದೆ.

ವಿಶೇಷವಾಗಿ ಪುಟಿನ್‌ ಅಂಥವರ ವಿಚಾರದಲ್ಲಿ ಐಸಿಸಿ ಸದಸ್ಯ ದೇಶಗಳು ಯಾವತ್ತೂ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ.

ಸುಡಾನ್‌ನ ಮಾಜಿ ನಾಯಕ ಒಮರ್ ಅಲ್-ಬಶೀರ್ ಅವರು ಐಸಿಸಿ ವಾರಂಟ್‌ಗೆ ಒಳಪಟ್ಟಿದ್ದರೂ ಸಹ ದಕ್ಷಿಣ ಆಫ್ರಿಕಾ ಮತ್ತು ಜೋರ್ಡಾನ್ ಸೇರಿದಂತೆ ಹಲವಾರು ಐಸಿಸಿ ಸದಸ್ಯ ರಾಷ್ಟ್ರಗಳಿಗೆ ಭೇಟಿ ನೀಡುವಲ್ಲಿ ಯಶಸ್ವಿಯಾಗಿದ್ದರು.

2019ರಲ್ಲಿ ಪದಚ್ಯುತಗೊಂಡಿದ್ದರೂ, ಸುಡಾನ್ ಇನ್ನೂ ಅವರನ್ನು ಹಸ್ತಾಂತರಿಸಿಲ್ಲ.

ಕೊಲಂಬಿಯಾ ಕಾನೂನು ಶಾಲೆಯ ಪ್ರೊಫೆಸರ್ ಮ್ಯಾಥ್ಯೂ ವ್ಯಾಕ್ಸ್‌ಮನ್ ಪ್ರತಿಕ್ರಿಯಿಸಿ, “ಇದು ಐಸಿಸಿಯ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. ಆದರೆ ನಾವು ಪುಟಿನ್ ಅವರನ್ನು ಬಂಧಿಸುವುದನ್ನು ನೋಡುವ ಸಾಧ್ಯತೆಗಳು ಕಡಿಮೆ” ಎಂದಿದ್ದಾರೆ.

ಮುಖ್ಯ ಅಡಚಣೆಗಳೇನು?

ಯುನೈಟೆಡ್ ಸ್ಟೇಟ್ಸ್, ಚೀನಾ ದೇಶಗಳ ಹಾಗೆ ರಶಿಯಾ ಕೂಡ ಐಸಿಸಿ ಸದಸ್ಯತ್ವ ಹೊಂದಿಲ್ಲ.

ಐಸಿಸಿಯು ಪುಟಿನ್ ವಿರುದ್ಧ ಆರೋಪಗಳನ್ನು ಸಲ್ಲಿಸಲು ಸಾಧ್ಯವಾಯಿತು. ಏಕೆಂದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಉಕ್ರೇನ್ ತನ್ನ ಅಧಿಕಾರ ವ್ಯಾಪ್ತಿಯನ್ನು ಒಪ್ಪಿಕೊಂಡಿದೆ, ಆದರೂ ಕೀವ್ (ಉಕ್ರೇನ್ ರಾಜಧಾನಿ) ಕೂಡ ಸದಸ್ಯತ್ವವನ್ನು ಹೊಂದಿಲ್ಲ.

ಇದನ್ನೂ ಓದಿರಿ: ಉಕ್ರೇನ್‌ನಿಂದ ರಷ್ಯಾ ಪಡೆ ಹಿಂತೆಗೆದುಕೊಳ್ಳುವ ನಿರ್ಣಯದ ಮೇಲೆ ಮತದಾನ: ದೂರ ಉಳಿದ ಭಾರತ

ಆದರೆ ಪುಟಿನ್ ವಿರುದ್ಧದ ವಾರಂಟ್‌ಗಳನ್ನು ಮಾಸ್ಕೋ (ರಷ್ಯಾ) ವಜಾಗೊಳಿಸಿದೆ.

ಯಾವುದೇ ಸಂದರ್ಭದಲ್ಲಿ ರಷ್ಯಾ ತನ್ನ ನಾಗರಿಕರನ್ನು ಹಸ್ತಾಂತರಿಸುವುದಿಲ್ಲ.

ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು, “ಈ ನ್ಯಾಯಾಲಯದ ನ್ಯಾಯವ್ಯಾಪ್ತಿಯನ್ನು ರಷ್ಯಾ ಗುರುತಿಸುವುದಿಲ್ಲ. ಆದ್ದರಿಂದ ಕಾನೂನು ದೃಷ್ಟಿಕೋನದಿಂದ, ಈ ನ್ಯಾಯಾಲಯದ ನಿರ್ಧಾರಗಳು ಅನೂರ್ಜಿತವಾಗಿವೆ” ಎಂದು ಹೇಳಿದ್ದಾರೆ.

ರಷ್ಯಾ ವಾಸ್ತವವಾಗಿ ನ್ಯಾಯಾಲಯದ ಮಹತ್ವದ ನಿರ್ಧಾರವಾದ ರೋಮ್ ಶಾಸನಕ್ಕೆ ಸಹಿ ಹಾಕಿತು. ಆದರೆ ಸದಸ್ಯರಾಗಲು ಅದನ್ನು ಅಂಗೀಕರಿಸಲಿಲ್ಲ. ನಂತರ ಜಾರ್ಜಿಯಾದಲ್ಲಿ 2008 ರ ಯುದ್ಧದ ಬಗ್ಗೆ ಐಸಿಸಿ ತನಿಖೆಯನ್ನು ಪ್ರಾರಂಭಿಸಿದ ನಂತರ 2016ರಲ್ಲಿ ಪುಟಿನ್ ಅವರ ಆದೇಶದ ಮೇರೆಗೆ ತನ್ನ ಸಹಿಯನ್ನೂ ಹಿಂತೆಗೆದುಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...