Homeಕರ್ನಾಟಕಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

- Advertisement -
- Advertisement -

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯು ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಜಲಾವೃತವಾಗಿದೆ. ಇದರಿಂದ ರಾಜ್ಯದ ರಾಮನಗರ ಸಮೀಪ ಸರಣಿ ಅಪಘಾತ ಸಂಭವಿಸಿ, ಟ್ರಾಫಿಕ್ ಜಾಮ್‌ಗೆ ಕಾರಣವಾಯಿತು.

ರಾಮನಗರ ಜಿಲ್ಲೆ ಬಳಿ 8,480 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರಾಷ್ಟ್ರೀಯ ಹೆದ್ದಾರಿ ಮಳೆಯಿಂದಾಗಿ ಜಲಾವೃತವಾಗಿದೆ. ಹೆದ್ದಾರಿಯಲ್ಲಿನ ಕೆಳಸೇತುವೆಯಲ್ಲಿ ನೀರು ನಿಂತಿದ್ದು, ಬಂಪರ್-ಟು-ಬಂಪರ್ ಸರಣಿ ಅಪಘಾತಗಳಿಗೆ ಕಾರಣವಾಯಿತು. ಇದರಿಂದಾಗಿ ವಾಹನಗಳು ನಿಧಾನವಾಗಿ ಚಲಿಸಿದ್ದರಿಂದ ಬಹಳ ಸಮಯದವರೆಗೂ ಟ್ರಾಫಿಕ್ ಜಾಮ್ ಉಂಟಾಯಿತು.

ಕಳೆದ ವರ್ಷ ಕರ್ನಾಟಕದಲ್ಲಿ ಹಿಂದೆಂದೂ ಕಂಡಿರದ ಮಳೆ ಸುರಿದಾಗಲೂ ಇದೇ ರೀತಿ ಕೆಳಸೇತುವೆಯು ಜಲಾವೃತವಾಗಿತ್ತು.

”ತಮ್ಮ ವಾಹನಗಳಿಗೆ ಹಾನಿ ಮಾಡುವುದಕ್ಕಾಗಿಯೇ ಮುಖ್ಯಮಂತ್ರಿ ಬಿ.ಎಸ್.ಬೊಮ್ಮಾಯಿ ಮತ್ತು ಪ್ರಧಾನಿ ಮೋದಿ ತರಾತುರಿಯಲ್ಲಿ ಈ ಹೆದ್ದಾರಿ ಉದ್ಘಾಟನೆಗೆ ಮಾಡಿದ್ದಾರೆಯೇ?” ಎಂದು ಅಲ್ಲಿ ಪರದಾಡಿದ ಕೆಲ ಪ್ರಯಾಣಿಕರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಸಂಗ್ರಹ: ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್

ಈ ಬಗ್ಗೆ ಪ್ರಯಾಣಿಕ ವಿಕಾಸ್ ಎನ್ನುವವರು ಎನ್‌ಡಿಟಿವಿ ಜೊತೆ ಮಾತನಾಡಿ, ”ನನ್ನ ಮಾರುತಿ ಸ್ವಿಫ್ಟ್ ಕಾರು ಜಲಾವೃತಗೊಂಡ ಕೆಳಸೇತುವೆಯಲ್ಲಿ ಅರ್ಧ ಮುಳುಗಿ ಅಲ್ಲಿಯೇ ನಿಂತುಬಿಟ್ಟಿತ್ತು. ಹಿಂದಿನಿಂದ ಬಂದ ಲಾರಿ ನನ್ನ ಕಾರಿಗೆ ಡಿಕ್ಕಿ ಹೊಡೆದಿದೆ, ಇದಕ್ಕೆ ಯಾರು ಹೊಣೆ? ನನ್ನ ಕಾರನ್ನು ರಿಪೇರಿ ಮಾಡುವಂತೆ ನಾನು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತಿದ್ದೇನೆ ಎಂದರು.

”ಪ್ರಧಾನಿ ಮೋದಿ ಹೆದ್ದಾರಿಯನ್ನು ಉದ್ಘಾಟಿಸಿದರು, ಈ ರಸ್ತೆ ಉದ್ಘಾಟನೆಗೆ ಸಿದ್ಧವಾಗಿದೆಯೇ ಎಂದು ಅವರು ತಮ್ಮ ರಸ್ತೆ ಮತ್ತು ಸಾರಿಗೆ ಸಚಿವಾಲಯದಿಂದ ಪರಿಶೀಲಿಸಿದ್ದೀರಾ? ಅವರ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನಾವು ತೊಂದರೆ ಅನುಭವಿಸಬೇಕೇ? ಅವರು ಹೆಚ್ಚಿನ ಟೋಲ್ ಶುಲ್ಕವನ್ನು ವಿಧಿಸುತ್ತಾರೆ, ಆದರೆ ರಸ್ತೆ ಮಾತ್ರ ಈ ರೀತಿಯಲ್ಲಿದೆ. ನಾವು ಟೋಲ್ ಶುಲ್ಕ್ ಕಟ್ಟಿದರೂ ಏನು ಪ್ರಯೋಜನ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಂಪರ್ ಟು ಬಂಪರ್ ಅಪಘಾತಗಳಲ್ಲಿ ತಮ್ಮ ವಾಹನವೇ ಮೊದಲು ಎಂದು ಆಕ್ರೋಶ ವ್ಯಕ್ತಪಡಿಸಿದ ಮತ್ತೊಬ್ಬ ಪ್ರಯಾಣಿಕ ನಾಗರಾಜು, ”ಅಪಘಾತಗಳಿಗೆ ಯಾರು ಹೊಣೆ? ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಬಂದಿದ್ದರೇ 10 ನಿಮಿಷದಲ್ಲಿ ಈ ಜಲಾವೃತವನ್ನು ರಾಜ್ಯ ಸರ್ಕಾರವು ತೆರವುಗೊಳಿಸುತ್ತಿತ್ತು” ಎಂದು ಅಸಮಾಧಾನ ಹೊರಹಾಕಿದರು.

“ಕೆಳಸೇತುವೆಯಲ್ಲಿ ನೀರು ತುಂಬಲು ಪ್ರಾರಂಭಿಸಿದ ಕೆಲವೇ ಸಮಯದಲ್ಲಿ ಹಲವಾರು ಸರಣಿ ಅಪಘಾತಗಳು ಸಂಭವಿಸಿದ ಬಗ್ಗೆ ವರದಿಯಾದವು. ಅದರಲ್ಲಿ ಮೊದಲು ನನ್ನದು… ಮತ್ತು ನಂತರ ಏಳೆಂಟು ವಾಹನಗಳನ್ನು ಒಳಗೊಂಡ ಸರಣಿ ಅಪಘಾತಗಳು ಸಂಭವಿಸಿದವು” ಎಂದು ತಿಳಿಸಿದರು.

”ರಸ್ತೆ ಮೇಲಿನ ನೀರು ಹೊರ ಹೋಗಲು ಸ್ಥಳವಿಲ್ಲ. ಒಂದುವೇಳೆ ಪ್ರಧಾನಿ ಆಗಮನದ ಸುದ್ದಿ ಬಂದಿದ್ದರೆ, ಅವರು (ಬೊಮ್ಮಾಯಿ) 10 ನಿಮಿಷಗಳಲ್ಲಿ ಈ ಜಲಾವೃತವನ್ನು ತೆರವುಗೊಳಿಸುತ್ತಾರೆ. ನಾವು ಸಾಮಾನ್ಯ ಜನರು, ನಮ್ಮ ಕಷ್ಟ ಕೇಳುವವರು ಯಾರು? ಈ ತೊಂದರೆಗಳಿಗೆ ಯಾರು ಹೊಣೆ?” ಎಂದು ನಾಗರಾಜು ಅಳಲು ತೋಡಿಕೊಂಡಿದ್ದಾರೆ.

ಮಾರ್ಚ್ 12ರಂದು ಪ್ರಧಾನಿ ಮೋದಿ ಅವರು 118 ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಉದ್ಘಾಟಿಸಿದರು. ಉದ್ಘಾಟಿಸಿದ ದಿನದಿಂದ ದಿನನಿತ್ಯ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಒಂದು ಕಡೆ ಹೆಚ್ಚಿನ ಟೋಲ್ ಶುಲ್ಕ್ ವಸೂಲಿ, ಮತ್ತೊಂದಡೆ ರಸ್ತೆ ನಿರ್ಮಾಣದ ಬಗ್ಗೆ ಆರೋಪಗಳು ಕೇಳಿಬರುತ್ತಿವೆ.

ರಸ್ತೆ ಉದ್ಘಾಟನೆಯಾದ ದಿನವೇ ಒಂದು ಅಪಘಾತ ಸಂಭವಿಸಿತ್ತು. ಮರುದಿನವೇ ರಸ್ತೆಯ ಟಾರು ಕಿತ್ತು ಬಂದಿತ್ತು. ಇನ್ನೂ ಟೋಲ್ ವಸೂಲಿ ವಿಚಾರಕ್ಕೆ ಪ್ರತಿನಿತ್ಯ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ವಿಚಾರಕ್ಕೆ ಈಗಾಗಲೇ ಕರ್ನಾಟಕ ಹೈಕೋರ್ಟ್ ಸುಮೋಟೋ ವಿಚಾರಣೆ ಆರಂಭಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...