Homeಮುಖಪುಟಗುಜರಾತಿ ವಂಚಕನಿಗೆ ಝಡ್‌ಪ್ಲಸ್ ಸೆಕ್ಯೂರಿಟಿ: ಜಮ್ಮು-ಕಾಶ್ಮೀರ ಆಡಳಿತ ವೈಫಲ್ಯದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ

ಗುಜರಾತಿ ವಂಚಕನಿಗೆ ಝಡ್‌ಪ್ಲಸ್ ಸೆಕ್ಯೂರಿಟಿ: ಜಮ್ಮು-ಕಾಶ್ಮೀರ ಆಡಳಿತ ವೈಫಲ್ಯದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ

- Advertisement -
- Advertisement -

ಗುಜರಾತ್‌ನ ವಂಚಕ ಕಿರಣ್ ಪಟೇಲ್ ಪ್ರಧಾನ ಮಂತ್ರಿ ಕಚೇರಿಯಲ್ಲಿ (ಪಿಎಂಒ) ಉನ್ನತ ಅಧಿಕಾರಿಯಾಗಿದ್ದೇನೆ ಎಂದು ಹೇಳಿಕೊಂಡು ಕಳೆದ ವರ್ಷ ಅಕ್ಟೋಬರ್‌ನಿಂದ ಕಾಶ್ಮೀರ ಕಣಿವೆಗೆ ಭೇಟಿ ನೀಡುತ್ತಿದ್ದನು. ಈ ವೇಳೆ ಆತ ಝಡ್‌ಪ್ಲಸ್ ಸೆಕ್ಯೂರಿಟಿ ಮತ್ತು ಸರ್ಕಾರಿ ಆತಿಥ್ಯವನ್ನು ಆನಂದಿಸಿದ್ದನು. ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದನು. ಕಾಶ್ಮೀರ ಕಣಿವೆಗೆ ಮೂರನೇ ಭೇಟಿಯಲ್ಲಿದ್ದಾಗ ಮಾರ್ಚ್ 3ರಂದು ಭದ್ರತಾ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಈ ವಿಚಾರವಾಗಿ  ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದೆ ಪ್ರಿಯಾಂಕಾ ಚತುರ್ವೇದಿ ಜಮ್ಮು ಮತ್ತು ಕಾಶ್ಮೀರ ಆಡಳಿತದ ವೈಫಲ್ಯದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸುದ್ದಿಯು ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ಭಾರಿ ಮುಜುಗರವನ್ನು ಉಂಟುಮಾಡಿದೆ, ಪ್ರತಿಪಕ್ಷಗಳು ಸೇರಿದಂತೆ ಅನೇಕರು ಗುಪ್ತಚರ ಲೋಪವನ್ನು ಪ್ರಶ್ನಿಸಿದ್ದಾರೆ.

ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ಜಮ್ಮುವಿಗೆ ಭೇಟಿ ನೀಡಿದ್ದರು. ಈ ವೇಳೆ ಅವರಿಗೆ ಜಿಲ್ಚ್ ಭದ್ರತೆಯನ್ನು ನೀಡಲಾಗಿತ್ತು. ಈ ಬಗ್ಗೆ ಟ್ವಿಟರ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: PMಕಚೇರಿಯ ಉನ್ನತ ಅಧಿಕಾರಿ ಎಂದು ಹೇಳಿಕೊಂಡು ಝಡ್‌ಪ್ಲಸ್ ಸೆಕ್ಯೂರಿಟಿ ಪಡೆದಿದ್ದ ವ್ಯಕ್ತಿ ಅರೆಸ್ಟ್

”ಸಂಸದನಾಗಿ ನಾನು ಉದ್ದೇಶಿತ ಹಿಂದೂ ಹತ್ಯೆಗಳ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ಜಮ್ಮುವಿಗೆ ಭೇಟಿ ನೀಡಿದಾಗ, ನನಗೆ ಜಿಲ್ಚ್ ಭದ್ರತೆಯನ್ನು ನೀಡಲಾಯಿತು. ಆ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಆದರೆ ಇಲ್ಲಿ ಒಬ್ಬ ವಂಚಕನು ಝಡ್‌ಪ್ಲಸ್ ಭದ್ರತೆ, ವಿಐಪಿ ಪ್ರೋಟೋಕಾಲ್, ಹೋಟೆಲ್ ವಾಸ್ತವ್ಯ ಮತ್ತು ಪಡೆದಿದ್ದಾನೆ. ಇದು ಅದ್ಭುತ!” ಎಂದು ಟ್ವೀಟ್ ಮಾಡಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ಈ ಗಂಭೀರ ಸಮಸ್ಯೆಗೆ ಕಾರಣರಾದವರ ವಿರುದ್ಧ “ಕಠಿಣ ಕ್ರಮ”ಕ್ಕೆ ಒತ್ತಾಯಿಸಿದ್ದಾರೆ.

”ಗುಜರಾತ್‌ನ ನಕಲಿ ಅಧಿಕಾರಿ ಕಿರಣ್ ಭಾಯ್ ಪಟೇಲ್‌ಗೆ ಭದ್ರತೆ ನೀಡುವ ಸಂದರ್ಭದಲ್ಲಿ ಭದ್ರತಾ ಅಧಿಕಾರಿಗಳು ಯಾವುದೇ ತನಿಖೆ ನಡೆಸಿಲ್ಲ, ಅವರು ದೇಶದ ಭದ್ರತೆಯೊಂದಿಗೆ ಆಟವಾಡುತ್ತಿದ್ದಾರೆ. ಈ ಗಂಭೀರ ಸಮಸ್ಯೆಗೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಕೆಲಸದಿಂದ ತೆಗೆದುಹಾಕಬೇಕು ಮತ್ತು ಶಿಕ್ಷೆಗೆ ಗುರಿಪಡಿಸಬೇಕು” ಎಂದು ಯಾದವ್ ಟ್ವೀಟ್ ಮಾಡಿದ್ದಾರೆ.

ಈ ವಿಚಾರವಾಗಿ ಕೇಂದ್ರ ಬಿಜೆಪಿ ಸರ್ಕಾರವನ್ನು ಆಮ್ ಆದ್ಮಿ ಪಕ್ಷವು ಸರಣಿ ಟ್ವೀಟ್ ಮೂಲಕ ಟೀಕಿಸಿದೆ.

”ಬಿಜೆಪಿ ಕಾರ್ಯಕರ್ತ ಕಿರಣ್ ಪಟೇಲ್ ಕಾಶ್ಮೀರದಲ್ಲಿ ಪಿಎಂಒ ಹೆಚ್ಚುವರಿ ನಿರ್ದೇಶಕರಾಗಿ ವಾಸಿಸುತ್ತಿದ್ದಾರೆ. Z+ ಭದ್ರತೆ, 2 ಜ್ಯಾಮರ್ ವಾಹನಗಳು, 50 ಗನ್‌ಮ್ಯಾನ್‌ಗಳೊಂದಿಗೆ ಯಾರು ಚಲಿಸುತ್ತಾರೆ, 5 ಸ್ಟಾರ್ ಹೋಟೆಲ್‌ನಲ್ಲಿ ತಂಗುತ್ತಾರೆ. ಬಿಜೆಪಿ ಕಾರ್ಯಕರ್ತ ಎಂಬ ಕಾರಣಕ್ಕೆ ಅದರ ತನಿಖಾ ಸಂಸ್ಥೆ ತನಿಖೆ ನಡೆಸುವುದಿಲ್ಲ. ಅವರು ಸಿಸೋಡಿಯಾ ಅಂತವರನ್ನು ಜೈಲಿಗೆ ಹಾಕುತ್ತಾರೆ” ಎಂದು ಎಎಪಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

”ಗುಜರಾತ್‌ನ ಒಬ್ಬ ಕೊಲೆಗಡುಕನು, ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಸರ್ಕಾರಿ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂದ್ದಾನೆ. ಸಾರ್ವಜನಿಕರ ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಿದ್ದಾನೆ ಮತ್ತು Z+ ಭದ್ರತೆಯೊಂದಿಗೆ ಬುಲೆಟ್‌ಪ್ರೂಫ್ ಕಾರಿನಲ್ಲಿ ರಜಾದಿನಗಳನ್ನು ಆನಂದಿಸಿದ್ದಾನೆ. ಆತನ ಹೆಸರೇ ಕಿರಣ್ ಭಾಯ್ ಪಟೇಲ್” ಎಂದು ಎಎಪಿ ಟ್ವೀಟ್ ಮಾಡಿದೆ.

”ಮೋದಿಜಿಯವರ ಅಮೂಲ್ಯ ರತ್ನಗಳಿಗೆ ಸಂಬಂಧಿಸಿದ 2 ದೊಡ್ಡ ಸುದ್ದಿಗಳು: 1) BJP ನಾಯಕ #BaleshDhankar ಆಸ್ಟ್ರೇಲಿಯಾದಲ್ಲಿ ಅನೇಕ ಹುಡುಗಿಯರ ಮೇಲೆ ಅತ್ಯಾಚಾರವೆಸಗಿದ್ದಾನೆ. 2) ಪ್ರಧಾನಿ ಮೋದಿಯನ್ನು ಮೂರ್ಖರನ್ನಾಗಿಸುವ ಪಿಎಂಒ ಅಧಿಕಾರಿಯಾಗಿ ಕಿರಣ್ ಪಟೇಲ್, ಕಾಶ್ಮೀರದಲ್ಲಿ ಭಾರತದ ಭದ್ರತೆಯಲ್ಲಿ ಒಂದು ಪ್ರವಾಸ ಮಾಡುತ್ತಲೇ ಇದ್ದರು. ದೇಶದ ಪ್ರಧಾನಿ ಶಿಕ್ಷಣ ಪಡೆದಿದ್ದರೆ ಭಾರತ ನಾಚಿಕೆಪಡುತ್ತಿರಲಿಲ್ಲ” ಎಂದು ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...