Homeಮುಖಪುಟಹೊಸದಾಗಿ 19 ಜಿಲ್ಲೆ 3 ವಿಭಾಗೀಯ ಕೇಂದ್ರ ರಚಿಸಲು ರಾಜಸ್ಥಾನ ಸರ್ಕಾರ ನಿರ್ಧಾರ; ಬಿಜೆಪಿ ಟೀಕೆ

ಹೊಸದಾಗಿ 19 ಜಿಲ್ಲೆ 3 ವಿಭಾಗೀಯ ಕೇಂದ್ರ ರಚಿಸಲು ರಾಜಸ್ಥಾನ ಸರ್ಕಾರ ನಿರ್ಧಾರ; ಬಿಜೆಪಿ ಟೀಕೆ

- Advertisement -
- Advertisement -

19 ಹೊಸ ಜಿಲ್ಲೆಗಳನ್ನು ಮತ್ತು ಮೂರು ವಿಭಾಗೀಯ ಕೇಂದ್ರಗಳನ್ನು ರಚಿಸುವುದಾಗಿ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರ ಶುಕ್ರವಾರ ಘೋಷಿಸಿದೆ. “ರಾಜ್ಯದ ನಿವಾಸಿಗಳಿಗೆ ಆಡಳಿತ ಕಚೇರಿಗಳು ಹತ್ತಿರದಲ್ಲಿರಬೇಕು ಎಂಬ ಕಾರಣಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸ್ಪಷ್ಟಪಡಿಸಿದ್ದಾರೆ.

“ಈ ನಿರ್ಧಾರದ ಹಿಂದೆ ರಾಜಕೀಯ ದುರುದ್ದೇಶಗಳಿವೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ಭಾರತೀಯ ಜನತಾ ಪಕ್ಷ ಆರೋಪಿಸಿದೆ.

ಅನುಪ್‌ಗಢ್, ಬಲೋತ್ರಾ, ಬೇವಾರ್, ದೀಗ್, ದಿದ್ವಾನಾ-ಕುಚಮನ್, ದುಡು, ಗಂಗಾಪುರ ನಗರ, ಜೈಪುರ ಉತ್ತರ, ಜೈಪುರ ದಕ್ಷಿಣ, ಜೋಧ್‌ಪುರ ಪೂರ್ವ, ಜೋಧ್‌ಪುರ ಪಶ್ಚಿಮ, ಕೇಕ್ರಿ, ಕೊಟ್‌ಪುಟ್ಲಿ-ಬೆಹ್ರೋರ್, ಖೈರ್ತಾಲ್, ನೀಮ್ ಕಾ ಥಾನಾ, ಫಲೋಡಿ, ಸಾಲುಂಬಾರ್, ಸಂಚೋರ್ ಮತ್ತು ಶಹಪುರ ಹೊಸ ಜಿಲ್ಲೆಗಳಾಗಲಿವೆ.

ಈ ನಿರ್ಧಾರದಿಂದಾಗಿ ರಾಜಸ್ಥಾನವು ಒಟ್ಟು 50 ಜಿಲ್ಲೆಗಳನ್ನು ಹೊಂದಲಿದೆ. ಮೂರು ಹೊಸ ವಿಭಾಗೀಯ ಪ್ರಧಾನ ಕಚೇರಿಗಳಾಗಿ ಪಾಲಿ, ಸಿಕರ್ ಮತ್ತು ಬನ್ಸ್ವಾರಾ ಸೇರಿಕೊಳ್ಳಲಿವೆ.

“ರಾಜಸ್ಥಾನವು ಭೌಗೋಳಿಕ ವಿಸ್ತೀರ್ಣದಲ್ಲಿ ದೇಶದ ಅತಿದೊಡ್ಡ ರಾಜ್ಯವಾಗಿದೆ. ಜನರು ಸುಲಭವಾಗಿ ಜಿಲ್ಲಾ ಕೇಂದ್ರಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಆಡಳಿತ ವ್ಯವಸ್ಥೆಯು ಪ್ರತಿ ಕುಟುಂಬವನ್ನು ತಲುಪಲು ಆಗುತ್ತಿಲ್ಲ” ಎಂದು ಗೆಹ್ಲೋಟ್ ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ಹೇಳಿದ್ದಾರೆ.

“ಕಾನೂನು ಮತ್ತು ಸುವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿ ಜಾರಿಗೊಳಿಸಲು, ಉತ್ತಮ ಆಡಳಿತ ವ್ಯವಸ್ಥೆಯನ್ನು ತರಲು ಸಣ್ಣ ಜಿಲ್ಲೆಗಳು ಸಹಾಯ ಮಾಡುತ್ತದೆ” ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ.

ಹೊಸ ಜಿಲ್ಲೆಗಳಲ್ಲಿ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಗೆ 2,000 ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದಾರೆ.

ಈ ಕ್ರಮವನ್ನು ಟೀಕಿಸಿದ ಬಿಜೆಪಿ, “ಹೊಸ ಜಿಲ್ಲೆಗಳ ರಚನೆಗೆ ಶಿಫಾರಸುಗಳನ್ನು ನೀಡಲು ಆರು ದಿನಗಳ ಹಿಂದೆ ರಚಿಸಲಾಗಿದ್ದ ರಾಮ್ ಲುಭಯಾ ಸಮಿತಿಯ ಅವಧಿಯನ್ನು ರಾಜ್ಯ ಸರ್ಕಾರವು ವಿಸ್ತರಿಸಿದೆ” ಎಂದು ಟೀಕಿಸಿದೆ.

“ಲುಭಯಾ ಸಮಿತಿಯ ಅಧಿಕಾರಾವಧಿಯನ್ನು ಸಿಎಂ ವಿಸ್ತರಿಸಿದ್ದಾರೆ. ಅದರ ವರದಿಯನ್ನು ಸ್ವೀಕರಿಸಲು ವಿಳಂಬವಾಗಿದೆ ಎಂದು ಹೇಳಿದ್ದಾರೆ” ಎಂದು ಬಿಜೆಪಿ ಶಾಸಕ ಮತ್ತು ವಿರೋಧ ಪಕ್ಷದ ಉಪ ನಾಯಕ ರಾಜೇಂದ್ರ ರಾಥೋಡ್ ಪ್ರತಿಕ್ರಿಯಿಸಿದ್ದಾರೆ.

“ವರದಿಯನ್ನು ಸ್ವೀಕರಿಸದೆ ಈಗ 19 ಜಿಲ್ಲೆಗಳನ್ನು ಹೇಗೆ ಘೋಷಿಸಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಕಷ್ಟ” ಎಂದು ಬಿಜೆಪಿ ಟೀಕಿಸಿದೆ.

ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ ಅವರು ಪ್ರತಿಕ್ರಿಯಿಸಿ, “ರಾಜಕೀಯ ಉದ್ದೇಶಗಳನ್ನು ಈಡೇರಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಆರೋಪಿಸಿದ್ದಾರೆ.

“ಹೊಸ ಜಿಲ್ಲೆಗಳನ್ನು ಘೋಷಿಸಿದ ವಿಧಾನವು [ರಾಜ್ಯ] ಬಜೆಟ್ ಮತ್ತು ಆರ್ಥಿಕ ರಚನೆಯನ್ನು ಅಪಾಯಕ್ಕೆ ಸಿಲುಕಿಸಿದೆ” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ರಾಪರ್‌ ಸ್ಟಾನ್‌ ಸಂಗೀತ ಕಾರ್ಯಕ್ರಮಕ್ಕೆ ಬಜರಂಗದಳದಿಂದ ಅಡ್ಡಿ; ರದ್ದು

ಮತ್ತೊಂದೆಡೆ ಅಸ್ಸಾಂನಲ್ಲಿ ಬಿಜೆಪಿ ಸರ್ಕಾರವು ಡಿಸೆಂಬರ್‌ನಲ್ಲಿ ನಾಲ್ಕು ಜಿಲ್ಲೆಗಳನ್ನು ಇತರ ನಾಲ್ಕು ಜಿಲ್ಲೆಗಳೊಂದಿಗೆ ವಿಲೀನಗೊಳಿಸಲು ನಿರ್ಧರಿಸಿತ್ತು. ಬಿಸ್ವನಾಥ್ ಜಿಲ್ಲೆಯನ್ನು ಸೋನಿತ್‌ಪುರದೊಂದಿಗೆ, ಹೋಜೈ ಅನ್ನು ನಾಗಾಂವ್‌ನೊಂದಿಗೆ, ಬಜಾಲಿಯನ್ನು ಬರ್ಪೇಟಾದೊಂದಿಗೆ ಮತ್ತು ತಮುಲ್‌ಪುರವನ್ನು ಬಕ್ಸಾದೊಂದಿಗೆ ವಿಲೀನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದರು.

ಹೊಸ ಆಡಳಿತಾತ್ಮಕ ಘಟಕಗಳನ್ನು ರಚಿಸುವುದನ್ನು ತಡೆಯುವ ನಿಟ್ಟಿನಲ್ಲಿ ಚುನಾವಣಾ ಆಯೋಗ ನಿಷೇಧ ಹೇರುವ ಒಂದು ದಿನದ ಮೊದಲು ಈ ನಿರ್ಧಾರವನ್ನು ಹೊರಬಿದ್ದಿತ್ತು. ವಿಧಾನಸಭಾ, ಲೋಕಸಭಾ ಕ್ಷೇತ್ರಗಳು ಮತ್ತು ಸ್ಥಳೀಯ ಸಂಸ್ಥೆಗಳ ವಾರ್ಡ್‌ಗಳ ಗಡಿಗಳನ್ನು ಗುರುತಿಸುವ ನಿಟ್ಟಿನಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಗೆ ಚುನಾವಣಾ ಸಮಿತಿ ಕ್ರಮ ಕೈಗೊಳ್ಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...