Homeಮುಖಪುಟಉತ್ತರ ಪ್ರದೇಶದ ಸಚಿವರನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ: ಗ್ರಾಮದ ಪರಿಸ್ಥಿತಿ ಹೀಗಿದೆ

ಉತ್ತರ ಪ್ರದೇಶದ ಸಚಿವರನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ: ಗ್ರಾಮದ ಪರಿಸ್ಥಿತಿ ಹೀಗಿದೆ

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದ ಪತ್ರಕರ್ತರೊಬ್ಬರು ಚುನಾವಣಾ ಸಮಯದಲ್ಲಿ ನೀಡಿದ ಭರವಸೆಗಳ ಬಗ್ಗೆ ರಾಜ್ಯ ಸಚಿವರನ್ನು ಪ್ರಶ್ನಿಸಿದ್ದಕ್ಕೆ ಬಂಧನಕ್ಕೊಳಗಾಗಿದ್ದರು. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಬುಧ್ ನಗರ  ಗ್ರಾಮಕ್ಕೆ ಭೇಟಿ ನೀಡಿರುವ ಇಂಡಿಯನ್ ಎಕ್ಸ್‌ಪ್ರೆಸ್‌ ತಂಡವು ಅಲ್ಲಿನ ಸಮಸ್ಯೆಗಳ ಸರಮಾಲೆಯನ್ನು ವರದಿ ಮಾಡಿದೆ. ಬಹುಪಾಲು ಮನೆಗಳಲ್ಲಿ ಶೌಚಾಲಯಗಳಿಲ್ಲ, ಮುಖ್ಯ ರಸ್ತೆಗೆ ಸಂಪರ್ಕವಿಲ್ಲ, ಚರಂಡಿ ನೀರು ಬೀದಿಗೆ ಹರಿಯುತ್ತಿದೆ ಎಂಬ ಕರುಣಜನಕ ಸ್ಥಿತಿಯನ್ನು ಬಿಚ್ಚಿಟ್ಟಿದೆ.

80 ವರ್ಷದ ಶಿವದೇಯಿ ಎಂಬ ಹಿರಿಯ ಮಹಿಳೆಯನ್ನು ಎಕ್ಸ್‌ಪ್ರೆಸ್‌ ಪತ್ರಕರ್ತರು ಮಾತನಾಡಿಸಿದ್ದಾರೆ. “ನನ್ನ ಜೀವಿತಾವಧಿಯಲ್ಲಿ ಶೌಚಾಲಯ ಬಳಸುವ ಭರವಸೆಯನ್ನು ಹೊಂದಿಲ್ಲ. ಆದರೆ ಈ ವಯಸ್ಸಿನಲ್ಲಿ ಹಗಲು-ರಾತ್ರಿ ಬಯಲು ಶೌಚಾಲಯಕ್ಕೆ ಹೋಗುವುದು ತ್ರಾಸದಾಯಕ” ಎಂದಿದ್ದಾರೆ.

ಸುಮಾರು 1,000 ಜನರಿರುವ ಬುಧ್ ಗ್ರಾಮದಲ್ಲಿ ಅನೇಕ ಮನೆಗಳಲ್ಲಿ ಶೌಚಾಲಯವಿಲ್ಲ. ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆ ಬಂದಾಗ ರಸ್ತೆಗಳಲೆಲ್ಲ ನೀರು ತುಂಬಿಕೊಂಡು ನಡೆಯಲು ಆಗುವುದಿಲ್ಲ. ನಮ್ಮಂಥ ಹೀನ ಸ್ಥಿತಿ ಯಾರಿಗೂ ಬೇಡ ಅನ್ನುತ್ತಾರೆ 45 ವರ್ಷದ ಮತ್ತೊಬ್ಬ ನಿವಾಸಿ ಬಿರ್ಪಾಲ್ ಸಿಂಗ್.

“ನಮ್ಮಿಂದ ಮತ ಹಾಕಿಸಿಕೊಂಡವರು ಶಾಸಕರು, ಮಂತ್ರಿಗಳು, ಸಂಸದರಾಗಿದ್ದಾರೆ. ಆದರೆ ನಾವು ಇದ್ದ ಸ್ಥಳದಲ್ಲಿಯೇ ಉಳಿದಿದ್ದೇವೆ. ಬಯಲು ಶೌಚ ಮುಕ್ತ ಗ್ರಾಮಗಳು ಎಂದು ಭಾಷಣ ಮಾಡುತ್ತಾರೆ. ಆದರೆ ನಮ್ಮ ಕುಟುಂಬದ ಎಲ್ಲಾ 10 ಸದಸ್ಯರು ಶೌಚಕ್ಕೆ ಹೊಲಗಳನ್ನು ಬಳಸುತ್ತಿದ್ದೇವೆ ಎಂದಿದ್ದಾರೆ.

ಕಳೆದ ವರ್ಷದ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬುಧ್ ನಗರ & ಖಾಂಡ್ವಾ ಗ್ರಾಮಕ್ಕೆ ಮದುವೆ ಮಂಟಪ, ಸಾರ್ವಜನಿಕ ರಸ್ತೆ ಮತ್ತು ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮಾಡಿಕೊಡುವುದಾಗಿ ಹಾಲಿ ಆ ಕ್ಷೇತ್ರದ ಶಾಸಕರು ಮತ್ತು ಮಾಧ್ಯಮಿಕ ಶಿಕ್ಷಣ ರಾಜ್ಯ ಸಚಿವರಾದ ಗುಲಾಬ್ ದೇವಿಯವರು ಭರವಸೆ ನಿಡಿದ್ದರು. ಆದರೆ ಯಾವೊಂದು ಅಭಿವೃದ್ದಿ ಕೆಲಸವೂ ಆಗಿಲ್ಲ, ಕನಿಷ್ಠ ಮೂಲಭೂತ ಸೌಲಭ್ಯಗಳು ದೊರಕಿಲ್ಲ ಎಂದು ಸ್ಥಳೀಯ ಪತ್ರಕರ್ತ ಮತ್ತು ಯೂಟ್ಯೂಬರ್ ಸಂಜಯ್ ರಾಣಾ ಎಂಬುವವರು ಇತ್ತೀಚಿಗೆ ಸಚಿವರನ್ನು ಪ್ರಶ್ನಿಸಿದ್ದರು. ಅಷ್ಟಕ್ಕೆ ಅವರ ಮೇಲೆ  “ನಕಲಿ” ಪತ್ರಕರ್ತ ಮತ್ತು ರಾಜ್ಯ ಸಚಿವರ ಕಾರ್ಯಕ್ರಮವೊಂದರಲ್ಲಿ ಸರ್ಕಾರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.

ಸ್ಥಳೀಯ ಬಿಜೆಪಿ ಮುಖಂಡ, ಬಿಜೆವೈಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶುಭಂ ರಾಘವ್ ಪೊಲೀಸ್ ದೂರು ದಾಖಲಿಸಿದ್ದರು. CrPC ಯ ಸೆಕ್ಷನ್ 151 ರ ಅಡಿಯಲ್ಲಿ ಪೊಲೀಸರು ರಾಣಾನನ್ನು ಬಂಧಿಸಿದ್ದರು. ಆನಂತರ  ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಬಿಡುಗಡೆ ನಂತರ ಮಾತನಾಡಿದ ಪತ್ರಕರ್ತ ರಾಣಾ ಅವರು “ದೂರದಾರ ವ್ಯಕ್ತಿ ಬಗ್ಗೆ ನನಗೆ ಗೊತ್ತಿಲ್ಲ. ಅವರನ್ನು ನಾನು ಎಂದೂ ಭೇಟಿಯಾಗಿಲ್ಲ. ಆದರೆ ನಾನು ಏನೋ ಮಹಾ ಅಪರಾಧ ಮಾಡಿದ ಹಾಗೆ ನನ್ನ ಕೈಗೆ ಕೋಳ ಹಾಕಿ ಪೊಲೀಸರು ಮೆರವಣಿಗೆ ರಿತಿ ಕರೆದುಕೊಂಡು ಹೋದರು. 30 ಗಂಟೆಗಳ ಕಾಲ ನನ್ನನ್ನು ಬಂಧನದಲ್ಲಿಟ್ಟರು. ನಾನು ಸಚಿವರನ್ನು ಏನು ಪ್ರಶ್ನಿಸಿದ್ದೇನೆ ಎಂಬುದನ್ನು ವಿಡಿಯೋದಲ್ಲಿ ನೋಡಿ. ನಾವು ಅವರಿಗೆ ಮತ ಹಾಕಿದ್ದೇವೆ. ಹಾಗಾಗಿ ಅವರನ್ನು ಪ್ರಶ್ನಿಸುವ ಹಕ್ಕು ನಮಗಿದೆ” ಎಂದಿದ್ದಾರೆ.

ಈ ಕುರಿತು ಸಚಿವರಾದ ಗುಲಾಬ್ ದೇವಿಯವರನ್ನು ಇಂಡಿಯನ್ ಎಕ್ಸ್‌ಪ್ರೆಸ್ ಪ್ರಶ್ನಿಸಿದಾಗ, “ಶಾಸಕರು ಅನುದಾನದಿಂದ ಆ ಊರಿಗೆ ರಸ್ತೆ ಮಂಜೂರಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗುವುದು. ಜಿಲ್ಲಾ ಪಂಚಾಯ್ತಿಯಿಂದ ಒಳಚರಂಡಿ ವ್ಯವಸ್ಥೆ ಮತ್ತು ಶಾಲಾ ಆಟದ ಮೈದಾನ ವ್ಯವಸ್ಥೆ ಮಾಡಲಾಗುವುದು. ಶೌಚಾಲಯಗಳು ಎಷ್ಟಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ; ಉತ್ತರ ಪ್ರದೇಶ: ಚುನಾವಣಾ ಭರವಸೆಗಳ ಬಗ್ಗೆ ಸಚಿವರನ್ನು ಪ್ರಶ್ನಿಸಿದ ಯುಟ್ಯೂಬರ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...