Homeಮುಖಪುಟಹೊಸದಾಗಿ 19 ಜಿಲ್ಲೆ 3 ವಿಭಾಗೀಯ ಕೇಂದ್ರ ರಚಿಸಲು ರಾಜಸ್ಥಾನ ಸರ್ಕಾರ ನಿರ್ಧಾರ; ಬಿಜೆಪಿ ಟೀಕೆ

ಹೊಸದಾಗಿ 19 ಜಿಲ್ಲೆ 3 ವಿಭಾಗೀಯ ಕೇಂದ್ರ ರಚಿಸಲು ರಾಜಸ್ಥಾನ ಸರ್ಕಾರ ನಿರ್ಧಾರ; ಬಿಜೆಪಿ ಟೀಕೆ

- Advertisement -
- Advertisement -

19 ಹೊಸ ಜಿಲ್ಲೆಗಳನ್ನು ಮತ್ತು ಮೂರು ವಿಭಾಗೀಯ ಕೇಂದ್ರಗಳನ್ನು ರಚಿಸುವುದಾಗಿ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರ ಶುಕ್ರವಾರ ಘೋಷಿಸಿದೆ. “ರಾಜ್ಯದ ನಿವಾಸಿಗಳಿಗೆ ಆಡಳಿತ ಕಚೇರಿಗಳು ಹತ್ತಿರದಲ್ಲಿರಬೇಕು ಎಂಬ ಕಾರಣಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸ್ಪಷ್ಟಪಡಿಸಿದ್ದಾರೆ.

“ಈ ನಿರ್ಧಾರದ ಹಿಂದೆ ರಾಜಕೀಯ ದುರುದ್ದೇಶಗಳಿವೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ಭಾರತೀಯ ಜನತಾ ಪಕ್ಷ ಆರೋಪಿಸಿದೆ.

ಅನುಪ್‌ಗಢ್, ಬಲೋತ್ರಾ, ಬೇವಾರ್, ದೀಗ್, ದಿದ್ವಾನಾ-ಕುಚಮನ್, ದುಡು, ಗಂಗಾಪುರ ನಗರ, ಜೈಪುರ ಉತ್ತರ, ಜೈಪುರ ದಕ್ಷಿಣ, ಜೋಧ್‌ಪುರ ಪೂರ್ವ, ಜೋಧ್‌ಪುರ ಪಶ್ಚಿಮ, ಕೇಕ್ರಿ, ಕೊಟ್‌ಪುಟ್ಲಿ-ಬೆಹ್ರೋರ್, ಖೈರ್ತಾಲ್, ನೀಮ್ ಕಾ ಥಾನಾ, ಫಲೋಡಿ, ಸಾಲುಂಬಾರ್, ಸಂಚೋರ್ ಮತ್ತು ಶಹಪುರ ಹೊಸ ಜಿಲ್ಲೆಗಳಾಗಲಿವೆ.

ಈ ನಿರ್ಧಾರದಿಂದಾಗಿ ರಾಜಸ್ಥಾನವು ಒಟ್ಟು 50 ಜಿಲ್ಲೆಗಳನ್ನು ಹೊಂದಲಿದೆ. ಮೂರು ಹೊಸ ವಿಭಾಗೀಯ ಪ್ರಧಾನ ಕಚೇರಿಗಳಾಗಿ ಪಾಲಿ, ಸಿಕರ್ ಮತ್ತು ಬನ್ಸ್ವಾರಾ ಸೇರಿಕೊಳ್ಳಲಿವೆ.

“ರಾಜಸ್ಥಾನವು ಭೌಗೋಳಿಕ ವಿಸ್ತೀರ್ಣದಲ್ಲಿ ದೇಶದ ಅತಿದೊಡ್ಡ ರಾಜ್ಯವಾಗಿದೆ. ಜನರು ಸುಲಭವಾಗಿ ಜಿಲ್ಲಾ ಕೇಂದ್ರಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಆಡಳಿತ ವ್ಯವಸ್ಥೆಯು ಪ್ರತಿ ಕುಟುಂಬವನ್ನು ತಲುಪಲು ಆಗುತ್ತಿಲ್ಲ” ಎಂದು ಗೆಹ್ಲೋಟ್ ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ಹೇಳಿದ್ದಾರೆ.

“ಕಾನೂನು ಮತ್ತು ಸುವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿ ಜಾರಿಗೊಳಿಸಲು, ಉತ್ತಮ ಆಡಳಿತ ವ್ಯವಸ್ಥೆಯನ್ನು ತರಲು ಸಣ್ಣ ಜಿಲ್ಲೆಗಳು ಸಹಾಯ ಮಾಡುತ್ತದೆ” ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ.

ಹೊಸ ಜಿಲ್ಲೆಗಳಲ್ಲಿ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಗೆ 2,000 ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದಾರೆ.

ಈ ಕ್ರಮವನ್ನು ಟೀಕಿಸಿದ ಬಿಜೆಪಿ, “ಹೊಸ ಜಿಲ್ಲೆಗಳ ರಚನೆಗೆ ಶಿಫಾರಸುಗಳನ್ನು ನೀಡಲು ಆರು ದಿನಗಳ ಹಿಂದೆ ರಚಿಸಲಾಗಿದ್ದ ರಾಮ್ ಲುಭಯಾ ಸಮಿತಿಯ ಅವಧಿಯನ್ನು ರಾಜ್ಯ ಸರ್ಕಾರವು ವಿಸ್ತರಿಸಿದೆ” ಎಂದು ಟೀಕಿಸಿದೆ.

“ಲುಭಯಾ ಸಮಿತಿಯ ಅಧಿಕಾರಾವಧಿಯನ್ನು ಸಿಎಂ ವಿಸ್ತರಿಸಿದ್ದಾರೆ. ಅದರ ವರದಿಯನ್ನು ಸ್ವೀಕರಿಸಲು ವಿಳಂಬವಾಗಿದೆ ಎಂದು ಹೇಳಿದ್ದಾರೆ” ಎಂದು ಬಿಜೆಪಿ ಶಾಸಕ ಮತ್ತು ವಿರೋಧ ಪಕ್ಷದ ಉಪ ನಾಯಕ ರಾಜೇಂದ್ರ ರಾಥೋಡ್ ಪ್ರತಿಕ್ರಿಯಿಸಿದ್ದಾರೆ.

“ವರದಿಯನ್ನು ಸ್ವೀಕರಿಸದೆ ಈಗ 19 ಜಿಲ್ಲೆಗಳನ್ನು ಹೇಗೆ ಘೋಷಿಸಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಕಷ್ಟ” ಎಂದು ಬಿಜೆಪಿ ಟೀಕಿಸಿದೆ.

ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ ಅವರು ಪ್ರತಿಕ್ರಿಯಿಸಿ, “ರಾಜಕೀಯ ಉದ್ದೇಶಗಳನ್ನು ಈಡೇರಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಆರೋಪಿಸಿದ್ದಾರೆ.

“ಹೊಸ ಜಿಲ್ಲೆಗಳನ್ನು ಘೋಷಿಸಿದ ವಿಧಾನವು [ರಾಜ್ಯ] ಬಜೆಟ್ ಮತ್ತು ಆರ್ಥಿಕ ರಚನೆಯನ್ನು ಅಪಾಯಕ್ಕೆ ಸಿಲುಕಿಸಿದೆ” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ರಾಪರ್‌ ಸ್ಟಾನ್‌ ಸಂಗೀತ ಕಾರ್ಯಕ್ರಮಕ್ಕೆ ಬಜರಂಗದಳದಿಂದ ಅಡ್ಡಿ; ರದ್ದು

ಮತ್ತೊಂದೆಡೆ ಅಸ್ಸಾಂನಲ್ಲಿ ಬಿಜೆಪಿ ಸರ್ಕಾರವು ಡಿಸೆಂಬರ್‌ನಲ್ಲಿ ನಾಲ್ಕು ಜಿಲ್ಲೆಗಳನ್ನು ಇತರ ನಾಲ್ಕು ಜಿಲ್ಲೆಗಳೊಂದಿಗೆ ವಿಲೀನಗೊಳಿಸಲು ನಿರ್ಧರಿಸಿತ್ತು. ಬಿಸ್ವನಾಥ್ ಜಿಲ್ಲೆಯನ್ನು ಸೋನಿತ್‌ಪುರದೊಂದಿಗೆ, ಹೋಜೈ ಅನ್ನು ನಾಗಾಂವ್‌ನೊಂದಿಗೆ, ಬಜಾಲಿಯನ್ನು ಬರ್ಪೇಟಾದೊಂದಿಗೆ ಮತ್ತು ತಮುಲ್‌ಪುರವನ್ನು ಬಕ್ಸಾದೊಂದಿಗೆ ವಿಲೀನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದರು.

ಹೊಸ ಆಡಳಿತಾತ್ಮಕ ಘಟಕಗಳನ್ನು ರಚಿಸುವುದನ್ನು ತಡೆಯುವ ನಿಟ್ಟಿನಲ್ಲಿ ಚುನಾವಣಾ ಆಯೋಗ ನಿಷೇಧ ಹೇರುವ ಒಂದು ದಿನದ ಮೊದಲು ಈ ನಿರ್ಧಾರವನ್ನು ಹೊರಬಿದ್ದಿತ್ತು. ವಿಧಾನಸಭಾ, ಲೋಕಸಭಾ ಕ್ಷೇತ್ರಗಳು ಮತ್ತು ಸ್ಥಳೀಯ ಸಂಸ್ಥೆಗಳ ವಾರ್ಡ್‌ಗಳ ಗಡಿಗಳನ್ನು ಗುರುತಿಸುವ ನಿಟ್ಟಿನಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಗೆ ಚುನಾವಣಾ ಸಮಿತಿ ಕ್ರಮ ಕೈಗೊಳ್ಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...