Homeಮುಖಪುಟಉತ್ತರ ಪ್ರದೇಶದ ಸಚಿವರನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ: ಗ್ರಾಮದ ಪರಿಸ್ಥಿತಿ ಹೀಗಿದೆ

ಉತ್ತರ ಪ್ರದೇಶದ ಸಚಿವರನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ: ಗ್ರಾಮದ ಪರಿಸ್ಥಿತಿ ಹೀಗಿದೆ

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದ ಪತ್ರಕರ್ತರೊಬ್ಬರು ಚುನಾವಣಾ ಸಮಯದಲ್ಲಿ ನೀಡಿದ ಭರವಸೆಗಳ ಬಗ್ಗೆ ರಾಜ್ಯ ಸಚಿವರನ್ನು ಪ್ರಶ್ನಿಸಿದ್ದಕ್ಕೆ ಬಂಧನಕ್ಕೊಳಗಾಗಿದ್ದರು. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಬುಧ್ ನಗರ  ಗ್ರಾಮಕ್ಕೆ ಭೇಟಿ ನೀಡಿರುವ ಇಂಡಿಯನ್ ಎಕ್ಸ್‌ಪ್ರೆಸ್‌ ತಂಡವು ಅಲ್ಲಿನ ಸಮಸ್ಯೆಗಳ ಸರಮಾಲೆಯನ್ನು ವರದಿ ಮಾಡಿದೆ. ಬಹುಪಾಲು ಮನೆಗಳಲ್ಲಿ ಶೌಚಾಲಯಗಳಿಲ್ಲ, ಮುಖ್ಯ ರಸ್ತೆಗೆ ಸಂಪರ್ಕವಿಲ್ಲ, ಚರಂಡಿ ನೀರು ಬೀದಿಗೆ ಹರಿಯುತ್ತಿದೆ ಎಂಬ ಕರುಣಜನಕ ಸ್ಥಿತಿಯನ್ನು ಬಿಚ್ಚಿಟ್ಟಿದೆ.

80 ವರ್ಷದ ಶಿವದೇಯಿ ಎಂಬ ಹಿರಿಯ ಮಹಿಳೆಯನ್ನು ಎಕ್ಸ್‌ಪ್ರೆಸ್‌ ಪತ್ರಕರ್ತರು ಮಾತನಾಡಿಸಿದ್ದಾರೆ. “ನನ್ನ ಜೀವಿತಾವಧಿಯಲ್ಲಿ ಶೌಚಾಲಯ ಬಳಸುವ ಭರವಸೆಯನ್ನು ಹೊಂದಿಲ್ಲ. ಆದರೆ ಈ ವಯಸ್ಸಿನಲ್ಲಿ ಹಗಲು-ರಾತ್ರಿ ಬಯಲು ಶೌಚಾಲಯಕ್ಕೆ ಹೋಗುವುದು ತ್ರಾಸದಾಯಕ” ಎಂದಿದ್ದಾರೆ.

ಸುಮಾರು 1,000 ಜನರಿರುವ ಬುಧ್ ಗ್ರಾಮದಲ್ಲಿ ಅನೇಕ ಮನೆಗಳಲ್ಲಿ ಶೌಚಾಲಯವಿಲ್ಲ. ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆ ಬಂದಾಗ ರಸ್ತೆಗಳಲೆಲ್ಲ ನೀರು ತುಂಬಿಕೊಂಡು ನಡೆಯಲು ಆಗುವುದಿಲ್ಲ. ನಮ್ಮಂಥ ಹೀನ ಸ್ಥಿತಿ ಯಾರಿಗೂ ಬೇಡ ಅನ್ನುತ್ತಾರೆ 45 ವರ್ಷದ ಮತ್ತೊಬ್ಬ ನಿವಾಸಿ ಬಿರ್ಪಾಲ್ ಸಿಂಗ್.

“ನಮ್ಮಿಂದ ಮತ ಹಾಕಿಸಿಕೊಂಡವರು ಶಾಸಕರು, ಮಂತ್ರಿಗಳು, ಸಂಸದರಾಗಿದ್ದಾರೆ. ಆದರೆ ನಾವು ಇದ್ದ ಸ್ಥಳದಲ್ಲಿಯೇ ಉಳಿದಿದ್ದೇವೆ. ಬಯಲು ಶೌಚ ಮುಕ್ತ ಗ್ರಾಮಗಳು ಎಂದು ಭಾಷಣ ಮಾಡುತ್ತಾರೆ. ಆದರೆ ನಮ್ಮ ಕುಟುಂಬದ ಎಲ್ಲಾ 10 ಸದಸ್ಯರು ಶೌಚಕ್ಕೆ ಹೊಲಗಳನ್ನು ಬಳಸುತ್ತಿದ್ದೇವೆ ಎಂದಿದ್ದಾರೆ.

ಕಳೆದ ವರ್ಷದ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬುಧ್ ನಗರ & ಖಾಂಡ್ವಾ ಗ್ರಾಮಕ್ಕೆ ಮದುವೆ ಮಂಟಪ, ಸಾರ್ವಜನಿಕ ರಸ್ತೆ ಮತ್ತು ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮಾಡಿಕೊಡುವುದಾಗಿ ಹಾಲಿ ಆ ಕ್ಷೇತ್ರದ ಶಾಸಕರು ಮತ್ತು ಮಾಧ್ಯಮಿಕ ಶಿಕ್ಷಣ ರಾಜ್ಯ ಸಚಿವರಾದ ಗುಲಾಬ್ ದೇವಿಯವರು ಭರವಸೆ ನಿಡಿದ್ದರು. ಆದರೆ ಯಾವೊಂದು ಅಭಿವೃದ್ದಿ ಕೆಲಸವೂ ಆಗಿಲ್ಲ, ಕನಿಷ್ಠ ಮೂಲಭೂತ ಸೌಲಭ್ಯಗಳು ದೊರಕಿಲ್ಲ ಎಂದು ಸ್ಥಳೀಯ ಪತ್ರಕರ್ತ ಮತ್ತು ಯೂಟ್ಯೂಬರ್ ಸಂಜಯ್ ರಾಣಾ ಎಂಬುವವರು ಇತ್ತೀಚಿಗೆ ಸಚಿವರನ್ನು ಪ್ರಶ್ನಿಸಿದ್ದರು. ಅಷ್ಟಕ್ಕೆ ಅವರ ಮೇಲೆ  “ನಕಲಿ” ಪತ್ರಕರ್ತ ಮತ್ತು ರಾಜ್ಯ ಸಚಿವರ ಕಾರ್ಯಕ್ರಮವೊಂದರಲ್ಲಿ ಸರ್ಕಾರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.

ಸ್ಥಳೀಯ ಬಿಜೆಪಿ ಮುಖಂಡ, ಬಿಜೆವೈಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶುಭಂ ರಾಘವ್ ಪೊಲೀಸ್ ದೂರು ದಾಖಲಿಸಿದ್ದರು. CrPC ಯ ಸೆಕ್ಷನ್ 151 ರ ಅಡಿಯಲ್ಲಿ ಪೊಲೀಸರು ರಾಣಾನನ್ನು ಬಂಧಿಸಿದ್ದರು. ಆನಂತರ  ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಬಿಡುಗಡೆ ನಂತರ ಮಾತನಾಡಿದ ಪತ್ರಕರ್ತ ರಾಣಾ ಅವರು “ದೂರದಾರ ವ್ಯಕ್ತಿ ಬಗ್ಗೆ ನನಗೆ ಗೊತ್ತಿಲ್ಲ. ಅವರನ್ನು ನಾನು ಎಂದೂ ಭೇಟಿಯಾಗಿಲ್ಲ. ಆದರೆ ನಾನು ಏನೋ ಮಹಾ ಅಪರಾಧ ಮಾಡಿದ ಹಾಗೆ ನನ್ನ ಕೈಗೆ ಕೋಳ ಹಾಕಿ ಪೊಲೀಸರು ಮೆರವಣಿಗೆ ರಿತಿ ಕರೆದುಕೊಂಡು ಹೋದರು. 30 ಗಂಟೆಗಳ ಕಾಲ ನನ್ನನ್ನು ಬಂಧನದಲ್ಲಿಟ್ಟರು. ನಾನು ಸಚಿವರನ್ನು ಏನು ಪ್ರಶ್ನಿಸಿದ್ದೇನೆ ಎಂಬುದನ್ನು ವಿಡಿಯೋದಲ್ಲಿ ನೋಡಿ. ನಾವು ಅವರಿಗೆ ಮತ ಹಾಕಿದ್ದೇವೆ. ಹಾಗಾಗಿ ಅವರನ್ನು ಪ್ರಶ್ನಿಸುವ ಹಕ್ಕು ನಮಗಿದೆ” ಎಂದಿದ್ದಾರೆ.

ಈ ಕುರಿತು ಸಚಿವರಾದ ಗುಲಾಬ್ ದೇವಿಯವರನ್ನು ಇಂಡಿಯನ್ ಎಕ್ಸ್‌ಪ್ರೆಸ್ ಪ್ರಶ್ನಿಸಿದಾಗ, “ಶಾಸಕರು ಅನುದಾನದಿಂದ ಆ ಊರಿಗೆ ರಸ್ತೆ ಮಂಜೂರಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗುವುದು. ಜಿಲ್ಲಾ ಪಂಚಾಯ್ತಿಯಿಂದ ಒಳಚರಂಡಿ ವ್ಯವಸ್ಥೆ ಮತ್ತು ಶಾಲಾ ಆಟದ ಮೈದಾನ ವ್ಯವಸ್ಥೆ ಮಾಡಲಾಗುವುದು. ಶೌಚಾಲಯಗಳು ಎಷ್ಟಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ; ಉತ್ತರ ಪ್ರದೇಶ: ಚುನಾವಣಾ ಭರವಸೆಗಳ ಬಗ್ಗೆ ಸಚಿವರನ್ನು ಪ್ರಶ್ನಿಸಿದ ಯುಟ್ಯೂಬರ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...