Homeಕರ್ನಾಟಕಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

- Advertisement -
- Advertisement -

“ಟಿಪ್ಪು ಸುಲ್ತಾನರನ್ನು ಕೊಂದಿದ್ದು ಉರಿಗೌಡ, ದೊಡ್ಡ ನಂಜೇಗೌಡ” ಎಂದು ಕರ್ನಾಟಕದಲ್ಲಿ ನಕಲಿ ಇತಿಹಾಸವನ್ನು ಸೃಷ್ಟಿಸುತ್ತಿರುವಂತೆಯೇ, ಉತ್ತರಭಾರತದಲ್ಲಿ ಗುರ್ಜರ್ ಸಮುದಾಯವನ್ನು ಮುಖ್ಯವಾಗಿಟ್ಟುಕೊಂಡು ನಕಲಿ ಇತಿಹಾಸ ಕಟ್ಟುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿರುವ ಕುರಿತು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿದೆ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ಮೂಲಕ ಒಕ್ಕಲಿಗ ಸಮುದಾಯವನ್ನು ವೋಟ್‌ಬ್ಯಾಂಕ್ ಮಾಡಿಕೊಳ್ಳಲು ಕರ್ನಾಟಕದಲ್ಲಿ ವಿಫಲ ಯತ್ನ ಮಾಡುತ್ತಿರುವಂತೆಯೇ ಉತ್ತರದಲ್ಲಿ ಗುರ್ಜರ್‌‌ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ನಕಲಿ ಇತಿಹಾಸ ಸೃಷ್ಟಿಸಲು ಪ್ರಯತ್ನಿಸಲಾಗಿದೆ. ಇತಿಹಾಸವನ್ನು ತಿರುಚಿ ನಿರ್ದಿಷ್ಟ ಸಮುದಾಯವನ್ನು ಸೆಳೆಯುವ ಹೊಸ ತಂತ್ರಗಾರಿಕೆಯನ್ನು ಸಂಘಪರಿವಾರ ಮಾಡುತ್ತಿದೆ.

ಕರ್ನಾಟಕದಲ್ಲಿ ಉರಿಗೌಡ, ದೊಡ್ಡನಂಜೇಗೌಡರನ್ನು ಪ್ರಸ್ತಾಪಿಸುತ್ತಿರುವಂತೆಯೇ ಉತ್ತರ ಭಾರತದಲ್ಲಿ ರಾಜಾ ಸುಹೇಲ್‌ದೇವ್ ಮತ್ತು ಗುರ್ಜರ್ ವೀರ ಮಹಿಳೆ ರಾಮ್‌ಪ್ಯಾರಿ ಗುರ್ಜರ್‌ ಎಂಬ ಪಾತ್ರಗಳನ್ನು ಚುನಾವಣಾ ರಂಗಕ್ಕೆ ಎಳೆದು ತರಲಾಗಿದೆ.

ಈ ಹಲವು ಪ್ರಕರಣಗಳಲ್ಲಿ ಬಿಜೆಪಿ ಹೇಳುವಂತೆ ಈ ವೀರರು ನಿಜವಾಗಿಯೂ ಅಸ್ತಿತ್ವದಲ್ಲಿಲ್ಲ ಎಂದು ಇತಿಹಾಸಕಾರರು ಹೇಳುತ್ತಾರೆ. ಆದಾಗ್ಯೂ ಹಿಂದುತ್ವ ಪಕ್ಷವು ಅಂತಹ ವಾಸ್ತವಿಕ ಸತ್ಯಗಳನ್ನು ಅಲ್ಲಗಳೆಯುತ್ತಲೇ ಬಂದಿದೆ.

ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಜಿಲ್ಲೆಗೆ ಮೋದಿ ಆಗಮಿಸಲಿದ್ದ ಹಿನ್ನೆಲೆಯಲ್ಲಿ ‘ಕಾಲ್ಪನಿಕ ವ್ಯಕ್ತಿ’ಗಳಾದ ಉರಿಗೌಡ, ನಂಜೇಗೌಡರ ಹೆಸರಿನ ಮಹಾದ್ವಾರವನ್ನು ತೆರೆದು ನಗೆಪಾಟಲಿಗೀಡಾಯಿತು. ಸ್ಥಳೀಯರು, ವಿರೋಧ ಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮಹಾದ್ವಾರವನ್ನು ತೆರವು ಮಾಡಲಾಯಿತು. ಇಷ್ಟೆಲ್ಲ ಆದರೂ ಬಿಜೆಪಿ ನಾಯಕರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರಿಗೌಡ, ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು” ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ಮಾಡುತ್ತಲೇ ಇದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ಅಲ್ಲಿ ಜಾತಿ ಜಾತಿಗಳನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿದರು. ಯಾವುದೇ ದಾಖಲೆಗಳಿಲ್ಲದೆ, ಸುಳ್ಳಿನ ನಾಟಕ ಕಟ್ಟಿ ಜಾತಿ ರಾಜಕಾರಣ ಮಾಡಲು ಮುಂದಾಗಿರುವುದನ್ನು ಜನರು ಗುರುತಿಸಲಾರಂಭಿಸಿದ್ದಾರೆ.

ಒಬ್ಬ ರಾಜಪ್ರಭುತ್ವ ಕಾಲದ ಮುಸ್ಲಿಂ ಸುಲ್ತಾನನನ್ನು ವರ್ತಮಾನದಲ್ಲಿ ನಿಲ್ಲಿಸಿ ಆತ ಹಿಂದೂ ವಿರೋಧಿಯಾಗಿದ್ದ, ಒಕ್ಕಲಿಗರ, ಚಿತ್ರದುರ್ಗದ ನಾಯಕರ, ಕ್ರಿಶ್ಚಿಯನ್ನರ, ಕೊಡವರ, ಬ್ರಾಹ್ಮಣರ ಹಾಗೂ ಕನ್ನಡದ ವಿರೋಧಿಯಾಗಿದ್ದ. ಟಿಪ್ಪುವನ್ನು ಬೆಂಬಲಿಸುವವರು ಇವರೆಲ್ಲರ ವಿರೋಧಿ ಎಂಬುದನ್ನು ಸುಳ್ಳುಸುಳ್ಳೇ ಸಾಧಿಸುವುದು ಇಲ್ಲಿನ ಉದ್ದೇಶ. ಕೃತಿಯಲ್ಲಿ ಮತ್ತೆಮತ್ತೆ ಪುನರಾವರ್ತಿತವಾಗುವ ಜಾತಿ ಉದ್ದೇಶಿತ ಸಾಲುಗಳೇ ಇದನ್ನು ಮಾರ್ದನಿಸುತ್ತದೆ. ಇದು ಹಿಂದೂ ರಾಷ್ಟ್ರ, ಮುಸ್ಲಿಮರು ದ್ವಿತೀಯ ದರ್ಜೆಯಲ್ಲಿ ಬದುಕಬೇಕು ಎಂಬ ಸಂವಿಧಾನ ವಿರೋಧಿ ಆಶಯವನ್ನು ಅಡ್ಡಂಡ ಕಾರ್ಯಪ್ಪ ಇಲ್ಲಿ ಪ್ರತಿಪಾದಿಸಿದ್ದರು. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಕೊಂದರು ಎಂದು ನಾಟಕದ ಮೂಲಕ ಪ್ರಚಾರ ಮಾಡಿದರು. (ನಾಟಕದ ವಿಮರ್ಶೆಯನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ.)

ಆದರೆ, ಉರಿಗೌಡ ಮತ್ತು ನಂಜೇಗೌಡ ಎಂಬ ವ್ಯಕ್ತಿಗಳು ನಿಜವಾಗಿಯೂ ಅಸ್ತಿತ್ವದಲ್ಲಿ ಇಲ್ಲ. ಒಕ್ಕಲಿಗ ಮತದಾರರನ್ನು ಸೆಳೆಯಲು ಬಿಜೆಪಿಯು ಅವರನ್ನು ಸೃಷ್ಟಿಸಿದೆ ಎಂದು ಐತಿಹಾಸ ತಜ್ಞರು ಹೇಳುತ್ತಾರೆ. ನಾಲ್ಕನೇ ಆಂಗ್ಲೋ-ಮೈಸೂರು ಯುದ್ಧದ ಸಮಯದಲ್ಲಿ ಬ್ರಿಟಿಷರೊಂದಿಗೆ ಹೋರಾಡುವಾಗ ಟಿಪ್ಪುವಿನ ಮರಣವಾಗಿದೆ ಎಂದು ಇತಿಹಾಸ ಕೃತಿಗಳು ಹೇಳುತ್ತವೆ.

“ಬಿಜೆಪಿಯು ಸಮುದಾಯ ಆಧಾರಿತ ಪ್ರಚಾರ ಮಾಡಿ ಮತಗಳನ್ನು ಪಡೆಯಲು ಈ ಎರಡು ಪಾತ್ರಗಳು ಮತ್ತು ಹೆಸರುಗಳನ್ನು ಸೃಷ್ಟಿಸಿದೆ ಎಂದು ನನಗೆ 100% ಖಚಿತವಾಗಿದೆ” ಎಂದು ಇತಿಹಾಸಕಾರ ಪ್ರೊ.ಪಿ.ವಿ.ನಂಜರಾಜ ಅರಸ್ ಹೇಳುತ್ತಾರೆ.

ಗುರ್ಜರ್‌ ಟಾರ್ಗೆಟ್‌

ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ರೀತಿಯಲ್ಲಿಯೇ ಬಿಜೆಪಿಯು ಉತ್ತರ ಭಾರತದಲ್ಲಿ ನಿರ್ದಿಷ್ಟ ಜಾತಿಗಳಿಗೆ ಸೇರಿದ ಮಧ್ಯಕಾಲೀನ ವ್ಯಕ್ತಿಗಳನ್ನು ಮುನ್ನೆಲೆಗೆ ತಂದಿದೆ.

ಬಿಜೆಪಿಯ ಮಾಜಿ ನಾಯಕ, ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರು, “ಗುರ್ಜರ್ ಹೋರಾಟಗಾರ್ತಿ ರಾಮ್‌ಪ್ಯಾರಿ ಗುರ್ಜರ್‌ ಮತ್ತು ಟರ್ಕಿಯ ಆಕ್ರಮಣಕಾರ ತೈಮೂರ್ ವಿರುದ್ಧದ ಹೋರಾಟ”ದ ಬಗ್ಗೆ ಪ್ರಸ್ತಾಪಿಸಿದ್ದಾರೆ.

“ಮಧ್ಯಕಾಲೀನ ಭಾರತದಲ್ಲಿ ಮೀರತ್ ಮತ್ತು ಹರಿದ್ವಾರದ ನಡುವಿನ ಪ್ರದೇಶದಲ್ಲಿ, ಧೈರ್ಯಶಾಲಿ ಮಹಿಳೆ ರಾಂಪ್ಯಾರಿ ಗುರ್ಜರ್ 40,000 ಜನರ ಸೈನ್ಯವನ್ನು ಕಟ್ಟಿದರು. ತೈಮೂರ್ ವಿರುದ್ಧ ಹೋರಾಡಿದರು” ಎಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದನಕರ್‌ ಹೇಳಿದ್ದಾರೆ.

ಜನವರಿಯಲ್ಲಿ ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ರಾಮಪ್ಯಾರಿ ಗುರ್ಜರ್‌ ಶೌರ್ಯವನ್ನು ಹೊಗಳಿದ್ದರು. ಅನೇಕ ರಾಜ್ಯಗಳಲ್ಲಿ ಇತರ ಹಿಂದುಳಿದ ವರ್ಗದಲ್ಲಿನ ಗುರ್ಜರ್ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಮಪ್ಯಾರಿ ಗುರ್ಜರ್‌ ಕುರಿತು ಮಾತನಾಡಲಾರಂಭಿಸಿದ್ದಾರೆ.

“ರಾಷ್ಟ್ರ ಮತ್ತು ಸಂಸ್ಕೃತಿಯ ಸೇವೆಯಲ್ಲಿ ಗುರ್ಜರ್ ಸಮುದಾಯದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಅಪಾರ ಕೊಡುಗೆಯನ್ನು ಈ ಇತಿಹಾಸ ನಮಗೆ ತಿಳಿಸುತ್ತದೆ” ಎಂದು ಮೋದಿ ಬಣ್ಣಿಸಿದ್ದರು.

“ಇಂತಹ ಅಸಂಖ್ಯಾತ ಹೋರಾಟಗಾರರು ನಮ್ಮ ಇತಿಹಾಸದಲ್ಲಿ ಅರ್ಹವಾದ ಸ್ಥಾನವನ್ನು ಪಡೆಯಲು ಸಾಧ್ಯವಾಗದಿರುವುದು ದೇಶದ ದೌರ್ಭಾಗ್ಯ. ಆದರೆ ಹೊಸ ಭಾರತವು ಕಳೆದ ದಶಕಗಳ ಈ ತಪ್ಪುಗಳನ್ನು ಸರಿಪಡಿಸುತ್ತಿದೆ” ಎಂದು ತಿಳಿಸಿದ್ದರು.

ರಾಮ್‌ಪ್ಯಾರಿ ಗುರ್ಜರ್‌ ಅವರ ಶೌರ್ಯದ ಬಗ್ಗೆ ಬಂದಿರುವ ಈ ಕತೆಯು 1398ರ ಯುದ್ಧದ ಬಗ್ಗೆ ಉಲ್ಲೇಖಿಸುತ್ತವೆ. ರಾಮ್‌ಪ್ಯಾರಿ ಗುರ್ಜರ್ ಅವರಿಗೆ ಸೇರಿದ್ದ ಮಹಾಪಂಚಾಯತ್‌ ಸೈನ್ಯದ ಡೆಪ್ಯುಟಿ ಜನರಲ್ ಹರ್ವೀರ್ ಸಿಂಗ್ ಗುಲಿಯಾ ಎಂಬವರು, ತೈಮೂರ್ ಅನ್ನು ಈಟಿಯಿಂದ ಹೊಡೆದನೆಂದು ಪ್ರತಿಪಾದಿಸಲಾಗಿದೆ. ಆ ಹೋರಾಟದಲ್ಲಿ ತೈಮೂರ್‌ ಹತನಾದನು ಎಂದು ಈ ಕಥೆಯ ಮೂಲಕ ಹೇಳಲಾಗುತ್ತಿದೆ.

ಇದನ್ನೂ ಓದಿರಿ: ಟಿಪ್ಪು ಹಾಸನಕ್ಕೆ ”ಕೈಮಾಬಾದ್” ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

ಆದರೆ ಇತಿಹಾಸಕಾರರು ತಿಳಿಸುವುದೇ ಬೇರೆ. “1405ರಲ್ಲಿ ಚೀನಾದ ಮಿಂಗ್ ಸಾಮ್ರಾಜ್ಯದ ವಿರುದ್ಧ ಮಿಲಿಟರಿ ಕಾರ್ಯಾಚರಣೆಯಲ್ಲಿದ್ದಾಗ ತೈಮೂರ್‌‌, ಕಠಿಣ ಚಳಿಗಾಲದ ನಡುವೆ ಅನಾರೋಗ್ಯಕ್ಕೆ ತುತ್ತಾಗಿ ಕೊನೆಯುಸಿರೆಳೆದನು” ಎಂದು ಇತಿಹಾಸಕಾರರು ಹೇಳುತ್ತಾರೆ.

“[1398] ಯುದ್ಧದಲ್ಲಿ ತೈಮೂರ್ ಗಾಯಗೊಂಡನು. ವಾತಾವರಣದ ಪರಿಸ್ಥಿತಿ, ಆಯಾಸಗೊಂಡ ಸೈನ್ಯ ಮತ್ತು ಸೈನ್ಯದಲ್ಲಾದ ಅನೇಕ ಸಾವುಗಳ ಕಾರಣ ಈ ಪ್ರದೇಶದಿಂದ ಹೊರಗೆ ಹೊರಟನು ಎಂದು ನಮಗೆ ‘ಜಾಫರ್-ನಮಾ’ ಜೀವನ ಚರಿತ್ರೆಯಿಂದ ತಿಳಿಯುತ್ತದೆ” ಎಂದು ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಧ್ಯಕಾಲೀನ ಭಾರತೀಯ ಇತಿಹಾಸ ಬೋಧಿಸುವ ಸಹಾಯಕ ಪ್ರಾಧ್ಯಾಪಕರಾದ ಮನಿಶಾ ಚೌಧರಿ ಸ್ಪಷ್ಟಪಡಿಸಿದ್ದಾರೆ.

“ಆದರೆ, ಆ ಯುದ್ಧದಲ್ಲಿ ಗಾಯಗೊಂಡು ತೈಮೂರ್‌ ಸಾವಿಗೀಡಾಗಿದ್ದಾನೆ ಎಂಬುದು ಅಸಂಭವವಾಗಿದೆ. ಏಕೆಂದರೆ ಅವರು ಮಧ್ಯಂತರ ಅವಧಿಯಲ್ಲಿ ತುಂಬಾ ಸಕ್ರಿಯರಾಗಿದ್ದನು ಎಂದು ನಮಗೆ ತಿಳಿದಿದೆ” ಎಂದಿದ್ದಾರೆ.

“ರಾಂಪ್ಯಾರಿ ಗುರ್ಜರ್ ಯುದ್ಧದಲ್ಲಿ ಹೋರಾಡಿದ್ದಾರೆ ಎಂಬುದರ ಕುರಿತು ಉಲ್ಲೇಖಗಳಿಲ್ಲ. ನಾವು ಈ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಘಟನೆಗಳು ಮಾತ್ರ ಮುಖ್ಯ” ಎಂದು ಚೌದರಿ ತಿಳಿಸಿದ್ದಾರೆ.

(ಟಿಪ್ಪಣಿ: ಈ ವರದಿಯಲ್ಲಿ ಅನೇಕ ಅಂಶಗಳನ್ನು ‘ಸ್ಕ್ರಾಲ್‌.ಇನ್‌’ನಲ್ಲಿ ಪ್ರಕಟವಾಗಿರುವ ಲೇಖನದಿಂದ ಆಯ್ದು ಬಳಸಿಕೊಳ್ಳಲಾಗಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...