Homeಮುಖಪುಟಎಐಎಡಿಎಂಕೆ ಜೊತೆ ಮೈತ್ರಿ ಮುಂದುವರಿದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವೆ: ಅಣ್ಣಾಮಲೈ

ಎಐಎಡಿಎಂಕೆ ಜೊತೆ ಮೈತ್ರಿ ಮುಂದುವರಿದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವೆ: ಅಣ್ಣಾಮಲೈ

- Advertisement -
- Advertisement -

“ಎಐಎಡಿಎಂಕೆ ಪಕ್ಷದ ಜೊತೆಯಲ್ಲಿ ಮೈತ್ರಿ ಮುಂದುವರಿದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ ನೀಡಿದ್ದಾರೆ.

ಪಕ್ಷದ ಆಂತರಿಕ ಸಭೆಯಲ್ಲಿ ಮಾತನಾಡುತ್ತಾ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಅವರು, “2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಬೇಕು” ಎಂದು ಆಶಿಸಿದ್ದಾರೆ.

ಶುಕ್ರವಾರ ಚೆನ್ನೈನಲ್ಲಿ ನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಆಂತರಿಕ ಸಭೆಯಲ್ಲಿ ಈ ಹೇಳಿಕೆಗಳು ಹೊರಬಿದ್ದಿವೆ. “ಕೇಂದ್ರ ನಾಯಕತ್ವವು ತಮಿಳುನಾಡಿನಲ್ಲಿ ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಲು ನಿರ್ಧರಿಸಿದರೆ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಅವರು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಅಣ್ಣಾಮಲೈ ಹೇಳಿಕೆಗಳು ಕೋಲಾಹಲವನ್ನು ಸೃಷ್ಟಿಸಿದ್ದು, ಸಭೆಯಲ್ಲಿದ್ದ ಕನಿಷ್ಠ ಇಬ್ಬರು ನಾಯಕರು ತಕರಾರು ತೆಗೆದಿದ್ದಾರೆ ಎನ್ನಲಾಗಿದೆ. “ರಾಜ್ಯ ಘಟಕದ ಸಭೆಯಲ್ಲಿ ಮೈತ್ರಿ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಅಂತಹ ನಿರ್ಧಾರಗಳನ್ನು ಹೊಸದಿಲ್ಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ” ಎಂದು ಹರಿಹಾಯ್ದಿದ್ದಾರೆ.

ದ್ರಾವಿಡ ಸಂಘಟನೆಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದನ್ನು ಅಣ್ಣಾಮಲೈ ವಿರೋಧಿಸಿರುವ ಕುರಿತು ಸ್ಪಷ್ಟನೆಯನ್ನು ನೀಡಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಮುಖ್ಯಸ್ಥೆ, ಕೊಯಮತ್ತೂರು (ದಕ್ಷಿಣ) ಶಾಸಕಿ ವನತಿ ಶ್ರೀನಿವಾಸನ್ ಮತ್ತು ಉಪಾಧ್ಯಕ್ಷ ನಾರಾಯಣನ್ ತಿರುಪತಿ ಒತ್ತಾಯಿಸಿರುವಾಗಿ ಮೂಲಗಳು ಹೇಳಿವೆ.

ಆದರೆ ಅಣ್ಣಾಮಲೈ ಅವರ ಮಾತುಗಳಿಗೆ ಇತರ ಕಾರ್ಯಕರ್ತರಿಂದ ಬೆಂಬಲ ದೊರೆತಿದೆ ಎಂದು ತಿಳಿದು ಬಂದಿದೆ. ಬಿಜೆಪಿ ಸ್ವಂತ ಬಲದಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಅಣ್ಣಾಮಲೈ ಬೆಂಬಲಿಗರು ಆಶಿಸಿದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್‌’ (ಡಿಎಚ್‌) ವರದಿ ಮಾಡಿದೆ.

ಬಿಜೆಪಿ ಸ್ವತಂತ್ರ ಪಕ್ಷವಾಗಿ ಹೊರಹೊಮ್ಮಬೇಕಾದರೆ ಸ್ವಂತ ಬಲದಲ್ಲಿ ಚುನಾವಣೆ ಎದುರಿಸಬೇಕು ಎಂಬುದು ಅಣ್ಣಾಮಲೈ ಅವರ ಉದ್ದೇಶವಾಗಿತ್ತು ಎಂದು ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದ ಮುಖಂಡರು ತಿಳಿಸಿರುವುದಾಗಿ ‘ಡಿಎಚ್‌’ ಉಲ್ಲೇಖಿಸಿದೆ.

“ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಿದಾಗ ಮಾತ್ರ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಉತ್ತಮ ಆಡಳಿತದ ಬಗೆಗಿನ ನಮ್ಮ ನಿಲುವನ್ನು ಜನರು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಅಣ್ಣಾಮಲೈ ಹೇಳಿದರು. ಪಕ್ಷವನ್ನು ಕಟ್ಟುವಾಗ ತೊಂದರೆಗಳು ಎದುರಾಗುತ್ತವೆ; ಕೆಲವು ವರ್ಷಗಳ ಕಾಲ ಎಲ್ಲರೂ ಅಸಾಧಾರಣ ನೋವನ್ನು ಅನುಭವಿಸಬೇಕಾಗುತ್ತದೆ ಎಂಬುದು ರಾಜ್ಯಾಧ್ಯಕ್ಷರ ನಿಲುವಾಗಿದೆ” ಎಂದು ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.

ಕೇಂದ್ರ ನಾಯಕತ್ವವು ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದರೆ ರಾಜ್ಯ ಮುಖ್ಯಸ್ಥ ಸ್ಥಾನವನ್ನು ತ್ಯಜಿಸುತ್ತೇನೆ, ಪಕ್ಷಕ್ಕಾಗಿ ‘ಸಾಮಾನ್ಯ ಕೇಡರ್’ ಆಗಿ ಕೆಲಸ ಮಾಡುತ್ತೇನೆಂದು ಅಣ್ಣಾಮಲೈ ಸಭೆಯಲ್ಲಿ ಸ್ಪಷ್ಟಪಡಿಸಿದರು ಎಂದು ಮತ್ತೊಬ್ಬ ಮುಖಂಡರು ತಿಳಿಸಿದ್ದಾರೆ.

“ನಾಯಕತ್ವ ವಹಿಸಿದ್ದೇನೆ. ತಮಿಳುನಾಡಿನಲ್ಲಿ ಬದಲಾವಣೆಯನ್ನು ತರಲು ನಾನು ರಾಜಕೀಯ ಬಂದಿದ್ದೇನೆ ಹೊರತು, ಎಐಎಡಿಎಂಕೆ ಜೊತೆ ಸೇರಿಕೊಂಡು ಎರಡನೇ ಪಿಟೀಲು ನುಡಿಸಲು ಅಲ್ಲ” ಎಂದು ಅಣ್ಣಾ ಮಲೈ ಹೇಳಿರುವುದಾಗಿ ಮುಖಂಡರು ಮಾಹಿತಿ ನೀಡಿದ್ದಾರೆ.

ಮೈತ್ರಿಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ವಿವರಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅಪಾಯಿಂಟ್‌ಮೆಂಟ್ ಕೇಳಿರುವುದಾಗಿ ಅಣ್ಣಾಮಲೈ ಅವರು ಸಭೆಯಲ್ಲಿ ತಿಳಿಸಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿರಿ: ‘ನಕಲಿ ಪ್ರಚಾರ’ ಆರೋಪ; ಅಣ್ಣಾಮಲೈ ವಿರುದ್ಧ ಎಫ್‌ಐಆರ್‌ ದಾಖಲು

ಅಣ್ಣಾಮಲೈ ಅವರನ್ನು ಟೀಕಿಸಿ ಬಿಜೆಪಿ ತೊರೆದ ಸಿಟಿಆರ್ ನಿರ್ಮಲ್ ಕುಮಾರ್ ಅವರನ್ನು ಕೆಲವೇ ಗಂಟೆಗಳಲ್ಲಿ ಎಐಎಡಿಎಂಕೆ ಹಂಗಾಮಿ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿಯವರು ತಮ್ಮ ಪಕ್ಷಕ್ಕೆ ಸ್ವಾಗತಿಸಿದ ಹಿನ್ನೆಲೆಯಲ್ಲಿ ಅಣ್ಣಾಮಲೈ ಹೇಳಿಕೆಗಳು ಹೊರಬಿದ್ದಿವೆ. ಈ ಬೆಳವಣಿಗೆಗೆ ರಾಜ್ಯ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಮೈತ್ರಿ ಪಾಲುದಾರರ ನಡುವೆ ಮಾತಿನ ಚಕಮಕಿ ನಡೆದಿದೆ.

ಮೈತ್ರಿ ಕುರಿತು ಅಣ್ಣಾಮಲೈ ನೀಡಿರುವ ಹೇಳಿಕೆಗಳನ್ನು ಎರಡನೇ ಹಂತದ ಎಐಎಡಿಎಂಕೆ ನಾಯಕರು ಸ್ವಾಗತಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ನಾಯಕರಾಗಿರುವ ನೈನಾರ್ ನಾಗೇಂದ್ರನ್ ಪ್ರತಿಕ್ರಿಯಿಸಿ, “ಇದು ಅಣ್ಣಾಮಲೈ ಅವರ ವೈಯಕ್ತಿಕ ಅಭಿಪ್ರಾಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಎಐಎಡಿಎಂಕೆ ಸಂಘಟನಾ ಕಾರ್ಯದರ್ಶಿ ಡಿ ಜಯಕುಮಾರ್ ಅವರು ಪ್ರತಿಕ್ರಿಯಿಸಿ, “ಆಂತರಿಕ ಸಭೆಯಲ್ಲಿ ಆಡಿದ ಮಾತುಗಳ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಆದರೆ ರಾಜ್ಯದಲ್ಲಿ ತಮ್ಮ ಪಕ್ಷವು ಮೈತ್ರಿಕೂಟದ ನಾಯಕತ್ವ ವಹಿಸಲಿದ” ಎಂದು ಸ್ಪಷ್ಟಪಡಿಸಿದ್ದಾರೆ.

ಎಐಎಡಿಎಂಕೆ ಮತ್ತು ಬಿಜೆಪಿಯ ಮೈತ್ರಿ 2024 ರ ಲೋಕಸಭೆ ಚುನಾವಣೆಗೂ ಮುಂದುವರಿಯುತ್ತದೆ ಎಂದು ಹೇಳಲಾಗುತ್ತಿರುವುದರಿಂದ ಅಣ್ಣಾಮಲೈ ಅವರ ನಿಲುವು ಮಹತ್ವ ಪಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...