Homeಮುಖಪುಟಎಐಎಡಿಎಂಕೆ ಜೊತೆ ಮೈತ್ರಿ ಮುಂದುವರಿದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವೆ: ಅಣ್ಣಾಮಲೈ

ಎಐಎಡಿಎಂಕೆ ಜೊತೆ ಮೈತ್ರಿ ಮುಂದುವರಿದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವೆ: ಅಣ್ಣಾಮಲೈ

- Advertisement -
- Advertisement -

“ಎಐಎಡಿಎಂಕೆ ಪಕ್ಷದ ಜೊತೆಯಲ್ಲಿ ಮೈತ್ರಿ ಮುಂದುವರಿದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ ನೀಡಿದ್ದಾರೆ.

ಪಕ್ಷದ ಆಂತರಿಕ ಸಭೆಯಲ್ಲಿ ಮಾತನಾಡುತ್ತಾ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಅವರು, “2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಬೇಕು” ಎಂದು ಆಶಿಸಿದ್ದಾರೆ.

ಶುಕ್ರವಾರ ಚೆನ್ನೈನಲ್ಲಿ ನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಆಂತರಿಕ ಸಭೆಯಲ್ಲಿ ಈ ಹೇಳಿಕೆಗಳು ಹೊರಬಿದ್ದಿವೆ. “ಕೇಂದ್ರ ನಾಯಕತ್ವವು ತಮಿಳುನಾಡಿನಲ್ಲಿ ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಲು ನಿರ್ಧರಿಸಿದರೆ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಅವರು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಅಣ್ಣಾಮಲೈ ಹೇಳಿಕೆಗಳು ಕೋಲಾಹಲವನ್ನು ಸೃಷ್ಟಿಸಿದ್ದು, ಸಭೆಯಲ್ಲಿದ್ದ ಕನಿಷ್ಠ ಇಬ್ಬರು ನಾಯಕರು ತಕರಾರು ತೆಗೆದಿದ್ದಾರೆ ಎನ್ನಲಾಗಿದೆ. “ರಾಜ್ಯ ಘಟಕದ ಸಭೆಯಲ್ಲಿ ಮೈತ್ರಿ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಅಂತಹ ನಿರ್ಧಾರಗಳನ್ನು ಹೊಸದಿಲ್ಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ” ಎಂದು ಹರಿಹಾಯ್ದಿದ್ದಾರೆ.

ದ್ರಾವಿಡ ಸಂಘಟನೆಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದನ್ನು ಅಣ್ಣಾಮಲೈ ವಿರೋಧಿಸಿರುವ ಕುರಿತು ಸ್ಪಷ್ಟನೆಯನ್ನು ನೀಡಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಮುಖ್ಯಸ್ಥೆ, ಕೊಯಮತ್ತೂರು (ದಕ್ಷಿಣ) ಶಾಸಕಿ ವನತಿ ಶ್ರೀನಿವಾಸನ್ ಮತ್ತು ಉಪಾಧ್ಯಕ್ಷ ನಾರಾಯಣನ್ ತಿರುಪತಿ ಒತ್ತಾಯಿಸಿರುವಾಗಿ ಮೂಲಗಳು ಹೇಳಿವೆ.

ಆದರೆ ಅಣ್ಣಾಮಲೈ ಅವರ ಮಾತುಗಳಿಗೆ ಇತರ ಕಾರ್ಯಕರ್ತರಿಂದ ಬೆಂಬಲ ದೊರೆತಿದೆ ಎಂದು ತಿಳಿದು ಬಂದಿದೆ. ಬಿಜೆಪಿ ಸ್ವಂತ ಬಲದಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಅಣ್ಣಾಮಲೈ ಬೆಂಬಲಿಗರು ಆಶಿಸಿದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್‌’ (ಡಿಎಚ್‌) ವರದಿ ಮಾಡಿದೆ.

ಬಿಜೆಪಿ ಸ್ವತಂತ್ರ ಪಕ್ಷವಾಗಿ ಹೊರಹೊಮ್ಮಬೇಕಾದರೆ ಸ್ವಂತ ಬಲದಲ್ಲಿ ಚುನಾವಣೆ ಎದುರಿಸಬೇಕು ಎಂಬುದು ಅಣ್ಣಾಮಲೈ ಅವರ ಉದ್ದೇಶವಾಗಿತ್ತು ಎಂದು ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದ ಮುಖಂಡರು ತಿಳಿಸಿರುವುದಾಗಿ ‘ಡಿಎಚ್‌’ ಉಲ್ಲೇಖಿಸಿದೆ.

“ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಿದಾಗ ಮಾತ್ರ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಉತ್ತಮ ಆಡಳಿತದ ಬಗೆಗಿನ ನಮ್ಮ ನಿಲುವನ್ನು ಜನರು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಅಣ್ಣಾಮಲೈ ಹೇಳಿದರು. ಪಕ್ಷವನ್ನು ಕಟ್ಟುವಾಗ ತೊಂದರೆಗಳು ಎದುರಾಗುತ್ತವೆ; ಕೆಲವು ವರ್ಷಗಳ ಕಾಲ ಎಲ್ಲರೂ ಅಸಾಧಾರಣ ನೋವನ್ನು ಅನುಭವಿಸಬೇಕಾಗುತ್ತದೆ ಎಂಬುದು ರಾಜ್ಯಾಧ್ಯಕ್ಷರ ನಿಲುವಾಗಿದೆ” ಎಂದು ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.

ಕೇಂದ್ರ ನಾಯಕತ್ವವು ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದರೆ ರಾಜ್ಯ ಮುಖ್ಯಸ್ಥ ಸ್ಥಾನವನ್ನು ತ್ಯಜಿಸುತ್ತೇನೆ, ಪಕ್ಷಕ್ಕಾಗಿ ‘ಸಾಮಾನ್ಯ ಕೇಡರ್’ ಆಗಿ ಕೆಲಸ ಮಾಡುತ್ತೇನೆಂದು ಅಣ್ಣಾಮಲೈ ಸಭೆಯಲ್ಲಿ ಸ್ಪಷ್ಟಪಡಿಸಿದರು ಎಂದು ಮತ್ತೊಬ್ಬ ಮುಖಂಡರು ತಿಳಿಸಿದ್ದಾರೆ.

“ನಾಯಕತ್ವ ವಹಿಸಿದ್ದೇನೆ. ತಮಿಳುನಾಡಿನಲ್ಲಿ ಬದಲಾವಣೆಯನ್ನು ತರಲು ನಾನು ರಾಜಕೀಯ ಬಂದಿದ್ದೇನೆ ಹೊರತು, ಎಐಎಡಿಎಂಕೆ ಜೊತೆ ಸೇರಿಕೊಂಡು ಎರಡನೇ ಪಿಟೀಲು ನುಡಿಸಲು ಅಲ್ಲ” ಎಂದು ಅಣ್ಣಾ ಮಲೈ ಹೇಳಿರುವುದಾಗಿ ಮುಖಂಡರು ಮಾಹಿತಿ ನೀಡಿದ್ದಾರೆ.

ಮೈತ್ರಿಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ವಿವರಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅಪಾಯಿಂಟ್‌ಮೆಂಟ್ ಕೇಳಿರುವುದಾಗಿ ಅಣ್ಣಾಮಲೈ ಅವರು ಸಭೆಯಲ್ಲಿ ತಿಳಿಸಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿರಿ: ‘ನಕಲಿ ಪ್ರಚಾರ’ ಆರೋಪ; ಅಣ್ಣಾಮಲೈ ವಿರುದ್ಧ ಎಫ್‌ಐಆರ್‌ ದಾಖಲು

ಅಣ್ಣಾಮಲೈ ಅವರನ್ನು ಟೀಕಿಸಿ ಬಿಜೆಪಿ ತೊರೆದ ಸಿಟಿಆರ್ ನಿರ್ಮಲ್ ಕುಮಾರ್ ಅವರನ್ನು ಕೆಲವೇ ಗಂಟೆಗಳಲ್ಲಿ ಎಐಎಡಿಎಂಕೆ ಹಂಗಾಮಿ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿಯವರು ತಮ್ಮ ಪಕ್ಷಕ್ಕೆ ಸ್ವಾಗತಿಸಿದ ಹಿನ್ನೆಲೆಯಲ್ಲಿ ಅಣ್ಣಾಮಲೈ ಹೇಳಿಕೆಗಳು ಹೊರಬಿದ್ದಿವೆ. ಈ ಬೆಳವಣಿಗೆಗೆ ರಾಜ್ಯ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಮೈತ್ರಿ ಪಾಲುದಾರರ ನಡುವೆ ಮಾತಿನ ಚಕಮಕಿ ನಡೆದಿದೆ.

ಮೈತ್ರಿ ಕುರಿತು ಅಣ್ಣಾಮಲೈ ನೀಡಿರುವ ಹೇಳಿಕೆಗಳನ್ನು ಎರಡನೇ ಹಂತದ ಎಐಎಡಿಎಂಕೆ ನಾಯಕರು ಸ್ವಾಗತಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ನಾಯಕರಾಗಿರುವ ನೈನಾರ್ ನಾಗೇಂದ್ರನ್ ಪ್ರತಿಕ್ರಿಯಿಸಿ, “ಇದು ಅಣ್ಣಾಮಲೈ ಅವರ ವೈಯಕ್ತಿಕ ಅಭಿಪ್ರಾಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಎಐಎಡಿಎಂಕೆ ಸಂಘಟನಾ ಕಾರ್ಯದರ್ಶಿ ಡಿ ಜಯಕುಮಾರ್ ಅವರು ಪ್ರತಿಕ್ರಿಯಿಸಿ, “ಆಂತರಿಕ ಸಭೆಯಲ್ಲಿ ಆಡಿದ ಮಾತುಗಳ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಆದರೆ ರಾಜ್ಯದಲ್ಲಿ ತಮ್ಮ ಪಕ್ಷವು ಮೈತ್ರಿಕೂಟದ ನಾಯಕತ್ವ ವಹಿಸಲಿದ” ಎಂದು ಸ್ಪಷ್ಟಪಡಿಸಿದ್ದಾರೆ.

ಎಐಎಡಿಎಂಕೆ ಮತ್ತು ಬಿಜೆಪಿಯ ಮೈತ್ರಿ 2024 ರ ಲೋಕಸಭೆ ಚುನಾವಣೆಗೂ ಮುಂದುವರಿಯುತ್ತದೆ ಎಂದು ಹೇಳಲಾಗುತ್ತಿರುವುದರಿಂದ ಅಣ್ಣಾಮಲೈ ಅವರ ನಿಲುವು ಮಹತ್ವ ಪಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...