Homeಅಂತರಾಷ್ಟ್ರೀಯಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಕೈಗೊಂಡಿರುವ ಕ್ರಮ ಜಾರಿ ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ.

- Advertisement -
- Advertisement -

ಉಕ್ರೇನ್- ರಷ್ಯಾ ಯುದ್ಧದ ಸಂಬಂಧ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಬಂಧನ ವಾರಂಟ್ ಹೊರಡಿಸುವ ಪ್ರಮುಖ ಕ್ರಮವನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ಐಸಿಸಿ) ತೆಗೆದುಕೊಂಡಿದೆ.

ಮಕ್ಕಳನ್ನು ಗಡೀಪಾರು ಮಾಡುವ ಯುದ್ಧ ಅಪರಾಧದ ಆರೋಪ ಹೊತ್ತಿರುವ ರಷ್ಯಾದ ಅಧ್ಯಕ್ಷರು ನಿಜವಾಗಿಯೂ ಹೇಗ್‌ನಲ್ಲಿ ವಿಚಾರಣೆಗೆ ನಿಲ್ಲುವ ಸಾಧ್ಯತೆಯಿದೆಯೇ ಎಂಬ ಪ್ರಶ್ನೆ ಸದ್ಯಕ್ಕೆ ಹುಟ್ಟಿಕೊಂಡಿದೆ.

ಪುಟಿನ್ ಮತ್ತು ಮಕ್ಕಳ ಹಕ್ಕುಗಳ ರಷ್ಯಾದ ಅಧ್ಯಕ್ಷೀಯ ಕಮಿಷನರ್ ಮರಿಯಾ ಲ್ವೊವಾ-ಬೆಲೋವಾ ಅವರು ಐಸಿಸಿ ಸದಸ್ಯ ದೇಶಗಳಿಗೆ ಪ್ರಯಾಣಿಸಿದರೆ ಬಂಧನ ವಾರಂಟ್‌ಗಳನ್ನು ಎದುರಿಸುವ ಸಾಧ್ಯತೆ ಇದೆ. ಆದರೆ ಈ ಕ್ರಮವನ್ನು ಐಸಿಸಿ ಸದಸ್ಯ ರಾಷ್ಟ್ರಗಳು ಜರುಗಿಸುತ್ತವೆಯೇ ಎಂಬುದು ಸದ್ಯದ ಪ್ರಶ್ನೆ.

ಪುಟಿನ್ ಆ 123 ರಾಷ್ಟ್ರಗಳಲ್ಲಿ ಯಾವುದಾದರೂ ಒಂದು ದೇಶಕ್ಕೆ ಕಾಲಿಟ್ಟರೆ ಬಂಧನಕ್ಕೆ ಹೊಣೆಯಾಗುತ್ತಾರೆಯೇ ಎಂದು ಕೇಳಿದಾಗ ‘ಅದು ಸರಿ’ ಎಂದು ಐಸಿಸಿ ಪ್ರಾಸಿಕ್ಯೂಟರ್ ಕರೀಮ್ ಖಾನ್ ಅವರು ಎಎಫ್‌ಪಿಗೆ ತಿಳಿಸಿದ್ದಾರೆ.

ಆದರೆ ಈ ಕ್ರಮದಿಂದಾಗಿ ಪುಟಿನ್‌ ಅವರ ಪ್ರಯಾಣವನ್ನು ಕಷ್ಟಕರವಾಗಿಸಬಹುದು. ನ್ಯಾಯಾಲಯವು ತನ್ನ ವಾರಂಟ್‌ಗಳನ್ನು ಜಾರಿಗೊಳಿಸಲು ತನ್ನದೇ ಆದ ಪೋಲೀಸ್ ಬಲವನ್ನು ಹೊಂದಿಲ್ಲ. ಐಸಿಸಿ ವ್ಯಾಪ್ತಿಯ ದೇಶಗಳ ಮೇಲೆ ಈ ಕ್ರಮ ಅವಲಂಬಿತವಾಗಿದೆ.

ವಿಶೇಷವಾಗಿ ಪುಟಿನ್‌ ಅಂಥವರ ವಿಚಾರದಲ್ಲಿ ಐಸಿಸಿ ಸದಸ್ಯ ದೇಶಗಳು ಯಾವತ್ತೂ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ.

ಸುಡಾನ್‌ನ ಮಾಜಿ ನಾಯಕ ಒಮರ್ ಅಲ್-ಬಶೀರ್ ಅವರು ಐಸಿಸಿ ವಾರಂಟ್‌ಗೆ ಒಳಪಟ್ಟಿದ್ದರೂ ಸಹ ದಕ್ಷಿಣ ಆಫ್ರಿಕಾ ಮತ್ತು ಜೋರ್ಡಾನ್ ಸೇರಿದಂತೆ ಹಲವಾರು ಐಸಿಸಿ ಸದಸ್ಯ ರಾಷ್ಟ್ರಗಳಿಗೆ ಭೇಟಿ ನೀಡುವಲ್ಲಿ ಯಶಸ್ವಿಯಾಗಿದ್ದರು.

2019ರಲ್ಲಿ ಪದಚ್ಯುತಗೊಂಡಿದ್ದರೂ, ಸುಡಾನ್ ಇನ್ನೂ ಅವರನ್ನು ಹಸ್ತಾಂತರಿಸಿಲ್ಲ.

ಕೊಲಂಬಿಯಾ ಕಾನೂನು ಶಾಲೆಯ ಪ್ರೊಫೆಸರ್ ಮ್ಯಾಥ್ಯೂ ವ್ಯಾಕ್ಸ್‌ಮನ್ ಪ್ರತಿಕ್ರಿಯಿಸಿ, “ಇದು ಐಸಿಸಿಯ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. ಆದರೆ ನಾವು ಪುಟಿನ್ ಅವರನ್ನು ಬಂಧಿಸುವುದನ್ನು ನೋಡುವ ಸಾಧ್ಯತೆಗಳು ಕಡಿಮೆ” ಎಂದಿದ್ದಾರೆ.

ಮುಖ್ಯ ಅಡಚಣೆಗಳೇನು?

ಯುನೈಟೆಡ್ ಸ್ಟೇಟ್ಸ್, ಚೀನಾ ದೇಶಗಳ ಹಾಗೆ ರಶಿಯಾ ಕೂಡ ಐಸಿಸಿ ಸದಸ್ಯತ್ವ ಹೊಂದಿಲ್ಲ.

ಐಸಿಸಿಯು ಪುಟಿನ್ ವಿರುದ್ಧ ಆರೋಪಗಳನ್ನು ಸಲ್ಲಿಸಲು ಸಾಧ್ಯವಾಯಿತು. ಏಕೆಂದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಉಕ್ರೇನ್ ತನ್ನ ಅಧಿಕಾರ ವ್ಯಾಪ್ತಿಯನ್ನು ಒಪ್ಪಿಕೊಂಡಿದೆ, ಆದರೂ ಕೀವ್ (ಉಕ್ರೇನ್ ರಾಜಧಾನಿ) ಕೂಡ ಸದಸ್ಯತ್ವವನ್ನು ಹೊಂದಿಲ್ಲ.

ಇದನ್ನೂ ಓದಿರಿ: ಉಕ್ರೇನ್‌ನಿಂದ ರಷ್ಯಾ ಪಡೆ ಹಿಂತೆಗೆದುಕೊಳ್ಳುವ ನಿರ್ಣಯದ ಮೇಲೆ ಮತದಾನ: ದೂರ ಉಳಿದ ಭಾರತ

ಆದರೆ ಪುಟಿನ್ ವಿರುದ್ಧದ ವಾರಂಟ್‌ಗಳನ್ನು ಮಾಸ್ಕೋ (ರಷ್ಯಾ) ವಜಾಗೊಳಿಸಿದೆ.

ಯಾವುದೇ ಸಂದರ್ಭದಲ್ಲಿ ರಷ್ಯಾ ತನ್ನ ನಾಗರಿಕರನ್ನು ಹಸ್ತಾಂತರಿಸುವುದಿಲ್ಲ.

ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು, “ಈ ನ್ಯಾಯಾಲಯದ ನ್ಯಾಯವ್ಯಾಪ್ತಿಯನ್ನು ರಷ್ಯಾ ಗುರುತಿಸುವುದಿಲ್ಲ. ಆದ್ದರಿಂದ ಕಾನೂನು ದೃಷ್ಟಿಕೋನದಿಂದ, ಈ ನ್ಯಾಯಾಲಯದ ನಿರ್ಧಾರಗಳು ಅನೂರ್ಜಿತವಾಗಿವೆ” ಎಂದು ಹೇಳಿದ್ದಾರೆ.

ರಷ್ಯಾ ವಾಸ್ತವವಾಗಿ ನ್ಯಾಯಾಲಯದ ಮಹತ್ವದ ನಿರ್ಧಾರವಾದ ರೋಮ್ ಶಾಸನಕ್ಕೆ ಸಹಿ ಹಾಕಿತು. ಆದರೆ ಸದಸ್ಯರಾಗಲು ಅದನ್ನು ಅಂಗೀಕರಿಸಲಿಲ್ಲ. ನಂತರ ಜಾರ್ಜಿಯಾದಲ್ಲಿ 2008 ರ ಯುದ್ಧದ ಬಗ್ಗೆ ಐಸಿಸಿ ತನಿಖೆಯನ್ನು ಪ್ರಾರಂಭಿಸಿದ ನಂತರ 2016ರಲ್ಲಿ ಪುಟಿನ್ ಅವರ ಆದೇಶದ ಮೇರೆಗೆ ತನ್ನ ಸಹಿಯನ್ನೂ ಹಿಂತೆಗೆದುಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...