Homeಕರ್ನಾಟಕಟಿಪ್ಪು ನಂತರ ಬ್ರಿಟಿಷರ ವಿರುದ್ಧ ಹೋರಾಡಿದವರ ಪಟ್ಟಿಯಲ್ಲಿ ಉರಿಗೌಡ, ನಂಜೇಗೌಡ ಹೆಸರು: ಹೊಸ ಲಾವಣಿ ಪತ್ತೆ!

ಟಿಪ್ಪು ನಂತರ ಬ್ರಿಟಿಷರ ವಿರುದ್ಧ ಹೋರಾಡಿದವರ ಪಟ್ಟಿಯಲ್ಲಿ ಉರಿಗೌಡ, ನಂಜೇಗೌಡ ಹೆಸರು: ಹೊಸ ಲಾವಣಿ ಪತ್ತೆ!

- Advertisement -
- Advertisement -

ಮಂಡ್ಯದ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರೆಂದು ಸಂಘಪರಿವಾರ ಆಧಾರ ರಹಿತವಾಗಿ ವಾದಿಸುತ್ತಿದೆ ಎಂಬ ಆರೋಪಗಳು ಬಂದಿರುವ ಬೆನ್ನಲ್ಲೇ ಹೊಸ ಹೊಸ ವಿಷಯಗಳು ಹೊರಬರಲಾರಂಭಿಸಿವೆ.

2006ರಲ್ಲಿ ಪರಿಷ್ಕರಣೆಗೊಂಡಿರುವ ‘ಸುವರ್ಣ ಮಂಡ್ಯ’ (ಸಂಪಾದನೆ: ದೇಜಗೌ) ಎಂಬ ಕೃತಿಯಲ್ಲಿ ಹ.ಕ.ರಾಜೇಗೌಡ ಅವರು ಬರೆದಿರುವ ಲೇಖನದಲ್ಲಿ ‘ಉರಿಗೌಡ, ನಂಜೇಗೌಡ’ ಎಂಬ ಹೆಸರುಗಳ ಉಲ್ಲೇಖವಿದೆ ಎಂಬುದನ್ನು ಮುಂದೆ ಇಟ್ಟುಕೊಂಡು ಚರ್ಚೆ ಬೆಳೆಸಲಾಗುತ್ತಿದೆ. “ದೊಡ್ಡನಂಜೇಗೌಡ, ಉರಿಗೌಡ ಎಂಬವರು ಟಿಪ್ಪು ಮತ್ತು ಹೈದರಾಲಿ ವಿರುದ್ಧ ಸೆಟೆದುನಿಂತವರು” ಎಂದು ಕೃತಿಯಲ್ಲಿ ಉಲ್ಲೇಖಿಸಿರುವುದನ್ನೇ ಇತಿಹಾಸ ಎಂದು ಪ್ರತಿಪಾದಿಸು ಯತ್ನಗಳಾಗುತ್ತಿವೆ.

“ಬ್ರಿಟಿಷರ ವಿರುದ್ಧ ಹೋರಾಡಿದ ಟಿಪ್ಪುವನ್ನು ಕೊಂದವರು ಉರಿಗೌಡ, ನಂಜೇಗೌಡ ಎಂದು ನಕಲಿ ಇತಿಹಾಸ ಸೃಷ್ಟಿಸಿ, ಒಕ್ಕಲಿಗ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನಗಳು ಆಗುತ್ತಿವೆ” ಎಂಬ ಟೀಕೆಗಳು ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ ಮತ್ತೊಂದು ‘ಲಾವಣಿ’ ಮುನ್ನಲೆಗೆ ಬಂದಿದೆ. “ಟಿಪ್ಪುವಿನ ನಂತರದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದವರಲ್ಲಿ ಉರಿಗೌಡ, ನಂಜೇಗೌಡ ಅವರೂ ಸೇರಿದ್ದಾರೆ” ಎಂಬ ವಾದವನ್ನು ಈ ಲಾವಣಿ ಮೂಲಕ ಮಂಡಿಸಲಾಗುತ್ತಿದೆ.

2005ರಲ್ಲಿ ಪ್ರಕಟವಾಗಿರುವ ‘ಅಮರ ಸುಳ್ಯದ ಸ್ವಾತಂತ್ರ್ಯ’ದ ಸಮರ ಕೃತಿಯಲ್ಲಿ ಉರಿಗೌಡ ಮತ್ತು ನಂಜೇಗೌಡರ ಉಲ್ಲೇಖಗಳನ್ನು ಮಾಡಲಾಗಿದೆ ಎಂದು ಯುವ ಬರಹಗಾರ ಸುನಿಲ್ ಜೆ. ಅವರು ಲಾವಣಿಯೊಂದನ್ನು ಫೇಸ್‌ಬುಕ್‌‌ನಲ್ಲಿ ಹಂಚಿಕೊಂಡಿದ್ದಾರೆ.

“ಉರಿಗೌಡ, ನಂಜೇಗೌಡರು ಯಾರೆಂಬ ನಿಜಮಾಹಿತಿ ಎನ್.ಎಸ್ ದೇವಿಪ್ರಸಾದ್ ಸಂಪಾಜೆಯವರು ಸಂಪಾದಿಸಿಕೊಟ್ಟ ‘ಅಮರ ಸುಳ್ಯದ ಸ್ವಾತಂತ್ರ್ಯ ಸಮರ’ ಪುಸ್ತಕದಲ್ಲಿದೆ. ಈ ಪುಸ್ತಕವನ್ನು ಸುವರ್ಣ ಮಂಡ್ಯ ಪುಸ್ತಕ ಬಿಡುಗಡೆಯಾಗುವ ಒಂದು ವರ್ಷಕ್ಕೂ ಮೊದಲೇ ಎಂದರೆ 2005ರಲ್ಲಿಯೇ ಪ್ರಕಟಿಸಲಾಗಿದೆ. ಇದರ ನಾಲ್ಕನೇ ಅನುಬಂಧ ಸ್ವಾತಂತ್ರ್ಯ ಹೋರಾಟಗಾರ ಐಗೂರು ವೆಂಕಟಾದ್ರಿ ನಾಯಕನ ಲಾವಣಿಗೆ ಮೀಸಲಾಗಿದೆ” ಎಂದು ಸುನಿಲ್‌ ವಿವರಿಸಿದ್ದಾರೆ.

ಮುಂದುವರಿದು, “ಟಿಪ್ಪು ಸುಲ್ತಾನ್ ಹಾಗೂ ಧೋಂಡಿಯ ವಾಘರ ಸಾವಿನ ನಂತರ ಕರ್ನಾಟಕದ ಸ್ವಾತಂತ್ರ್ಯ ಹೋರಾಟವನ್ನು ಮುಂದುವರೆಸಿದ್ದು ಐಗೂರಿನ ಪಾಳೇಗಾರ ವೆಂಕಟಾದ್ರಿ ನಾಯಕ. ಆತನಿಗೆ ಜೊತೆಯಾಗಿ ನಿಂತು ಬ್ರಿಟೀಷರ ವಿರುದ್ಧ ಹೋರಾಡಿದವರೇ ಹಾಸನ ಜಿಲ್ಲೆಯ ಹೆನ್ನಲಿ ಗ್ರಾಮದ ಉರಿಗೌಡ ಮತ್ತು ಕುಮತಳ್ಳಿಯ ನಂಜೇಗೌಡರು. ಬ್ರಿಟಿಷ್ ವಸಾಹತುಶಾಹಿಗಳ ವಿರುದ್ಧ ಹೋರಾಡಿದ ಕನ್ನಡ ನಾಡಿನ ಹೆಮ್ಮೆಯ ಸ್ವಾತಂತ್ಯ್ರ ಹೋರಾಟಗಾರರನ್ನು ದೇಶದ್ರೋಹಿಗಳಂತೆ ಬಿಂಬಿಸಲು ಹೊರಟಿರುವ ಸಂಘಿಗಳಿಗೆ ನಾಚಿಕೆ ಆಗಬೇಕು” ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಪುಸ್ತಕದ ಪುಟಗಳನ್ನು ಲಗತ್ತಿಸಿದ್ದಾರೆ. ಅನೇಕರು ಈ ಬರಹವನ್ನು ಹಂಚಿಕೊಂಡಿದ್ದಾರೆ. (‘ಅಮರ ಸುಳ್ಯದ ಸ್ವಾತಂತ್ರ್ಯ ಸಮರ’ ಕೃತಿಯ ಪಿಡಿಎಫ್‌ ‘ಇಲ್ಲಿ’ ಲಭ್ಯವಿದೆ.)

“ವ್ಯಾಪಾರದ ಉದ್ದೇಶದಿಂದ ಭಾರತಕ್ಕೆ ಬಂದ ಬ್ರಿಟಿಷರು ಸ್ಥಳೀಯ ರಾಜರುಗಳ ಅನೈಕ್ಯ, ವೈಷಮ್ಯಗಳ ಪ್ರಯೋಜನ ಪಡೆದು ನಿಧಾನವಾಗಿ ಇಡೀ ದೇಶವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡು ನಮ್ಮನ್ನು ಎರಡು ಶತಮಾನಗಳಿಗೂ ಅಧಿಕ ಕಾಲ ಆಳಿದ್ದು ಈಗ ಇತಿಹಾಸ. ದಕ್ಷಿಣ ಭಾರತದಲ್ಲಿ ಅವರಿಗೆ ಪ್ರಬಲ ಎದುರಾಳಿಗಳಾಗಿದ್ದ ಟಿಪ್ಪು ಸುಲ್ತಾನ ಮತ್ತು ಐಗೂರಿನ ವೆಂಕಟಾದ್ರಿ ನಾಯಕರನ್ನು ಕೊಂದ ಬಳಿಕ ಬ್ರಿಟಿಷರು ಕರ್ನಾಟಕದಿಂದ ನಮಗೇನೂ ಪ್ರತಿರೋಧ ಬಾರದು ಎಂದೇ ತಿಳಿದುಕೊಂಡಿದ್ದರು. ಅವರ ತಿಳಿವಳಿಕೆ ತಪ್ಪು ಎಂದು ಅವರ ಸುಳ್ಯದ ಸ್ವಾತಂತ್ರ್ಯ ಸಮರ ತೋರಿಸಿಕೊಟ್ಟಿದೆ” ಎಂಬ ಸಾಲುಗಳನ್ನು ಪುಸ್ತಕದ ನಾಲ್ಕನೇ ಅನುಬಂಧದಲ್ಲಿ ಉಲ್ಲೇಖಿಸಲಾಗಿದೆ.

ಲಾವಣಿಗಳನ್ನೇ ಇತಿಹಾಸ ಎಂದು ಪ್ರತಿಪಾದಿಸಲು ಹೊರಟಿರುವ ಸಂಘಪರಿವಾರವನ್ನು ಟೀಕಿಸಿರುವ ಲೇಖಕ ನಾಗೇಗೌಡ ಕೀಲಾರ ಅವರು, “ಇತಿಹಾಸ ರೂಪಿಸಲು ಒಂದು ಮೆಥೆಡ್ ಇರುತ್ತದೆ. ಆ ಮೆಥೆಡ್‌ಗೆ ಸಂಘಪರಿವಾರದವರು ತಿಲಾಂಜಲಿ ಹಾಡಿರುತ್ತಾರೆ. ಇತಿಹಾಸದ ಮೆತೆಡ್‌ಗೆ ಪೂರಕವಾಗಿರದ ಒಂದಷ್ಟು ಲಾವಣಿ, ಪುರಾಣಗಳನ್ನು ಜನಮಾನಸದಲ್ಲಿ ಹರಿಯಬಿಟ್ಟು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಂದುವರಿದು, “ಟಿಪ್ಪು ಸತ್ತ ಹಲವಾರು ವರ್ಷಗಳ ನಂತರ ಉರಿಗೌಡ ಮತ್ತು ನಂಜೇಗೌಡ ಅನ್ನುವವರು ಬ್ರಿಟೀಷರ ವಿರುದ್ದ ಹೋರಾಟ ಮಾಡಿದವರು ಅನ್ನುವ ಲಾವಣಿಯನ್ನು ಸುನಿಲ್ ಜೆರವರು ತಮ್ಮ ಪೋಸ್ಟ್‌ನಲ್ಲಿ ಹಾಕಿದ್ದಾರೆ. ಇದಕ್ಕೆ ಸಂಘಪರಿವಾರದವರ ಉತ್ತರ ಏನು? ಇಂತಹ ಲಾವಣಿ, ಕಾಗಕ್ಕ ಗುಬಕ್ಕನ ಕತೆಯನ್ನೇ ಇತಿಹಾಸ ಎಂದು ಸಂಘಪರಿವಾರದವರು ಸುಳ್ಳು ಹೇಳುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...