Homeಕರ್ನಾಟಕಟಿಪ್ಪು ನಂತರ ಬ್ರಿಟಿಷರ ವಿರುದ್ಧ ಹೋರಾಡಿದವರ ಪಟ್ಟಿಯಲ್ಲಿ ಉರಿಗೌಡ, ನಂಜೇಗೌಡ ಹೆಸರು: ಹೊಸ ಲಾವಣಿ ಪತ್ತೆ!

ಟಿಪ್ಪು ನಂತರ ಬ್ರಿಟಿಷರ ವಿರುದ್ಧ ಹೋರಾಡಿದವರ ಪಟ್ಟಿಯಲ್ಲಿ ಉರಿಗೌಡ, ನಂಜೇಗೌಡ ಹೆಸರು: ಹೊಸ ಲಾವಣಿ ಪತ್ತೆ!

- Advertisement -
- Advertisement -

ಮಂಡ್ಯದ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರೆಂದು ಸಂಘಪರಿವಾರ ಆಧಾರ ರಹಿತವಾಗಿ ವಾದಿಸುತ್ತಿದೆ ಎಂಬ ಆರೋಪಗಳು ಬಂದಿರುವ ಬೆನ್ನಲ್ಲೇ ಹೊಸ ಹೊಸ ವಿಷಯಗಳು ಹೊರಬರಲಾರಂಭಿಸಿವೆ.

2006ರಲ್ಲಿ ಪರಿಷ್ಕರಣೆಗೊಂಡಿರುವ ‘ಸುವರ್ಣ ಮಂಡ್ಯ’ (ಸಂಪಾದನೆ: ದೇಜಗೌ) ಎಂಬ ಕೃತಿಯಲ್ಲಿ ಹ.ಕ.ರಾಜೇಗೌಡ ಅವರು ಬರೆದಿರುವ ಲೇಖನದಲ್ಲಿ ‘ಉರಿಗೌಡ, ನಂಜೇಗೌಡ’ ಎಂಬ ಹೆಸರುಗಳ ಉಲ್ಲೇಖವಿದೆ ಎಂಬುದನ್ನು ಮುಂದೆ ಇಟ್ಟುಕೊಂಡು ಚರ್ಚೆ ಬೆಳೆಸಲಾಗುತ್ತಿದೆ. “ದೊಡ್ಡನಂಜೇಗೌಡ, ಉರಿಗೌಡ ಎಂಬವರು ಟಿಪ್ಪು ಮತ್ತು ಹೈದರಾಲಿ ವಿರುದ್ಧ ಸೆಟೆದುನಿಂತವರು” ಎಂದು ಕೃತಿಯಲ್ಲಿ ಉಲ್ಲೇಖಿಸಿರುವುದನ್ನೇ ಇತಿಹಾಸ ಎಂದು ಪ್ರತಿಪಾದಿಸು ಯತ್ನಗಳಾಗುತ್ತಿವೆ.

“ಬ್ರಿಟಿಷರ ವಿರುದ್ಧ ಹೋರಾಡಿದ ಟಿಪ್ಪುವನ್ನು ಕೊಂದವರು ಉರಿಗೌಡ, ನಂಜೇಗೌಡ ಎಂದು ನಕಲಿ ಇತಿಹಾಸ ಸೃಷ್ಟಿಸಿ, ಒಕ್ಕಲಿಗ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನಗಳು ಆಗುತ್ತಿವೆ” ಎಂಬ ಟೀಕೆಗಳು ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ ಮತ್ತೊಂದು ‘ಲಾವಣಿ’ ಮುನ್ನಲೆಗೆ ಬಂದಿದೆ. “ಟಿಪ್ಪುವಿನ ನಂತರದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದವರಲ್ಲಿ ಉರಿಗೌಡ, ನಂಜೇಗೌಡ ಅವರೂ ಸೇರಿದ್ದಾರೆ” ಎಂಬ ವಾದವನ್ನು ಈ ಲಾವಣಿ ಮೂಲಕ ಮಂಡಿಸಲಾಗುತ್ತಿದೆ.

2005ರಲ್ಲಿ ಪ್ರಕಟವಾಗಿರುವ ‘ಅಮರ ಸುಳ್ಯದ ಸ್ವಾತಂತ್ರ್ಯ’ದ ಸಮರ ಕೃತಿಯಲ್ಲಿ ಉರಿಗೌಡ ಮತ್ತು ನಂಜೇಗೌಡರ ಉಲ್ಲೇಖಗಳನ್ನು ಮಾಡಲಾಗಿದೆ ಎಂದು ಯುವ ಬರಹಗಾರ ಸುನಿಲ್ ಜೆ. ಅವರು ಲಾವಣಿಯೊಂದನ್ನು ಫೇಸ್‌ಬುಕ್‌‌ನಲ್ಲಿ ಹಂಚಿಕೊಂಡಿದ್ದಾರೆ.

“ಉರಿಗೌಡ, ನಂಜೇಗೌಡರು ಯಾರೆಂಬ ನಿಜಮಾಹಿತಿ ಎನ್.ಎಸ್ ದೇವಿಪ್ರಸಾದ್ ಸಂಪಾಜೆಯವರು ಸಂಪಾದಿಸಿಕೊಟ್ಟ ‘ಅಮರ ಸುಳ್ಯದ ಸ್ವಾತಂತ್ರ್ಯ ಸಮರ’ ಪುಸ್ತಕದಲ್ಲಿದೆ. ಈ ಪುಸ್ತಕವನ್ನು ಸುವರ್ಣ ಮಂಡ್ಯ ಪುಸ್ತಕ ಬಿಡುಗಡೆಯಾಗುವ ಒಂದು ವರ್ಷಕ್ಕೂ ಮೊದಲೇ ಎಂದರೆ 2005ರಲ್ಲಿಯೇ ಪ್ರಕಟಿಸಲಾಗಿದೆ. ಇದರ ನಾಲ್ಕನೇ ಅನುಬಂಧ ಸ್ವಾತಂತ್ರ್ಯ ಹೋರಾಟಗಾರ ಐಗೂರು ವೆಂಕಟಾದ್ರಿ ನಾಯಕನ ಲಾವಣಿಗೆ ಮೀಸಲಾಗಿದೆ” ಎಂದು ಸುನಿಲ್‌ ವಿವರಿಸಿದ್ದಾರೆ.

ಮುಂದುವರಿದು, “ಟಿಪ್ಪು ಸುಲ್ತಾನ್ ಹಾಗೂ ಧೋಂಡಿಯ ವಾಘರ ಸಾವಿನ ನಂತರ ಕರ್ನಾಟಕದ ಸ್ವಾತಂತ್ರ್ಯ ಹೋರಾಟವನ್ನು ಮುಂದುವರೆಸಿದ್ದು ಐಗೂರಿನ ಪಾಳೇಗಾರ ವೆಂಕಟಾದ್ರಿ ನಾಯಕ. ಆತನಿಗೆ ಜೊತೆಯಾಗಿ ನಿಂತು ಬ್ರಿಟೀಷರ ವಿರುದ್ಧ ಹೋರಾಡಿದವರೇ ಹಾಸನ ಜಿಲ್ಲೆಯ ಹೆನ್ನಲಿ ಗ್ರಾಮದ ಉರಿಗೌಡ ಮತ್ತು ಕುಮತಳ್ಳಿಯ ನಂಜೇಗೌಡರು. ಬ್ರಿಟಿಷ್ ವಸಾಹತುಶಾಹಿಗಳ ವಿರುದ್ಧ ಹೋರಾಡಿದ ಕನ್ನಡ ನಾಡಿನ ಹೆಮ್ಮೆಯ ಸ್ವಾತಂತ್ಯ್ರ ಹೋರಾಟಗಾರರನ್ನು ದೇಶದ್ರೋಹಿಗಳಂತೆ ಬಿಂಬಿಸಲು ಹೊರಟಿರುವ ಸಂಘಿಗಳಿಗೆ ನಾಚಿಕೆ ಆಗಬೇಕು” ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಪುಸ್ತಕದ ಪುಟಗಳನ್ನು ಲಗತ್ತಿಸಿದ್ದಾರೆ. ಅನೇಕರು ಈ ಬರಹವನ್ನು ಹಂಚಿಕೊಂಡಿದ್ದಾರೆ. (‘ಅಮರ ಸುಳ್ಯದ ಸ್ವಾತಂತ್ರ್ಯ ಸಮರ’ ಕೃತಿಯ ಪಿಡಿಎಫ್‌ ‘ಇಲ್ಲಿ’ ಲಭ್ಯವಿದೆ.)

“ವ್ಯಾಪಾರದ ಉದ್ದೇಶದಿಂದ ಭಾರತಕ್ಕೆ ಬಂದ ಬ್ರಿಟಿಷರು ಸ್ಥಳೀಯ ರಾಜರುಗಳ ಅನೈಕ್ಯ, ವೈಷಮ್ಯಗಳ ಪ್ರಯೋಜನ ಪಡೆದು ನಿಧಾನವಾಗಿ ಇಡೀ ದೇಶವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡು ನಮ್ಮನ್ನು ಎರಡು ಶತಮಾನಗಳಿಗೂ ಅಧಿಕ ಕಾಲ ಆಳಿದ್ದು ಈಗ ಇತಿಹಾಸ. ದಕ್ಷಿಣ ಭಾರತದಲ್ಲಿ ಅವರಿಗೆ ಪ್ರಬಲ ಎದುರಾಳಿಗಳಾಗಿದ್ದ ಟಿಪ್ಪು ಸುಲ್ತಾನ ಮತ್ತು ಐಗೂರಿನ ವೆಂಕಟಾದ್ರಿ ನಾಯಕರನ್ನು ಕೊಂದ ಬಳಿಕ ಬ್ರಿಟಿಷರು ಕರ್ನಾಟಕದಿಂದ ನಮಗೇನೂ ಪ್ರತಿರೋಧ ಬಾರದು ಎಂದೇ ತಿಳಿದುಕೊಂಡಿದ್ದರು. ಅವರ ತಿಳಿವಳಿಕೆ ತಪ್ಪು ಎಂದು ಅವರ ಸುಳ್ಯದ ಸ್ವಾತಂತ್ರ್ಯ ಸಮರ ತೋರಿಸಿಕೊಟ್ಟಿದೆ” ಎಂಬ ಸಾಲುಗಳನ್ನು ಪುಸ್ತಕದ ನಾಲ್ಕನೇ ಅನುಬಂಧದಲ್ಲಿ ಉಲ್ಲೇಖಿಸಲಾಗಿದೆ.

ಲಾವಣಿಗಳನ್ನೇ ಇತಿಹಾಸ ಎಂದು ಪ್ರತಿಪಾದಿಸಲು ಹೊರಟಿರುವ ಸಂಘಪರಿವಾರವನ್ನು ಟೀಕಿಸಿರುವ ಲೇಖಕ ನಾಗೇಗೌಡ ಕೀಲಾರ ಅವರು, “ಇತಿಹಾಸ ರೂಪಿಸಲು ಒಂದು ಮೆಥೆಡ್ ಇರುತ್ತದೆ. ಆ ಮೆಥೆಡ್‌ಗೆ ಸಂಘಪರಿವಾರದವರು ತಿಲಾಂಜಲಿ ಹಾಡಿರುತ್ತಾರೆ. ಇತಿಹಾಸದ ಮೆತೆಡ್‌ಗೆ ಪೂರಕವಾಗಿರದ ಒಂದಷ್ಟು ಲಾವಣಿ, ಪುರಾಣಗಳನ್ನು ಜನಮಾನಸದಲ್ಲಿ ಹರಿಯಬಿಟ್ಟು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಂದುವರಿದು, “ಟಿಪ್ಪು ಸತ್ತ ಹಲವಾರು ವರ್ಷಗಳ ನಂತರ ಉರಿಗೌಡ ಮತ್ತು ನಂಜೇಗೌಡ ಅನ್ನುವವರು ಬ್ರಿಟೀಷರ ವಿರುದ್ದ ಹೋರಾಟ ಮಾಡಿದವರು ಅನ್ನುವ ಲಾವಣಿಯನ್ನು ಸುನಿಲ್ ಜೆರವರು ತಮ್ಮ ಪೋಸ್ಟ್‌ನಲ್ಲಿ ಹಾಕಿದ್ದಾರೆ. ಇದಕ್ಕೆ ಸಂಘಪರಿವಾರದವರ ಉತ್ತರ ಏನು? ಇಂತಹ ಲಾವಣಿ, ಕಾಗಕ್ಕ ಗುಬಕ್ಕನ ಕತೆಯನ್ನೇ ಇತಿಹಾಸ ಎಂದು ಸಂಘಪರಿವಾರದವರು ಸುಳ್ಳು ಹೇಳುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...