Homeಮುಖಪುಟ'ವಲಸಿಗರ ಮೇಲೆ ತಮಿಳುನಾಡಿನಲ್ಲಿ ದಾಳಿ'ಯೆಂದು ಸುಳ್ಳು ಹಬ್ಬಿಸಿದ್ದ ಯೂಟ್ಯೂಬರ್ ಪೊಲೀಸರಿಗೆ ಶರಣು

‘ವಲಸಿಗರ ಮೇಲೆ ತಮಿಳುನಾಡಿನಲ್ಲಿ ದಾಳಿ’ಯೆಂದು ಸುಳ್ಳು ಹಬ್ಬಿಸಿದ್ದ ಯೂಟ್ಯೂಬರ್ ಪೊಲೀಸರಿಗೆ ಶರಣು

- Advertisement -
- Advertisement -

ಬಿಹಾರದಿಂದ ತಮಿಳುನಾಡಿಗೆ ವಲಸೆ ಬಂದಿರುವ ಕಾರ್ಮಿಕರ ಮೇಲೆ ದಾಳಿ ನಡೆಯುತ್ತಿದೆ ಎಂಬ ಸುಳ್ಳು ಸುದ್ದಿ ಜೊತೆಗೆ ಹಲ್ಲೆಯ ಕೆಲವು ನಕಲಿ ವೀಡಿಯೊಗಳನ್ನು ಹಂಚಿಕೊಳ್ಳಲಾಗಿತ್ತು. ಈ ಪ್ರಕರಣದಲ್ಲಿ ಬಿಹಾರ ಪೊಲೀಸರಿಗೆ ಬೇಕಾಗಿದ್ದ ಯೂಟ್ಯೂಬರ್ Manish Kashyap, ಶನಿವಾರ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ತಮಿಳುನಾಡಿನಲ್ಲಿ ವಲಸಿಗರನ್ನು ಕೊಲ್ಲುವ ಮತ್ತು ಥಳಿಸುವ ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಲು ತೊಡಗಿದೆ” ಎಂಬ ಆರೋಪದ ಮೇಲೆ ಬಿಹಾರ ಪೊಲೀಸ್‌ನ ಆರ್ಥಿಕ ಅಪರಾಧಗಳ ಘಟಕ (ಇಒಯು) ಕಶ್ಯಪ್ ಮತ್ತು ಇತರರ ವಿರುದ್ಧ ಮೂರು ಪ್ರಕರಣಗಳನ್ನು ದಾಖಲಿಸಿದೆ.

ಮಜೌಲಿಯಾದಲ್ಲಿ ಡಿಐಜಿ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಯೂಟ್ಯೂಬರ್‌ಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕುವ ಪ್ರಕ್ರಿಯೆಗೆ ಮುಂದಾದಗ ಯೂಟ್ಯೂಬರ್‌ ಕಶ್ಯಪ್ ಜಗದೀಶ್‌ಪುರ ಪೊಲೀಸ್‌ ಠಾಣೆಯಲ್ಲಿ ಶರಣಾದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಶ್ಯಪ್‌ನನ್ನು ಬಿಹಾರ ಮತ್ತು ತಮಿಳುನಾಡು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. “ಬಿಹಾರ ಪೊಲೀಸರು ಅವರ ವಿರುದ್ಧ ಮೂರು ಪ್ರಕರಣಗಳನ್ನು ದಾಖಲಿಸಿದ್ದರೆ, ತಮಿಳುನಾಡು ಪೊಲೀಸರು ಒಂಬತ್ತು ಪ್ರಕರಣಗಳನ್ನು ದಾಖಲಿಸಿದ್ದಾರೆ” ಎಂದು ಆರ್ಥಿಕ ಅಪರಾಧ ಘಟಕದ (ಇಒಯು) ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಎನ್‌ಎಚ್ ಖಾನ್ ಮಾಹಿತಿ ನೀಡಿದ್ದಾರೆ.

ಕಶ್ಯಪ್ ಮತ್ತು ಮತ್ತೊಬ್ಬ ಆರೋಪಿ ಯುವರಾಜ್ ಸಿಂಗ್ ರಜಪೂತ್ ವಿರುದ್ಧ ಪೊಲೀಸರು ಅರೆಸ್ಟ್‌ ವಾರೆಂಟ್‌ ಹೊರಡಿಸಿದ್ದರು. ಶರಣಾಗತಿಗಾಗಿ ಅವರ ಮೇಲೆ ಒತ್ತಡ ಹೇರಲು ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದರು.

”ಆರ್ಥಿಕ ಅಪರಾಧ ಘಟಕ ರಚಿಸಿರುವ ಆರು ತಂಡಗಳು ಪಾಟ್ನಾ ಮತ್ತು ಚಂಪಾರಣ್ ಪೊಲೀಸರೊಂದಿಗೆ ನಿನ್ನೆಯಿಂದ (ಶುಕ್ರವಾರ) ವಿವಿಧ ಸ್ಥಳಗಳು ಮತ್ತು ಅಡಗುತಾಣಗಳಲ್ಲಿನ ಅವರ ಸ್ಥಳಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿವೆ. ಬಂಧನ ಮತ್ತು ಇತರ ಕಾನೂನು ಕ್ರಮಗಳ ಭಯದಿಂದ ಅವರು ಶನಿವಾರ ಬೆಟ್ಟಿಯ ಜಗದೀಶ್‌ಪುರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ” ಎಂದು ಎಡಿಜಿ ತಿಳಿಸಿದ್ದಾರೆ.

ಇದನ್ನೂ ಓದಿ: ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧ ಘಟಕ ಮಾರ್ಚ್ 6ರಂದು ಕಶ್ಯಪ್ ಸೇರಿದಂತೆ ಅಮನ್ ಕುಮಾರ್, ರಾಕೇಶ್ ತಿವಾರಿ ಮತ್ತು ಯುವರಾಜ್ ಸಿಂಗ್ ರಜಪೂತ್ ಎನ್ನುವ ನಾಲ್ವರ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಿದೆ. ಮೊದಲ ಎಫ್‌ಐಆರ್‌ನ ತನಿಖೆಗೆ ಸಂಬಂಧಿಸಿದಂತೆ ಆರ್ಥಿಕ ಅಪರಾಧ ಘಟಕವು ಈಗಾಗಲೇ ಜಮುಯಿಯಿಂದ ಅಮನ್ ಕುಮಾರ್‌ನನ್ನು ಬಂಧಿಸಿದೆ.

ತಮಿಳುನಾಡಿನಲ್ಲಿ ವಲಸಿಗರನ್ನು ಹೊಡೆದು ಕೊಲ್ಲುವ 30 ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಕಾರ್ಮಿಕರಲ್ಲಿ ಭೀತಿಯನ್ನು ಹರಡಿದೆ ಎಂದು ಆರ್ಥಿಕ ಅಪರಾಧ ಘಟಕದ ತನಿಖೆಯು ಕಂಡುಹಿಡಿದಿದೆ ಎಂದು ಬಿಹಾರ ಪೊಲೀಸ್ (ಪ್ರಧಾನ ಕಚೇರಿ) ಹೆಚ್ಚುವರಿ ಮಹಾನಿರ್ದೇಶಕ ಜೆಎಸ್ ಗಂಗ್ವಾರ್ ಕಳೆದ ವಾರ ಸುದ್ದಿಗಾರರಿಗೆ ತಿಳಿಸಿದ್ದರು.

ಈ ಬಗ್ಗೆ ತನಿಖೆ ನಡೆಸಲು ತಮಿಳುನಾಡು ಪೊಲೀಸರು 13 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇದಕ್ಕೂ ಮೊದಲು, ಬಿಹಾರ ಸರ್ಕಾರವು ತಮಿಳುನಾಡಿಗೆ ತನಿಖೆ ನಡೆಸುತ್ತಿರುವ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಉನ್ನತ ಅಧಿಕಾರಿಗಳ ತಂಡವನ್ನು ಕಳುಹಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...