Homeಮುಖಪುಟಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

ಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

- Advertisement -
- Advertisement -

ಪೂರ್ವ ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ನಡುವಿನ ಪರಿಸ್ಥಿತಿಯು ಬಹಳ ಸೂಕ್ಷ್ಮವೂ, ಸಾಕಷ್ಟು ಅಪಾಯಕಾರಿಯೂ ಆಗಿ ಉಳಿದಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

‘ಇಂಡಿಯಾ ಟುಡೇ’ ವಾಹಿನಿಯ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿರುವ ಅವರು, “ಎರಡೂ ದೇಶಗಳ ಮಿಲಿಟರಿ ಪಡೆಗಳು ಕೆಲವು ಭಾಗಗಳಲ್ಲಿ ಪರಸ್ಪರ ಹತ್ತಿರದಲ್ಲಿ ನಿಯೋಜಿಸಲ್ಪಟ್ಟಿವೆ. ಹೀಗಾಗಿ ಪರಿಸ್ಥಿತಿ ಸೂಕ್ಷ್ಮವೂ ಅಪಾಯಕಾರಿಯೂ ಆಗಿದೆ” ಎಂದಿದ್ದಾರೆ.

ಜೂನ್ 2020ರಲ್ಲಿ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಮುಖಾಮುಖಿಯಾದಾಗ ಎರಡೂ ಕಡೆಗಳಲ್ಲಿ ಸಾವುನೋವುಗಳು ಸಂಭವಿಸಿದ್ದವು. ಹಲವು ದಶಕಗಳ ನಂತರ ಈ ವಿದ್ಯಮಾನ ನಡೆದಿತ್ತು. ಅನೇಕ ಸೂಕ್ಷ್ಮ ಪ್ರದೇಶಗಳಲ್ಲಿ ಉದ್ವಿಗ್ನತೆಗಳು ಭುಗಿಲೆದ್ದವು. ಫಿರಂಗಿ, ಟ್ಯಾಂಕ್‌ಗಳು ಮತ್ತು ಫೈಟರ್ ಜೆಟ್‌ಗಳೊಂದು ಹತ್ತಾರು ಸಾವಿರ ಸೈನಿಕರನ್ನು ಉಭಯ ದೇಶಗಳೂ ನಿಯೋಜಿಸಿದ್ದವು.

ಈ ತಿಂಗಳ ಆರಂಭದಲ್ಲಿ ಅಮೇರಿಕನ್ ಗುಪ್ತಚರವು ಹಲವು ವಿಚಾರಗಳನ್ನು ತಿಳಿಸಿತ್ತು. ಆತಂಕಕಾರಿ ಸಂಗತಿಗಳನ್ನು ಮೌಲ್ಯಮಾಪನ ಮಾಡಿ, ಮಿಲಿಟರಿ ವಿಸ್ತರಣೆಯಿಂದಾಗಿ ಪರಮಾಣು-ಶಸ್ತ್ರಸಜ್ಜಿತ ದೈತ್ಯರ ನಡುವಿನ ಸಶಸ್ತ್ರ ಮುಖಾಮುಖಿಯ ಅಪಾಯಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿತ್ತು.

ಇಂಡಿಯಾ ಟುಡೇ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೈ ಶಂಕರ್‌ ಮಾತನಾಡಿದ್ದು, “ಚೀನಾದ ಮಾಜಿ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ 2020ರ ಸೆಪ್ಟೆಂಬರ್‌ನಲ್ಲಾದ ತಾತ್ವಿಕ ಒಪ್ಪಂದಕ್ಕೆ ಅನುಗುಣವಾಗಿ ಗಡಿ ವಿವಾದವನ್ನು ಪರಿಹರಿಸುವವರೆಗೆ ನವದೆಹಲಿ ಮತ್ತು ಬೀಜಿಂಗ್ ನಡುವಿನ ಸಂಬಂಧಗಳು ಸಹಜ ಸ್ಥಿತಿಗೆ ಮರಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಚೀನಿಯರು ತಾವು ಒಪ್ಪಿಕೊಂಡದ್ದನ್ನು ನಡೆಸಿಕೊಡಬೇಕು. ಆದರೆ ಅವರು ಒಪ್ಪಂದದೊಂದಿಗೆ ತಾಕಲಾಟದಲ್ಲಿದ್ದಾರೆ” ಎಂದು ಜೈಶಂಕರ್ ಹೇಳಿದ್ದಾರೆ.

ಇದನ್ನೂ ಓದಿರಿ: ಕೆಲವು ನಿವೃತ್ತ ನ್ಯಾಯಮೂರ್ತಿಗಳು ದೇಶ ವಿರೋಧಿ ಗ್ಯಾಂಗ್‌ನಲ್ಲಿದ್ದಾರೆ: ಕೇಂದ್ರ ಕಾನೂನು ಸಚಿವ

ಇತರ ವಿಚಾರಗಳ ಬಗ್ಗೆಯೂ ಚರ್ಚೆಗಳು ನಡೆಯುತ್ತಿರುವಾಗ ಉಭಯ ರಾಷ್ಟ್ರಗಳು ಅನೇಕ ಕ್ಷೇತ್ರಗಳಿಂದ ಹೊರಗುಳಿಯುವಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸಿವೆ ಎಂದು ವಿದೇಶಾಂಗ ಸಚಿವರು ತಿಳಿಸಿದ್ದಾರೆ.

ಮಾರ್ಚ್ 2ರಂದು ದೆಹಲಿಯಲ್ಲಿ ನಡೆದ ಜಿ 20 ವಿದೇಶಾಂಗ ಸಚಿವರ ಸಭೆಯ ಹಿನ್ನೆಲೆಯಲ್ಲಿ ಚೀನಾದ ಹೊಸ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಅವರೊಂದಿಗೆ ಗಡಿಯಲ್ಲಿನ ಪರಿಸ್ಥಿತಿಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದೇನೆ ಎಂದು ಜೈಶಂಕರ್ ಮಾಹಿತಿ ನೀಡಿದ್ದಾರೆ.

“ನಾವು ಶಾಂತಿ ಮತ್ತು ನೆಮ್ಮದಿಯನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ನಾವು ಚೀನಿಯರಿಗೆ ಸ್ಪಷ್ಟವಾಗಿ ಹೇಳಿದ್ದೇವೆ. ನೀವು ಒಪ್ಪಂದಗಳನ್ನು ಉಲ್ಲಂಘಿಸುವಂತಿಲ್ಲ ಮತ್ತು ನಂತರ ಏನೂ ಆಗಿಲ್ಲ ಎಂಬಂತೆ ಉಳಿದ ಸಂಬಂಧವನ್ನು ಮುಂದುವರಿಸಲು ಬಯಸುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...