Homeಮುಖಪುಟಬಿಜೆಪಿ ಸೋಲಿಸಲು ಪ್ರಾದೇಶಿಕ ಪಕ್ಷಗಳ ಪಾತ್ರಕ್ಕೆ ಮಹತ್ವವಿದೆ: ಅಖಿಲೇಶ್‌

ಬಿಜೆಪಿ ಸೋಲಿಸಲು ಪ್ರಾದೇಶಿಕ ಪಕ್ಷಗಳ ಪಾತ್ರಕ್ಕೆ ಮಹತ್ವವಿದೆ: ಅಖಿಲೇಶ್‌

- Advertisement -
- Advertisement -

ಕೋಲ್ಕತ್ತಾ: ಮುಂಬರುವ ದಿನಗಳಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ರೂಪುಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಮುಖ ಪಾತ್ರ ವಹಿಸಲಿವೆ” ಎಂದು ಭವಿಷ್ಯ ನುಡಿದಿದ್ದಾರೆ.

ಈಗ ಚರ್ಚೆಯಾಗುತ್ತಿರುವ ವಿರೋಧ ಪಕ್ಷಗಳ ಕೂಟದಲ್ಲಿ ಕಾಂಗ್ರೆಸ್ ಪಾತ್ರವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಯಾದವ್‌, “ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌ ತನ್ನ ಪಾತ್ರವನ್ನು ನಿರ್ಧರಿಸಬೇಕಿದೆ” ಎಂದು ತಿಳಿಸಿದ್ದಾರೆ.

“ವಿರೋಧ ಪಕ್ಷಗಳ ಒಕ್ಕೂಟವನ್ನು ರೂಪಿಸಲು ಪ್ರಯತ್ನಗಳು ನಡೆಯುತ್ತಿವೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು (ಸ್ವಂತ) ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ನನಗೆ ವಿಶ್ವಾಸವಿದೆ. ಪ್ರತಿಪಕ್ಷಗಳ ಮೈತ್ರಿಯು ರೂಪುಗೊಳ್ಳುತ್ತದೆ, ಅದು ಬಿಜೆಪಿ ವಿರುದ್ಧ ಹೋರಾಡುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಸಮಾನವಾಗಿ ಪರಿಗಣಿಸಲಾಗುತ್ತಿದೆಯೇ?” ಎಂಬ ಪ್ರಶ್ನೆಗೆ, “ವಿವಿಧ ರಾಜ್ಯಗಳಲ್ಲಿನ ಪ್ರಾದೇಶಿಕ ಪಕ್ಷಗಳು ಬಿಜೆಪಿಯ ವಿರುದ್ಧ ಹೋರಾಡುತ್ತಿವೆ. ಹಲವು ರಾಜ್ಯಗಳಲ್ಲಿ, ಬಿಜೆಪಿಗೆ ಹೋಲಿಸಿದರೆ ಕಾಂಗ್ರೆಸ್‌ಗೆ ಅಸ್ತಿತ್ವವಿಲ್ಲ. ಆದರೆ ಪ್ರಾದೇಶಿಕ ಪಕ್ಷಗಳು ಕೇಸರಿ ಪಾಳೆಯದ ವಿರುದ್ಧ ತೀವ್ರವಾಗಿ ಹೋರಾಟ ನಡೆಸುತ್ತಿವೆ. ಅವರು ಯಶಸ್ವಿಯಾಗುತ್ತಾರೆ ಎಂಬ ಭರವಸೆ ನನಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಜೆಡಿ (ಯು), ಆರ್‌ಜೆಡಿ ಮತ್ತು ಡಿಎಂಕೆಯಂತಹ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ನೊಂದಿಗೆ ಇರಲು ಉತ್ಸುಕವಾಗಿವೆ ಎಂದು ಕೇಳಿದಾಗ ಯಾದವ್, “ಅವರು ಈಗಾಗಲೇ ಹಳೆಯ ಪಕ್ಷದೊಂದಿಗೆ ಮೈತ್ರಿ ಹೊಂದಿದ್ದಾರೆ. ಇದು ದೊಡ್ಡ ಹೋರಾಟದ ಪ್ರಶ್ನೆಯಾಗಿದ್ದು, ಈ ಹೋರಾಟದಲ್ಲಿ ಕಾಂಗ್ರೆಸ್ ತನ್ನ ಪಾತ್ರವೇನೆಂದು ನಿರ್ಧರಿಸುತ್ತದೆ” ಎಂದು ತಿಳಿಸಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪಾಳೆಯದ ಮುಖ ಯಾರಾಗಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಯಾದವ್, “ಚುನಾವಣೆಯ ನಂತರ ಅದನ್ನು ನಿರ್ಧರಿಸಲಾಗುವುದು. ಈಗ ಈ ಪ್ರಶ್ನೆಯು ಅಗತ್ಯವಿಲ್ಲ” ಎಂದು ಸ್ಪಷ್ಪಪಡಿಸಿದ್ದಾರೆ.

“ನೀವು ಮುಖದ ಬಗ್ಗೆ ಮಾತನಾಡುತ್ತಿದ್ದೀರಿ, 2014 ಮತ್ತು 2019 ರಲ್ಲಿ ಚುನಾವಣೆಯಲ್ಲಿ ಗೆಲ್ಲಲು ಸುಳ್ಳು ಭರವಸೆಗಳನ್ನು ನೀಡಿದ (ಬಿಜೆಪಿ) ಮುಖದ ಬಗ್ಗೆ ಕೇಳುತ್ತಿದ್ದೀರಾ?” ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖಿಸದೆ ಕುಟುಕಿದ್ದಾರೆ.

2014 ಮತ್ತು 2019ರಲ್ಲಿ ಬಿಜೆಪಿ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಟೀಕಿಸಿದ್ದಾರೆ.

ಯುಪಿಯ ರಾಯ್‌ಬರೇಲಿ ಮತ್ತು ಅಮೇಥಿ ಲೋಕಸಭಾ ಕ್ಷೇತ್ರಗಳಲ್ಲಿ ಎಸ್‌ಪಿ ಸ್ಪರ್ಧಿಸುತ್ತದೆಯೇ ಎಂದು ಕೇಳಿದಾಗ, “ಅಮೇಥಿಯಲ್ಲಿ ಎಸ್‌ಪಿ ಕಾರ್ಯಕರ್ತರನ್ನು ಕೊಲ್ಲಲಾಗುತ್ತಿದೆ” ಎಂದು ಯಾದವ್ ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್ ಹೊರಗಿಟ್ಟು ವಿರೋಧಿ ಬಣ ಕಟ್ಟಲು ಮುಂದಾದ ಟಿಎಂಸಿ, ಎಸ್‌ಪಿ

“ಅಮೇಥಿಯಲ್ಲಿ ನಮ್ಮ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಅವರಿಗಾಗಿ ಯಾರು ಹೋರಾಡುತ್ತಾರೆ ಎಂದು ಸಮಾಜವಾದಿ ಪಕ್ಷದ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಅಲ್ಲಿನ ಸಮಾಜವಾದಿ ಕಾರ್ಯಕರ್ತರು ಪರಸ್ಪರ ಬೆಂಬಲಿಸುತ್ತಿದ್ದಾರೆ; ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಬೆಂಬಲಕ್ಕೆ ಬರುತ್ತಿಲ್ಲ” ಎಂದು ದೂರಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಯ್ಬರೇಲಿಯ ಸಂಸದರಾಗಿದ್ದರೆ, ಪಕ್ಷದ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಅಮೇಥಿಯಲ್ಲಿ ಸ್ಪರ್ಧಿಸಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಸೋಲಿಸಿದ್ದರು.

“ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಯ ಹುನ್ನಾರವನ್ನು ತಡೆಯಲು ಸಮಾಜವಾದಿ ಪಕ್ಷ ಯಾವುದೇ ಅವಕಾಶವನ್ನು ಬಿಡುವುದಿಲ್ಲ. 2024ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಯುಪಿಯಲ್ಲಿ ಗೆಲ್ಲಲೇಬೇಕು, ಯುಪಿಯಲ್ಲಿ ಬಿಜೆಪಿಯನ್ನು ಸೋಲಿಸುವುದನ್ನು ನಾವು ಖಚಿತಪಡಿಸುತ್ತೇವೆ ಮತ್ತು ದೇಶದಲ್ಲೂ ಬಿಜೆಪಿಯನ್ನು ಸೋಲಿಸುತ್ತೇವೆ, ಉತ್ತರ ಪ್ರದೇಶದಲ್ಲಿ ನಾವು ನಮ್ಮ ಅಸ್ತಿತ್ವದಲ್ಲಿರುವ ಮಿತ್ರಪಕ್ಷಗಳೊಂದಿಗೆ ಸೇರಿ ಹೋರಾಡುತ್ತೇವೆ” ಎಂದು ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...