Homeಕರ್ನಾಟಕಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

ಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

- Advertisement -
- Advertisement -

2004 ರಿಂದ 2018 ರವರೆಗೆ ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿಗಳಾಗಿ ಅಧಿಕಾರ ನಿರ್ವಹಿಸಿದವರ ಪಟ್ಟಿ ಮತ್ತು ಅವರ ಅಧಿಕಾರಾವಧಿಯಲ್ಲಿ ರಾಜ್ಯದ ಅಭಿವೃದ್ದಿಗಾಗಿ ಮಾಡಲಾದ ಸಾಲದ ಮೊತ್ತವನ್ನು ತಿಳಿಸುವ ಪಟ್ಟಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ಪೋಸ್ಟ್‌ ಮತ್ತು ಮೆಸೇಜ್‌ಗಳನ್ನು ಹರಿಯಬಿಡಲಾಗಿದ್ದು ಮೇಲ್ನೋಟಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಈ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತಿದೆ.

ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯಲ್ಲಿ ಬಿಟ್ಟಿ ಭಾಗ್ಯಗಳನ್ನು ನೀಡುವ ಮೂಲಕ ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದ್ದರು, ಇಷ್ಟು ಸಾಲ ಮಾಡಿ ಪುಕ್ಕಟ್ಟೆಯಾಗಿ ಯಾರು ಬೇಕಾದ್ರು ಕೊಡ್ತಾರೆ, ಜನರ ತಲೆ ಮೇಲೆ ಸಾಲ ಹೊರಿಸಿ ಭಾಗ್ಯಗಳನ್ನು ನೀಡಿದ್ದೇ ನೀಡಿದ್ದು, ಇದೇ ಇವರ ಸಾಧನೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

2004 ರಿಂದ 2018ರ ವರಗೆ ಕರ್ನಾಟಕದಲ್ಲಿ ಯಾವ ಮುಖ್ಯಮಂತ್ರಿ ಎಷ್ಟು ಸಾಲ ಮಾಡಿದ್ದರು ಎಂಬ ವಿವರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಈ ಕೆಳಗಿನಂತೆ ಹಂಚಿಕೊಳ್ಳಲಾಗಿದೆ.

ಎಸ್ ಎಂ ಕೃಷ್ಣ  (1999-2004)
3,590 ಕೋಟಿ ರೂಪಾಯಿ
ಧರಂ ಸಿಂಗ್   (2004-2006)
15,635 ಕೋಟಿ ರೂಪಾಯಿ
ಎಚ್.ಡಿ. ಕುಮಾರಸ್ವಾಮಿ  (2006-2007)
3,545 ಕೋಟಿ ರೂಪಾಯಿ
ಬಿ.ಎಸ್.ಯಡಿಯೂರಪ್ಪ (2008-2011)
25,653 ಕೋಟಿ ರೂಪಾಯಿ
ಸದಾನಂದ ಗೌಡ (2011-2012)
9,464 ಕೋಟಿ ರೂಪಾಯಿ
ಜಗದೀಶ್ ಶೆಟ್ಟರ್ (2012-2013)
13,464 ಕೋಟಿ ರೂಪಾಯಿ
ಸಿದ್ದರಾಮಯ್ಯ (2013-2018)
2,42,000 ಕೋಟಿ ರೂಪಾಯಿ

ಎಸ್ ಎಂ ಕೃಷ್ಣ ಅವರಿಂದ ಜಗದೀಶ್ ಶೆಟ್ಟರ್ ವರೆಗೆ ಮಾಡಿದ ಒಟ್ಟು ಸಾಲ 71,331 ಕೋಟಿ ರೂಪಾಯಿ, ಆದರೆ ಸಿದ್ದರಾಮಯ್ಯ ಮಾಡಿದ ಸಾಲ 2,42,000 ಕೋಟಿ ರೂಪಾಯಿ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ಅನ್ನು ಪರಿಶೀಲಿಸಿದಾಗ, ಇಲ್ಲಿ ಹಂಚಿಕೊಳ್ಳಲಾದ ಅಂಕಿ ಅಂಶಗಳು ತಪ್ಪಾಗಿವೆ ಎಂದು ತಿಳಿದು ಬಂದಿದೆ. ಪೋಸ್ಟ್‌ನಲ್ಲಿ ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ಹೆಚ್ಚು ಸಾಲ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ನಾವಿಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ,  2013ರ ಮಾರ್ಚ್ ಕೊನೆಗೆ ಇದ್ದ ಸಾಲ, ಅಂದರೆ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಳ್ಳುವ ಮುಂಚಿನ ಸಾಲ ಹಾಗೂ ಅವರ ಅಧಿಕಾರಾವಧಿ ಪೂರ್ಣಗೊಂಡ 2018ರ ಮಾರ್ಚ್ ಕೊನೆಗೆ ಇದ್ದ ಸಾಲ ಎಂದು ವಿಭಾಗಿಸಿ ನೋಡಿದಾಗ ಸ್ಪಷ್ಟ ಚಿತ್ರಣ ಲಭ್ಯವಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ಸರ್ಕಾರದ ಮೇಲಿನ ಸಾಲದ (ಬಜೆಟ್ ಅಂದಾಜಿನ) ಪ್ರಮಾಣವನ್ನು 2006ರ ಮಾರ್ಚ್ ನಿಂದ ಆಯಾ ವರ್ಷದ ಕೊನೆಗೆ 2023 ವರೆಗೆ ನೀಡಲಾಗಿದೆ. ಅಂದರಂತೆ

2006- 49,586.7 ಕೋಟಿ ರೂಪಾಯಿ
2007- 58,078.5 ಕೋಟಿ ರೂಪಾಯಿ
2008- 60,555.1 ಕೋಟಿ ರೂಪಾಯಿ
2009- 65,218.9 ಕೋಟಿ ರೂಪಾಯಿ
2010- 84,534.5 ಕೋಟಿ ರೂಪಾಯಿ
2011- 93,446.6 ಕೋಟಿ ರೂಪಾಯಿ
2012- 1,06,089.05 ಕೋಟಿ ರೂಪಾಯಿ
2013- 1,12,666.6 ಕೋಟಿ ರೂಪಾಯಿ (ಜಗದೀಶ್ ಶೆಟ್ದರ್ ಮುಖ್ಯಮಂತ್ರಿ ಆಗಿದ್ದ ಅವಧಿಯ ಕೊನೆಗೆ ಕರ್ನಾಟಕ ರಾಜ್ಯದ ಮೇಲಿದ್ದ ಒಟ್ಟು ಸಾಲ)
2014- 1,38,976.5 ಕೋಟಿ ರೂಪಾಯಿ
2015- 1,58,370.2 ಕೋಟಿ ರೂಪಾಯಿ
2016- 1,85,698.4 ಕೋಟಿ ರೂಪಾಯಿ
2017- 2,11,169.1 ಕೋಟಿ ರೂಪಾಯಿ
2018- 2,45,950.6 ಕೋಟಿ ರೂಪಾಯಿ (ಸಿದ್ದರಾಮಯ್ಯ ಅವರ ಅಧಿಕಾರಾವಧಿ ಕೊನೆಯಲ್ಲಿ ಕರ್ನಾಟಕ ರಾಜ್ಯದ ಮೇಲಿದ್ದ ಒಟ್ಟು ಸಾಲ)
2019- 2,86,328.7 ಕೋಟಿ ರೂಪಾಯಿ
2020- 3,38,665..7 ಕೋಟಿ ರೂಪಾಯಿ
2021- 4,21,503.8 ಕೋಟಿ ರೂಪಾಯಿ
2022 (ಪರಿಷ್ಕೃತ ಅಂದಾಜು)- 4,73,437.9 ಕೋಟಿ ರೂಪಾಯಿ
2023 (ಬಜೆಟ್ ಅಂದಾಜು)- 5,35,156.7 ಕೋಟಿ ರೂಪಾಯಿ

ಒಟ್ಟಾರೆಯಾಗಿ ಹೇಳುವುದಾದರೆ, ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ 2013 ನೇ ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ  1,12,666.6 ಕೋಟಿ ರೂಪಾಯಿ. ಹಾಗೆಯೇ  ಸಿದ್ದರಾಮಯ್ಯ ಅವರ ಅಧಿಕಾರಾವಧಿ ಪೂರ್ಣಗೊಂಡಾಗ, ಅಂದರೆ 2018ನೇ ಇಸವಿಯ ಮಾರ್ಚ್ ಕೊನೆ ವೇಳೆಗೆ 2,45,950.6 ಕೋಟಿ ರೂಪಾಯಿ. ಅಂದರೆ 2018 ರಲ್ಲಿ ಇದ್ದ ಸಾಲದ ಮೊತ್ತವನ್ನು 2013ರಲ್ಲಿ ಇದ್ದ ಒಟ್ಟು ಸಾಲದೊಂದಿದೆ ಕಳೆದಾಗ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ರಾಜ್ಯಕ್ಕಾಗಿ ಮಾಡಿದ ಸಾಲ 1,33,284 ಕೋಟಿ ರೂಪಾಯಿಯಷ್ಟು ಆಗುತ್ತದೆ.

ಆದರೆ ಈ ರೀತಿ ಅಂಕಿಅಂಶಗಳನ್ನು ನೀಡದೆ ಸುಳ್ಳು ಮತ್ತು ತಪ್ಪಾದ ಅಂಕಿಅಂಶಗಳನ್ನು ಹಂಚಿಕೊಳ್ಳಲಾಗಿದೆ. ಹಾಗೆ ನೋಡಿದರೆ ಸಿದ್ದರಾಮಯ್ಯನವರಿಗಿಂತ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರ ಮಾಡಿದ ಸಾಲವೇ ಅಧಿಕವಾಗಿದೆ. 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಒಟ್ಟು ಸಾಲ 2,86,328.7 ಕೋಟಿ ರೂಪಾಯಿ ಇತ್ತು. ಈಗ 2023ರಲ್ಲಿ 5,35,156.7 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಲ್ಲಿಗೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಹೊಸದಾಗಿ 2,48, 828 ಕೋಟಿ ರೂಗಳ ಸಾಲ ಮಾಡಿದೆ. ಅದು ಸಿದ್ದರಾಮಯ್ಯನವರು 5 ವರ್ಷದ ಆಡಳಿತದಲ್ಲಿ ಮಾಡಿದ್ದಕ್ಕಿಂತ ಎರಡು ಪಟ್ಟು ಹೆಚ್ಚಿದೆ.

ಇದನ್ನೂ ಓದಿ; ವರುಣಾ ಮತ್ತು ಕೋಲಾರ ಎರಡು ಕಡೆ ಸ್ಪರ್ಧೆ ವದಂತಿ: ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...