Homeಮುಖಪುಟಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

ಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

- Advertisement -
- Advertisement -

ಪೂರ್ವ ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ನಡುವಿನ ಪರಿಸ್ಥಿತಿಯು ಬಹಳ ಸೂಕ್ಷ್ಮವೂ, ಸಾಕಷ್ಟು ಅಪಾಯಕಾರಿಯೂ ಆಗಿ ಉಳಿದಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

‘ಇಂಡಿಯಾ ಟುಡೇ’ ವಾಹಿನಿಯ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿರುವ ಅವರು, “ಎರಡೂ ದೇಶಗಳ ಮಿಲಿಟರಿ ಪಡೆಗಳು ಕೆಲವು ಭಾಗಗಳಲ್ಲಿ ಪರಸ್ಪರ ಹತ್ತಿರದಲ್ಲಿ ನಿಯೋಜಿಸಲ್ಪಟ್ಟಿವೆ. ಹೀಗಾಗಿ ಪರಿಸ್ಥಿತಿ ಸೂಕ್ಷ್ಮವೂ ಅಪಾಯಕಾರಿಯೂ ಆಗಿದೆ” ಎಂದಿದ್ದಾರೆ.

ಜೂನ್ 2020ರಲ್ಲಿ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಮುಖಾಮುಖಿಯಾದಾಗ ಎರಡೂ ಕಡೆಗಳಲ್ಲಿ ಸಾವುನೋವುಗಳು ಸಂಭವಿಸಿದ್ದವು. ಹಲವು ದಶಕಗಳ ನಂತರ ಈ ವಿದ್ಯಮಾನ ನಡೆದಿತ್ತು. ಅನೇಕ ಸೂಕ್ಷ್ಮ ಪ್ರದೇಶಗಳಲ್ಲಿ ಉದ್ವಿಗ್ನತೆಗಳು ಭುಗಿಲೆದ್ದವು. ಫಿರಂಗಿ, ಟ್ಯಾಂಕ್‌ಗಳು ಮತ್ತು ಫೈಟರ್ ಜೆಟ್‌ಗಳೊಂದು ಹತ್ತಾರು ಸಾವಿರ ಸೈನಿಕರನ್ನು ಉಭಯ ದೇಶಗಳೂ ನಿಯೋಜಿಸಿದ್ದವು.

ಈ ತಿಂಗಳ ಆರಂಭದಲ್ಲಿ ಅಮೇರಿಕನ್ ಗುಪ್ತಚರವು ಹಲವು ವಿಚಾರಗಳನ್ನು ತಿಳಿಸಿತ್ತು. ಆತಂಕಕಾರಿ ಸಂಗತಿಗಳನ್ನು ಮೌಲ್ಯಮಾಪನ ಮಾಡಿ, ಮಿಲಿಟರಿ ವಿಸ್ತರಣೆಯಿಂದಾಗಿ ಪರಮಾಣು-ಶಸ್ತ್ರಸಜ್ಜಿತ ದೈತ್ಯರ ನಡುವಿನ ಸಶಸ್ತ್ರ ಮುಖಾಮುಖಿಯ ಅಪಾಯಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿತ್ತು.

ಇಂಡಿಯಾ ಟುಡೇ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೈ ಶಂಕರ್‌ ಮಾತನಾಡಿದ್ದು, “ಚೀನಾದ ಮಾಜಿ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ 2020ರ ಸೆಪ್ಟೆಂಬರ್‌ನಲ್ಲಾದ ತಾತ್ವಿಕ ಒಪ್ಪಂದಕ್ಕೆ ಅನುಗುಣವಾಗಿ ಗಡಿ ವಿವಾದವನ್ನು ಪರಿಹರಿಸುವವರೆಗೆ ನವದೆಹಲಿ ಮತ್ತು ಬೀಜಿಂಗ್ ನಡುವಿನ ಸಂಬಂಧಗಳು ಸಹಜ ಸ್ಥಿತಿಗೆ ಮರಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಚೀನಿಯರು ತಾವು ಒಪ್ಪಿಕೊಂಡದ್ದನ್ನು ನಡೆಸಿಕೊಡಬೇಕು. ಆದರೆ ಅವರು ಒಪ್ಪಂದದೊಂದಿಗೆ ತಾಕಲಾಟದಲ್ಲಿದ್ದಾರೆ” ಎಂದು ಜೈಶಂಕರ್ ಹೇಳಿದ್ದಾರೆ.

ಇದನ್ನೂ ಓದಿರಿ: ಕೆಲವು ನಿವೃತ್ತ ನ್ಯಾಯಮೂರ್ತಿಗಳು ದೇಶ ವಿರೋಧಿ ಗ್ಯಾಂಗ್‌ನಲ್ಲಿದ್ದಾರೆ: ಕೇಂದ್ರ ಕಾನೂನು ಸಚಿವ

ಇತರ ವಿಚಾರಗಳ ಬಗ್ಗೆಯೂ ಚರ್ಚೆಗಳು ನಡೆಯುತ್ತಿರುವಾಗ ಉಭಯ ರಾಷ್ಟ್ರಗಳು ಅನೇಕ ಕ್ಷೇತ್ರಗಳಿಂದ ಹೊರಗುಳಿಯುವಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸಿವೆ ಎಂದು ವಿದೇಶಾಂಗ ಸಚಿವರು ತಿಳಿಸಿದ್ದಾರೆ.

ಮಾರ್ಚ್ 2ರಂದು ದೆಹಲಿಯಲ್ಲಿ ನಡೆದ ಜಿ 20 ವಿದೇಶಾಂಗ ಸಚಿವರ ಸಭೆಯ ಹಿನ್ನೆಲೆಯಲ್ಲಿ ಚೀನಾದ ಹೊಸ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಅವರೊಂದಿಗೆ ಗಡಿಯಲ್ಲಿನ ಪರಿಸ್ಥಿತಿಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದೇನೆ ಎಂದು ಜೈಶಂಕರ್ ಮಾಹಿತಿ ನೀಡಿದ್ದಾರೆ.

“ನಾವು ಶಾಂತಿ ಮತ್ತು ನೆಮ್ಮದಿಯನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ನಾವು ಚೀನಿಯರಿಗೆ ಸ್ಪಷ್ಟವಾಗಿ ಹೇಳಿದ್ದೇವೆ. ನೀವು ಒಪ್ಪಂದಗಳನ್ನು ಉಲ್ಲಂಘಿಸುವಂತಿಲ್ಲ ಮತ್ತು ನಂತರ ಏನೂ ಆಗಿಲ್ಲ ಎಂಬಂತೆ ಉಳಿದ ಸಂಬಂಧವನ್ನು ಮುಂದುವರಿಸಲು ಬಯಸುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...