Homeಕರ್ನಾಟಕಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

- Advertisement -
- Advertisement -

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತರು ಎರಡು ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಮೊದಲನೇಯದ್ದು ಶುಕ್ರವಾರ ರಾತ್ರಿ (ಮಾ.18) ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ದಾಳಿ ನಡೆಸಿದ್ದಾರೆ. ಮತ್ತೊಂದು ರವಿವಾರ (ಮಾ.19) ಗೋಪಿಶೆಟ್ಟಿಕೊಪ್ಪದ ಮನೆಯೊಂದರಲ್ಲಿ ಆರಂಭಿಸಿರುವ ಪ್ರಾರ್ಥನಾ ಮಂದಿರವೊಂದರ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ.

ಪ್ರಾರ್ಥನಾ ಮಂದಿರದ ಮೇಲೆ ಬಜರಂಗದಳ ದಾಳಿ

ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಮನೆಯೊಂದರಲ್ಲಿ ಆರಂಭಿಸಿರುವ ಪ್ರಾರ್ಥನಾ ಮಂದಿರವೊಂದರ ಮೇಲೆ ಬಜರಂಗದಳ ಕಾರ್ಯಕರ್ತರು ಭಾನುವಾರ ತುಂಗಾ ನಗರ ಠಾಣೆ ಪೊಲೀಸರ ಸಮ್ಮುಖದಲ್ಲಿ ದಾಳಿ ನಡೆಸಿದರು. ಇಲ್ಲಿ ಹಿಂದೂ ಧರ್ಮೀಯರಿಗೆ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂದು ಬಜರಂಗದಳ ಆರೋಪಿಸಿದೆ.

ಈ ವಿಚಾರವಾಗಿ ಪ್ರಾರ್ಥನಾ ಮಂದಿರ ನಡೆಸುತ್ತಿದ್ದ ಫಾದರ್ ಮಣಿಕಂಠ ಇಮ್ಯಾನ್ಯುಯಲ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ವಾಪಸ್‌ ಕಳುಹಿಸಿದ್ದಾರೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

ಘಟನೆ ಬಗ್ಗೆ ಪ್ರತಿಕ್ರಿಸಿಯಿದ ಫಾದರ್ ಮಣಿಕಂಠ ಇಮ್ಯಾನ್ಯುಯಲ್, ”ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. 15 ವರ್ಷಗಳಿಂದ ಟ್ರಸ್ಟ್ ಸ್ಥಾಪಿಸಿ ಪ್ರಾರ್ಥನೆ ನಡೆಸುತ್ತಿದ್ದೇವೆ. ಸೋಗಾನೆ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದ ಸಂದರ್ಭದಲ್ಲಿಯೂ ಪ್ರಾರ್ಥನೆ ನಡೆಸಿದ್ದೆವು” ಎಂದು ಅವರು ತಿಳಿಸಿದರು.

ಬಜರಂಗದಳದ ಕಾರ್ಯಕರ್ತ ರಾಜೇಶ್ ಗೌಡ ಮಾತನಾಡಿ, ”ಇಲ್ಲಿ ನಿರ್ಮಿಸಿರುವ ಶೆಡ್‌ಗೆ ಯಾವುದೇ ಟ್ರಸ್ಟ್‌ನ ನಾಮಫಲಕ ಅಳವಡಿಸಿಲ್ಲ. ಅಲ್ಲದೇ 42 ಜನರ ಪಟ್ಟಿ ದೊರೆತಿದೆ. ಇದು ಹಿಂದೂಗಳನ್ನು ಮತಾಂತರ ಮಾಡಲು ಸಿದ್ಧಪಡಿಸಿದ್ದ ಪಟ್ಟಿ” ಎಂದು ಆರೋಪಿಸಿದರು.

ಇದನ್ನೂ ಓದಿ: ಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ದಾಳಿ ವೇಳೆ ಬಜರಂಗದಳದ ಜಿಲ್ಲಾ ಸಂಚಾಲಕ ಅಂಕುಶ್, ನಗರ ಕಾರ್ಯದರ್ಶಿ ಸಚಿನ್, ಜಿತೇಂದ್ರಗೌಡ ತುಂಗಾ ನಗರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್‌ ಮಂಜುನಾಥ್, ಪಿಎಸ್ಐ ರಾಜು ರೆಡ್ಡಿ ಇದ್ದರು.

ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ದಾಳಿ

ಶುಕ್ರವಾರ ರಾತ್ರಿ ಶಿವಮೊಗ್ಗದ ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಕಾರ್ಯಕ್ರಮವನ್ನೇ ನಿಲ್ಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿದ ನಂತರ, ಎಲ್ಲಾ ಮಹಿಳೆಯರು ಮತ್ತು ಅವರ ಜೊತೆಗಿದ್ದ ಪುರುಷರು ಹೋಟೆಲ್‌ನಿಂದ ಹೊರಬಂದಿದ್ದಾರೆ.

ಕ್ಲಿಫ್ ಎಂಬಸಿ ಹೋಟೆಲ್‌ನ ಹೈವ್‌ ಸೈಬಾರ್‌ನಲ್ಲಿ ಲೇಡಿಸ್ ನೈಟ್ ಪಾರ್ಟಿ ಆಯೋಜಿಸಲಾಗಿತ್ತು. ವಿಷಯ ತಿಳಿದ ಬಜರಂಗದಳ ಕಾರ್ಯಕರ್ತರು, ಹೋಟೆಲ್ ಬಳಿ ಜಮಾಯಿಸಿ ಆಕ್ಷೇಪ ವ್ಯಕ್ತಪಡಿಸಿ ಪಾರ್ಟಿಯನ್ನು ನಿಲ್ಲಿಸಿದ್ದಾರೆ. ಹೆಣ್ಣು ಮಕ್ಕಳನ್ನು ಕರೆಯಿಸಿ ಡಾನ್ಸ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಜರಂಗದಳ ಆರೋಪಿಸಿದೆ.

ಬಜರಂಗದಳದ ಜಿಲ್ಲಾ ಸಂಚಾಲಕ ರಾಜೇಶ್ ಗೌಡ ಅವರು ಮಾತನಾಡಿದ್ದು, ”ಇದು ಹಿಂದೂ ಸಂಸ್ಕೃತಿಗೆ ವಿರುದ್ಧವಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಗೆ ಶಿವಮೊಗ್ಗದಲ್ಲಿ ಅವಕಾಶ ಕೊಡಲ್ಲ. ಮಲೆನಾಡಿನ ಜನರು ಸುಸಂಸ್ಕೃತರು, ಇಂತಹ ಕಾರ್ಯಕ್ರಮ ಆಯೋಜಿಸಿದರೆ ಸುಮ್ಮನಿರುವುದಿಲ್ಲ. ಲೇಟ್ ನೈಟ್ ಲೇಡಿಸ್ ಪಾರ್ಟಿ ಬಗ್ಗೆ ಈ ಮೊದಲೇ ಪೊಲೀಸರ ಗಮನಕ್ಕೆ ತಂದಿದ್ದೆವು. ಆದ್ದರಿಂದ ಪೊಲೀಸರ ಜತೆ ಬಂದು ಕಾರ್ಯಕ್ರಮ ನಿಲ್ಲಿಸಿದ್ದೇವೆ” ಎಂದು ಹೇಳಿದ್ದಾರೆ.

”ಶಿವಮೊಗ್ಗದಲ್ಲಿ ಇಂತಹ ಕಾರ್ಯಕ್ರಮಗಳಿಗೆ ನಾವು ಅವಕಾಶ ನೀಡುವುದಿಲ್ಲ ಏಕೆಂದರೆ ನಮ್ಮ ನಗರವು ಮತ್ತೊಂದು ಮಣಿಪಾಲವಾಗುವುದು ನಮಗೆ ಇಷ್ಟವಿಲ್ಲ. ಇಂತಹ ಘಟನೆಗಳನ್ನು ಭಜರಂಗದಳ ಸಹಿಸುವುದಿಲ್ಲ” ಎಂದು ಹೇಳಿದ ಅವರು, ಪಾರ್ಟಿಯಲ್ಲಿ ಮಹಿಳೆಯರ ಉಡುಗೆಯನ್ನೂ ಆಕ್ಷೇಪಿಸಿದ್ದಾರೆ.

”ನಮ್ಮ ಸಂಘಟನೆಯು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲಿಲ್ಲ. ಬದಲಿಗೆ ಪೊಲೀಸರಿಗೆ ಮಾಹಿತಿ ನೀಡಿದರು, ಅವರು ಪಾರ್ಟಿಯನ್ನು ನಿಲ್ಲಿಸಿದ್ದಾರೆ ಎಂದು ರಾಜೇಶ್ ಗೌಡ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ ಮಿಥುನ್ ಕುಮಾರ್, ”ನಮ್ಮ ಪೊಲೀಸರು ಪಾರ್ಟಿಯನ್ನು ನಿಲ್ಲಿಸಲಿಲ್ಲ ಎಂದು ಹೇಳಿದ್ದಾರೆ.

”ಕೆಲವು ವ್ಯಕ್ತಿಗಳು ಪಾರ್ಟಿಯನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಬಂದ ಬಳಿಕ ನಮ್ಮ ಅಧಿಕಾರಿಗಳು ಹೋಟೆಲ್‌ಗೆ ತೆರಳಿದರು” ಎಂದು ಅವರು ತಿಳಿಸಿದ್ದಾರೆ.

”ನಮ್ಮ ಪೊಲೀಸರು ಯಾವುದೇ ಕಾರಣಕ್ಕೂ ಆ ಪಾರ್ಟಿಯನ್ನು ನಿಲ್ಲಿಸಲು ಅಲ್ಲಿಗೆ ಹೋಗಿರಲಿಲ್ಲ. ಅಲ್ಲಿ ಗಲಾಟೆ ನಡೆಯಬಾರದು ಎನ್ನುವ ಉದ್ದೇಶದಿಂದ ಹೋಗಿದ್ದರು. ಪೊಲೀಸರು ಮಧ್ಯಪ್ರವೇಶಿಸಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ” ಎಂದು ಕುಮಾರ್ ಹೇಳಿದರು.

”ಪಾರ್ಟಿಯಲ್ಲಿ ಆಕ್ಷೇಪಾರ್ಹವಾಗುವಂತಹ ವಿಚಾರ ಏನೂ ಇರಲಿಲ್ಲ. ಆದರೆ ಪೊಲೀಸರು ಮತ್ತು ಕಾರ್ಯಕರ್ತರು ಪಾರ್ಟಿಯನ್ನು ಏಕೆ ತಡೆದರು ಎಂಬುದು ನಮಗೆ ತಿಳಿದಿಲ್ಲ” ಎಂದು ಹೋಟೆಲ್ ಜನರಲ್ ಮ್ಯಾನೇಜರ್ ಶಂಕರ್ ಕೆ. ಹೇಳಿದ್ದಾರೆ.

”ನಮ್ಮ ಹೋಟೆಲ್ ಅತ್ಯುತ್ತಮ ಹೆಸರು ಗಳಿಸಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಪ್ರಧಾನಿ ಕಚೇರಿಯ ಜನರು ಸೇರಿದಂತೆ ವಿಐಪಿಗಳಿಗೆ ಇಲ್ಲಿ ನಾವು ಆತಿಥ್ಯ ನೀಡಿದ್ದೇವೆ. ಈ ಬಗ್ಗೆ ಜಿಲ್ಲಾಡಳಿತದ ಎಲ್ಲ ಹಿರಿಯ ಅಧಿಕಾರಿಗಳಿಗೆ ತಿಳಿದಿದೆ. ನಾವೇನಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಲು ಸಿದ್ಧ. ಆದರೆ ನಾವು ಆ ರೀತಿಯ ಯಾವ ತಪ್ಪನ್ನೂ ಮಾಡಿಲ್ಲ. ಆದರೂ ಏಕೆ ಅವರು ನಮ್ಮ ವ್ಯವಹಾರಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ನಮಗೆ ತಿಳಿದಿಲ್ಲ” ಎಂದು ಶಂಕರ್ ಅಸಮಧಾನ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...