Homeಕರ್ನಾಟಕಟಿಪ್ಪು ನಂತರ ಬ್ರಿಟಿಷರ ವಿರುದ್ಧ ಹೋರಾಡಿದವರ ಪಟ್ಟಿಯಲ್ಲಿ ಉರಿಗೌಡ, ನಂಜೇಗೌಡ ಹೆಸರು: ಹೊಸ ಲಾವಣಿ ಪತ್ತೆ!

ಟಿಪ್ಪು ನಂತರ ಬ್ರಿಟಿಷರ ವಿರುದ್ಧ ಹೋರಾಡಿದವರ ಪಟ್ಟಿಯಲ್ಲಿ ಉರಿಗೌಡ, ನಂಜೇಗೌಡ ಹೆಸರು: ಹೊಸ ಲಾವಣಿ ಪತ್ತೆ!

- Advertisement -
- Advertisement -

ಮಂಡ್ಯದ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರೆಂದು ಸಂಘಪರಿವಾರ ಆಧಾರ ರಹಿತವಾಗಿ ವಾದಿಸುತ್ತಿದೆ ಎಂಬ ಆರೋಪಗಳು ಬಂದಿರುವ ಬೆನ್ನಲ್ಲೇ ಹೊಸ ಹೊಸ ವಿಷಯಗಳು ಹೊರಬರಲಾರಂಭಿಸಿವೆ.

2006ರಲ್ಲಿ ಪರಿಷ್ಕರಣೆಗೊಂಡಿರುವ ‘ಸುವರ್ಣ ಮಂಡ್ಯ’ (ಸಂಪಾದನೆ: ದೇಜಗೌ) ಎಂಬ ಕೃತಿಯಲ್ಲಿ ಹ.ಕ.ರಾಜೇಗೌಡ ಅವರು ಬರೆದಿರುವ ಲೇಖನದಲ್ಲಿ ‘ಉರಿಗೌಡ, ನಂಜೇಗೌಡ’ ಎಂಬ ಹೆಸರುಗಳ ಉಲ್ಲೇಖವಿದೆ ಎಂಬುದನ್ನು ಮುಂದೆ ಇಟ್ಟುಕೊಂಡು ಚರ್ಚೆ ಬೆಳೆಸಲಾಗುತ್ತಿದೆ. “ದೊಡ್ಡನಂಜೇಗೌಡ, ಉರಿಗೌಡ ಎಂಬವರು ಟಿಪ್ಪು ಮತ್ತು ಹೈದರಾಲಿ ವಿರುದ್ಧ ಸೆಟೆದುನಿಂತವರು” ಎಂದು ಕೃತಿಯಲ್ಲಿ ಉಲ್ಲೇಖಿಸಿರುವುದನ್ನೇ ಇತಿಹಾಸ ಎಂದು ಪ್ರತಿಪಾದಿಸು ಯತ್ನಗಳಾಗುತ್ತಿವೆ.

“ಬ್ರಿಟಿಷರ ವಿರುದ್ಧ ಹೋರಾಡಿದ ಟಿಪ್ಪುವನ್ನು ಕೊಂದವರು ಉರಿಗೌಡ, ನಂಜೇಗೌಡ ಎಂದು ನಕಲಿ ಇತಿಹಾಸ ಸೃಷ್ಟಿಸಿ, ಒಕ್ಕಲಿಗ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನಗಳು ಆಗುತ್ತಿವೆ” ಎಂಬ ಟೀಕೆಗಳು ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ ಮತ್ತೊಂದು ‘ಲಾವಣಿ’ ಮುನ್ನಲೆಗೆ ಬಂದಿದೆ. “ಟಿಪ್ಪುವಿನ ನಂತರದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದವರಲ್ಲಿ ಉರಿಗೌಡ, ನಂಜೇಗೌಡ ಅವರೂ ಸೇರಿದ್ದಾರೆ” ಎಂಬ ವಾದವನ್ನು ಈ ಲಾವಣಿ ಮೂಲಕ ಮಂಡಿಸಲಾಗುತ್ತಿದೆ.

2005ರಲ್ಲಿ ಪ್ರಕಟವಾಗಿರುವ ‘ಅಮರ ಸುಳ್ಯದ ಸ್ವಾತಂತ್ರ್ಯ’ದ ಸಮರ ಕೃತಿಯಲ್ಲಿ ಉರಿಗೌಡ ಮತ್ತು ನಂಜೇಗೌಡರ ಉಲ್ಲೇಖಗಳನ್ನು ಮಾಡಲಾಗಿದೆ ಎಂದು ಯುವ ಬರಹಗಾರ ಸುನಿಲ್ ಜೆ. ಅವರು ಲಾವಣಿಯೊಂದನ್ನು ಫೇಸ್‌ಬುಕ್‌‌ನಲ್ಲಿ ಹಂಚಿಕೊಂಡಿದ್ದಾರೆ.

“ಉರಿಗೌಡ, ನಂಜೇಗೌಡರು ಯಾರೆಂಬ ನಿಜಮಾಹಿತಿ ಎನ್.ಎಸ್ ದೇವಿಪ್ರಸಾದ್ ಸಂಪಾಜೆಯವರು ಸಂಪಾದಿಸಿಕೊಟ್ಟ ‘ಅಮರ ಸುಳ್ಯದ ಸ್ವಾತಂತ್ರ್ಯ ಸಮರ’ ಪುಸ್ತಕದಲ್ಲಿದೆ. ಈ ಪುಸ್ತಕವನ್ನು ಸುವರ್ಣ ಮಂಡ್ಯ ಪುಸ್ತಕ ಬಿಡುಗಡೆಯಾಗುವ ಒಂದು ವರ್ಷಕ್ಕೂ ಮೊದಲೇ ಎಂದರೆ 2005ರಲ್ಲಿಯೇ ಪ್ರಕಟಿಸಲಾಗಿದೆ. ಇದರ ನಾಲ್ಕನೇ ಅನುಬಂಧ ಸ್ವಾತಂತ್ರ್ಯ ಹೋರಾಟಗಾರ ಐಗೂರು ವೆಂಕಟಾದ್ರಿ ನಾಯಕನ ಲಾವಣಿಗೆ ಮೀಸಲಾಗಿದೆ” ಎಂದು ಸುನಿಲ್‌ ವಿವರಿಸಿದ್ದಾರೆ.

ಮುಂದುವರಿದು, “ಟಿಪ್ಪು ಸುಲ್ತಾನ್ ಹಾಗೂ ಧೋಂಡಿಯ ವಾಘರ ಸಾವಿನ ನಂತರ ಕರ್ನಾಟಕದ ಸ್ವಾತಂತ್ರ್ಯ ಹೋರಾಟವನ್ನು ಮುಂದುವರೆಸಿದ್ದು ಐಗೂರಿನ ಪಾಳೇಗಾರ ವೆಂಕಟಾದ್ರಿ ನಾಯಕ. ಆತನಿಗೆ ಜೊತೆಯಾಗಿ ನಿಂತು ಬ್ರಿಟೀಷರ ವಿರುದ್ಧ ಹೋರಾಡಿದವರೇ ಹಾಸನ ಜಿಲ್ಲೆಯ ಹೆನ್ನಲಿ ಗ್ರಾಮದ ಉರಿಗೌಡ ಮತ್ತು ಕುಮತಳ್ಳಿಯ ನಂಜೇಗೌಡರು. ಬ್ರಿಟಿಷ್ ವಸಾಹತುಶಾಹಿಗಳ ವಿರುದ್ಧ ಹೋರಾಡಿದ ಕನ್ನಡ ನಾಡಿನ ಹೆಮ್ಮೆಯ ಸ್ವಾತಂತ್ಯ್ರ ಹೋರಾಟಗಾರರನ್ನು ದೇಶದ್ರೋಹಿಗಳಂತೆ ಬಿಂಬಿಸಲು ಹೊರಟಿರುವ ಸಂಘಿಗಳಿಗೆ ನಾಚಿಕೆ ಆಗಬೇಕು” ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಪುಸ್ತಕದ ಪುಟಗಳನ್ನು ಲಗತ್ತಿಸಿದ್ದಾರೆ. ಅನೇಕರು ಈ ಬರಹವನ್ನು ಹಂಚಿಕೊಂಡಿದ್ದಾರೆ. (‘ಅಮರ ಸುಳ್ಯದ ಸ್ವಾತಂತ್ರ್ಯ ಸಮರ’ ಕೃತಿಯ ಪಿಡಿಎಫ್‌ ‘ಇಲ್ಲಿ’ ಲಭ್ಯವಿದೆ.)

“ವ್ಯಾಪಾರದ ಉದ್ದೇಶದಿಂದ ಭಾರತಕ್ಕೆ ಬಂದ ಬ್ರಿಟಿಷರು ಸ್ಥಳೀಯ ರಾಜರುಗಳ ಅನೈಕ್ಯ, ವೈಷಮ್ಯಗಳ ಪ್ರಯೋಜನ ಪಡೆದು ನಿಧಾನವಾಗಿ ಇಡೀ ದೇಶವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡು ನಮ್ಮನ್ನು ಎರಡು ಶತಮಾನಗಳಿಗೂ ಅಧಿಕ ಕಾಲ ಆಳಿದ್ದು ಈಗ ಇತಿಹಾಸ. ದಕ್ಷಿಣ ಭಾರತದಲ್ಲಿ ಅವರಿಗೆ ಪ್ರಬಲ ಎದುರಾಳಿಗಳಾಗಿದ್ದ ಟಿಪ್ಪು ಸುಲ್ತಾನ ಮತ್ತು ಐಗೂರಿನ ವೆಂಕಟಾದ್ರಿ ನಾಯಕರನ್ನು ಕೊಂದ ಬಳಿಕ ಬ್ರಿಟಿಷರು ಕರ್ನಾಟಕದಿಂದ ನಮಗೇನೂ ಪ್ರತಿರೋಧ ಬಾರದು ಎಂದೇ ತಿಳಿದುಕೊಂಡಿದ್ದರು. ಅವರ ತಿಳಿವಳಿಕೆ ತಪ್ಪು ಎಂದು ಅವರ ಸುಳ್ಯದ ಸ್ವಾತಂತ್ರ್ಯ ಸಮರ ತೋರಿಸಿಕೊಟ್ಟಿದೆ” ಎಂಬ ಸಾಲುಗಳನ್ನು ಪುಸ್ತಕದ ನಾಲ್ಕನೇ ಅನುಬಂಧದಲ್ಲಿ ಉಲ್ಲೇಖಿಸಲಾಗಿದೆ.

ಲಾವಣಿಗಳನ್ನೇ ಇತಿಹಾಸ ಎಂದು ಪ್ರತಿಪಾದಿಸಲು ಹೊರಟಿರುವ ಸಂಘಪರಿವಾರವನ್ನು ಟೀಕಿಸಿರುವ ಲೇಖಕ ನಾಗೇಗೌಡ ಕೀಲಾರ ಅವರು, “ಇತಿಹಾಸ ರೂಪಿಸಲು ಒಂದು ಮೆಥೆಡ್ ಇರುತ್ತದೆ. ಆ ಮೆಥೆಡ್‌ಗೆ ಸಂಘಪರಿವಾರದವರು ತಿಲಾಂಜಲಿ ಹಾಡಿರುತ್ತಾರೆ. ಇತಿಹಾಸದ ಮೆತೆಡ್‌ಗೆ ಪೂರಕವಾಗಿರದ ಒಂದಷ್ಟು ಲಾವಣಿ, ಪುರಾಣಗಳನ್ನು ಜನಮಾನಸದಲ್ಲಿ ಹರಿಯಬಿಟ್ಟು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಂದುವರಿದು, “ಟಿಪ್ಪು ಸತ್ತ ಹಲವಾರು ವರ್ಷಗಳ ನಂತರ ಉರಿಗೌಡ ಮತ್ತು ನಂಜೇಗೌಡ ಅನ್ನುವವರು ಬ್ರಿಟೀಷರ ವಿರುದ್ದ ಹೋರಾಟ ಮಾಡಿದವರು ಅನ್ನುವ ಲಾವಣಿಯನ್ನು ಸುನಿಲ್ ಜೆರವರು ತಮ್ಮ ಪೋಸ್ಟ್‌ನಲ್ಲಿ ಹಾಕಿದ್ದಾರೆ. ಇದಕ್ಕೆ ಸಂಘಪರಿವಾರದವರ ಉತ್ತರ ಏನು? ಇಂತಹ ಲಾವಣಿ, ಕಾಗಕ್ಕ ಗುಬಕ್ಕನ ಕತೆಯನ್ನೇ ಇತಿಹಾಸ ಎಂದು ಸಂಘಪರಿವಾರದವರು ಸುಳ್ಳು ಹೇಳುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...